Homeಮುಖಪುಟಕೇರಳ: ನಾನು ಬಿಜೆಪಿಯ ಕಾರ್ಯಕರ್ತನೂ ಅಲ್ಲ & ಸ್ಪರ್ಧಿಸುವುದಿಲ್ಲ- ಬಿಜೆಪಿ ಟಿಕೆಟ್ ಘೋಷಿಸಲಾಗಿದ್ದ ವ್ಯಕ್ತಿ ಹೇಳಿಕೆ

ಕೇರಳ: ನಾನು ಬಿಜೆಪಿಯ ಕಾರ್ಯಕರ್ತನೂ ಅಲ್ಲ & ಸ್ಪರ್ಧಿಸುವುದಿಲ್ಲ- ಬಿಜೆಪಿ ಟಿಕೆಟ್ ಘೋಷಿಸಲಾಗಿದ್ದ ವ್ಯಕ್ತಿ ಹೇಳಿಕೆ

ನೀವು ನನ್ನನ್ನು ತಲೆಕೆಳಗಾಗಿ ಗಲ್ಲಿಗೇರಿಸಿದರೂ ಸರಿಯೇ, ನಾನು ನನ್ನ ಜನರಿಗೆ ದ್ರೋಹ ಬಗೆಯುವುದಿಲ್ಲ - ಅಂಬೇಡ್ಕರ್ ಹೇಳಿಕೆ ಉಲ್ಲೇಖಿಸಿ ಬಿಜೆಪಿ ಟಿಕೆಟ್ ನಿರಾಕರಿಸಿದ ಮಣಿಕಂದನ್

- Advertisement -
- Advertisement -

ಪಂಚರಾಜ್ಯ ಚುನಾವಣೆಗೆ ಈಗಾಗಲೇ ಎಲ್ಲಾ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿವೆ. ಆದರೆ, ಕೇರಳದಲ್ಲಿ ಬಿಜೆಪಿ ಪಕ್ಷವು, ಪಕ್ಷದ ಕಾರ್ಯಕರ್ತನೂ ಅಲ್ಲದ ವ್ಯಕ್ತಿಗೆ ಟಿಕೆಟ್ ಘೋಷಿಸಿದೆ. ಆ ವ್ಯಕ್ತಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿ ಪಕ್ಷಕ್ಕೆ ಮುಜುಗರ ಉಂಟುಮಾಡಿದ್ದಾರೆ.

ಇನ್ನು ಮೂರು ವಾರಗಳಲ್ಲಿ ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಭಾರತೀಯ ಜನತಾ ಪಕ್ಷಕ್ಕೆ ಸ್ಪಷ್ಟನೆ ಸಿಕ್ಕಿಲ್ಲ ಎನ್ನಲಾಗುತ್ತಿದೆ. 115 ಕ್ಷೇತ್ರಗಳ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿರುವ ನಾಯಕರು ಎರಡು, ಮೂರು ಕ್ಷೇತ್ರಗಳಿಗೆ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡುವಲ್ಲಿ ಎಡವಿದ್ದಾರೆ.

ಅಚ್ಚರಿಯ ಬೆಳವಣಿಗೆಯೊಂದರಲ್ಲಿ, ಮನಂತವಾಡಿ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದ್ದ ಅಭ್ಯರ್ಥಿ ಸಿ. ಮಣಿಕಂದನ್, ತಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಅಂಬೇಡ್ಕರ್ ಹೇಳಿಕೆಯನ್ನು ಉಲ್ಲೇಖಿಸಿರುವ ಅವರು “ನೀವು ನನ್ನನ್ನು ತಲೆಕೆಳಗಾಗಿ ಗಲ್ಲಿಗೇರಿಸಿದರೂ ಸರಿಯೇ, ನಾನು ನನ್ನ ಜನರಿಗೆ ದ್ರೋಹ ಬಗೆಯುವುದಿಲ್ಲ” ಹೇಳಿ ಬಿಜೆಪಿ ಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದಾರೆ.

ಇದನ್ನೂ ಓದಿ: ಟಿಕೆಟ್‌ ನಿರಾಕರಣೆ: ತಲೆ ಬೋಳಿಸಿಕೊಂಡ ಕೇರಳ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ!

ಏಪ್ರಿಲ್ 6 ರ ಚುನಾವಣೆಗೆ ಮನಂತವಾಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ ಎಂದು ತಿಳಿದು ಆದಿವಾಸಿ ಪಣಿಯಾ ಸಮುದಾಯದ ಮೊದಲ ಪದವೀಧರರಾದ ಮಣಿಕಂದನ್ ಆಘಾತಕ್ಕೊಳಗಾಗಿದ್ದಾರೆ ಎಂದು ವರದಿಯಾಗಿದೆ.

ಭಾನುವಾರ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದಾಗ, ಅದು ಮನಂತವಾಡಿ ಅಭ್ಯರ್ಥಿಯಾಗಿ ಮಣಿಕುಟ್ಟನ್ (ಮಣಿಕಂದನ್ ಅವರ ಫೇಸ್‌ಬುಕ್ ಪ್ರೊಫೈಲ್‌ನಲ್ಲಿ ಕಂಡುಬರುವ ಹೆಸರು) ಎಂಬ ಹೆಸರು ಕೂಡ ಇತ್ತು. ಅದು ಬೇರೆ ಮಣಿಕಂದನ್ ಇರಬೇಕು ಎಂದುಕೊಂಡಿದ್ದರು.

ವಾಸ್ತವವಾಗಿ ಅದು ತಮ್ಮದೆ ಹೆಸರು, ತಾನೇ ಇಲ್ಲಿನ ಬಿಜೆಪಿ ಅಭ್ಯರ್ಥಿ ಎಂದು ತಿಳಿದಾಗ, ಮಣಿಕಂದನ್ ಅವರು ಚುನಾವಣಾ ಸ್ಪರ್ಧೆಯಲ್ಲಿ ತಾನಿಲ್ಲ ಎಂದು ತಕ್ಷಣ ಸ್ಪಷ್ಟಪಡಿಸಿದ್ದಾರೆ. ಅವರ ಸ್ನೇಹಿತರು ಮತ್ತು ಕುಟುಂಬದವರು ಚುನಾವಣೆಯಿಂದ ಹೊರಗುಳಿಯುವಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಕೇರಳದ ಮಾಜಿ ಸಂಸದ ಪಿ.ಸಿ. ಚಾಕೊ

ಆದಿವಾಸಿ ಪಣಿಯಾ ಸಮುದಾಯದ ಮೊದಲ ಪದವೀಧರರಾದ ಮಣಿಕಂದನ್ ವಾಸ್ತವವಾಗಿ ಬಿಜೆಪಿ ಕಾರ್ಯಕರ್ತನೂ ಅಲ್ಲ ಮತ್ತು ಚುನಾವಣೆಯಲ್ಲಿ ಸ್ಪರ್ಧಿಸುವ ಯಾವುದೇ ಯೋಜನೆಯನ್ನು ಹೊಂದಿರಲಿಲ್ಲ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.

ಮನಂತವಾಡಿ ಕ್ಷೇತ್ರವನ್ನು ಬುಡಕಟ್ಟು ಸಮುದಾಯದ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ. ಇದರಿಂದ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಸ್ಥಳೀಯ ನಾಯಕರನ್ನು ಕಣಕ್ಕಿಳಿಸಲು ಆರಂಭದಲ್ಲಿ ಕಿರು-ಪಟ್ಟಿ ಮಾಡಲಾಗಿತ್ತು. ಹಾಗಾಗಿ ಮಣಿಕಂದನ್ ಹೆಸರನ್ನು ಅಭ್ಯರ್ಥಿಯಾಗಿ ಘೋಷಿಸಲಾಗಿದೆ.

ಮನಂತವಾಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪಿ.ಕೆ ಜಯಲಕ್ಷ್ಮಿ ಗೆಲ್ಲುವ ಉತ್ಸಾಹದಲ್ಲಿದ್ದಾರೆ. ಈಗ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿದ್ದ, ಪಕ್ಷದ ಕಾರ್ಯಕರ್ತನೂ ಅಲ್ಲದ ಮಣಿಕಂದನ್ ನಿರ್ಗಮಿಸುವುದರೊಂದಿಗೆ, ವಯನಾಡಿನ ಮೂರು ಕ್ಷೇತ್ರಗಳಲ್ಲಿ ಎರಡರಲ್ಲಿ ಬಿಜೆಪಿಗೆ ಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿಯೇ ಇಲ್ಲ.


ಇದನ್ನೂ ಓದಿ: ಕೇರಳದಲ್ಲಿ ಕಸ್ಟಮ್ಸ್ ಇಲಾಖೆ ಬಿಜೆಪಿ ಚುನಾವಣಾ ಪ್ರಚಾರಕ್ಕೆ ಇಳಿದಿದೆ: ಸಿಎಂ ಪಿಣರಾಯಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...