Homeಚಳವಳಿಉನ್ನಾವ್ ಅತ್ಯಾಚಾರ: ಬಿಜೆಪಿಯ ಮಾಜಿ ಶಾಸಕ ಕುಲದೀಪ್‌ ಸೆಂಗಾರ್‌ಗೆ ಜೀವಾವಧಿ ಶಿಕ್ಷೆ ಘೋಷಿಸಿದ ಕೋರ್ಟ್‌

ಉನ್ನಾವ್ ಅತ್ಯಾಚಾರ: ಬಿಜೆಪಿಯ ಮಾಜಿ ಶಾಸಕ ಕುಲದೀಪ್‌ ಸೆಂಗಾರ್‌ಗೆ ಜೀವಾವಧಿ ಶಿಕ್ಷೆ ಘೋಷಿಸಿದ ಕೋರ್ಟ್‌

- Advertisement -
- Advertisement -

ಉನ್ನಾವ್ ಅತ್ಯಾಚಾರ ಮತ್ತು ಅಪಹರಣ ಪ್ರಕರಣದ ಆರೋಪಿ ಬಿಜೆಪಿಯ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಗೆ ಜೀವಾವಧಿ ಶಿಕ್ಷೆಯನ್ನು ದೆಹಲಿಯ ಟಿಸ್ ಹಜಾರಿಯ ನ್ಯಾಯಾಲಯ ಘೋಷಿಸಿದೆ.

2017 ರಲ್ಲಿ ಉನ್ನಾವೊದಲ್ಲಿ ಅಪ್ರಾಪ್ತ ಹುಡುಗಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಂಗಾರ್ ಅವರನ್ನು ದೆಹಲಿ ವಿಚಾರಣಾ ನ್ಯಾಯಾಲಯ ಶಿಕ್ಷೆಗೊಳಪಡಿಸಿದೆ.

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೊಕ್ಸೊ ಕಾಯ್ದೆ) ಯ ಸೆಕ್ಷನ್ 5 (ಮಗುವಿನ ಮೇಲೆ ಉಲ್ಬಣಗೊಳ್ಳುವ ಲೈಂಗಿಕ ಕಿರುಕುಳ) ಯೊಂದಿಗೆ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಅಡಿಯಲ್ಲಿ ಸೆಂಗಾರ್ ಶಿಕ್ಷೆಗೊಳಗಾಗಿದ್ದಾನೆ.

2017ರಲ್ಲಿ 17ವರ್ಷದ ಬಾಲಕಿ ಕೆಲಸ ಮುಗಿಸಿ ಬರುವಾಗ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ನಿಂದ ಲೈಂಗಿಕ ದೌರ್ಜನ್ಯವಾಗಿದೆಯೆಂದು ದೂರಿದ್ದಳು. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೊಕ್ಸೊ) 5 (ಸಿ) ಮತ್ತು 6 ಸೆಕ್ಷನ್ ಅಡಿಯಲ್ಲಿ ಶಿಕ್ಷೆಗೊಳಪಡಿಸಲಿದೆ.

ಆತನ ಸಹವರ್ತಿ ಶಸಿ ಸಿಂಗ್‌ ಕೂಡ ಅಪರಾಧಿಯೆಂದು ಘೋಷಿಸಿರುವ ನ್ಯಾಯಾಲಯ ಡಿಸೆಂಬರ್‌ 19 ಶಿಕ್ಷೆಯ ಪ್ರಮಾಣವನ್ನು ಘೋಷಿಸುವ ಸಾಧ್ಯತೆಯಿದೆ.

2017ರಲ್ಲಿಯೇ ಸಂತ್ರಸ್ತೆ ದೂರು ನೀಡಿದ್ದರು ಸಹ ಪೊಲೀಸರ ಸಮರ್ಪಕವಾಗಿ ವಿಚಾರಣೆ ನಡೆಸಿರಲಿಲ್ಲ. ಬದಲಿಗೆ ಅಂದಿನಿಂದ ಆಕೆಯ ಮತ್ತು ಆಕೆಯ ಕುಟುಂಬದ ಮೇಲೆ ನಿರಂತರ ದೌರ್ಜನ್ಯ ನಡೆದಿದೆ. ಆಕೆಯ ತಂದೆಯನ್ನು ಕಾನೂನುಬಾಹಿರವಾಗಿ ಶಶಸ್ತ್ರ ಹೊಂದಿದರೆಂಬ ಆರೋಪದಿಂದ ಬಂಧಿಸಲಾಗಿತ್ತು. ತದನಂತರ ಸಂತ್ರಸ್ತೆಯ ತಂದೆ ಜೈಲಿನಲ್ಲಿಯೇ ಅನುಮಾನಸ್ಪದವಾಗಿ ಸಾವನಪ್ಪಿದ್ದರು. ಅದಕ್ಕೂ ಮೊದಲು ಅವರಿಗೆ ಶಾಸಕನ ತಮ್ಮ ಅತುಲ್ ಸೆಂಗಾರ್ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದರು.

ಇನ್ನು ಸಂತ್ರಸ್ತೆಯು ಉನ್ನಾವೊದಿಂದ ನ್ಯಾಯಾಲಯಕ್ಕೆ ಕಾರಿನಲ್ಲಿ ಪ್ರಯಾಣಿಸುತ್ತಿರುವಾಗ ರಾಯ್ ಬರೇಲಿಯಲ್ಲಿ ಅಪಘಾತಕ್ಕೀಡಾಗಿದ್ದಳು. ಆಗ ಆಕೆಯ ಇಬ್ಬರು ಚಿಕ್ಕಮ್ಮಂದಿರು ಸಾವನಪ್ಪಿದ್ದಾರೆ. ಆಕೆಯು ಸಹ ಸದ್ಯ ಆಸ್ಪತ್ರೆಯಲ್ಲಿದ್ದಾಳೆ.

ಇಲ್ಲಿ ಪೊಲೀಸರ ಪಕ್ಷಪಾತಿತನ, ಅಧಿಕಾರಿಗಳ ನಿರ್ಲಕ್ಷ್ಯ, ಶಾಸಕನ ಹಣಬಲದಿಂದ ಆರೋಪವನ್ನು ಮುಚ್ಚಿಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಆಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ರವರ ಮನೆ ಮುಂದೆ ಪ್ರತಿಭಟಿಸಿದ್ದಳು. ಸಾರ್ವಜನಿಕರ ಆಕೆಗೆ ಬೆಂಬಲ ನೀಡಿದ್ದರು. ಆನಂತರವಷ್ಟೇ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು.

ಆತನ ಬಂಧನವಾದ ನಂತರವಷ್ಟೇ ಸಾಕಷ್ಟು ಪ್ರತಿಭಟನೆಗಳು ನಡೆದ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷವು ಆತನ ಶಾಸಕ ಸ್ಥಾನದಿಂದ ಉಚ್ಚಾಟಿಸಿತ್ತು. ಈ ವರ್ಷ ಸುಪ್ರೀಂ ಕೋರ್ಟ್‌ 45 ದಿನದಲ್ಲಿ ವಿಚಾರಣೆ ನಡೆಸಬೇಕು ಮತ್ತು ಉತ್ತರ ಪ್ರದೇಶ ಸರ್ಕಾರ 25 ಲಕ್ಷ ಪರಿಹಾರ ನೀಡಬೇಕು ಎಂದು ಆದೇಶ ನೀಡಿತ್ತು.

ಅದರಂತೆ ತನಿಖೆ ಪೂರ್ಣಗೊಂಡಿದೆ. ಸಿಬಿಐ ನ್ಯಾಯಾಲಯದ ತನಿಖೆಯು ಅಂತಿಮ ಹಂತದಲ್ಲಿದ್ದು ಸಂತ್ರಸ್ತೆಗೆ ಕೊನೆಗೂ ನ್ಯಾಯ ಸಿಕ್ಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...