Homeಚಳವಳಿಉನ್ನಾವ್ ಅತ್ಯಾಚಾರ: ಬಿಜೆಪಿಯ ಮಾಜಿ ಶಾಸಕ ಕುಲದೀಪ್‌ ಸೆಂಗಾರ್‌ಗೆ ಜೀವಾವಧಿ ಶಿಕ್ಷೆ ಘೋಷಿಸಿದ ಕೋರ್ಟ್‌

ಉನ್ನಾವ್ ಅತ್ಯಾಚಾರ: ಬಿಜೆಪಿಯ ಮಾಜಿ ಶಾಸಕ ಕುಲದೀಪ್‌ ಸೆಂಗಾರ್‌ಗೆ ಜೀವಾವಧಿ ಶಿಕ್ಷೆ ಘೋಷಿಸಿದ ಕೋರ್ಟ್‌

- Advertisement -
- Advertisement -

ಉನ್ನಾವ್ ಅತ್ಯಾಚಾರ ಮತ್ತು ಅಪಹರಣ ಪ್ರಕರಣದ ಆರೋಪಿ ಬಿಜೆಪಿಯ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಗೆ ಜೀವಾವಧಿ ಶಿಕ್ಷೆಯನ್ನು ದೆಹಲಿಯ ಟಿಸ್ ಹಜಾರಿಯ ನ್ಯಾಯಾಲಯ ಘೋಷಿಸಿದೆ.

2017 ರಲ್ಲಿ ಉನ್ನಾವೊದಲ್ಲಿ ಅಪ್ರಾಪ್ತ ಹುಡುಗಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಂಗಾರ್ ಅವರನ್ನು ದೆಹಲಿ ವಿಚಾರಣಾ ನ್ಯಾಯಾಲಯ ಶಿಕ್ಷೆಗೊಳಪಡಿಸಿದೆ.

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೊಕ್ಸೊ ಕಾಯ್ದೆ) ಯ ಸೆಕ್ಷನ್ 5 (ಮಗುವಿನ ಮೇಲೆ ಉಲ್ಬಣಗೊಳ್ಳುವ ಲೈಂಗಿಕ ಕಿರುಕುಳ) ಯೊಂದಿಗೆ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಅಡಿಯಲ್ಲಿ ಸೆಂಗಾರ್ ಶಿಕ್ಷೆಗೊಳಗಾಗಿದ್ದಾನೆ.

2017ರಲ್ಲಿ 17ವರ್ಷದ ಬಾಲಕಿ ಕೆಲಸ ಮುಗಿಸಿ ಬರುವಾಗ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ನಿಂದ ಲೈಂಗಿಕ ದೌರ್ಜನ್ಯವಾಗಿದೆಯೆಂದು ದೂರಿದ್ದಳು. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೊಕ್ಸೊ) 5 (ಸಿ) ಮತ್ತು 6 ಸೆಕ್ಷನ್ ಅಡಿಯಲ್ಲಿ ಶಿಕ್ಷೆಗೊಳಪಡಿಸಲಿದೆ.

ಆತನ ಸಹವರ್ತಿ ಶಸಿ ಸಿಂಗ್‌ ಕೂಡ ಅಪರಾಧಿಯೆಂದು ಘೋಷಿಸಿರುವ ನ್ಯಾಯಾಲಯ ಡಿಸೆಂಬರ್‌ 19 ಶಿಕ್ಷೆಯ ಪ್ರಮಾಣವನ್ನು ಘೋಷಿಸುವ ಸಾಧ್ಯತೆಯಿದೆ.

2017ರಲ್ಲಿಯೇ ಸಂತ್ರಸ್ತೆ ದೂರು ನೀಡಿದ್ದರು ಸಹ ಪೊಲೀಸರ ಸಮರ್ಪಕವಾಗಿ ವಿಚಾರಣೆ ನಡೆಸಿರಲಿಲ್ಲ. ಬದಲಿಗೆ ಅಂದಿನಿಂದ ಆಕೆಯ ಮತ್ತು ಆಕೆಯ ಕುಟುಂಬದ ಮೇಲೆ ನಿರಂತರ ದೌರ್ಜನ್ಯ ನಡೆದಿದೆ. ಆಕೆಯ ತಂದೆಯನ್ನು ಕಾನೂನುಬಾಹಿರವಾಗಿ ಶಶಸ್ತ್ರ ಹೊಂದಿದರೆಂಬ ಆರೋಪದಿಂದ ಬಂಧಿಸಲಾಗಿತ್ತು. ತದನಂತರ ಸಂತ್ರಸ್ತೆಯ ತಂದೆ ಜೈಲಿನಲ್ಲಿಯೇ ಅನುಮಾನಸ್ಪದವಾಗಿ ಸಾವನಪ್ಪಿದ್ದರು. ಅದಕ್ಕೂ ಮೊದಲು ಅವರಿಗೆ ಶಾಸಕನ ತಮ್ಮ ಅತುಲ್ ಸೆಂಗಾರ್ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದರು.

ಇನ್ನು ಸಂತ್ರಸ್ತೆಯು ಉನ್ನಾವೊದಿಂದ ನ್ಯಾಯಾಲಯಕ್ಕೆ ಕಾರಿನಲ್ಲಿ ಪ್ರಯಾಣಿಸುತ್ತಿರುವಾಗ ರಾಯ್ ಬರೇಲಿಯಲ್ಲಿ ಅಪಘಾತಕ್ಕೀಡಾಗಿದ್ದಳು. ಆಗ ಆಕೆಯ ಇಬ್ಬರು ಚಿಕ್ಕಮ್ಮಂದಿರು ಸಾವನಪ್ಪಿದ್ದಾರೆ. ಆಕೆಯು ಸಹ ಸದ್ಯ ಆಸ್ಪತ್ರೆಯಲ್ಲಿದ್ದಾಳೆ.

ಇಲ್ಲಿ ಪೊಲೀಸರ ಪಕ್ಷಪಾತಿತನ, ಅಧಿಕಾರಿಗಳ ನಿರ್ಲಕ್ಷ್ಯ, ಶಾಸಕನ ಹಣಬಲದಿಂದ ಆರೋಪವನ್ನು ಮುಚ್ಚಿಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಆಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ರವರ ಮನೆ ಮುಂದೆ ಪ್ರತಿಭಟಿಸಿದ್ದಳು. ಸಾರ್ವಜನಿಕರ ಆಕೆಗೆ ಬೆಂಬಲ ನೀಡಿದ್ದರು. ಆನಂತರವಷ್ಟೇ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು.

ಆತನ ಬಂಧನವಾದ ನಂತರವಷ್ಟೇ ಸಾಕಷ್ಟು ಪ್ರತಿಭಟನೆಗಳು ನಡೆದ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷವು ಆತನ ಶಾಸಕ ಸ್ಥಾನದಿಂದ ಉಚ್ಚಾಟಿಸಿತ್ತು. ಈ ವರ್ಷ ಸುಪ್ರೀಂ ಕೋರ್ಟ್‌ 45 ದಿನದಲ್ಲಿ ವಿಚಾರಣೆ ನಡೆಸಬೇಕು ಮತ್ತು ಉತ್ತರ ಪ್ರದೇಶ ಸರ್ಕಾರ 25 ಲಕ್ಷ ಪರಿಹಾರ ನೀಡಬೇಕು ಎಂದು ಆದೇಶ ನೀಡಿತ್ತು.

ಅದರಂತೆ ತನಿಖೆ ಪೂರ್ಣಗೊಂಡಿದೆ. ಸಿಬಿಐ ನ್ಯಾಯಾಲಯದ ತನಿಖೆಯು ಅಂತಿಮ ಹಂತದಲ್ಲಿದ್ದು ಸಂತ್ರಸ್ತೆಗೆ ಕೊನೆಗೂ ನ್ಯಾಯ ಸಿಕ್ಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...