Homeಮುಖಪುಟಸಂಸದೀಯ ಸಮಿತಿಯಿಂದ ಫೇಸ್‌ಬುಕ್ ವಿಚಾರಣೆ: ಆಡಳಿತ ವಿಪಕ್ಷ ಸದಸ್ಯರ ನಡುವೆ ವಾಕ್ಸಮರ

ಸಂಸದೀಯ ಸಮಿತಿಯಿಂದ ಫೇಸ್‌ಬುಕ್ ವಿಚಾರಣೆ: ಆಡಳಿತ ವಿಪಕ್ಷ ಸದಸ್ಯರ ನಡುವೆ ವಾಕ್ಸಮರ

ಇಡೀ ವಿಷಯದ ಬಗ್ಗೆ ಬಿಜೆಪಿ ಏಕೆ ಭಾವನಾತ್ಮಕವಾಗಿದೆ ಎಂದು ನಮಗೆ ತಿಳಿದಿಲ್ಲ. ಫೇಸ್‌ಬುಕ್‌ನ ಪಕ್ಷಪಾತಕ್ಕೂ ಅವರಿಗೂ ಯಾವುದೇ ಸಂಬಂಧವಿಲ್ಲದಿದ್ದರೆ ಅವರು ಚಿಂತಿಸಬಾರದು ಎಂದು ಪ್ರತಿಪಕ್ಷದ ಸದಸ್ಯರು ಹೇಳಿದ್ದಾರೆ.

- Advertisement -
- Advertisement -

ಬಿಜೆಪಿ-ಫೇಸ್‌ಬುಕ್ ಸಖ್ಯದ ವಿವಾದವು ತೀವ್ರವಾಗಿರುವ ಹಿನ್ನೆಲೆಯಲ್ಲಿ, ಮಾಹಿತಿ ತಂತ್ರಜ್ಞಾನದ ಸಂಸದೀಯ ಸಮಿತಿಯ ಬಿಜೆಪಿ ಮತ್ತು ಬಿಜೆಪಿಯೇತರ ಸದಸ್ಯರ ನಡುವೆ ಪರ-ವಿರೋಧಗಳ ವಾಕ್ಸಮರ ಭುಗಿಲೆದ್ದಿದೆ.

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಅಧ್ಯಕ್ಷತೆಯ ಮಾಹಿತಿ ತಂತ್ರಜ್ಞಾನದ ಸಂಸದೀಯ ಸ್ಥಾಯಿ ಸಮಿತಿಯು ಅಮೇರಿಕಾದ ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿದ್ದ ‘ಭಾರತದಲ್ಲಿ ಫೇಸ್‌ಬುಕ್ ಬಿಜೆಪಿ ಪರವಾಗಿ ಕೆಲಸ ಮಾಡಿದೆ’ ಎಂಬ ಆರೋಪಗಳ ಕುರಿತು ವಿಚಾರಣೆ ನಡೆಸುತ್ತಿದೆ.

ಸಾಮಾಜಿಕ ಜಾಲತಾಣ ಪ್ಲಾಟ್‌ಫಾರ್ಮ್‌ಗಳ ದುರುಪಯೋಗವನ್ನು ತಡೆಗಟ್ಟುವ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ದಾಖಲಿಸಲು ಮೀಡಿಯಾನಾಮ ಸಂಸ್ಥಾಪಕ ಮತ್ತು ಡಿಜಿಟಲ್ ಹಕ್ಕುಗಳ ಕಾರ್ಯಕರ್ತ ನಿಖಿಲ್ ಪಹ್ವಾ ಮತ್ತು ಹಿರಿಯ ಪತ್ರಕರ್ತ ಪರಂಜಾಯ್ ಗುಹಾ ಠಾಕೂರ್ತಾ ಅವರನ್ನು ಸಮಿತಿ ಆಹ್ವಾನಿಸಿದೆ.

ಈ ಸಮಿತಿಯು 30 ಸದಸ್ಯರನ್ನು ಹೊಂದಿದ್ದು, ಅವರಲ್ಲಿ 15 ಮಂದಿ ಎನ್‌ಡಿಎಯಿಂದ ಮತ್ತು ಉಳಿದ 15 ಮಂದಿ ವಿರೋಧ ಪಕ್ಷಗಳಿಗೆ ಸೇರಿದ್ದಾರೆ.

ಕಾಂಗ್ರೆಸ್ ಮೂರು ಸದಸ್ಯರನ್ನು ಹೊಂದಿದ್ದರೆ, ಇತರ ಪ್ರಾದೇಶಿಕ ಪಕ್ಷಗಳಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ), ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ), ತೆಲಂಗಾಣ ರಾಷ್ಟ್ರೀಯ ಸಮಿತಿ (ಟಿಆರ್‌ಎಸ್), ಶಿವಸೇನೆ, ಯುವಜನ ಶ್ರಮಿಕ, ರೈತ ಕಾಂಗ್ರೆಸ್ ಪಕ್ಷ (ವೈಎಸ್ಆರ್‌ಸಿಪಿ) ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಪಕ್ಷಗಳು ತಲಾ ಒಬ್ಬರು ಸದಸ್ಯರನ್ನು ಹೊಂದಿದ್ದಾರೆ.

ಆಗಸ್ಟ್ ಮೊದಲ ವಾರದಲ್ಲಿ ಅಮೇರಿಕಾದ ಪತ್ರಿಕೆ ವಾಲ್ ಸ್ಟ್ರೀಟ್ ಜರ್ನಲ್ “ಭಾರತದಲ್ಲಿ ಬಿಜೆಪಿ ನಾಯಕರ ದ್ವೇಷ ಭಾಷಣವನ್ನು ನಿಯಂತ್ರಿಸುವಲ್ಲಿ ಫೇಸ್‌ಬುಕ್ ಕ್ರಮ ತೆಗೆದುಕೊಂಡಿಲ್ಲ. ಆಡಳಿತ ಪಕ್ಷದ ವಿರುದ್ಧ ಕ್ರಮ ತೆಗೆದುಕೊಂಡರೆ ಕಂಪನಿಯ ಭವಿಷ್ಯದ ವ್ಯವಹಾರಗಳಿಗೆ ತೊಂದರೆಯಾಗಬಹುದು ಎಂದು ಫೇಸ್‌ಬುಕ್ ಭಾರತದ ಮುಖ್ಯಸ್ಥರು ಹೇಳಿದ್ದಾರೆ” ಎಂದು ವರದಿ ಮಾಡಿತ್ತು.

ಇದನ್ನೂ ಓದಿ: ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಿದ್ದ ಫೇಸ್‌ಬುಕ್‌ನ ಅಂಖಿದಾಸ್: ವಾಲ್ ಸ್ಟ್ರೀಟ್ ಜರ್ನಲ್ ತೆರೆದಿಟ್ಟ ಸ್ಪೋಟಕ ಸತ್ಯ!

ವಿರೋಧ ಪಕ್ಷಗಳಾದ ಡಿಎಂಕೆ, ಟಿಆರ್‌ಎಸ್, ಟಿಎಂಸಿ ಮತ್ತು ಸಿಪಿಐ (ಎಂ) ಡಬ್ಲ್ಯುಎಸ್‌ಜೆ ವರದಿಗಳ ಬಗ್ಗೆ ಫೇಸ್‌ಬುಕ್‌ನಿಂದ ವಿವರಣೆ ಪಡೆಯಲು ಶಶಿ ತರೂರ್ ಅವರನ್ನು ಬೆಂಬಲಿಸಿದೆ.

ಮಂಗಳವಾರ ನಡೆಯಬೇಕಿದ್ದ ಸಮಿತಿಯ ಸಭೆಯನ್ನು ದಿವಂಗತ ಪ್ರಣಬ್ ಮುಖರ್ಜಿ ಅವರ ಗೌರವಾರ್ಥವಾಗಿ ಮೊಟಕುಗೊಳಿಸಲಾಯಿತು.

“ಸಭೆಯಲ್ಲಿ ಬಿಜೆಪಿ ಉತ್ತಮ ಚರ್ಚೆ ನಡೆಯಲು ಬಿಡುತ್ತದೆ ಎಂದು ನಮಗೆ ಅನಿಸುತ್ತಿಲ್ಲ. ಇದು ವಾಲ್ ಸ್ಟ್ರೀಟ್ ಜರ್ನಲ್ ಮತ್ತು ಟೈಮ್ ನಿಯತಕಾಲಿಕವು ಪ್ರಕಟಿಸಿದ ಸುದ್ದಿ ಲೇಖನವಾಗಿದೆ. ಇವುಗಳು ನಮ್ಮಿಂದ ಸೃಷ್ಟಿಸಲ್ಪಟ್ಟ ಕಥೆಗಳಲ್ಲ. ಹಾಗಾಗಿ ನಾವು ಫೇಸ್‌ಬುಕ್‌ ಅನ್ನು ವಿಚಾರಣೆ ನಡೆಸಿದ್ದರೆ ಅದಕ್ಕೆ ಬಿಜೆಪಿ ಏಕೆ ತಡೆಯೊಡ್ಡುತ್ತದೆ ಎಂದು ನನಗೆ ಅರ್ಥವಾಗುತ್ತಿಲ್ಲ” ಎಂದು ಪ್ರತಿಪಕ್ಷದ ಸದಸ್ಯರೊಬ್ಬರು ಹೇಳಿದ್ದಾರೆ.

“ಸಾಕ್ಷಿಯನ್ನು ಕರೆಸಲು ಸಮಿತಿಗೆ ಅಧಿಕಾರವಿಲ್ಲ. 17 ನೇ ಲೋಕಸಭೆಯ ಪ್ರಧಾನ ಕಾರ್ಯದರ್ಶಿ ಸ್ನೇಹಲತಾ ಶ್ರೀವಾಸ್ತವ ಮಾತ್ರ ಈ ಅಧಿಕಾರ ಹೊಂದಿದ್ದಾರೆ” ಎಂದು ಬಿಜೆಪಿ ಸಂಸದರಾದ ನಿಶಿಕಾಂತ್ ದುಬೆ ವಾದಿಸಿ, ತರೂರ್ ವಿರುದ್ಧ ಸ್ಪೀಕರ್ ಗೆ ದೂರು ನೀಡಿದ್ದಾರೆ. ಸಮಿತಿಯ ಸದಸ್ಯರೂ ಆಗಿರುವ ಬಿಜೆಪಿ ಸಂಸದ ರಾಜ್ಯವರ್ಧನ್ ರಾಥೋಡ್ ಅವರು ಸ್ಪೀಕರ್‌ಗೆ ಪತ್ರ ಬರೆದು, ತರೂರ್ ಅವರ ನಿಯಮಗಳ ಉಲ್ಲಂಘನೆಯ ಬಗ್ಗೆ ದೂರಿದ್ದಾರೆ.

ಇದನ್ನೂ ಓದಿ: ತನ್ನ ವಿರುದ್ದದ 44 ಪೇಜ್‌ಗಳನ್ನು ಡಿಲೀಟ್ ಮಾಡುವಂತೆ ಫೇಸ್‌‌ಬುಕ್‌‌ಗೆ ಬಿಜೆಪಿ ತಾಕೀತು!

“ಇಡೀ ವಿಷಯದ ಬಗ್ಗೆ ಬಿಜೆಪಿ ಏಕೆ ಭಾವನಾತ್ಮಕವಾಗಿದೆ ಎಂದು ನಮಗೆ ತಿಳಿದಿಲ್ಲ. ಫೇಸ್‌ಬುಕ್‌ನ ಪಕ್ಷಪಾತಕ್ಕೂ ಅವರಿಗೂ ಯಾವುದೇ ಸಂಬಂಧವಿಲ್ಲದಿದ್ದರೆ ಅವರು ಚಿಂತಿಸಬಾರದು. ಫೇಸ್‌ಬುಕ್ ಒಳಗೊಂಡ ಸಮಸ್ಯೆಗಳು ಭಾರತಕ್ಕೆ ನಿರ್ದಿಷ್ಟವಾದದ್ದಲ್ಲ. ಅದು ಪ್ರಪಂಚದಾದ್ಯಂತ ಎದ್ದಿವೆ” ಎಂದು ಬಿಜೆಪಿಯೇತರ ಸದಸ್ಯರು ಹೇಳಿದ್ದಾರೆ.

ಭಾರತ, ದಕ್ಷಿಣ ಮತ್ತು ಮಧ್ಯ ಏಷ್ಯಾದ ಫೇಸ್‌ಬುಕ್‌ನ ಸಾರ್ವಜನಿಕ ನೀತಿ ನಿರ್ದೇಶಕರಾದ ಅಂಕಿ ದಾಸ್ ಅವರನ್ನು ಆ ಸ್ಥಾನದಿಂದ ತೆಗೆದುಹಾಕಲು ಒತ್ತಾಯಿಸುವುದಾಗಿ ವಿರೋಧ ಪಕ್ಷದ ಸಂಸದರು ಪ್ರತಿಪಾದಿಸಿದ್ದಾರೆ.

ಈ ಎಲ್ಲಾ ಚರ್ಚೆಗಳಿಂದ ಸಮಿತಿಯ ಬಿಜೆಪಿ ಮತ್ತು ಬಿಜೆಪಿಯೇತರ ಸದಸ್ಯರ ನಡುವಿನ  ಬಿರುಕು, ವಾಕ್ಸಮರ ವ್ಯಾಪಕವಾಗಿ ನಡೆಯುತ್ತಿದೆ.

ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಫೇಸ್‌ಬುಕ್ ಸಂಸ್ಥಾಪಕ ಮಾರ್ಕ್ ಜುಕರ್‌ಬರ್ಗ್‌ಗೆ ಪತ್ರ ಬರೆದು, ಸಾಮಾಜಿಕ ಮಾಧ್ಯಮ ದೈತ್ಯ ಫೇಸ್‌ಬುಕ್ ಭಾರತದಲ್ಲಿ ಪ್ರಮುಖ ಹುದ್ದೆಗಳಲ್ಲಿ ಕೆಲಸ ಮಾಡುವಾಗ ಪ್ರಧಾನಿ ಮತ್ತು ಭಾರತದ ಹಿರಿಯ ಕ್ಯಾಬಿನೆಟ್ ಮಂತ್ರಿಗಳನ್ನು ನಿಂದಿಸುತ್ತಿದೆ ಎಂದು ಇತ್ತೀಚೆಗೆ ಆರೋಪಿಸಿದ್ದರು.

ಭಾನುವಾರ ಸಂಜೆ ಪ್ರಕಟವಾದ ಡಬ್ಲ್ಯುಎಸ್‌ಜೆ ಹೊಸ ವರದಿಯ ಪ್ರಕಾರ, “ಫೇಸ್‌ಬುಕ್‌ ಉದ್ಯೋಗಿಗಳನ್ನು ಮಾತ್ರ ಒಳಗೊಂಡಿರುವ ಕಂಪನಿಯ ಆಂತರಿಕ ಗುಂಪಿನಲ್ಲಿ ಅಂಖಿ ದಾಸ್ ಹಲವು ವರ್ಷಗಳಿಂದ ಸತತವಾಗಿ ಬಿಜೆಪಿ ಪರವಾದ ಮತ್ತು ವಿರೋಧ ಪಕ್ಷ ಕಾಂಗ್ರೆಸ್‌ ವಿರುದ್ಧದ ಪೂರ್ವಗ್ರಹದ ಪೋಸ್ಟ್‌ಗಳನ್ನು ಹಾಕುತ್ತಿದ್ದರು” ಎಂದು ಹೇಳಲಾಗಿದೆ.

ನರೇಂದ್ರ ಮೋದಿಯವರು 2014ರ ಚುನಾವಣೆಯಲ್ಲಿ ಗೆಲುವನು ಪಡೆದ ಹಿಂದಿನ ದಿನ, ದೇಶದ ಫೇಸ್‌ಬುಕ್‌ನ ಸಾರ್ವಜನಿಕ ನೀತಿಯ ಮುಖ್ಯಸ್ಥರಾದ ಅಂಖಿ ದಾಸ್‌ ಈ ರೀತಿ ಸಂದೇಶ ಕಳಿಸಿದ್ದರು “ನಾವು ಅವರ (ಮೋದಿಯವರ) ಸೋಷಿಯಲ್‌ ಮೀಡಿಯಾ ಕ್ಯಾಂಪೇನ್‌ಗೆ ಅಗತ್ಯವಿದ್ದ ಕಾವನ್ನು ಹೊತ್ತಿಸಿದೆವು. ಅಲ್ಲಿಂದಾಚೆಗಿನದ್ದು ಇತಿಹಾಸ”.

ಆಡಳಿತ ಪಕ್ಷದೊಂದಿಗಿನ ಫೇಸ್‌ಬುಕ್ ಇಂಡಿಯಾದ ಸಂಬಂಧಗಳ ಬಗ್ಗೆ ಡಬ್ಲ್ಯುಎಸ್‌ಜೆ ವರದಿಯಿಂದ ಎದ್ದುಕಾಣುವ ಕೆಲವು ಅಂಶಗಳನ್ನು ಟೈಮ್ ವರದಿ ಪ್ರತಿಧ್ವನಿಸಿದೆ. ಪಕ್ಷದ 2014 ರ ಚುನಾವಣಾ ಪ್ರಚಾರಕ್ಕೆ ಸಹಾಯ ಮಾಡಲು ಶಿವನಾಥ್ ತುಕ್ರಲ್ ಬಿಜೆಪಿ ನಾಯಕರೊಂದಿಗೆ ಕೆಲಸ ಮಾಡಿದ್ದಾರೆ ಎಂದು ಲೇಖನದಲ್ಲಿ ಹೇಳಲಾಗಿದೆ.

ಕೃಪೆ: ದಿ ಕ್ವಿಂಟ್


ಇದನ್ನೂ ಓದಿ: ’ಪ್ರಧಾನಿಯನ್ನು ಫೇಸ್‌‌ಬುಕ್ ನಿಂದಿಸುತ್ತಿದೆ’ ಎಂದು ಜುಕರ್‌‌ಬರ್ಗ್‌ಗೆ ಪತ್ರ ಬರೆದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...