Homeಮುಖಪುಟಸಂಸದೀಯ ಸಮಿತಿಯಿಂದ ಫೇಸ್‌ಬುಕ್ ವಿಚಾರಣೆ: ಆಡಳಿತ ವಿಪಕ್ಷ ಸದಸ್ಯರ ನಡುವೆ ವಾಕ್ಸಮರ

ಸಂಸದೀಯ ಸಮಿತಿಯಿಂದ ಫೇಸ್‌ಬುಕ್ ವಿಚಾರಣೆ: ಆಡಳಿತ ವಿಪಕ್ಷ ಸದಸ್ಯರ ನಡುವೆ ವಾಕ್ಸಮರ

ಇಡೀ ವಿಷಯದ ಬಗ್ಗೆ ಬಿಜೆಪಿ ಏಕೆ ಭಾವನಾತ್ಮಕವಾಗಿದೆ ಎಂದು ನಮಗೆ ತಿಳಿದಿಲ್ಲ. ಫೇಸ್‌ಬುಕ್‌ನ ಪಕ್ಷಪಾತಕ್ಕೂ ಅವರಿಗೂ ಯಾವುದೇ ಸಂಬಂಧವಿಲ್ಲದಿದ್ದರೆ ಅವರು ಚಿಂತಿಸಬಾರದು ಎಂದು ಪ್ರತಿಪಕ್ಷದ ಸದಸ್ಯರು ಹೇಳಿದ್ದಾರೆ.

- Advertisement -
- Advertisement -

ಬಿಜೆಪಿ-ಫೇಸ್‌ಬುಕ್ ಸಖ್ಯದ ವಿವಾದವು ತೀವ್ರವಾಗಿರುವ ಹಿನ್ನೆಲೆಯಲ್ಲಿ, ಮಾಹಿತಿ ತಂತ್ರಜ್ಞಾನದ ಸಂಸದೀಯ ಸಮಿತಿಯ ಬಿಜೆಪಿ ಮತ್ತು ಬಿಜೆಪಿಯೇತರ ಸದಸ್ಯರ ನಡುವೆ ಪರ-ವಿರೋಧಗಳ ವಾಕ್ಸಮರ ಭುಗಿಲೆದ್ದಿದೆ.

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಅಧ್ಯಕ್ಷತೆಯ ಮಾಹಿತಿ ತಂತ್ರಜ್ಞಾನದ ಸಂಸದೀಯ ಸ್ಥಾಯಿ ಸಮಿತಿಯು ಅಮೇರಿಕಾದ ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿದ್ದ ‘ಭಾರತದಲ್ಲಿ ಫೇಸ್‌ಬುಕ್ ಬಿಜೆಪಿ ಪರವಾಗಿ ಕೆಲಸ ಮಾಡಿದೆ’ ಎಂಬ ಆರೋಪಗಳ ಕುರಿತು ವಿಚಾರಣೆ ನಡೆಸುತ್ತಿದೆ.

ಸಾಮಾಜಿಕ ಜಾಲತಾಣ ಪ್ಲಾಟ್‌ಫಾರ್ಮ್‌ಗಳ ದುರುಪಯೋಗವನ್ನು ತಡೆಗಟ್ಟುವ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ದಾಖಲಿಸಲು ಮೀಡಿಯಾನಾಮ ಸಂಸ್ಥಾಪಕ ಮತ್ತು ಡಿಜಿಟಲ್ ಹಕ್ಕುಗಳ ಕಾರ್ಯಕರ್ತ ನಿಖಿಲ್ ಪಹ್ವಾ ಮತ್ತು ಹಿರಿಯ ಪತ್ರಕರ್ತ ಪರಂಜಾಯ್ ಗುಹಾ ಠಾಕೂರ್ತಾ ಅವರನ್ನು ಸಮಿತಿ ಆಹ್ವಾನಿಸಿದೆ.

ಈ ಸಮಿತಿಯು 30 ಸದಸ್ಯರನ್ನು ಹೊಂದಿದ್ದು, ಅವರಲ್ಲಿ 15 ಮಂದಿ ಎನ್‌ಡಿಎಯಿಂದ ಮತ್ತು ಉಳಿದ 15 ಮಂದಿ ವಿರೋಧ ಪಕ್ಷಗಳಿಗೆ ಸೇರಿದ್ದಾರೆ.

ಕಾಂಗ್ರೆಸ್ ಮೂರು ಸದಸ್ಯರನ್ನು ಹೊಂದಿದ್ದರೆ, ಇತರ ಪ್ರಾದೇಶಿಕ ಪಕ್ಷಗಳಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ), ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ), ತೆಲಂಗಾಣ ರಾಷ್ಟ್ರೀಯ ಸಮಿತಿ (ಟಿಆರ್‌ಎಸ್), ಶಿವಸೇನೆ, ಯುವಜನ ಶ್ರಮಿಕ, ರೈತ ಕಾಂಗ್ರೆಸ್ ಪಕ್ಷ (ವೈಎಸ್ಆರ್‌ಸಿಪಿ) ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಪಕ್ಷಗಳು ತಲಾ ಒಬ್ಬರು ಸದಸ್ಯರನ್ನು ಹೊಂದಿದ್ದಾರೆ.

ಆಗಸ್ಟ್ ಮೊದಲ ವಾರದಲ್ಲಿ ಅಮೇರಿಕಾದ ಪತ್ರಿಕೆ ವಾಲ್ ಸ್ಟ್ರೀಟ್ ಜರ್ನಲ್ “ಭಾರತದಲ್ಲಿ ಬಿಜೆಪಿ ನಾಯಕರ ದ್ವೇಷ ಭಾಷಣವನ್ನು ನಿಯಂತ್ರಿಸುವಲ್ಲಿ ಫೇಸ್‌ಬುಕ್ ಕ್ರಮ ತೆಗೆದುಕೊಂಡಿಲ್ಲ. ಆಡಳಿತ ಪಕ್ಷದ ವಿರುದ್ಧ ಕ್ರಮ ತೆಗೆದುಕೊಂಡರೆ ಕಂಪನಿಯ ಭವಿಷ್ಯದ ವ್ಯವಹಾರಗಳಿಗೆ ತೊಂದರೆಯಾಗಬಹುದು ಎಂದು ಫೇಸ್‌ಬುಕ್ ಭಾರತದ ಮುಖ್ಯಸ್ಥರು ಹೇಳಿದ್ದಾರೆ” ಎಂದು ವರದಿ ಮಾಡಿತ್ತು.

ಇದನ್ನೂ ಓದಿ: ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಿದ್ದ ಫೇಸ್‌ಬುಕ್‌ನ ಅಂಖಿದಾಸ್: ವಾಲ್ ಸ್ಟ್ರೀಟ್ ಜರ್ನಲ್ ತೆರೆದಿಟ್ಟ ಸ್ಪೋಟಕ ಸತ್ಯ!

ವಿರೋಧ ಪಕ್ಷಗಳಾದ ಡಿಎಂಕೆ, ಟಿಆರ್‌ಎಸ್, ಟಿಎಂಸಿ ಮತ್ತು ಸಿಪಿಐ (ಎಂ) ಡಬ್ಲ್ಯುಎಸ್‌ಜೆ ವರದಿಗಳ ಬಗ್ಗೆ ಫೇಸ್‌ಬುಕ್‌ನಿಂದ ವಿವರಣೆ ಪಡೆಯಲು ಶಶಿ ತರೂರ್ ಅವರನ್ನು ಬೆಂಬಲಿಸಿದೆ.

ಮಂಗಳವಾರ ನಡೆಯಬೇಕಿದ್ದ ಸಮಿತಿಯ ಸಭೆಯನ್ನು ದಿವಂಗತ ಪ್ರಣಬ್ ಮುಖರ್ಜಿ ಅವರ ಗೌರವಾರ್ಥವಾಗಿ ಮೊಟಕುಗೊಳಿಸಲಾಯಿತು.

“ಸಭೆಯಲ್ಲಿ ಬಿಜೆಪಿ ಉತ್ತಮ ಚರ್ಚೆ ನಡೆಯಲು ಬಿಡುತ್ತದೆ ಎಂದು ನಮಗೆ ಅನಿಸುತ್ತಿಲ್ಲ. ಇದು ವಾಲ್ ಸ್ಟ್ರೀಟ್ ಜರ್ನಲ್ ಮತ್ತು ಟೈಮ್ ನಿಯತಕಾಲಿಕವು ಪ್ರಕಟಿಸಿದ ಸುದ್ದಿ ಲೇಖನವಾಗಿದೆ. ಇವುಗಳು ನಮ್ಮಿಂದ ಸೃಷ್ಟಿಸಲ್ಪಟ್ಟ ಕಥೆಗಳಲ್ಲ. ಹಾಗಾಗಿ ನಾವು ಫೇಸ್‌ಬುಕ್‌ ಅನ್ನು ವಿಚಾರಣೆ ನಡೆಸಿದ್ದರೆ ಅದಕ್ಕೆ ಬಿಜೆಪಿ ಏಕೆ ತಡೆಯೊಡ್ಡುತ್ತದೆ ಎಂದು ನನಗೆ ಅರ್ಥವಾಗುತ್ತಿಲ್ಲ” ಎಂದು ಪ್ರತಿಪಕ್ಷದ ಸದಸ್ಯರೊಬ್ಬರು ಹೇಳಿದ್ದಾರೆ.

“ಸಾಕ್ಷಿಯನ್ನು ಕರೆಸಲು ಸಮಿತಿಗೆ ಅಧಿಕಾರವಿಲ್ಲ. 17 ನೇ ಲೋಕಸಭೆಯ ಪ್ರಧಾನ ಕಾರ್ಯದರ್ಶಿ ಸ್ನೇಹಲತಾ ಶ್ರೀವಾಸ್ತವ ಮಾತ್ರ ಈ ಅಧಿಕಾರ ಹೊಂದಿದ್ದಾರೆ” ಎಂದು ಬಿಜೆಪಿ ಸಂಸದರಾದ ನಿಶಿಕಾಂತ್ ದುಬೆ ವಾದಿಸಿ, ತರೂರ್ ವಿರುದ್ಧ ಸ್ಪೀಕರ್ ಗೆ ದೂರು ನೀಡಿದ್ದಾರೆ. ಸಮಿತಿಯ ಸದಸ್ಯರೂ ಆಗಿರುವ ಬಿಜೆಪಿ ಸಂಸದ ರಾಜ್ಯವರ್ಧನ್ ರಾಥೋಡ್ ಅವರು ಸ್ಪೀಕರ್‌ಗೆ ಪತ್ರ ಬರೆದು, ತರೂರ್ ಅವರ ನಿಯಮಗಳ ಉಲ್ಲಂಘನೆಯ ಬಗ್ಗೆ ದೂರಿದ್ದಾರೆ.

ಇದನ್ನೂ ಓದಿ: ತನ್ನ ವಿರುದ್ದದ 44 ಪೇಜ್‌ಗಳನ್ನು ಡಿಲೀಟ್ ಮಾಡುವಂತೆ ಫೇಸ್‌‌ಬುಕ್‌‌ಗೆ ಬಿಜೆಪಿ ತಾಕೀತು!

“ಇಡೀ ವಿಷಯದ ಬಗ್ಗೆ ಬಿಜೆಪಿ ಏಕೆ ಭಾವನಾತ್ಮಕವಾಗಿದೆ ಎಂದು ನಮಗೆ ತಿಳಿದಿಲ್ಲ. ಫೇಸ್‌ಬುಕ್‌ನ ಪಕ್ಷಪಾತಕ್ಕೂ ಅವರಿಗೂ ಯಾವುದೇ ಸಂಬಂಧವಿಲ್ಲದಿದ್ದರೆ ಅವರು ಚಿಂತಿಸಬಾರದು. ಫೇಸ್‌ಬುಕ್ ಒಳಗೊಂಡ ಸಮಸ್ಯೆಗಳು ಭಾರತಕ್ಕೆ ನಿರ್ದಿಷ್ಟವಾದದ್ದಲ್ಲ. ಅದು ಪ್ರಪಂಚದಾದ್ಯಂತ ಎದ್ದಿವೆ” ಎಂದು ಬಿಜೆಪಿಯೇತರ ಸದಸ್ಯರು ಹೇಳಿದ್ದಾರೆ.

ಭಾರತ, ದಕ್ಷಿಣ ಮತ್ತು ಮಧ್ಯ ಏಷ್ಯಾದ ಫೇಸ್‌ಬುಕ್‌ನ ಸಾರ್ವಜನಿಕ ನೀತಿ ನಿರ್ದೇಶಕರಾದ ಅಂಕಿ ದಾಸ್ ಅವರನ್ನು ಆ ಸ್ಥಾನದಿಂದ ತೆಗೆದುಹಾಕಲು ಒತ್ತಾಯಿಸುವುದಾಗಿ ವಿರೋಧ ಪಕ್ಷದ ಸಂಸದರು ಪ್ರತಿಪಾದಿಸಿದ್ದಾರೆ.

ಈ ಎಲ್ಲಾ ಚರ್ಚೆಗಳಿಂದ ಸಮಿತಿಯ ಬಿಜೆಪಿ ಮತ್ತು ಬಿಜೆಪಿಯೇತರ ಸದಸ್ಯರ ನಡುವಿನ  ಬಿರುಕು, ವಾಕ್ಸಮರ ವ್ಯಾಪಕವಾಗಿ ನಡೆಯುತ್ತಿದೆ.

ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಫೇಸ್‌ಬುಕ್ ಸಂಸ್ಥಾಪಕ ಮಾರ್ಕ್ ಜುಕರ್‌ಬರ್ಗ್‌ಗೆ ಪತ್ರ ಬರೆದು, ಸಾಮಾಜಿಕ ಮಾಧ್ಯಮ ದೈತ್ಯ ಫೇಸ್‌ಬುಕ್ ಭಾರತದಲ್ಲಿ ಪ್ರಮುಖ ಹುದ್ದೆಗಳಲ್ಲಿ ಕೆಲಸ ಮಾಡುವಾಗ ಪ್ರಧಾನಿ ಮತ್ತು ಭಾರತದ ಹಿರಿಯ ಕ್ಯಾಬಿನೆಟ್ ಮಂತ್ರಿಗಳನ್ನು ನಿಂದಿಸುತ್ತಿದೆ ಎಂದು ಇತ್ತೀಚೆಗೆ ಆರೋಪಿಸಿದ್ದರು.

ಭಾನುವಾರ ಸಂಜೆ ಪ್ರಕಟವಾದ ಡಬ್ಲ್ಯುಎಸ್‌ಜೆ ಹೊಸ ವರದಿಯ ಪ್ರಕಾರ, “ಫೇಸ್‌ಬುಕ್‌ ಉದ್ಯೋಗಿಗಳನ್ನು ಮಾತ್ರ ಒಳಗೊಂಡಿರುವ ಕಂಪನಿಯ ಆಂತರಿಕ ಗುಂಪಿನಲ್ಲಿ ಅಂಖಿ ದಾಸ್ ಹಲವು ವರ್ಷಗಳಿಂದ ಸತತವಾಗಿ ಬಿಜೆಪಿ ಪರವಾದ ಮತ್ತು ವಿರೋಧ ಪಕ್ಷ ಕಾಂಗ್ರೆಸ್‌ ವಿರುದ್ಧದ ಪೂರ್ವಗ್ರಹದ ಪೋಸ್ಟ್‌ಗಳನ್ನು ಹಾಕುತ್ತಿದ್ದರು” ಎಂದು ಹೇಳಲಾಗಿದೆ.

ನರೇಂದ್ರ ಮೋದಿಯವರು 2014ರ ಚುನಾವಣೆಯಲ್ಲಿ ಗೆಲುವನು ಪಡೆದ ಹಿಂದಿನ ದಿನ, ದೇಶದ ಫೇಸ್‌ಬುಕ್‌ನ ಸಾರ್ವಜನಿಕ ನೀತಿಯ ಮುಖ್ಯಸ್ಥರಾದ ಅಂಖಿ ದಾಸ್‌ ಈ ರೀತಿ ಸಂದೇಶ ಕಳಿಸಿದ್ದರು “ನಾವು ಅವರ (ಮೋದಿಯವರ) ಸೋಷಿಯಲ್‌ ಮೀಡಿಯಾ ಕ್ಯಾಂಪೇನ್‌ಗೆ ಅಗತ್ಯವಿದ್ದ ಕಾವನ್ನು ಹೊತ್ತಿಸಿದೆವು. ಅಲ್ಲಿಂದಾಚೆಗಿನದ್ದು ಇತಿಹಾಸ”.

ಆಡಳಿತ ಪಕ್ಷದೊಂದಿಗಿನ ಫೇಸ್‌ಬುಕ್ ಇಂಡಿಯಾದ ಸಂಬಂಧಗಳ ಬಗ್ಗೆ ಡಬ್ಲ್ಯುಎಸ್‌ಜೆ ವರದಿಯಿಂದ ಎದ್ದುಕಾಣುವ ಕೆಲವು ಅಂಶಗಳನ್ನು ಟೈಮ್ ವರದಿ ಪ್ರತಿಧ್ವನಿಸಿದೆ. ಪಕ್ಷದ 2014 ರ ಚುನಾವಣಾ ಪ್ರಚಾರಕ್ಕೆ ಸಹಾಯ ಮಾಡಲು ಶಿವನಾಥ್ ತುಕ್ರಲ್ ಬಿಜೆಪಿ ನಾಯಕರೊಂದಿಗೆ ಕೆಲಸ ಮಾಡಿದ್ದಾರೆ ಎಂದು ಲೇಖನದಲ್ಲಿ ಹೇಳಲಾಗಿದೆ.

ಕೃಪೆ: ದಿ ಕ್ವಿಂಟ್


ಇದನ್ನೂ ಓದಿ: ’ಪ್ರಧಾನಿಯನ್ನು ಫೇಸ್‌‌ಬುಕ್ ನಿಂದಿಸುತ್ತಿದೆ’ ಎಂದು ಜುಕರ್‌‌ಬರ್ಗ್‌ಗೆ ಪತ್ರ ಬರೆದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...