Homeಮುಖಪುಟಬಿಜೆಪಿ-ಫೇಸ್‌ಬುಕ್ ಸಖ್ಯ: ಹುದ್ದೆ ತ್ಯಜಿಸಿದ ಫೇಸ್‌ಬುಕ್ ಇಂಡಿಯಾದ ಮುಖ್ಯಸ್ಥೆ ಅಂಖಿದಾಸ್!

ಬಿಜೆಪಿ-ಫೇಸ್‌ಬುಕ್ ಸಖ್ಯ: ಹುದ್ದೆ ತ್ಯಜಿಸಿದ ಫೇಸ್‌ಬುಕ್ ಇಂಡಿಯಾದ ಮುಖ್ಯಸ್ಥೆ ಅಂಖಿದಾಸ್!

ಫೇಸ್‌‌ಬುಕ್ ಅನ್ನು ಬಿಜೆಪಿಯ ಪರವಾಗಿ ಬಳಸಿಕೊಂಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಸಂಸದೀಯ ಸಮಿತಿಯು ಅವರನ್ನು 2 ಗಂಟೆಗೂ ಹೆಚ್ಚು ಸಮಯ ಪ್ರಶ್ನಿಸಿತ್ತು.

- Advertisement -
- Advertisement -

ಭಾರತದ ಫೇಸ್‌ಬುಕ್ ಮುಖ್ಯಸ್ಥರಾದ ಅಂಖಿದಾಸ್ ತಮ್ಮ ಹುದ್ದೆಯನ್ನು ತ್ಯಜಿಸಿದ್ದಾರೆ ಎಂದು ವರದಿಯಾಗಿದ್ದು, “ಬಿಜೆಪಿಗೆ ಸಹಕಾರಿಯಾಗಿ ಸಾಮಾಜಿಕ ಮಾಧ್ಯಮ ಫೇಸ್‌ಬುಕ್‌ ಅನ್ನು ದುರುಪಯೋಗಪಡಿಸಿಕೊಂಡಿದ್ದರು” ಎಂಬ ಆರೋಪದ ಮೇಲೆ ಕೆಲವು ದಿನಗಳಿಂದ ವಿಚಾರಣೆ ಎದುರಿಸುತ್ತಿದ್ದರು.

ಅಮೇರಿಕಾದ ಪತ್ರಿಕೆಯೊಂದು ಮಾಡಿದ ವರದಿಯ ಆಧಾರದ ಮೇಲೆ ಭಾರತದಲ್ಲಿ ವ್ಯಾಪಕ ಟೀಕೆಗಳೊಟ್ಟಿಗೆ ವಿಚಾರಣೆಯನ್ನು ಎದುರಿಸುತ್ತಿದ್ದರು. ಇದಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಸಂಸದೀಯ ಸಮಿತಿಯು ಅವರನ್ನು 2 ಗಂಟೆಗೂ ಹೆಚ್ಚು ಸಮಯ ಪ್ರಶ್ನಿಸಿತ್ತು. ಇದರ ನಡುವೆ ಅವರು ಹುದ್ದೆಯನ್ನು ತ್ಯಜಿಸಿದ್ದಾರೆ ಎಂದು ರಾಯಿಟರ್ಸ್‌ ವರದಿ ಮಾಡಿದೆ.

ಇದನ್ನೂ ಓದಿ: ಫೇಸ್‌ಬುಕ್ – ಬಿಜೆಪಿ ನಂಟು: ಸಮಿತಿ ಅಧ್ಯಕ್ಷ ಶಶಿ ತರೂರ್ ವಿರುದ್ಧ ಬಿಜೆಪಿ ಸಂಸದನ ಪತ್ರ

“ಭಾರತೀಯ ರಾಜಕೀಯದೊಂದಿಗೆ ಫೇಸ್‌ಬುಕ್ ದ್ವೇಷ-ಭಾಷಣ ನಿಯಮಗಳಲ್ಲಿ ಘರ್ಷಣೆ – ವಿವಾದಾತ್ಮಕ ರಾಜಕಾರಣಿಯನ್ನು ನಿಷೇಧಿಸುವ ಕ್ರಮವನ್ನು ಕಂಪನಿಯ ಕಾರ್ಯನಿರ್ವಾಹಕ ವಿರೋಧಿಸಿದ್ದಾರೆ” ಎಂಬ ಶೀರ್ಷಿಕೆಯಲ್ಲಿ ಅಮೆರಿಕಾ ಮೂಲದ ವಾಲ್ ಸ್ಟ್ರೀಟ್ ಜರ್ನಲ್ ವಿಶೇಷ ವರದಿ ಮಾಡಿತ್ತು.

ಬಿಜೆಪಿ ಕಾರ್ಯಕರ್ತರ ಉಲ್ಲಂಘನೆಗಳಿಗೆ ಶಿಕ್ಷೆ ನೀಡುವುದು ಭಾರತದಲ್ಲಿ ಕಂಪನಿಯ ವ್ಯವಹಾರದ ಭವಿಷ್ಯವನ್ನು ಹಾನಿಗೊಳಿಸುತ್ತದೆ ಎಂದು ಅಂಖಿದಾಸ್‌ ಹೇಳಿರುವುದಾಗಿ ಜರ್ನಲ್ ವರದಿ ಮಾಡಿತ್ತು.

ಇದನ್ನೂ ಓದಿ: ದೆಹಲಿ ಹಿಂಸಾಚಾರದಲ್ಲಿ ಫೇಸ್‌ಬುಕ್ ಸಹ ಆರೋಪಿ: ಶಾಸಕಾಂಗ ಸಮಿತಿ

“ಫೇಸ್‌ಬುಕ್‌ ಉದ್ಯೋಗಿಗಳನ್ನು ಮಾತ್ರ ಒಳಗೊಂಡಿರುವ ಕಂಪನಿಯ ಆಂತರಿಕ ಗುಂಪಿನಲ್ಲಿ ಅಂಖಿ ದಾಸ್ ಹಲವು ವರ್ಷಗಳಿಂದ ಸತತವಾಗಿ ಬಿಜೆಪಿ ಪರವಾದ ಮತ್ತು ವಿರೋಧ ಪಕ್ಷ ಕಾಂಗ್ರೆಸ್‌ ವಿರುದ್ಧದ ಪೂರ್ವಗ್ರಹದ ಪೋಸ್ಟ್‌ಗಳನ್ನು ಹಾಕುತ್ತಿದ್ದರು” ಎಂದು ವಾಲ್ ಸ್ಟ್ರೀಟ್ ಜರ್ನಲ್ ಮತ್ತೊಂದು ವರದಿ ಮಾಡಿತ್ತು.

ನರೇಂದ್ರ ಮೋದಿಯವರು 2014ರ ಚುನಾವಣೆಯಲ್ಲಿ ಗೆಲುವನು ಪಡೆದ ಹಿಂದಿನ ದಿನ, ದೇಶದ ಫೇಸ್‌ಬುಕ್‌ನ ಸಾರ್ವಜನಿಕ ನೀತಿಯ ಮುಖ್ಯಸ್ಥರಾದ ಅಂಖಿ ದಾಸ್‌, “ನಾವು ಅವರ (ಮೋದಿಯವರ) ಸೋಷಿಯಲ್‌ ಮೀಡಿಯಾ ಕ್ಯಾಂಪೇನ್‌ಗೆ ಅಗತ್ಯವಿದ್ದ ಕಾವನ್ನು ಹೊತ್ತಿಸಿದೆವು. ಅಲ್ಲಿಂದಾಚೆಗಿನದ್ದು ಇತಿಹಾಸ” ಎಂದು ಪೋಸ್ಟ್ ಮಾಡಿದ್ದರು.

“ಅಂತಿಮವಾಗಿ ಭಾರತವನ್ನು ಸಮಾಜವಾದದಿಂದ ಮುಕ್ತಗೊಳಿಸಲು ಮೂವತ್ತು ವರ್ಷಗಳ ತಳಮಟ್ಟದ ಕೆಲಸವನ್ನು ತೆಗೆದುಕೊಂಡಿದೆ” ಎಂದು ಕಾಂಗ್ರೆಸ್ ಸೋಲಿನ ಬಗ್ಗೆ ಅಂಖಿ ದಾಸ್ ಮತ್ತೊಂದು ಪೋಸ್ಟ್ ಮಾಡಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಫೇಸ್‌ಬುಕ್ ಇಂಡಿಯಾದ ಮುಖ್ಯಸ್ಥೆ ಅಂಖಿದಾಸ್‌ಗೆ ಜೀವಬೆದರಿಕೆ: ದೂರು ದಾಖಲು

ನರೇಂದ್ರ ಮೋದಿಯವರು ಶಕ್ತಿಯುತ ಮನುಷ್ಯ ಎಂದು ಹೊಗಳಿದ್ದ ಅವರು ಕಾಂಗ್ರೆಸ್ ಪಕ್ಷವನ್ನು ಸೋಲಿಸಿದ್ದಕ್ಕಾಗಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದರು. ಅಂಖಿ ದಾಸ್ ಅವರು ಫೇಸ್‌ಬುಕ್‌ನ ಉನ್ನತ ಜಾಗತಿಕ ಚುನಾವಣಾ ಅಧಿಕಾರಿ ಕಾಟೀ ಹರ್ಬಾತ್ ಅವರನ್ನು ಈ ಬಿಜೆಪಿ ಪರವಾಗಿನ ಅಭಿಯಾನದಲ್ಲಿ ಒಳಗೊಂಡಿದ್ದಲ್ಲೇ ಮೋದಿಯವರು ವಿಜಯ ಸಾಧಿಸಿದ್ದ ಸಂದರ್ಭದಲ್ಲಿ ನರೇಂದ್ರ ಮೋದಿ ಮತ್ತು ಹರ್ಬಾತ್ ನಡುವೆ ನಗುತ್ತಾ ಫೋಟೊ ತೆಗೆಸಿಕೊಂಡಿದ್ದರು.


ಇದನ್ನೂ ಓದಿ: ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಿದ್ದ ಫೇಸ್‌ಬುಕ್‌ನ ಅಂಖಿದಾಸ್: ವಾಲ್ ಸ್ಟ್ರೀಟ್ ಜರ್ನಲ್ ತೆರೆದಿಟ್ಟ ಸ್ಪೋಟಕ ಸತ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...