Homeಮುಖಪುಟಬಿಜೆಪಿ-ಫೇಸ್‌ಬುಕ್ ಸಖ್ಯ: ಹುದ್ದೆ ತ್ಯಜಿಸಿದ ಫೇಸ್‌ಬುಕ್ ಇಂಡಿಯಾದ ಮುಖ್ಯಸ್ಥೆ ಅಂಖಿದಾಸ್!

ಬಿಜೆಪಿ-ಫೇಸ್‌ಬುಕ್ ಸಖ್ಯ: ಹುದ್ದೆ ತ್ಯಜಿಸಿದ ಫೇಸ್‌ಬುಕ್ ಇಂಡಿಯಾದ ಮುಖ್ಯಸ್ಥೆ ಅಂಖಿದಾಸ್!

ಫೇಸ್‌‌ಬುಕ್ ಅನ್ನು ಬಿಜೆಪಿಯ ಪರವಾಗಿ ಬಳಸಿಕೊಂಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಸಂಸದೀಯ ಸಮಿತಿಯು ಅವರನ್ನು 2 ಗಂಟೆಗೂ ಹೆಚ್ಚು ಸಮಯ ಪ್ರಶ್ನಿಸಿತ್ತು.

- Advertisement -
- Advertisement -

ಭಾರತದ ಫೇಸ್‌ಬುಕ್ ಮುಖ್ಯಸ್ಥರಾದ ಅಂಖಿದಾಸ್ ತಮ್ಮ ಹುದ್ದೆಯನ್ನು ತ್ಯಜಿಸಿದ್ದಾರೆ ಎಂದು ವರದಿಯಾಗಿದ್ದು, “ಬಿಜೆಪಿಗೆ ಸಹಕಾರಿಯಾಗಿ ಸಾಮಾಜಿಕ ಮಾಧ್ಯಮ ಫೇಸ್‌ಬುಕ್‌ ಅನ್ನು ದುರುಪಯೋಗಪಡಿಸಿಕೊಂಡಿದ್ದರು” ಎಂಬ ಆರೋಪದ ಮೇಲೆ ಕೆಲವು ದಿನಗಳಿಂದ ವಿಚಾರಣೆ ಎದುರಿಸುತ್ತಿದ್ದರು.

ಅಮೇರಿಕಾದ ಪತ್ರಿಕೆಯೊಂದು ಮಾಡಿದ ವರದಿಯ ಆಧಾರದ ಮೇಲೆ ಭಾರತದಲ್ಲಿ ವ್ಯಾಪಕ ಟೀಕೆಗಳೊಟ್ಟಿಗೆ ವಿಚಾರಣೆಯನ್ನು ಎದುರಿಸುತ್ತಿದ್ದರು. ಇದಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಸಂಸದೀಯ ಸಮಿತಿಯು ಅವರನ್ನು 2 ಗಂಟೆಗೂ ಹೆಚ್ಚು ಸಮಯ ಪ್ರಶ್ನಿಸಿತ್ತು. ಇದರ ನಡುವೆ ಅವರು ಹುದ್ದೆಯನ್ನು ತ್ಯಜಿಸಿದ್ದಾರೆ ಎಂದು ರಾಯಿಟರ್ಸ್‌ ವರದಿ ಮಾಡಿದೆ.

ಇದನ್ನೂ ಓದಿ: ಫೇಸ್‌ಬುಕ್ – ಬಿಜೆಪಿ ನಂಟು: ಸಮಿತಿ ಅಧ್ಯಕ್ಷ ಶಶಿ ತರೂರ್ ವಿರುದ್ಧ ಬಿಜೆಪಿ ಸಂಸದನ ಪತ್ರ

“ಭಾರತೀಯ ರಾಜಕೀಯದೊಂದಿಗೆ ಫೇಸ್‌ಬುಕ್ ದ್ವೇಷ-ಭಾಷಣ ನಿಯಮಗಳಲ್ಲಿ ಘರ್ಷಣೆ – ವಿವಾದಾತ್ಮಕ ರಾಜಕಾರಣಿಯನ್ನು ನಿಷೇಧಿಸುವ ಕ್ರಮವನ್ನು ಕಂಪನಿಯ ಕಾರ್ಯನಿರ್ವಾಹಕ ವಿರೋಧಿಸಿದ್ದಾರೆ” ಎಂಬ ಶೀರ್ಷಿಕೆಯಲ್ಲಿ ಅಮೆರಿಕಾ ಮೂಲದ ವಾಲ್ ಸ್ಟ್ರೀಟ್ ಜರ್ನಲ್ ವಿಶೇಷ ವರದಿ ಮಾಡಿತ್ತು.

ಬಿಜೆಪಿ ಕಾರ್ಯಕರ್ತರ ಉಲ್ಲಂಘನೆಗಳಿಗೆ ಶಿಕ್ಷೆ ನೀಡುವುದು ಭಾರತದಲ್ಲಿ ಕಂಪನಿಯ ವ್ಯವಹಾರದ ಭವಿಷ್ಯವನ್ನು ಹಾನಿಗೊಳಿಸುತ್ತದೆ ಎಂದು ಅಂಖಿದಾಸ್‌ ಹೇಳಿರುವುದಾಗಿ ಜರ್ನಲ್ ವರದಿ ಮಾಡಿತ್ತು.

ಇದನ್ನೂ ಓದಿ: ದೆಹಲಿ ಹಿಂಸಾಚಾರದಲ್ಲಿ ಫೇಸ್‌ಬುಕ್ ಸಹ ಆರೋಪಿ: ಶಾಸಕಾಂಗ ಸಮಿತಿ

“ಫೇಸ್‌ಬುಕ್‌ ಉದ್ಯೋಗಿಗಳನ್ನು ಮಾತ್ರ ಒಳಗೊಂಡಿರುವ ಕಂಪನಿಯ ಆಂತರಿಕ ಗುಂಪಿನಲ್ಲಿ ಅಂಖಿ ದಾಸ್ ಹಲವು ವರ್ಷಗಳಿಂದ ಸತತವಾಗಿ ಬಿಜೆಪಿ ಪರವಾದ ಮತ್ತು ವಿರೋಧ ಪಕ್ಷ ಕಾಂಗ್ರೆಸ್‌ ವಿರುದ್ಧದ ಪೂರ್ವಗ್ರಹದ ಪೋಸ್ಟ್‌ಗಳನ್ನು ಹಾಕುತ್ತಿದ್ದರು” ಎಂದು ವಾಲ್ ಸ್ಟ್ರೀಟ್ ಜರ್ನಲ್ ಮತ್ತೊಂದು ವರದಿ ಮಾಡಿತ್ತು.

ನರೇಂದ್ರ ಮೋದಿಯವರು 2014ರ ಚುನಾವಣೆಯಲ್ಲಿ ಗೆಲುವನು ಪಡೆದ ಹಿಂದಿನ ದಿನ, ದೇಶದ ಫೇಸ್‌ಬುಕ್‌ನ ಸಾರ್ವಜನಿಕ ನೀತಿಯ ಮುಖ್ಯಸ್ಥರಾದ ಅಂಖಿ ದಾಸ್‌, “ನಾವು ಅವರ (ಮೋದಿಯವರ) ಸೋಷಿಯಲ್‌ ಮೀಡಿಯಾ ಕ್ಯಾಂಪೇನ್‌ಗೆ ಅಗತ್ಯವಿದ್ದ ಕಾವನ್ನು ಹೊತ್ತಿಸಿದೆವು. ಅಲ್ಲಿಂದಾಚೆಗಿನದ್ದು ಇತಿಹಾಸ” ಎಂದು ಪೋಸ್ಟ್ ಮಾಡಿದ್ದರು.

“ಅಂತಿಮವಾಗಿ ಭಾರತವನ್ನು ಸಮಾಜವಾದದಿಂದ ಮುಕ್ತಗೊಳಿಸಲು ಮೂವತ್ತು ವರ್ಷಗಳ ತಳಮಟ್ಟದ ಕೆಲಸವನ್ನು ತೆಗೆದುಕೊಂಡಿದೆ” ಎಂದು ಕಾಂಗ್ರೆಸ್ ಸೋಲಿನ ಬಗ್ಗೆ ಅಂಖಿ ದಾಸ್ ಮತ್ತೊಂದು ಪೋಸ್ಟ್ ಮಾಡಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಫೇಸ್‌ಬುಕ್ ಇಂಡಿಯಾದ ಮುಖ್ಯಸ್ಥೆ ಅಂಖಿದಾಸ್‌ಗೆ ಜೀವಬೆದರಿಕೆ: ದೂರು ದಾಖಲು

ನರೇಂದ್ರ ಮೋದಿಯವರು ಶಕ್ತಿಯುತ ಮನುಷ್ಯ ಎಂದು ಹೊಗಳಿದ್ದ ಅವರು ಕಾಂಗ್ರೆಸ್ ಪಕ್ಷವನ್ನು ಸೋಲಿಸಿದ್ದಕ್ಕಾಗಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದರು. ಅಂಖಿ ದಾಸ್ ಅವರು ಫೇಸ್‌ಬುಕ್‌ನ ಉನ್ನತ ಜಾಗತಿಕ ಚುನಾವಣಾ ಅಧಿಕಾರಿ ಕಾಟೀ ಹರ್ಬಾತ್ ಅವರನ್ನು ಈ ಬಿಜೆಪಿ ಪರವಾಗಿನ ಅಭಿಯಾನದಲ್ಲಿ ಒಳಗೊಂಡಿದ್ದಲ್ಲೇ ಮೋದಿಯವರು ವಿಜಯ ಸಾಧಿಸಿದ್ದ ಸಂದರ್ಭದಲ್ಲಿ ನರೇಂದ್ರ ಮೋದಿ ಮತ್ತು ಹರ್ಬಾತ್ ನಡುವೆ ನಗುತ್ತಾ ಫೋಟೊ ತೆಗೆಸಿಕೊಂಡಿದ್ದರು.


ಇದನ್ನೂ ಓದಿ: ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಿದ್ದ ಫೇಸ್‌ಬುಕ್‌ನ ಅಂಖಿದಾಸ್: ವಾಲ್ ಸ್ಟ್ರೀಟ್ ಜರ್ನಲ್ ತೆರೆದಿಟ್ಟ ಸ್ಪೋಟಕ ಸತ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...