Homeಮುಖಪುಟಲೋಕಸಭೆ ಚುನಾವಣೆ: ಬಿಜೆಪಿ ಸೇರಿದ್ದ ಜಡ್ಜ್‌ ವಿರುದ್ಧ ವಿದ್ಯಾರ್ಥಿ ನಾಯಕನನ್ನು ಕಣಕ್ಕಿಳಿಸಿದ ದೀದಿ

ಲೋಕಸಭೆ ಚುನಾವಣೆ: ಬಿಜೆಪಿ ಸೇರಿದ್ದ ಜಡ್ಜ್‌ ವಿರುದ್ಧ ವಿದ್ಯಾರ್ಥಿ ನಾಯಕನನ್ನು ಕಣಕ್ಕಿಳಿಸಿದ ದೀದಿ

- Advertisement -
- Advertisement -

ಬಿಜೆಪಿ ನಿನ್ನೆ 111 ಅಭ್ಯರ್ಥಿಗಳ 5ನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕಲ್ಕತ್ತಾ ಹೈಕೋರ್ಟ್‌ಗೆ ರಾಜೀನಾಮೆ ನೀಡಿ ಇತ್ತೀಚೆಗೆ ಬಿಜೆಪಿಗೆ ಸೇರಿ ವಿವಾದವನ್ನು ಸೃಷ್ಟಿಸಿದ್ದ ಮಾಜಿ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರಿಗೆ ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪುರ್ ಜಿಲ್ಲೆಯ ತಾಮ್ಲುಕ್ ಕ್ಷೇತ್ರದಿಂದ ಟಿಕೆಟ್‌ ನೀಡಲಾಗಿದೆ. ಅವರನ್ನು ಚುನಾವಣೆಗೆ ನಿಂತರೆ ಸೋಲಿಸುವುದಾಗಿ ಈ ಹಿಂದೆ ಶಪಥ ಮಾಡಿದ್ದ ಮಮತಾ ಬ್ಯಾನರ್ಜಿ, ತಾಮ್ಲುಕ್ ಕ್ಷೇತ್ರದಿಂದ ಗಂಗೋಪಾಧ್ಯಾಯ ಸ್ಪರ್ಧಿಸುವ ಮಾಹಿತಿ ತಿಳಿದು ಅವರ ವಿರುದ್ಧ ವಿದ್ಯಾರ್ಥಿ ನಾಯಕನನ್ನೇ ಕಣಕ್ಕಿಳಿಸಿದ್ದಾರೆ.

ತೃಣಮೂಲ ಕಾಂಗ್ರೆಸ್‌ನ ಸಾಮಾಜಿಕ ಐಟಿ ಸೆಲ್‌ನ ಮುಖ್ಯಸ್ಥರಾಗಿರುವ 27 ವರ್ಷದ ದೇಬಂಗ್ಶು ಭಟ್ಟಾಚಾರ್ಯ ವಿರುದ್ಧ ಬಿಜೆಪಿಯಿಂದ ಅಭಿಜಿತ್ ಗಂಗೋಪಾಧ್ಯಾಯ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಮಾರ್ಚ್ 10ರಂದು, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜ್ಯದ ಎಲ್ಲಾ 42 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಗಂಗೋಪಾಧ್ಯಾಯ ಸ್ಪರ್ಧೆ ಮಾಹಿತಿ ತಿಳಿದೇ ಅವರ ವಿರುದ್ಧ ದೇಬಂಗ್ಶು ಭಟ್ಟಾಚಾರ್ಯ ಅವರನ್ನು ದೀದಿ ಕಣಕ್ಕಿಳಿಸಿದ್ದಾರೆ ಎನ್ನಲಾಗಿದೆ.

ನಿವೃತ್ತ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರು ಈ ಮೊದಲು ಚರ್ಚೆಗೆ ಗ್ರಾಸವಾಗಿದ್ದರು. ಏಪ್ರಿಲ್ 2023ರಲ್ಲಿ ಶಾಲಾ ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸುತ್ತಿದ್ದ ನ್ಯಾ. ಗಂಗೋಪಾಧ್ಯಾಯ ಅವರು, ಈ ಹಗರಣದಲ್ಲಿ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಅವರ ಪಾತ್ರದ ಬಗ್ಗೆ ಸ್ಥಳೀಯ ಬಂಗಾಳಿ ಸುದ್ದಿ ವಾಹಿನಿಗೆ ಸಂದರ್ಶನ ನೀಡಿದ್ದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಸುಪ್ರೀಂ ಕೋರ್ಟ್, ಟಿವಿ ಚಾನೆಲ್‌ಗಳಿಗೆ ಸಂದರ್ಶನ ನೀಡುವುದು ಹಾಲಿ ನ್ಯಾಯಮೂರ್ತಿಗಳ ಕೆಲಸವಲ್ಲ ಎಂದಿತ್ತು. ನ್ಯಾ. ಗಂಗೋಪಾಧ್ಯಾಯ ಅವರು ಸಂದರ್ಶನ ನೀಡಿದ್ದಾರೆಯೇ ಅಥವಾ ಇಲ್ಲವೇ ಎಂಬುವುದನ್ನು ಪರಿಶೀಲಿಸಲು ಕಲ್ಕತ್ತಾ ಹೈಕೋರ್ಟ್‌ ರಿಜಿಸ್ಟ್ರಾರ್ ಜನರಲ್ ಅವರಿಂದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಸುಪ್ರೀಂಕೋರ್ಟ್ ಪೀಠ ವರದಿ ಕೇಳಿತ್ತು.

ನ್ಯಾಯಮೂರ್ತಿ ಗಂಗೋಪಾಧ್ಯಾಯ ಅವರು ಸಂದರ್ಶನ ನೀಡಿದ್ದು ನಿಜವಾಗಿದ್ದರೆ, ಅರ್ಜಿಗಳ ವಿಚಾರಣೆ ಮುಂದುವರಿಸಲು ಅವರಿಗೆ ಅವಕಾಶ ನೀಡುವುದಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ಸ್ಪಷ್ಟಪಡಿಸಿತ್ತು. ಅಲ್ಲದೆ, ಪ್ರಕರಣವನ್ನು ಮತ್ತೊಂದು ಪೀಠಕ್ಕೆ ನಿಯೋಜಿಸುವಂತೆ ಕಲ್ಕತ್ತಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯವರಿಗೆ ಸಿಜೆಐ ಆದೇಶಿಸಿದ್ದರು. ಸುಪ್ರೀಂ ಕೋರ್ಟ್ ಆದೇಶ ನೀಡಿದ ಕೆಲವೇ ಗಂಟೆಗಳಲ್ಲಿ, ನ್ಯಾಯಮೂರ್ತಿ ಗಂಗೋಪಾಧ್ಯಾಯ ಅವರು ಬಂಗಾಳಿ ಮಾಧ್ಯಮಗಳಿಗೆ ನೀಡಿದ ಸಂದರ್ಶನದ ವರದಿ ಮತ್ತು ಅಧಿಕೃತ ಅನುವಾದವನ್ನು ತಮ್ಮೆದುರು ಹಾಜರುಪಡಿಸುವಂತೆ ಸುಪ್ರೀಂ ಕೋರ್ಟ್ ಪ್ರಧಾನ ಕಾರ್ಯದರ್ಶಿಗೆ ನಿರ್ದೇಶನ ನೀಡಿತ್ತು.

ಅವರ ತೀರ್ಪುಗಳ ಹಿಂದೆ ರಾಜಕೀಯ ದುರುದ್ದೇಶಗಳು ಇವೆ, ರಾಜಕೀಯಕ್ಕಾಗಿ ನ್ಯಾಯಾಂಗ ತೊರೆದು ಬಿಜೆಪಿ ಸೇರಿರುವುದು ಇಂತಹ ಆರೋಪಗಳನ್ನು ಬಲಪಡಿಸಿದೆ ಎಂದು ಟಿಎಂಸಿ ಹೇಳಿತ್ತು. ಮಾಜಿ ನ್ಯಾಯಾಧೀಶರ ವಿರುದ್ಧ ವಾಗ್ದಾಳಿ ನಡೆಸಿದ ಮಮತಾ ಬ್ಯಾನರ್ಜಿ, ಸಾವಿರಾರು ವಿದ್ಯಾರ್ಥಿಗಳಿಗೆ ಉದ್ಯೋಗ ನಿರಾಕರಿಸಿದ ನಂತರ ಅವರು ನಾಯಕರಾಗಿದ್ದಾರೆ, ಅವರು ಚುನಾವಣೆಯಲ್ಲಿ ಸ್ಪರ್ಧಿಸಿದರೆ ಸೋಲಿಸುವುದಾಗಿ ಶಪಥ ಮಾಡಿದ್ದರು. ತಯಾರಾಗಿರಿ… ನೀವು ಎಲ್ಲಿಂದ ಸ್ಪರ್ಧಿಸುತ್ತೀರೋ, ನಾನು ನಿಮ್ಮ ವಿರುದ್ಧ ಹೋರಾಟಕ್ಕೆ ವಿದ್ಯಾರ್ಥಿಗಳನ್ನು ಕಳುಹಿಸುತ್ತೇನೆ ಎಂದು ಹೇಳಿದ್ದರು.

ತಮ್ಲುಕ್‌ನಿಂದ ಗಂಗೋಪಾಧ್ಯಾಯ ಅವರ ನಾಮನಿರ್ದೇಶನಕ್ಕೆ ಸಂಬಂಧಿಸಿದಂತೆ ಮಾಧ್ಯಮ ವರದಿಗಳು ಬಹಿರಂಗವಾಗುತ್ತಿದ್ದಂತೆ, ತೃಣಮೂಲ ಕಾಂಗ್ರೆಸ್‌ ಮಾಜಿ ನ್ಯಾಯಾಧೀಶರ ವಿರುದ್ಧ ಭಟ್ಟಾಚಾರ್ಯರನ್ನು ಕಣಕ್ಕಿಳಿಸಿದೆ. ಭಟ್ಟಾಚಾರ್ಯ ಅವರು ಪಕ್ಷದ ವಿದ್ಯಾರ್ಥಿ ಘಟಕವಾದ ತೃಣಮೂಲ ಛತ್ರ ಪರಿಷತ್ತಿನ ಸದಸ್ಯರಾಗಿ ವಿದ್ಯಾರ್ಥಿ ರಾಜಕೀಯದಲ್ಲಿ ಸಕ್ರಿಯರಾಗಿದ್ದರು ಮತ್ತು 2022ರಿಂದ ಪಕ್ಷದ ಸಾಮಾಜಿಕ ಮಾಧ್ಯಮ ಉಸ್ತುವಾರಿಯನ್ನು ವಹಿಸಿಕೊಂಡಿದ್ದರು.

ಇದನ್ನು ಓದಿ: ಮೂರು ದಶಕಗಳ ಬಳಿಕ ಜೆಎನ್‌ಯು ವಿದ್ಯಾರ್ಥಿ ಸಂಘಟನೆಗೆ ದಲಿತ ಅಧ್ಯಕ್ಷರ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...