Homeಮುಖಪುಟಲೋಕಸಭೆ ಚುನಾವಣೆ: ಬಿಜೆಪಿ ಸೇರಿದ್ದ ಜಡ್ಜ್‌ ವಿರುದ್ಧ ವಿದ್ಯಾರ್ಥಿ ನಾಯಕನನ್ನು ಕಣಕ್ಕಿಳಿಸಿದ ದೀದಿ

ಲೋಕಸಭೆ ಚುನಾವಣೆ: ಬಿಜೆಪಿ ಸೇರಿದ್ದ ಜಡ್ಜ್‌ ವಿರುದ್ಧ ವಿದ್ಯಾರ್ಥಿ ನಾಯಕನನ್ನು ಕಣಕ್ಕಿಳಿಸಿದ ದೀದಿ

- Advertisement -
- Advertisement -

ಬಿಜೆಪಿ ನಿನ್ನೆ 111 ಅಭ್ಯರ್ಥಿಗಳ 5ನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕಲ್ಕತ್ತಾ ಹೈಕೋರ್ಟ್‌ಗೆ ರಾಜೀನಾಮೆ ನೀಡಿ ಇತ್ತೀಚೆಗೆ ಬಿಜೆಪಿಗೆ ಸೇರಿ ವಿವಾದವನ್ನು ಸೃಷ್ಟಿಸಿದ್ದ ಮಾಜಿ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರಿಗೆ ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪುರ್ ಜಿಲ್ಲೆಯ ತಾಮ್ಲುಕ್ ಕ್ಷೇತ್ರದಿಂದ ಟಿಕೆಟ್‌ ನೀಡಲಾಗಿದೆ. ಅವರನ್ನು ಚುನಾವಣೆಗೆ ನಿಂತರೆ ಸೋಲಿಸುವುದಾಗಿ ಈ ಹಿಂದೆ ಶಪಥ ಮಾಡಿದ್ದ ಮಮತಾ ಬ್ಯಾನರ್ಜಿ, ತಾಮ್ಲುಕ್ ಕ್ಷೇತ್ರದಿಂದ ಗಂಗೋಪಾಧ್ಯಾಯ ಸ್ಪರ್ಧಿಸುವ ಮಾಹಿತಿ ತಿಳಿದು ಅವರ ವಿರುದ್ಧ ವಿದ್ಯಾರ್ಥಿ ನಾಯಕನನ್ನೇ ಕಣಕ್ಕಿಳಿಸಿದ್ದಾರೆ.

ತೃಣಮೂಲ ಕಾಂಗ್ರೆಸ್‌ನ ಸಾಮಾಜಿಕ ಐಟಿ ಸೆಲ್‌ನ ಮುಖ್ಯಸ್ಥರಾಗಿರುವ 27 ವರ್ಷದ ದೇಬಂಗ್ಶು ಭಟ್ಟಾಚಾರ್ಯ ವಿರುದ್ಧ ಬಿಜೆಪಿಯಿಂದ ಅಭಿಜಿತ್ ಗಂಗೋಪಾಧ್ಯಾಯ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಮಾರ್ಚ್ 10ರಂದು, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜ್ಯದ ಎಲ್ಲಾ 42 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಗಂಗೋಪಾಧ್ಯಾಯ ಸ್ಪರ್ಧೆ ಮಾಹಿತಿ ತಿಳಿದೇ ಅವರ ವಿರುದ್ಧ ದೇಬಂಗ್ಶು ಭಟ್ಟಾಚಾರ್ಯ ಅವರನ್ನು ದೀದಿ ಕಣಕ್ಕಿಳಿಸಿದ್ದಾರೆ ಎನ್ನಲಾಗಿದೆ.

ನಿವೃತ್ತ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರು ಈ ಮೊದಲು ಚರ್ಚೆಗೆ ಗ್ರಾಸವಾಗಿದ್ದರು. ಏಪ್ರಿಲ್ 2023ರಲ್ಲಿ ಶಾಲಾ ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸುತ್ತಿದ್ದ ನ್ಯಾ. ಗಂಗೋಪಾಧ್ಯಾಯ ಅವರು, ಈ ಹಗರಣದಲ್ಲಿ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಅವರ ಪಾತ್ರದ ಬಗ್ಗೆ ಸ್ಥಳೀಯ ಬಂಗಾಳಿ ಸುದ್ದಿ ವಾಹಿನಿಗೆ ಸಂದರ್ಶನ ನೀಡಿದ್ದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಸುಪ್ರೀಂ ಕೋರ್ಟ್, ಟಿವಿ ಚಾನೆಲ್‌ಗಳಿಗೆ ಸಂದರ್ಶನ ನೀಡುವುದು ಹಾಲಿ ನ್ಯಾಯಮೂರ್ತಿಗಳ ಕೆಲಸವಲ್ಲ ಎಂದಿತ್ತು. ನ್ಯಾ. ಗಂಗೋಪಾಧ್ಯಾಯ ಅವರು ಸಂದರ್ಶನ ನೀಡಿದ್ದಾರೆಯೇ ಅಥವಾ ಇಲ್ಲವೇ ಎಂಬುವುದನ್ನು ಪರಿಶೀಲಿಸಲು ಕಲ್ಕತ್ತಾ ಹೈಕೋರ್ಟ್‌ ರಿಜಿಸ್ಟ್ರಾರ್ ಜನರಲ್ ಅವರಿಂದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಸುಪ್ರೀಂಕೋರ್ಟ್ ಪೀಠ ವರದಿ ಕೇಳಿತ್ತು.

ನ್ಯಾಯಮೂರ್ತಿ ಗಂಗೋಪಾಧ್ಯಾಯ ಅವರು ಸಂದರ್ಶನ ನೀಡಿದ್ದು ನಿಜವಾಗಿದ್ದರೆ, ಅರ್ಜಿಗಳ ವಿಚಾರಣೆ ಮುಂದುವರಿಸಲು ಅವರಿಗೆ ಅವಕಾಶ ನೀಡುವುದಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ಸ್ಪಷ್ಟಪಡಿಸಿತ್ತು. ಅಲ್ಲದೆ, ಪ್ರಕರಣವನ್ನು ಮತ್ತೊಂದು ಪೀಠಕ್ಕೆ ನಿಯೋಜಿಸುವಂತೆ ಕಲ್ಕತ್ತಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯವರಿಗೆ ಸಿಜೆಐ ಆದೇಶಿಸಿದ್ದರು. ಸುಪ್ರೀಂ ಕೋರ್ಟ್ ಆದೇಶ ನೀಡಿದ ಕೆಲವೇ ಗಂಟೆಗಳಲ್ಲಿ, ನ್ಯಾಯಮೂರ್ತಿ ಗಂಗೋಪಾಧ್ಯಾಯ ಅವರು ಬಂಗಾಳಿ ಮಾಧ್ಯಮಗಳಿಗೆ ನೀಡಿದ ಸಂದರ್ಶನದ ವರದಿ ಮತ್ತು ಅಧಿಕೃತ ಅನುವಾದವನ್ನು ತಮ್ಮೆದುರು ಹಾಜರುಪಡಿಸುವಂತೆ ಸುಪ್ರೀಂ ಕೋರ್ಟ್ ಪ್ರಧಾನ ಕಾರ್ಯದರ್ಶಿಗೆ ನಿರ್ದೇಶನ ನೀಡಿತ್ತು.

ಅವರ ತೀರ್ಪುಗಳ ಹಿಂದೆ ರಾಜಕೀಯ ದುರುದ್ದೇಶಗಳು ಇವೆ, ರಾಜಕೀಯಕ್ಕಾಗಿ ನ್ಯಾಯಾಂಗ ತೊರೆದು ಬಿಜೆಪಿ ಸೇರಿರುವುದು ಇಂತಹ ಆರೋಪಗಳನ್ನು ಬಲಪಡಿಸಿದೆ ಎಂದು ಟಿಎಂಸಿ ಹೇಳಿತ್ತು. ಮಾಜಿ ನ್ಯಾಯಾಧೀಶರ ವಿರುದ್ಧ ವಾಗ್ದಾಳಿ ನಡೆಸಿದ ಮಮತಾ ಬ್ಯಾನರ್ಜಿ, ಸಾವಿರಾರು ವಿದ್ಯಾರ್ಥಿಗಳಿಗೆ ಉದ್ಯೋಗ ನಿರಾಕರಿಸಿದ ನಂತರ ಅವರು ನಾಯಕರಾಗಿದ್ದಾರೆ, ಅವರು ಚುನಾವಣೆಯಲ್ಲಿ ಸ್ಪರ್ಧಿಸಿದರೆ ಸೋಲಿಸುವುದಾಗಿ ಶಪಥ ಮಾಡಿದ್ದರು. ತಯಾರಾಗಿರಿ… ನೀವು ಎಲ್ಲಿಂದ ಸ್ಪರ್ಧಿಸುತ್ತೀರೋ, ನಾನು ನಿಮ್ಮ ವಿರುದ್ಧ ಹೋರಾಟಕ್ಕೆ ವಿದ್ಯಾರ್ಥಿಗಳನ್ನು ಕಳುಹಿಸುತ್ತೇನೆ ಎಂದು ಹೇಳಿದ್ದರು.

ತಮ್ಲುಕ್‌ನಿಂದ ಗಂಗೋಪಾಧ್ಯಾಯ ಅವರ ನಾಮನಿರ್ದೇಶನಕ್ಕೆ ಸಂಬಂಧಿಸಿದಂತೆ ಮಾಧ್ಯಮ ವರದಿಗಳು ಬಹಿರಂಗವಾಗುತ್ತಿದ್ದಂತೆ, ತೃಣಮೂಲ ಕಾಂಗ್ರೆಸ್‌ ಮಾಜಿ ನ್ಯಾಯಾಧೀಶರ ವಿರುದ್ಧ ಭಟ್ಟಾಚಾರ್ಯರನ್ನು ಕಣಕ್ಕಿಳಿಸಿದೆ. ಭಟ್ಟಾಚಾರ್ಯ ಅವರು ಪಕ್ಷದ ವಿದ್ಯಾರ್ಥಿ ಘಟಕವಾದ ತೃಣಮೂಲ ಛತ್ರ ಪರಿಷತ್ತಿನ ಸದಸ್ಯರಾಗಿ ವಿದ್ಯಾರ್ಥಿ ರಾಜಕೀಯದಲ್ಲಿ ಸಕ್ರಿಯರಾಗಿದ್ದರು ಮತ್ತು 2022ರಿಂದ ಪಕ್ಷದ ಸಾಮಾಜಿಕ ಮಾಧ್ಯಮ ಉಸ್ತುವಾರಿಯನ್ನು ವಹಿಸಿಕೊಂಡಿದ್ದರು.

ಇದನ್ನು ಓದಿ: ಮೂರು ದಶಕಗಳ ಬಳಿಕ ಜೆಎನ್‌ಯು ವಿದ್ಯಾರ್ಥಿ ಸಂಘಟನೆಗೆ ದಲಿತ ಅಧ್ಯಕ್ಷರ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...