Homeಮುಖಪುಟಬಿಜೆಪಿ ’ಸಮ್ಮಿಶ್ರ ಧರ್ಮ’ ನೀತಿ ಅನುಸರಿಸುತ್ತಿದೆ: ಚಿರಾಗ್ ಪಾಸ್ವಾನ್

ಬಿಜೆಪಿ ’ಸಮ್ಮಿಶ್ರ ಧರ್ಮ’ ನೀತಿ ಅನುಸರಿಸುತ್ತಿದೆ: ಚಿರಾಗ್ ಪಾಸ್ವಾನ್

ಮುಖ್ಯಮಂತ್ರಿ ನಿತೀಶ್ ಕುಮಾರ್, ಭಾರತೀಯ ಜನತಾ ಪಕ್ಷ ಮತ್ತು ಎಲ್‌ಜೆಪಿ ನಡುವೆ ಅಂತರವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಪಾಸ್ವಾನ್ ಆರೋಪಿಸಿದ್ದಾರೆ.

- Advertisement -
- Advertisement -

ಲೋಕ ಜನಶಕ್ತಿ ಪಕ್ಷದ ಅಧ್ಯಕ್ಷ ಚಿರಾಗ್ ಪಾಸ್ವಾನ್ ಅವರು ಬಿಜೆಪಿ ಮೇಲಿನ ಮಾತಿನ ದಾಳಿಯನ್ನು ಕಡಿಮೆ ಮಾಡಿದ್ದಾರೆ. ಜೊತೆಗೆ ಬಿಜೆಪಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮಿತ್ರರಾಗಿ “ಸಮ್ಮಿಶ್ರ ಧರ್ಮ” ವನ್ನು ಅನುಸರಿಸುತ್ತಿದೆ ಎಂದು ಹೇಳಿದ್ದಾರೆ.

“ನಾನು ಪ್ರಧಾನ ಮಂತ್ರಿಯೊಂದಿಗಿನ ನನ್ನ ಸಂಬಂಧವನ್ನು ಪ್ರದರ್ಶಿಸುವ ಅಗತ್ಯವಿಲ್ಲ. ನನ್ನ ತಂದೆ ಆಸ್ಪತ್ರೆಯಲ್ಲಿದ್ದ ಸಮಯದಿಂದ ಅವರ ಕೊನೆಯ ವಿಧಿವಿಧಾನಗಳವರೆಗೆ, ಪ್ರಧಾನಿಗಳು ನನಗಾಗಿ ಮಾಡಿದ ಕೆಲಸಗಳನ್ನು ನಾನು ಎಂದಿಗೂ ಮರೆಯಲು ಸಾಧ್ಯವಿಲ್ಲ ”ಎಂದು ಪಾಸ್ವಾನ್ ಸರಣಿ ಟ್ವೀಟ್‌ಗಳಲ್ಲಿ ಹೇಳಿದ್ದಾರೆ.

ಮುಖ್ಯಮಂತ್ರಿ ನಿತೀಶ್ ಕುಮಾರ್, ಭಾರತೀಯ ಜನತಾ ಪಕ್ಷ ಮತ್ತು ಎಲ್‌ಜೆಪಿ ನಡುವೆ ಅಂತರವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಪಾಸ್ವಾನ್ ಆರೋಪಿಸಿದ್ದಾರೆ.

ಜೆಡಿ (ಯು) ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ, ತಮ್ಮ ಮಿತ್ರರಿಗೆ ಕೃತಜ್ಞತೆ ತಿಳಿಸಬೇಕು. ಏಕೆಂದರೆ ನಿತೀಶ್ ಕುಮಾರ್ ವಿರುದ್ಧ ಅಷ್ಟು ಕೋಪವಿದ್ದರೂ ಸಹ ಸಮ್ಮಿಶ್ರ ಧರ್ಮ ಅನುಸರಿಸುತ್ತಿರುವುದಕ್ಕೆ ಎಂದಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಎನ್‌ಡಿಎ ಮೈತ್ರಿ ತೊರೆದ ಚಿರಾಗ್ ಪಾಸ್ವಾನ್!

“ನನ್ನ ಕಾರಣದಿಂದಾಗಿ ಪ್ರಧಾನಿ ನರೇಂದ್ರ ಮೋದಿಯವರು ಯಾವುದೇ ಸಂದಿಗ್ಧ ಸ್ಥಿತಿಯಲ್ಲಿ ಇರುವುದು ನಾನು ಬಯಸುವುದಿಲ್ಲ. ಅವರು ತನ್ನ ಸಮ್ಮಿಶ್ರ ಧರ್ಮವನ್ನು ಅನುಸರಿಸಬೇಕು. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ತೃಪ್ತಿಪಡಿಸಲು ಯಾವುದೇ ಸಂಕೋಚವಿಲ್ಲದೆ  ಅವರು ನನ್ನ ವಿರುದ್ಧ ಏನು ಬೇಕಾದರೂ ಹೇಳಬಹುದು, ”ಎಂದು ಹೇಳಿದ್ದಾರೆ.

ಬಿಹಾರದ ವಿಧಾನಸಭಾ ಚುನಾವಣೆಗಳಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಇತರ ಸಮ್ಮಿಶ್ರ ಮುಖಂಡರೊಂದಿಗೆ ಹಲವಾರು ಚುನಾವಣಾ ರ್‍ಯಾಲಿಗಳಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ.

ಬಿಹಾರ ಚುನಾವಣೆಗಳಲ್ಲಿ ಸ್ವತಂತ್ರವಾಗಿ ಸ್ಫರ್ಧಿಸುವ ಇಚ್ಛೆಯಿಂದ ಬಿಜೆಪಿ ಮತ್ತು ಜೆಡಿಯು ಒಳಗೊಂಡ ಎನ್‌ಡಿಎಯಿಂದ ಎಲ್‌ಜೆಪಿ ಹೊರನಡೆದಿದೆ. ಈ ನಿರ್ಧಾರವು ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿಯೇ ಎಲ್‌ಜೆಪಿಯನ್ನು ನೀರಿನಲ್ಲಿ ಮುಳುಗಿಸಿದೆ ಎನ್ನಲಾಗಿದೆ.

ಇದನ್ನೂ ಓದಿ: ’ಮಹಾಘಟಬಂಧನ್’ ಗೆದ್ದರೆ ಕೇಂದ್ರದ ಕೃಷಿ ವಿರೋಧಿ ಕಾನೂನುಗಳು ರದ್ದು!

ಜೆಡಿಯು ವಿರುದ್ಧ ಅಭ್ಯರ್ಥಿಗಳನ್ನು ಹಾಕುವ ಮೂಲಕ ಅದನ್ನು ಗುರಿಯಾಗಿಸಲು ಪಾಸ್ವಾನ್ ದೃಢನಿಶ್ಚಯದ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಮತ್ತೊಂದೆಡೆ ಅವರ ಪಕ್ಷ ಬಿಜೆಪಿ ಅಭ್ಯರ್ಥಿಗಳಿರುವ ಚುನಾವಣಾ ಕಣಗಳಲ್ಲಿ ಸ್ಪರ್ಧಿಸುತ್ತಿಲ್ಲ.

ಆದರೆ ಕಳೆದ ಕೆಲವು ದಿನಗಳಲ್ಲಿ ಚಿರಾಗ್ ತನ್ನ ಹಿರಿಯ ನಾಯಕರ ಸಾಮೀಪ್ಯವನ್ನು ತಿಳಿಸುವ ಮೂಲಕ ಗೊಂದಲವನ್ನು ಹರಡಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಎನ್‌ಡಿಎ ಮೈತ್ರಿಕೂಟವು ಜಯಗಳಿಸಿದರೆ ನಿತೀಶ್ ಕುಮಾರ್ ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗುತ್ತಾರೆ ಎಂದು ಪುನರುಚ್ಚರಿಸಿದೆ.

ಮೊನ್ನೆಯಷ್ಟೇ ಪಾಸ್ವಾನ್ ನನ್ನ ಹೃದಯದಲ್ಲಿ ಮೋದಿ ನೆಲೆಸಿದ್ದಾರೆ. ನಾನು ಚುನಾವಣಾ ಪ್ರಚಾರಕ್ಕೆ ಅವರ ಚಿತ್ರ ಬಳಸಬೇಕಿಲ್ಲ. ಬೇಕಿದ್ದರೇ ನನ್ನ ಹೃದಯ ತೆರೆದು ನೋಡಬಹುದು. ನಾನು ಮೋದಿಯ ಹನುಮನಿದ್ದಂತೆ ಎಂದಿದ್ದರು. ಆದರೆ ಬಿಜೆಪಿಯವರು ಪಾಸ್ವಾನ್ ಮತ ವಿಭಜಕ, ಮೈತ್ರಿಯಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ಬಿಹಾರ: ಟ್ರಂಪ್ ಬಂದು ವಿಶೇಷ ಸ್ಥಾನಮಾನ ನೀಡುತ್ತಾರಾ?- ನಿತೀಶ್‌ಗೆ ತೇಜಸ್ವಿ ಯಾದವ್ ಪ್ರಶ್ನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...