Homeಮುಖಪುಟಬಿಜೆಪಿ ’ಸಮ್ಮಿಶ್ರ ಧರ್ಮ’ ನೀತಿ ಅನುಸರಿಸುತ್ತಿದೆ: ಚಿರಾಗ್ ಪಾಸ್ವಾನ್

ಬಿಜೆಪಿ ’ಸಮ್ಮಿಶ್ರ ಧರ್ಮ’ ನೀತಿ ಅನುಸರಿಸುತ್ತಿದೆ: ಚಿರಾಗ್ ಪಾಸ್ವಾನ್

ಮುಖ್ಯಮಂತ್ರಿ ನಿತೀಶ್ ಕುಮಾರ್, ಭಾರತೀಯ ಜನತಾ ಪಕ್ಷ ಮತ್ತು ಎಲ್‌ಜೆಪಿ ನಡುವೆ ಅಂತರವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಪಾಸ್ವಾನ್ ಆರೋಪಿಸಿದ್ದಾರೆ.

- Advertisement -
- Advertisement -

ಲೋಕ ಜನಶಕ್ತಿ ಪಕ್ಷದ ಅಧ್ಯಕ್ಷ ಚಿರಾಗ್ ಪಾಸ್ವಾನ್ ಅವರು ಬಿಜೆಪಿ ಮೇಲಿನ ಮಾತಿನ ದಾಳಿಯನ್ನು ಕಡಿಮೆ ಮಾಡಿದ್ದಾರೆ. ಜೊತೆಗೆ ಬಿಜೆಪಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮಿತ್ರರಾಗಿ “ಸಮ್ಮಿಶ್ರ ಧರ್ಮ” ವನ್ನು ಅನುಸರಿಸುತ್ತಿದೆ ಎಂದು ಹೇಳಿದ್ದಾರೆ.

“ನಾನು ಪ್ರಧಾನ ಮಂತ್ರಿಯೊಂದಿಗಿನ ನನ್ನ ಸಂಬಂಧವನ್ನು ಪ್ರದರ್ಶಿಸುವ ಅಗತ್ಯವಿಲ್ಲ. ನನ್ನ ತಂದೆ ಆಸ್ಪತ್ರೆಯಲ್ಲಿದ್ದ ಸಮಯದಿಂದ ಅವರ ಕೊನೆಯ ವಿಧಿವಿಧಾನಗಳವರೆಗೆ, ಪ್ರಧಾನಿಗಳು ನನಗಾಗಿ ಮಾಡಿದ ಕೆಲಸಗಳನ್ನು ನಾನು ಎಂದಿಗೂ ಮರೆಯಲು ಸಾಧ್ಯವಿಲ್ಲ ”ಎಂದು ಪಾಸ್ವಾನ್ ಸರಣಿ ಟ್ವೀಟ್‌ಗಳಲ್ಲಿ ಹೇಳಿದ್ದಾರೆ.

ಮುಖ್ಯಮಂತ್ರಿ ನಿತೀಶ್ ಕುಮಾರ್, ಭಾರತೀಯ ಜನತಾ ಪಕ್ಷ ಮತ್ತು ಎಲ್‌ಜೆಪಿ ನಡುವೆ ಅಂತರವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಪಾಸ್ವಾನ್ ಆರೋಪಿಸಿದ್ದಾರೆ.

ಜೆಡಿ (ಯು) ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ, ತಮ್ಮ ಮಿತ್ರರಿಗೆ ಕೃತಜ್ಞತೆ ತಿಳಿಸಬೇಕು. ಏಕೆಂದರೆ ನಿತೀಶ್ ಕುಮಾರ್ ವಿರುದ್ಧ ಅಷ್ಟು ಕೋಪವಿದ್ದರೂ ಸಹ ಸಮ್ಮಿಶ್ರ ಧರ್ಮ ಅನುಸರಿಸುತ್ತಿರುವುದಕ್ಕೆ ಎಂದಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಎನ್‌ಡಿಎ ಮೈತ್ರಿ ತೊರೆದ ಚಿರಾಗ್ ಪಾಸ್ವಾನ್!

“ನನ್ನ ಕಾರಣದಿಂದಾಗಿ ಪ್ರಧಾನಿ ನರೇಂದ್ರ ಮೋದಿಯವರು ಯಾವುದೇ ಸಂದಿಗ್ಧ ಸ್ಥಿತಿಯಲ್ಲಿ ಇರುವುದು ನಾನು ಬಯಸುವುದಿಲ್ಲ. ಅವರು ತನ್ನ ಸಮ್ಮಿಶ್ರ ಧರ್ಮವನ್ನು ಅನುಸರಿಸಬೇಕು. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ತೃಪ್ತಿಪಡಿಸಲು ಯಾವುದೇ ಸಂಕೋಚವಿಲ್ಲದೆ  ಅವರು ನನ್ನ ವಿರುದ್ಧ ಏನು ಬೇಕಾದರೂ ಹೇಳಬಹುದು, ”ಎಂದು ಹೇಳಿದ್ದಾರೆ.

ಬಿಹಾರದ ವಿಧಾನಸಭಾ ಚುನಾವಣೆಗಳಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಇತರ ಸಮ್ಮಿಶ್ರ ಮುಖಂಡರೊಂದಿಗೆ ಹಲವಾರು ಚುನಾವಣಾ ರ್‍ಯಾಲಿಗಳಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ.

ಬಿಹಾರ ಚುನಾವಣೆಗಳಲ್ಲಿ ಸ್ವತಂತ್ರವಾಗಿ ಸ್ಫರ್ಧಿಸುವ ಇಚ್ಛೆಯಿಂದ ಬಿಜೆಪಿ ಮತ್ತು ಜೆಡಿಯು ಒಳಗೊಂಡ ಎನ್‌ಡಿಎಯಿಂದ ಎಲ್‌ಜೆಪಿ ಹೊರನಡೆದಿದೆ. ಈ ನಿರ್ಧಾರವು ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿಯೇ ಎಲ್‌ಜೆಪಿಯನ್ನು ನೀರಿನಲ್ಲಿ ಮುಳುಗಿಸಿದೆ ಎನ್ನಲಾಗಿದೆ.

ಇದನ್ನೂ ಓದಿ: ’ಮಹಾಘಟಬಂಧನ್’ ಗೆದ್ದರೆ ಕೇಂದ್ರದ ಕೃಷಿ ವಿರೋಧಿ ಕಾನೂನುಗಳು ರದ್ದು!

ಜೆಡಿಯು ವಿರುದ್ಧ ಅಭ್ಯರ್ಥಿಗಳನ್ನು ಹಾಕುವ ಮೂಲಕ ಅದನ್ನು ಗುರಿಯಾಗಿಸಲು ಪಾಸ್ವಾನ್ ದೃಢನಿಶ್ಚಯದ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಮತ್ತೊಂದೆಡೆ ಅವರ ಪಕ್ಷ ಬಿಜೆಪಿ ಅಭ್ಯರ್ಥಿಗಳಿರುವ ಚುನಾವಣಾ ಕಣಗಳಲ್ಲಿ ಸ್ಪರ್ಧಿಸುತ್ತಿಲ್ಲ.

ಆದರೆ ಕಳೆದ ಕೆಲವು ದಿನಗಳಲ್ಲಿ ಚಿರಾಗ್ ತನ್ನ ಹಿರಿಯ ನಾಯಕರ ಸಾಮೀಪ್ಯವನ್ನು ತಿಳಿಸುವ ಮೂಲಕ ಗೊಂದಲವನ್ನು ಹರಡಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಎನ್‌ಡಿಎ ಮೈತ್ರಿಕೂಟವು ಜಯಗಳಿಸಿದರೆ ನಿತೀಶ್ ಕುಮಾರ್ ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗುತ್ತಾರೆ ಎಂದು ಪುನರುಚ್ಚರಿಸಿದೆ.

ಮೊನ್ನೆಯಷ್ಟೇ ಪಾಸ್ವಾನ್ ನನ್ನ ಹೃದಯದಲ್ಲಿ ಮೋದಿ ನೆಲೆಸಿದ್ದಾರೆ. ನಾನು ಚುನಾವಣಾ ಪ್ರಚಾರಕ್ಕೆ ಅವರ ಚಿತ್ರ ಬಳಸಬೇಕಿಲ್ಲ. ಬೇಕಿದ್ದರೇ ನನ್ನ ಹೃದಯ ತೆರೆದು ನೋಡಬಹುದು. ನಾನು ಮೋದಿಯ ಹನುಮನಿದ್ದಂತೆ ಎಂದಿದ್ದರು. ಆದರೆ ಬಿಜೆಪಿಯವರು ಪಾಸ್ವಾನ್ ಮತ ವಿಭಜಕ, ಮೈತ್ರಿಯಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ಬಿಹಾರ: ಟ್ರಂಪ್ ಬಂದು ವಿಶೇಷ ಸ್ಥಾನಮಾನ ನೀಡುತ್ತಾರಾ?- ನಿತೀಶ್‌ಗೆ ತೇಜಸ್ವಿ ಯಾದವ್ ಪ್ರಶ್ನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...