Homeಕರ್ನಾಟಕಟಿಪ್ಪುವನ್ನು ಮುಕ್ತವಾಗಿ ಹೊಗಳಿದ್ದ ಬಿಜೆಪಿ ಸಂಸ್ಥಾಪಕ ಸದಸ್ಯ ಮಲ್ಕಾನಿ: ಪಿ.ಸಾಯಿನಾಥ್‌ ಉಲ್ಲೇಖ

ಟಿಪ್ಪುವನ್ನು ಮುಕ್ತವಾಗಿ ಹೊಗಳಿದ್ದ ಬಿಜೆಪಿ ಸಂಸ್ಥಾಪಕ ಸದಸ್ಯ ಮಲ್ಕಾನಿ: ಪಿ.ಸಾಯಿನಾಥ್‌ ಉಲ್ಲೇಖ

ಕೆ.ಆರ್‌.ಮಲ್ಕಾನಿಯವರು ಟಿಪ್ಪು ಬಗ್ಗೆ ಮುಕ್ತವಾಗಿ ಹೊಗಳಿರುವುದನ್ನು ಉಲ್ಲೇಖಿಸಿ ‘ಪ್ರಜಾವಾಣಿ’, ‘ಡೆಕ್ಕನ್‌ಹೆರಾಲ್ಡ್‌’ ಪತ್ರಿಕೆಗಳಿಗೆ ಪಿ.ಸಾಯಿನಾಥ್ ಲೇಖನ ಬರೆದಿದ್ದಾರೆ

- Advertisement -
- Advertisement -

“ಬಿಜೆಪಿಯ ಸಂಸ್ಥಾಪಕ ಸದಸ್ಯ, ಬಲಪಂಥೀಯ ಪ್ರಖರ ಪತ್ರಕರ್ತ, ಆರ್‌ಎಸ್‌ಎಸ್‌ನ ಆರ್ಗನೈಸರ್‌ ಸಂಪಾದಕರಾಗಿದ್ದ ‘ಕೇವಲ್ ರಾಮ್ ರತನ್ ಕುಮಾರ್ ಮಲ್ಕಾನಿ’ (ಕೆ.ಆರ್.ಮಲ್ಕಾನಿ) ಅವರು ಟಿಪ್ಪು ಸುಲ್ತಾನ್‌ರನ್ನು ಮುಕ್ತವಾಗಿ ಹೊಗಳಿದ್ದರು” ಎಂದು ಮ್ಯಾಗಸ್ಸೆ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಪಿ.ಸಾಯಿನಾಥ್ ಸ್ಮರಿಸಿದ್ದಾರೆ.

‘ಡೆಕ್ಕನ್ ಹೆರಾಲ್ಡ್‌’ ಮತ್ತು ‘ಪ್ರಜಾವಾಣಿ’ಯಲ್ಲಿ ಬುಧವಾರ (ಜೂನ್‌ 7) ಪ್ರಕಟವಾಗಿರುವ ಸಾಯಿನಾಥ್ ಅವರ ಲೇಖನವು ಹಲವು ಮಹತ್ತರವಾದ ವಿಚಾರಗಳನ್ನು ಒಳಗೊಂಡಿದೆ. ಟಿಪ್ಪು ಕುರಿತು ಬಿಜೆಪಿಯವರು ಸೃಷ್ಟಿಸಿರುವ ಗೊಂದಲಗಳಿಗೆ ‘ಮಲ್ಕಾನಿ’ ಅವರ ಮಾತುಗಳ ಮೂಲಕ ಪ್ರತಿಕ್ರಿಯಿಸುವ ಪ್ರಯತ್ನವನ್ನು ಈ ಲೇಖನ ಮಾಡಿದೆ. ಕೆ.ಆರ್‌.ಮಲ್ಕಾನಿಯವರ ಹಿನ್ನಲೆ, ಆರ್‌ಎಸ್‌ಎಸ್‌ ಮತ್ತು ಬಿಜೆಪಿಗಾಗಿ ಅವರು ಸಲ್ಲಿಸಿರುವ ಸೇವೆಯನ್ನು ಉಲ್ಲೇಖಿಸಲಾಗಿದೆ.

‘ದಿ ಗ್ರೇಟ್‌ನೆಸ್ ಆಫ್‌ ಟಿಪ್ಪು ಸುಲ್ತಾನ್‌’ ಎಂಬ ಶೀರ್ಷಿಕೆಯಲ್ಲಿ ‘ಡೆಕ್ಕನ್‌ ಹೆರಾಲ್ಡ್‌’ನಲ್ಲಿಯೂ, ‘ಟಿಪ್ಪು ಹಿರಿಮೆಗೆ ಮಸಿ ಬಳಿಯಲು ಸಾಧ್ಯವೆ?’ ಎಂಬ ತಲೆಬರೆಹದಲ್ಲಿ ‘ಪ್ರಜಾವಾಣಿ’ಯಲ್ಲಿಯೂ ಲೇಖನ ಪ್ರಕಟವಾಗಿದೆ.

ಮಲ್ಕಾನಿ ಅವರು ಟಿಪ್ಪುವನ್ನು ಹೇಗೆಲ್ಲ ಬಣ್ಣಿಸಿದ್ದರು ಎಂಬುದನ್ನು ಸಾಯಿನಾಥ್ ವಿಸ್ತೃತವಾಗಿ ಚರ್ಚಿಸಿದ್ದಾರೆ. ಮಲ್ಕಾನಿಯವರ ‘ಇಂಡಿಯಾ ಫಸ್ಟ್’ ಕೃತಿಯಲ್ಲಿ ದಾಖಲಾಗಿರುವ ಸಾಲುಗಳನ್ನು ಸಾಕ್ಷಿಯಾಗಿ ಒದಗಿಸಿದ್ದಾರೆ.

“ಅಕ್ಬರ್, ದಾರಾ ಶಿಕೋ ಹಾಗೂ ಟಿಪ್ಪು ಸುಲ್ತಾನ್‌ನಂತಹವರು ಹೀರೊಗಳೆಂದು ಪರಿಗಣಿಸಲ್ಪಡಬೇಕೇ ವಿನಾ ಖಳನಾಯಕರಾಗಿ ಅಲ್ಲ ಎನ್ನುವುದು ನನ್ನ ಅಭಿಪ್ರಾಯ. ಟಿಪ್ಪುವಿನ ಬಗ್ಗೆ ಹೆಚ್ಚೆಚ್ಚು ಓದಿದಷ್ಟೂ ನನಗೆ ಆತನ ವ್ಯಕ್ತಿತ್ವದ ಹಿರಿಮೆ ಮನವರಿಕೆಯಾಗಿದೆ. … (ಟಿಪ್ಪು ಸುಲ್ತಾನ್) ಮಾತ್ರವೇ ಬ್ರಿಟಿಷರ ವಿರುದ್ಧ ಹೋರಾಡುತ್ತಾ ಮಡಿದ ರಾಜಕುಮಾರ” ಎಂದು ಮಲ್ಕಾನಿಯವರು ಬರೆದಿರುವುದನ್ನು ಇಲ್ಲಿ ಪ್ರಸ್ತಾಪಿಸಲಾಗಿದೆ.

ಮುಂದುವರಿದು, “ಬ್ರಿಟಿಷರ ವಿರುದ್ಧ ಹೋರಾಡುವುದಷ್ಟಕ್ಕೇ ಟಿಪ್ಪು ತೃಪ್ತನಾಗಲಿಲ್ಲ, ಶಂಕಿತರಿಗೆ ಚಿತ್ರಹಿಂಸೆ ನೀಡುವುದನ್ನೂ ಸಾರ್ವಜನಿಕ ಕೆಲಸಗಳಿಗೆ ಜನರನ್ನು ಬಲವಂತವಾಗಿ ಕೂಲಿಗಳನ್ನಾಗಿ ಬಳಸಿಕೊಳ್ಳುವುದನ್ನೂ ವಿರೋಧಿಸಿದ್ದ. ಈತ ಪಾನ ನಿಷೇಧವನ್ನು ಜಾರಿಗೆ ತಂದ. ಮರಗಳನ್ನು ಕಡಿಯುವುದನ್ನು ವಿರೋಧಿಸಿದ. ಪ್ರತಿ ನಾಲ್ಕು ಮೈಲಿಗೆ ಒಂದು ಶಾಲೆಯನ್ನು ತೆರೆಯಲು ಯತ್ನಿಸಿದ. ಯಾವಾಗ ಶಸ್ತ್ರ ಉತ್ಪಾದನಾ ಕಾರ್ಖಾನೆಯಿಂದ ಕಾವೇರಿ ನದಿ ಕಲುಷಿತವಾಗುತ್ತಿದೆ ಎಂದು ಗೊತ್ತಾಯಿತೋ ತಕ್ಷಣ ಆತ ಆ ಕಾರ್ಖಾನೆಯನ್ನೇ ಸ್ಥಳಾಂತರಿಸಿದ. ಪರಿಸರವಾದಿಗಳಿಗೆ ಮಾದರಿ ಎನ್ನಬಹುದಾದ ರಾಜನೊಬ್ಬ ಅವನೊಳಗಿದ್ದ. ಭಾರತದ ರಾಜರುಗಳ ಪೈಕಿ ಟಿಪ್ಪು ಮಾತ್ರವೇ ವಿಶ್ವದೃಷ್ಟಿ ಉಳ್ಳವನಾಗಿದ್ದ. ಟಿಪ್ಪುವಿನ ಮರಣದಿಂದಾಗಿ ಭಾರತದ ಸ್ವಾತಂತ್ರ್ಯ ಒಂದೂವರೆ ಶತಮಾನದಷ್ಟು ಮುಂದೆ ಹೋಯಿತು… ಆತ ಬಯಸಿದ್ದರೆ, ಹಿಂದಿನ ಕೆಲ ಅರಸರಂತೆ, ಬ್ರಿಟಿಷರ ಅಡಿಯಾಳಾಗಿ ತನ್ನ ಅರಸುತನವನ್ನು ಉಳಿಸಿಕೊಳ್ಳಬಹುದಾಗಿತ್ತು. ಅಂದು ಅವನು ಹಾಗೆ ಮಾಡಿದ್ದೇ ಆಗಿದ್ದಲ್ಲಿ, ಇಂದು ಆತನ ಮರಿ, ಗಿರಿಮಕ್ಕಳು ಕೊಲ್ಕೊತ್ತಾದ ರಸ್ತೆಗಳಲ್ಲಿ ಸೈಕಲ್ ರಿಕ್ಷಾ ತುಳಿಯುತ್ತಾ ಬದುಕು ಸವೆಸಬೇಕಾದ ಅನಿವಾರ್ಯ ಸ್ಥಿತಿಗೆ ಸಿಲುಕುತ್ತಿರಲಿಲ್ಲ. ಗೌರವ ಕಳೆದುಕೊಂಡು ಬದುಕುವುದಕ್ಕಿಂತಲೂ ಸಾವು ಆತನ ಆಯ್ಕೆಯಾಗಿತ್ತು”- ಹೀಗೆ ಮಲ್ಕಾನಿಯವರು ಬಣ್ಣಿಸಿರುವುದಾಗಿ ಸಾಯಿನಾಥ್‌ ಬರೆದಿದ್ದಾರೆ.

ಮಲ್ಕಾನಿ ಅವರು ಟಿಪ್ಪು ಬಗ್ಗೆ ಬರೆದ ಲೇಖನವನ್ನು ಒಳಗೊಂಡ ಪುಸ್ತಕಕ್ಕೆ ಹಿಂದುತ್ವದ ಹೀರೊ ಎಲ್.ಕೆ.ಅಡ್ವಾಣಿ ಅವರೇ ಮುನ್ನುಡಿ ಬರೆದಿದ್ದರು. ಭಾರತದ ಉಪಪ್ರಧಾನಿಯಾಗಿದ್ದ ಅಡ್ವಾಣಿ ಅವರು ಮಲ್ಕಾನಿ ಅವರನ್ನು ‘ಮಹಾನ್ ಪತ್ರಕರ್ತ’ ಎಂದೇ ಬಣ್ಣಿಸುತ್ತಿದ್ದರು. ಆರ್‌ಎಸ್ಎಸ್ ಸಹ ಎಲ್ಲಿಯೂ ಮಲ್ಕಾನಿ ಅವರನ್ನು ನಿರಾಕರಿಸಿಲ್ಲ ಎಂದು ಸಾಯಿನಾಥ್‌ ಅಭಿಪ್ರಾಯಪಟ್ಟಿದ್ದಾರೆ.

ಮಲ್ಕಾನಿಯವರ ಹಿನ್ನೆಲೆಯ ಕುರಿತು ಬರೆಯುತ್ತಾ, “ಅವರು ಬಿಜೆಪಿಯ ಸ್ಥಾಪಕ ಸದಸ್ಯರಲ್ಲಿ ಒಬ್ಬರಾಗಿದ್ದರು. ಬಿಜೆಪಿಯ ಉಪಾಧ್ಯಕ್ಷರಾಗಿ ಹಲವಾರು ವರ್ಷ ಕಾರ್ಯನಿರ್ವಹಿಸಿದ್ದರು. ಆರ್‌ಎಸ್ಎಸ್‌ನ ಅತಿಮುಖ್ಯ ಚಿಂತಕರಲ್ಲಿ ಒಬ್ಬರಾಗಿದ್ದರು. ಆ ಸಂಘಟನೆಯ ಮಾಧ್ಯಮ ವ್ಯಕ್ತಿಯೂ ಆಗಿದ್ದರು. 1940ರ ದಶಕದಲ್ಲಿ ‘ದಿ ಹಿಂದೂಸ್ಥಾನ್ ಟೈಮ್ಸ್’ನಲ್ಲಿ ಕೆಲಕಾಲ ಕೆಲಸ ಮಾಡಿದ್ದರು (ಅದೇ ಸಮಯದಲ್ಲಿ ‘ಆರ್ಗನೈಸರ್’ ವಾರಪತ್ರಿಕೆಗೂ ಬರೆಯುತ್ತಿದ್ದರು). ಆನಂತರದಲ್ಲಿ ಅವರು ಪೂರ್ಣಾವಧಿಗೆ ಹಿಂದುತ್ವದ ತೆಕ್ಕೆಗೆ ಬಂದರು. ಆರ್‌ಎಸ್ಎಸ್‌ನ ದನಿಯಾಗಿದ್ದ ‘ಆರ್ಗನೈಸರ್’ಗೆ ಸುಮಾರು 35 ವರ್ಷದಷ್ಟು ದೀರ್ಘಕಾಲ ಸಂಪಾದಕರಾಗಿದ್ದು ಇವರೊಬ್ಬರೇ. ‘ಆರ್ಗನೈಸರ್’ನ ಹಿಂದಿ ಆವೃತ್ತಿ ‘ಪಾಂಚಜನ್ಯ’ದ ಸಂಪಾದಕರಾಗಿಯೂ ಕೆಲಸ ಮಾಡಿದ್ದರು” ಎಂದು ವಿವರಿಸಿದ್ದಾರೆ.

ಇದನ್ನೂ ಓದಿರಿ: ಟಿಪ್ಪು v/s ಸಾವರ್ಕರ್‌ ಎಂಬುದಕ್ಕೆ ನನ್ನ ಒಪ್ಪಿಗೆ ಇಲ್ಲ: ಯಡಿಯೂರಪ್ಪ

“ಪುದುಚೇರಿಯ ಲೆಫ್ಟಿನೆಂಟ್ ಗರ್ವನರ್ ಆಗಿ ಸೇವೆ ಸಲ್ಲಿಸುತ್ತಿದ್ದಾಗ 2003ರಲ್ಲಿ ನಿಧನರಾದ ಮಲ್ಕಾನಿ ಅವರು ಸ್ಪಷ್ಟ ಚಿಂತನೆ ಮತ್ತು ನೇರ ನುಡಿಯ ವ್ಯಕ್ತಿತ್ವದವರು. ಟಿಪ್ಪು, ಭಗತ್ ಸಿಂಗ್, ಹಿಜಾಬ್ ಹಾಗೂ ಮತ್ತಿತರ ವಿಷಯವಾಗಿ ಕರ್ನಾಟಕದಲ್ಲಿ ಅನಗತ್ಯ ಗಲಭೆಗಳನ್ನು ಸೃಷ್ಟಿಸಿದ ಗುಂಪಿನಂತಲ್ಲ” ಎಂದು ಬಣ್ಣಿಸಿದ್ದಾರೆ.

“ಮಲ್ಕಾನಿಯವರ ಈ ಆರ್‌ಎಸ್ಎಸ್ ಹೆಗ್ಗುರುತಿನ ಜೊತೆ ಬಿ.ಸಿ.ನಾಗೇಶ್‌ ಅವರನ್ನು ಹೋಲಿಸಿ ನೋಡಿದರೆ ಅವರು (ಬಿ.ಸಿ.ನಾಗೇಶ್) ತೀರಾ ಕೃಶವಾಗಿ ತೋರುತ್ತಾರೆ” ಎಂದು ಕುಟುಕಿರುವ ಸಾಯಿನಾಥ್, ನಾಗೇಶ್ ಅವರು ಶಿಕ್ಷಣ ಸಚಿವರಾಗಿದ್ದ ಅವಧಿಯಲ್ಲಿ ಟಿಪ್ಪು ಸುಲ್ತಾನ್‌, ಭಗತ್ ಸಿಂಗ್‌ ಕುರಿತ ಪಠ್ಯವನ್ನು ಕಿತ್ತು ಹಾಕಿದ್ದನ್ನು ಟೀಕಿಸಿದ್ದಾರೆ.

(‘ಪ್ರಜಾವಾಣಿ’ಯಲ್ಲಿ ಪ್ರಕಟವಾಗಿರುವ ಪೂರ್ಣ ಲೇಖನವನ್ನು ಓದಲು ‘ಇಲ್ಲಿ’ ಕ್ಲಿಕ್ ಮಾಡಿರಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...