Homeಕರ್ನಾಟಕಟಿಪ್ಪುವನ್ನು ಮುಕ್ತವಾಗಿ ಹೊಗಳಿದ್ದ ಬಿಜೆಪಿ ಸಂಸ್ಥಾಪಕ ಸದಸ್ಯ ಮಲ್ಕಾನಿ: ಪಿ.ಸಾಯಿನಾಥ್‌ ಉಲ್ಲೇಖ

ಟಿಪ್ಪುವನ್ನು ಮುಕ್ತವಾಗಿ ಹೊಗಳಿದ್ದ ಬಿಜೆಪಿ ಸಂಸ್ಥಾಪಕ ಸದಸ್ಯ ಮಲ್ಕಾನಿ: ಪಿ.ಸಾಯಿನಾಥ್‌ ಉಲ್ಲೇಖ

ಕೆ.ಆರ್‌.ಮಲ್ಕಾನಿಯವರು ಟಿಪ್ಪು ಬಗ್ಗೆ ಮುಕ್ತವಾಗಿ ಹೊಗಳಿರುವುದನ್ನು ಉಲ್ಲೇಖಿಸಿ ‘ಪ್ರಜಾವಾಣಿ’, ‘ಡೆಕ್ಕನ್‌ಹೆರಾಲ್ಡ್‌’ ಪತ್ರಿಕೆಗಳಿಗೆ ಪಿ.ಸಾಯಿನಾಥ್ ಲೇಖನ ಬರೆದಿದ್ದಾರೆ

- Advertisement -
- Advertisement -

“ಬಿಜೆಪಿಯ ಸಂಸ್ಥಾಪಕ ಸದಸ್ಯ, ಬಲಪಂಥೀಯ ಪ್ರಖರ ಪತ್ರಕರ್ತ, ಆರ್‌ಎಸ್‌ಎಸ್‌ನ ಆರ್ಗನೈಸರ್‌ ಸಂಪಾದಕರಾಗಿದ್ದ ‘ಕೇವಲ್ ರಾಮ್ ರತನ್ ಕುಮಾರ್ ಮಲ್ಕಾನಿ’ (ಕೆ.ಆರ್.ಮಲ್ಕಾನಿ) ಅವರು ಟಿಪ್ಪು ಸುಲ್ತಾನ್‌ರನ್ನು ಮುಕ್ತವಾಗಿ ಹೊಗಳಿದ್ದರು” ಎಂದು ಮ್ಯಾಗಸ್ಸೆ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಪಿ.ಸಾಯಿನಾಥ್ ಸ್ಮರಿಸಿದ್ದಾರೆ.

‘ಡೆಕ್ಕನ್ ಹೆರಾಲ್ಡ್‌’ ಮತ್ತು ‘ಪ್ರಜಾವಾಣಿ’ಯಲ್ಲಿ ಬುಧವಾರ (ಜೂನ್‌ 7) ಪ್ರಕಟವಾಗಿರುವ ಸಾಯಿನಾಥ್ ಅವರ ಲೇಖನವು ಹಲವು ಮಹತ್ತರವಾದ ವಿಚಾರಗಳನ್ನು ಒಳಗೊಂಡಿದೆ. ಟಿಪ್ಪು ಕುರಿತು ಬಿಜೆಪಿಯವರು ಸೃಷ್ಟಿಸಿರುವ ಗೊಂದಲಗಳಿಗೆ ‘ಮಲ್ಕಾನಿ’ ಅವರ ಮಾತುಗಳ ಮೂಲಕ ಪ್ರತಿಕ್ರಿಯಿಸುವ ಪ್ರಯತ್ನವನ್ನು ಈ ಲೇಖನ ಮಾಡಿದೆ. ಕೆ.ಆರ್‌.ಮಲ್ಕಾನಿಯವರ ಹಿನ್ನಲೆ, ಆರ್‌ಎಸ್‌ಎಸ್‌ ಮತ್ತು ಬಿಜೆಪಿಗಾಗಿ ಅವರು ಸಲ್ಲಿಸಿರುವ ಸೇವೆಯನ್ನು ಉಲ್ಲೇಖಿಸಲಾಗಿದೆ.

‘ದಿ ಗ್ರೇಟ್‌ನೆಸ್ ಆಫ್‌ ಟಿಪ್ಪು ಸುಲ್ತಾನ್‌’ ಎಂಬ ಶೀರ್ಷಿಕೆಯಲ್ಲಿ ‘ಡೆಕ್ಕನ್‌ ಹೆರಾಲ್ಡ್‌’ನಲ್ಲಿಯೂ, ‘ಟಿಪ್ಪು ಹಿರಿಮೆಗೆ ಮಸಿ ಬಳಿಯಲು ಸಾಧ್ಯವೆ?’ ಎಂಬ ತಲೆಬರೆಹದಲ್ಲಿ ‘ಪ್ರಜಾವಾಣಿ’ಯಲ್ಲಿಯೂ ಲೇಖನ ಪ್ರಕಟವಾಗಿದೆ.

ಮಲ್ಕಾನಿ ಅವರು ಟಿಪ್ಪುವನ್ನು ಹೇಗೆಲ್ಲ ಬಣ್ಣಿಸಿದ್ದರು ಎಂಬುದನ್ನು ಸಾಯಿನಾಥ್ ವಿಸ್ತೃತವಾಗಿ ಚರ್ಚಿಸಿದ್ದಾರೆ. ಮಲ್ಕಾನಿಯವರ ‘ಇಂಡಿಯಾ ಫಸ್ಟ್’ ಕೃತಿಯಲ್ಲಿ ದಾಖಲಾಗಿರುವ ಸಾಲುಗಳನ್ನು ಸಾಕ್ಷಿಯಾಗಿ ಒದಗಿಸಿದ್ದಾರೆ.

“ಅಕ್ಬರ್, ದಾರಾ ಶಿಕೋ ಹಾಗೂ ಟಿಪ್ಪು ಸುಲ್ತಾನ್‌ನಂತಹವರು ಹೀರೊಗಳೆಂದು ಪರಿಗಣಿಸಲ್ಪಡಬೇಕೇ ವಿನಾ ಖಳನಾಯಕರಾಗಿ ಅಲ್ಲ ಎನ್ನುವುದು ನನ್ನ ಅಭಿಪ್ರಾಯ. ಟಿಪ್ಪುವಿನ ಬಗ್ಗೆ ಹೆಚ್ಚೆಚ್ಚು ಓದಿದಷ್ಟೂ ನನಗೆ ಆತನ ವ್ಯಕ್ತಿತ್ವದ ಹಿರಿಮೆ ಮನವರಿಕೆಯಾಗಿದೆ. … (ಟಿಪ್ಪು ಸುಲ್ತಾನ್) ಮಾತ್ರವೇ ಬ್ರಿಟಿಷರ ವಿರುದ್ಧ ಹೋರಾಡುತ್ತಾ ಮಡಿದ ರಾಜಕುಮಾರ” ಎಂದು ಮಲ್ಕಾನಿಯವರು ಬರೆದಿರುವುದನ್ನು ಇಲ್ಲಿ ಪ್ರಸ್ತಾಪಿಸಲಾಗಿದೆ.

ಮುಂದುವರಿದು, “ಬ್ರಿಟಿಷರ ವಿರುದ್ಧ ಹೋರಾಡುವುದಷ್ಟಕ್ಕೇ ಟಿಪ್ಪು ತೃಪ್ತನಾಗಲಿಲ್ಲ, ಶಂಕಿತರಿಗೆ ಚಿತ್ರಹಿಂಸೆ ನೀಡುವುದನ್ನೂ ಸಾರ್ವಜನಿಕ ಕೆಲಸಗಳಿಗೆ ಜನರನ್ನು ಬಲವಂತವಾಗಿ ಕೂಲಿಗಳನ್ನಾಗಿ ಬಳಸಿಕೊಳ್ಳುವುದನ್ನೂ ವಿರೋಧಿಸಿದ್ದ. ಈತ ಪಾನ ನಿಷೇಧವನ್ನು ಜಾರಿಗೆ ತಂದ. ಮರಗಳನ್ನು ಕಡಿಯುವುದನ್ನು ವಿರೋಧಿಸಿದ. ಪ್ರತಿ ನಾಲ್ಕು ಮೈಲಿಗೆ ಒಂದು ಶಾಲೆಯನ್ನು ತೆರೆಯಲು ಯತ್ನಿಸಿದ. ಯಾವಾಗ ಶಸ್ತ್ರ ಉತ್ಪಾದನಾ ಕಾರ್ಖಾನೆಯಿಂದ ಕಾವೇರಿ ನದಿ ಕಲುಷಿತವಾಗುತ್ತಿದೆ ಎಂದು ಗೊತ್ತಾಯಿತೋ ತಕ್ಷಣ ಆತ ಆ ಕಾರ್ಖಾನೆಯನ್ನೇ ಸ್ಥಳಾಂತರಿಸಿದ. ಪರಿಸರವಾದಿಗಳಿಗೆ ಮಾದರಿ ಎನ್ನಬಹುದಾದ ರಾಜನೊಬ್ಬ ಅವನೊಳಗಿದ್ದ. ಭಾರತದ ರಾಜರುಗಳ ಪೈಕಿ ಟಿಪ್ಪು ಮಾತ್ರವೇ ವಿಶ್ವದೃಷ್ಟಿ ಉಳ್ಳವನಾಗಿದ್ದ. ಟಿಪ್ಪುವಿನ ಮರಣದಿಂದಾಗಿ ಭಾರತದ ಸ್ವಾತಂತ್ರ್ಯ ಒಂದೂವರೆ ಶತಮಾನದಷ್ಟು ಮುಂದೆ ಹೋಯಿತು… ಆತ ಬಯಸಿದ್ದರೆ, ಹಿಂದಿನ ಕೆಲ ಅರಸರಂತೆ, ಬ್ರಿಟಿಷರ ಅಡಿಯಾಳಾಗಿ ತನ್ನ ಅರಸುತನವನ್ನು ಉಳಿಸಿಕೊಳ್ಳಬಹುದಾಗಿತ್ತು. ಅಂದು ಅವನು ಹಾಗೆ ಮಾಡಿದ್ದೇ ಆಗಿದ್ದಲ್ಲಿ, ಇಂದು ಆತನ ಮರಿ, ಗಿರಿಮಕ್ಕಳು ಕೊಲ್ಕೊತ್ತಾದ ರಸ್ತೆಗಳಲ್ಲಿ ಸೈಕಲ್ ರಿಕ್ಷಾ ತುಳಿಯುತ್ತಾ ಬದುಕು ಸವೆಸಬೇಕಾದ ಅನಿವಾರ್ಯ ಸ್ಥಿತಿಗೆ ಸಿಲುಕುತ್ತಿರಲಿಲ್ಲ. ಗೌರವ ಕಳೆದುಕೊಂಡು ಬದುಕುವುದಕ್ಕಿಂತಲೂ ಸಾವು ಆತನ ಆಯ್ಕೆಯಾಗಿತ್ತು”- ಹೀಗೆ ಮಲ್ಕಾನಿಯವರು ಬಣ್ಣಿಸಿರುವುದಾಗಿ ಸಾಯಿನಾಥ್‌ ಬರೆದಿದ್ದಾರೆ.

ಮಲ್ಕಾನಿ ಅವರು ಟಿಪ್ಪು ಬಗ್ಗೆ ಬರೆದ ಲೇಖನವನ್ನು ಒಳಗೊಂಡ ಪುಸ್ತಕಕ್ಕೆ ಹಿಂದುತ್ವದ ಹೀರೊ ಎಲ್.ಕೆ.ಅಡ್ವಾಣಿ ಅವರೇ ಮುನ್ನುಡಿ ಬರೆದಿದ್ದರು. ಭಾರತದ ಉಪಪ್ರಧಾನಿಯಾಗಿದ್ದ ಅಡ್ವಾಣಿ ಅವರು ಮಲ್ಕಾನಿ ಅವರನ್ನು ‘ಮಹಾನ್ ಪತ್ರಕರ್ತ’ ಎಂದೇ ಬಣ್ಣಿಸುತ್ತಿದ್ದರು. ಆರ್‌ಎಸ್ಎಸ್ ಸಹ ಎಲ್ಲಿಯೂ ಮಲ್ಕಾನಿ ಅವರನ್ನು ನಿರಾಕರಿಸಿಲ್ಲ ಎಂದು ಸಾಯಿನಾಥ್‌ ಅಭಿಪ್ರಾಯಪಟ್ಟಿದ್ದಾರೆ.

ಮಲ್ಕಾನಿಯವರ ಹಿನ್ನೆಲೆಯ ಕುರಿತು ಬರೆಯುತ್ತಾ, “ಅವರು ಬಿಜೆಪಿಯ ಸ್ಥಾಪಕ ಸದಸ್ಯರಲ್ಲಿ ಒಬ್ಬರಾಗಿದ್ದರು. ಬಿಜೆಪಿಯ ಉಪಾಧ್ಯಕ್ಷರಾಗಿ ಹಲವಾರು ವರ್ಷ ಕಾರ್ಯನಿರ್ವಹಿಸಿದ್ದರು. ಆರ್‌ಎಸ್ಎಸ್‌ನ ಅತಿಮುಖ್ಯ ಚಿಂತಕರಲ್ಲಿ ಒಬ್ಬರಾಗಿದ್ದರು. ಆ ಸಂಘಟನೆಯ ಮಾಧ್ಯಮ ವ್ಯಕ್ತಿಯೂ ಆಗಿದ್ದರು. 1940ರ ದಶಕದಲ್ಲಿ ‘ದಿ ಹಿಂದೂಸ್ಥಾನ್ ಟೈಮ್ಸ್’ನಲ್ಲಿ ಕೆಲಕಾಲ ಕೆಲಸ ಮಾಡಿದ್ದರು (ಅದೇ ಸಮಯದಲ್ಲಿ ‘ಆರ್ಗನೈಸರ್’ ವಾರಪತ್ರಿಕೆಗೂ ಬರೆಯುತ್ತಿದ್ದರು). ಆನಂತರದಲ್ಲಿ ಅವರು ಪೂರ್ಣಾವಧಿಗೆ ಹಿಂದುತ್ವದ ತೆಕ್ಕೆಗೆ ಬಂದರು. ಆರ್‌ಎಸ್ಎಸ್‌ನ ದನಿಯಾಗಿದ್ದ ‘ಆರ್ಗನೈಸರ್’ಗೆ ಸುಮಾರು 35 ವರ್ಷದಷ್ಟು ದೀರ್ಘಕಾಲ ಸಂಪಾದಕರಾಗಿದ್ದು ಇವರೊಬ್ಬರೇ. ‘ಆರ್ಗನೈಸರ್’ನ ಹಿಂದಿ ಆವೃತ್ತಿ ‘ಪಾಂಚಜನ್ಯ’ದ ಸಂಪಾದಕರಾಗಿಯೂ ಕೆಲಸ ಮಾಡಿದ್ದರು” ಎಂದು ವಿವರಿಸಿದ್ದಾರೆ.

ಇದನ್ನೂ ಓದಿರಿ: ಟಿಪ್ಪು v/s ಸಾವರ್ಕರ್‌ ಎಂಬುದಕ್ಕೆ ನನ್ನ ಒಪ್ಪಿಗೆ ಇಲ್ಲ: ಯಡಿಯೂರಪ್ಪ

“ಪುದುಚೇರಿಯ ಲೆಫ್ಟಿನೆಂಟ್ ಗರ್ವನರ್ ಆಗಿ ಸೇವೆ ಸಲ್ಲಿಸುತ್ತಿದ್ದಾಗ 2003ರಲ್ಲಿ ನಿಧನರಾದ ಮಲ್ಕಾನಿ ಅವರು ಸ್ಪಷ್ಟ ಚಿಂತನೆ ಮತ್ತು ನೇರ ನುಡಿಯ ವ್ಯಕ್ತಿತ್ವದವರು. ಟಿಪ್ಪು, ಭಗತ್ ಸಿಂಗ್, ಹಿಜಾಬ್ ಹಾಗೂ ಮತ್ತಿತರ ವಿಷಯವಾಗಿ ಕರ್ನಾಟಕದಲ್ಲಿ ಅನಗತ್ಯ ಗಲಭೆಗಳನ್ನು ಸೃಷ್ಟಿಸಿದ ಗುಂಪಿನಂತಲ್ಲ” ಎಂದು ಬಣ್ಣಿಸಿದ್ದಾರೆ.

“ಮಲ್ಕಾನಿಯವರ ಈ ಆರ್‌ಎಸ್ಎಸ್ ಹೆಗ್ಗುರುತಿನ ಜೊತೆ ಬಿ.ಸಿ.ನಾಗೇಶ್‌ ಅವರನ್ನು ಹೋಲಿಸಿ ನೋಡಿದರೆ ಅವರು (ಬಿ.ಸಿ.ನಾಗೇಶ್) ತೀರಾ ಕೃಶವಾಗಿ ತೋರುತ್ತಾರೆ” ಎಂದು ಕುಟುಕಿರುವ ಸಾಯಿನಾಥ್, ನಾಗೇಶ್ ಅವರು ಶಿಕ್ಷಣ ಸಚಿವರಾಗಿದ್ದ ಅವಧಿಯಲ್ಲಿ ಟಿಪ್ಪು ಸುಲ್ತಾನ್‌, ಭಗತ್ ಸಿಂಗ್‌ ಕುರಿತ ಪಠ್ಯವನ್ನು ಕಿತ್ತು ಹಾಕಿದ್ದನ್ನು ಟೀಕಿಸಿದ್ದಾರೆ.

(‘ಪ್ರಜಾವಾಣಿ’ಯಲ್ಲಿ ಪ್ರಕಟವಾಗಿರುವ ಪೂರ್ಣ ಲೇಖನವನ್ನು ಓದಲು ‘ಇಲ್ಲಿ’ ಕ್ಲಿಕ್ ಮಾಡಿರಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...