Homeಕರ್ನಾಟಕಟಿಪ್ಪುವನ್ನು ಮುಕ್ತವಾಗಿ ಹೊಗಳಿದ್ದ ಬಿಜೆಪಿ ಸಂಸ್ಥಾಪಕ ಸದಸ್ಯ ಮಲ್ಕಾನಿ: ಪಿ.ಸಾಯಿನಾಥ್‌ ಉಲ್ಲೇಖ

ಟಿಪ್ಪುವನ್ನು ಮುಕ್ತವಾಗಿ ಹೊಗಳಿದ್ದ ಬಿಜೆಪಿ ಸಂಸ್ಥಾಪಕ ಸದಸ್ಯ ಮಲ್ಕಾನಿ: ಪಿ.ಸಾಯಿನಾಥ್‌ ಉಲ್ಲೇಖ

ಕೆ.ಆರ್‌.ಮಲ್ಕಾನಿಯವರು ಟಿಪ್ಪು ಬಗ್ಗೆ ಮುಕ್ತವಾಗಿ ಹೊಗಳಿರುವುದನ್ನು ಉಲ್ಲೇಖಿಸಿ ‘ಪ್ರಜಾವಾಣಿ’, ‘ಡೆಕ್ಕನ್‌ಹೆರಾಲ್ಡ್‌’ ಪತ್ರಿಕೆಗಳಿಗೆ ಪಿ.ಸಾಯಿನಾಥ್ ಲೇಖನ ಬರೆದಿದ್ದಾರೆ

- Advertisement -
- Advertisement -

“ಬಿಜೆಪಿಯ ಸಂಸ್ಥಾಪಕ ಸದಸ್ಯ, ಬಲಪಂಥೀಯ ಪ್ರಖರ ಪತ್ರಕರ್ತ, ಆರ್‌ಎಸ್‌ಎಸ್‌ನ ಆರ್ಗನೈಸರ್‌ ಸಂಪಾದಕರಾಗಿದ್ದ ‘ಕೇವಲ್ ರಾಮ್ ರತನ್ ಕುಮಾರ್ ಮಲ್ಕಾನಿ’ (ಕೆ.ಆರ್.ಮಲ್ಕಾನಿ) ಅವರು ಟಿಪ್ಪು ಸುಲ್ತಾನ್‌ರನ್ನು ಮುಕ್ತವಾಗಿ ಹೊಗಳಿದ್ದರು” ಎಂದು ಮ್ಯಾಗಸ್ಸೆ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಪಿ.ಸಾಯಿನಾಥ್ ಸ್ಮರಿಸಿದ್ದಾರೆ.

‘ಡೆಕ್ಕನ್ ಹೆರಾಲ್ಡ್‌’ ಮತ್ತು ‘ಪ್ರಜಾವಾಣಿ’ಯಲ್ಲಿ ಬುಧವಾರ (ಜೂನ್‌ 7) ಪ್ರಕಟವಾಗಿರುವ ಸಾಯಿನಾಥ್ ಅವರ ಲೇಖನವು ಹಲವು ಮಹತ್ತರವಾದ ವಿಚಾರಗಳನ್ನು ಒಳಗೊಂಡಿದೆ. ಟಿಪ್ಪು ಕುರಿತು ಬಿಜೆಪಿಯವರು ಸೃಷ್ಟಿಸಿರುವ ಗೊಂದಲಗಳಿಗೆ ‘ಮಲ್ಕಾನಿ’ ಅವರ ಮಾತುಗಳ ಮೂಲಕ ಪ್ರತಿಕ್ರಿಯಿಸುವ ಪ್ರಯತ್ನವನ್ನು ಈ ಲೇಖನ ಮಾಡಿದೆ. ಕೆ.ಆರ್‌.ಮಲ್ಕಾನಿಯವರ ಹಿನ್ನಲೆ, ಆರ್‌ಎಸ್‌ಎಸ್‌ ಮತ್ತು ಬಿಜೆಪಿಗಾಗಿ ಅವರು ಸಲ್ಲಿಸಿರುವ ಸೇವೆಯನ್ನು ಉಲ್ಲೇಖಿಸಲಾಗಿದೆ.

‘ದಿ ಗ್ರೇಟ್‌ನೆಸ್ ಆಫ್‌ ಟಿಪ್ಪು ಸುಲ್ತಾನ್‌’ ಎಂಬ ಶೀರ್ಷಿಕೆಯಲ್ಲಿ ‘ಡೆಕ್ಕನ್‌ ಹೆರಾಲ್ಡ್‌’ನಲ್ಲಿಯೂ, ‘ಟಿಪ್ಪು ಹಿರಿಮೆಗೆ ಮಸಿ ಬಳಿಯಲು ಸಾಧ್ಯವೆ?’ ಎಂಬ ತಲೆಬರೆಹದಲ್ಲಿ ‘ಪ್ರಜಾವಾಣಿ’ಯಲ್ಲಿಯೂ ಲೇಖನ ಪ್ರಕಟವಾಗಿದೆ.

ಮಲ್ಕಾನಿ ಅವರು ಟಿಪ್ಪುವನ್ನು ಹೇಗೆಲ್ಲ ಬಣ್ಣಿಸಿದ್ದರು ಎಂಬುದನ್ನು ಸಾಯಿನಾಥ್ ವಿಸ್ತೃತವಾಗಿ ಚರ್ಚಿಸಿದ್ದಾರೆ. ಮಲ್ಕಾನಿಯವರ ‘ಇಂಡಿಯಾ ಫಸ್ಟ್’ ಕೃತಿಯಲ್ಲಿ ದಾಖಲಾಗಿರುವ ಸಾಲುಗಳನ್ನು ಸಾಕ್ಷಿಯಾಗಿ ಒದಗಿಸಿದ್ದಾರೆ.

“ಅಕ್ಬರ್, ದಾರಾ ಶಿಕೋ ಹಾಗೂ ಟಿಪ್ಪು ಸುಲ್ತಾನ್‌ನಂತಹವರು ಹೀರೊಗಳೆಂದು ಪರಿಗಣಿಸಲ್ಪಡಬೇಕೇ ವಿನಾ ಖಳನಾಯಕರಾಗಿ ಅಲ್ಲ ಎನ್ನುವುದು ನನ್ನ ಅಭಿಪ್ರಾಯ. ಟಿಪ್ಪುವಿನ ಬಗ್ಗೆ ಹೆಚ್ಚೆಚ್ಚು ಓದಿದಷ್ಟೂ ನನಗೆ ಆತನ ವ್ಯಕ್ತಿತ್ವದ ಹಿರಿಮೆ ಮನವರಿಕೆಯಾಗಿದೆ. … (ಟಿಪ್ಪು ಸುಲ್ತಾನ್) ಮಾತ್ರವೇ ಬ್ರಿಟಿಷರ ವಿರುದ್ಧ ಹೋರಾಡುತ್ತಾ ಮಡಿದ ರಾಜಕುಮಾರ” ಎಂದು ಮಲ್ಕಾನಿಯವರು ಬರೆದಿರುವುದನ್ನು ಇಲ್ಲಿ ಪ್ರಸ್ತಾಪಿಸಲಾಗಿದೆ.

ಮುಂದುವರಿದು, “ಬ್ರಿಟಿಷರ ವಿರುದ್ಧ ಹೋರಾಡುವುದಷ್ಟಕ್ಕೇ ಟಿಪ್ಪು ತೃಪ್ತನಾಗಲಿಲ್ಲ, ಶಂಕಿತರಿಗೆ ಚಿತ್ರಹಿಂಸೆ ನೀಡುವುದನ್ನೂ ಸಾರ್ವಜನಿಕ ಕೆಲಸಗಳಿಗೆ ಜನರನ್ನು ಬಲವಂತವಾಗಿ ಕೂಲಿಗಳನ್ನಾಗಿ ಬಳಸಿಕೊಳ್ಳುವುದನ್ನೂ ವಿರೋಧಿಸಿದ್ದ. ಈತ ಪಾನ ನಿಷೇಧವನ್ನು ಜಾರಿಗೆ ತಂದ. ಮರಗಳನ್ನು ಕಡಿಯುವುದನ್ನು ವಿರೋಧಿಸಿದ. ಪ್ರತಿ ನಾಲ್ಕು ಮೈಲಿಗೆ ಒಂದು ಶಾಲೆಯನ್ನು ತೆರೆಯಲು ಯತ್ನಿಸಿದ. ಯಾವಾಗ ಶಸ್ತ್ರ ಉತ್ಪಾದನಾ ಕಾರ್ಖಾನೆಯಿಂದ ಕಾವೇರಿ ನದಿ ಕಲುಷಿತವಾಗುತ್ತಿದೆ ಎಂದು ಗೊತ್ತಾಯಿತೋ ತಕ್ಷಣ ಆತ ಆ ಕಾರ್ಖಾನೆಯನ್ನೇ ಸ್ಥಳಾಂತರಿಸಿದ. ಪರಿಸರವಾದಿಗಳಿಗೆ ಮಾದರಿ ಎನ್ನಬಹುದಾದ ರಾಜನೊಬ್ಬ ಅವನೊಳಗಿದ್ದ. ಭಾರತದ ರಾಜರುಗಳ ಪೈಕಿ ಟಿಪ್ಪು ಮಾತ್ರವೇ ವಿಶ್ವದೃಷ್ಟಿ ಉಳ್ಳವನಾಗಿದ್ದ. ಟಿಪ್ಪುವಿನ ಮರಣದಿಂದಾಗಿ ಭಾರತದ ಸ್ವಾತಂತ್ರ್ಯ ಒಂದೂವರೆ ಶತಮಾನದಷ್ಟು ಮುಂದೆ ಹೋಯಿತು… ಆತ ಬಯಸಿದ್ದರೆ, ಹಿಂದಿನ ಕೆಲ ಅರಸರಂತೆ, ಬ್ರಿಟಿಷರ ಅಡಿಯಾಳಾಗಿ ತನ್ನ ಅರಸುತನವನ್ನು ಉಳಿಸಿಕೊಳ್ಳಬಹುದಾಗಿತ್ತು. ಅಂದು ಅವನು ಹಾಗೆ ಮಾಡಿದ್ದೇ ಆಗಿದ್ದಲ್ಲಿ, ಇಂದು ಆತನ ಮರಿ, ಗಿರಿಮಕ್ಕಳು ಕೊಲ್ಕೊತ್ತಾದ ರಸ್ತೆಗಳಲ್ಲಿ ಸೈಕಲ್ ರಿಕ್ಷಾ ತುಳಿಯುತ್ತಾ ಬದುಕು ಸವೆಸಬೇಕಾದ ಅನಿವಾರ್ಯ ಸ್ಥಿತಿಗೆ ಸಿಲುಕುತ್ತಿರಲಿಲ್ಲ. ಗೌರವ ಕಳೆದುಕೊಂಡು ಬದುಕುವುದಕ್ಕಿಂತಲೂ ಸಾವು ಆತನ ಆಯ್ಕೆಯಾಗಿತ್ತು”- ಹೀಗೆ ಮಲ್ಕಾನಿಯವರು ಬಣ್ಣಿಸಿರುವುದಾಗಿ ಸಾಯಿನಾಥ್‌ ಬರೆದಿದ್ದಾರೆ.

ಮಲ್ಕಾನಿ ಅವರು ಟಿಪ್ಪು ಬಗ್ಗೆ ಬರೆದ ಲೇಖನವನ್ನು ಒಳಗೊಂಡ ಪುಸ್ತಕಕ್ಕೆ ಹಿಂದುತ್ವದ ಹೀರೊ ಎಲ್.ಕೆ.ಅಡ್ವಾಣಿ ಅವರೇ ಮುನ್ನುಡಿ ಬರೆದಿದ್ದರು. ಭಾರತದ ಉಪಪ್ರಧಾನಿಯಾಗಿದ್ದ ಅಡ್ವಾಣಿ ಅವರು ಮಲ್ಕಾನಿ ಅವರನ್ನು ‘ಮಹಾನ್ ಪತ್ರಕರ್ತ’ ಎಂದೇ ಬಣ್ಣಿಸುತ್ತಿದ್ದರು. ಆರ್‌ಎಸ್ಎಸ್ ಸಹ ಎಲ್ಲಿಯೂ ಮಲ್ಕಾನಿ ಅವರನ್ನು ನಿರಾಕರಿಸಿಲ್ಲ ಎಂದು ಸಾಯಿನಾಥ್‌ ಅಭಿಪ್ರಾಯಪಟ್ಟಿದ್ದಾರೆ.

ಮಲ್ಕಾನಿಯವರ ಹಿನ್ನೆಲೆಯ ಕುರಿತು ಬರೆಯುತ್ತಾ, “ಅವರು ಬಿಜೆಪಿಯ ಸ್ಥಾಪಕ ಸದಸ್ಯರಲ್ಲಿ ಒಬ್ಬರಾಗಿದ್ದರು. ಬಿಜೆಪಿಯ ಉಪಾಧ್ಯಕ್ಷರಾಗಿ ಹಲವಾರು ವರ್ಷ ಕಾರ್ಯನಿರ್ವಹಿಸಿದ್ದರು. ಆರ್‌ಎಸ್ಎಸ್‌ನ ಅತಿಮುಖ್ಯ ಚಿಂತಕರಲ್ಲಿ ಒಬ್ಬರಾಗಿದ್ದರು. ಆ ಸಂಘಟನೆಯ ಮಾಧ್ಯಮ ವ್ಯಕ್ತಿಯೂ ಆಗಿದ್ದರು. 1940ರ ದಶಕದಲ್ಲಿ ‘ದಿ ಹಿಂದೂಸ್ಥಾನ್ ಟೈಮ್ಸ್’ನಲ್ಲಿ ಕೆಲಕಾಲ ಕೆಲಸ ಮಾಡಿದ್ದರು (ಅದೇ ಸಮಯದಲ್ಲಿ ‘ಆರ್ಗನೈಸರ್’ ವಾರಪತ್ರಿಕೆಗೂ ಬರೆಯುತ್ತಿದ್ದರು). ಆನಂತರದಲ್ಲಿ ಅವರು ಪೂರ್ಣಾವಧಿಗೆ ಹಿಂದುತ್ವದ ತೆಕ್ಕೆಗೆ ಬಂದರು. ಆರ್‌ಎಸ್ಎಸ್‌ನ ದನಿಯಾಗಿದ್ದ ‘ಆರ್ಗನೈಸರ್’ಗೆ ಸುಮಾರು 35 ವರ್ಷದಷ್ಟು ದೀರ್ಘಕಾಲ ಸಂಪಾದಕರಾಗಿದ್ದು ಇವರೊಬ್ಬರೇ. ‘ಆರ್ಗನೈಸರ್’ನ ಹಿಂದಿ ಆವೃತ್ತಿ ‘ಪಾಂಚಜನ್ಯ’ದ ಸಂಪಾದಕರಾಗಿಯೂ ಕೆಲಸ ಮಾಡಿದ್ದರು” ಎಂದು ವಿವರಿಸಿದ್ದಾರೆ.

ಇದನ್ನೂ ಓದಿರಿ: ಟಿಪ್ಪು v/s ಸಾವರ್ಕರ್‌ ಎಂಬುದಕ್ಕೆ ನನ್ನ ಒಪ್ಪಿಗೆ ಇಲ್ಲ: ಯಡಿಯೂರಪ್ಪ

“ಪುದುಚೇರಿಯ ಲೆಫ್ಟಿನೆಂಟ್ ಗರ್ವನರ್ ಆಗಿ ಸೇವೆ ಸಲ್ಲಿಸುತ್ತಿದ್ದಾಗ 2003ರಲ್ಲಿ ನಿಧನರಾದ ಮಲ್ಕಾನಿ ಅವರು ಸ್ಪಷ್ಟ ಚಿಂತನೆ ಮತ್ತು ನೇರ ನುಡಿಯ ವ್ಯಕ್ತಿತ್ವದವರು. ಟಿಪ್ಪು, ಭಗತ್ ಸಿಂಗ್, ಹಿಜಾಬ್ ಹಾಗೂ ಮತ್ತಿತರ ವಿಷಯವಾಗಿ ಕರ್ನಾಟಕದಲ್ಲಿ ಅನಗತ್ಯ ಗಲಭೆಗಳನ್ನು ಸೃಷ್ಟಿಸಿದ ಗುಂಪಿನಂತಲ್ಲ” ಎಂದು ಬಣ್ಣಿಸಿದ್ದಾರೆ.

“ಮಲ್ಕಾನಿಯವರ ಈ ಆರ್‌ಎಸ್ಎಸ್ ಹೆಗ್ಗುರುತಿನ ಜೊತೆ ಬಿ.ಸಿ.ನಾಗೇಶ್‌ ಅವರನ್ನು ಹೋಲಿಸಿ ನೋಡಿದರೆ ಅವರು (ಬಿ.ಸಿ.ನಾಗೇಶ್) ತೀರಾ ಕೃಶವಾಗಿ ತೋರುತ್ತಾರೆ” ಎಂದು ಕುಟುಕಿರುವ ಸಾಯಿನಾಥ್, ನಾಗೇಶ್ ಅವರು ಶಿಕ್ಷಣ ಸಚಿವರಾಗಿದ್ದ ಅವಧಿಯಲ್ಲಿ ಟಿಪ್ಪು ಸುಲ್ತಾನ್‌, ಭಗತ್ ಸಿಂಗ್‌ ಕುರಿತ ಪಠ್ಯವನ್ನು ಕಿತ್ತು ಹಾಕಿದ್ದನ್ನು ಟೀಕಿಸಿದ್ದಾರೆ.

(‘ಪ್ರಜಾವಾಣಿ’ಯಲ್ಲಿ ಪ್ರಕಟವಾಗಿರುವ ಪೂರ್ಣ ಲೇಖನವನ್ನು ಓದಲು ‘ಇಲ್ಲಿ’ ಕ್ಲಿಕ್ ಮಾಡಿರಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...