Homeಕರ್ನಾಟಕಟಿಪ್ಪುವನ್ನು ಮುಕ್ತವಾಗಿ ಹೊಗಳಿದ್ದ ಬಿಜೆಪಿ ಸಂಸ್ಥಾಪಕ ಸದಸ್ಯ ಮಲ್ಕಾನಿ: ಪಿ.ಸಾಯಿನಾಥ್‌ ಉಲ್ಲೇಖ

ಟಿಪ್ಪುವನ್ನು ಮುಕ್ತವಾಗಿ ಹೊಗಳಿದ್ದ ಬಿಜೆಪಿ ಸಂಸ್ಥಾಪಕ ಸದಸ್ಯ ಮಲ್ಕಾನಿ: ಪಿ.ಸಾಯಿನಾಥ್‌ ಉಲ್ಲೇಖ

ಕೆ.ಆರ್‌.ಮಲ್ಕಾನಿಯವರು ಟಿಪ್ಪು ಬಗ್ಗೆ ಮುಕ್ತವಾಗಿ ಹೊಗಳಿರುವುದನ್ನು ಉಲ್ಲೇಖಿಸಿ ‘ಪ್ರಜಾವಾಣಿ’, ‘ಡೆಕ್ಕನ್‌ಹೆರಾಲ್ಡ್‌’ ಪತ್ರಿಕೆಗಳಿಗೆ ಪಿ.ಸಾಯಿನಾಥ್ ಲೇಖನ ಬರೆದಿದ್ದಾರೆ

- Advertisement -
- Advertisement -

“ಬಿಜೆಪಿಯ ಸಂಸ್ಥಾಪಕ ಸದಸ್ಯ, ಬಲಪಂಥೀಯ ಪ್ರಖರ ಪತ್ರಕರ್ತ, ಆರ್‌ಎಸ್‌ಎಸ್‌ನ ಆರ್ಗನೈಸರ್‌ ಸಂಪಾದಕರಾಗಿದ್ದ ‘ಕೇವಲ್ ರಾಮ್ ರತನ್ ಕುಮಾರ್ ಮಲ್ಕಾನಿ’ (ಕೆ.ಆರ್.ಮಲ್ಕಾನಿ) ಅವರು ಟಿಪ್ಪು ಸುಲ್ತಾನ್‌ರನ್ನು ಮುಕ್ತವಾಗಿ ಹೊಗಳಿದ್ದರು” ಎಂದು ಮ್ಯಾಗಸ್ಸೆ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಪಿ.ಸಾಯಿನಾಥ್ ಸ್ಮರಿಸಿದ್ದಾರೆ.

‘ಡೆಕ್ಕನ್ ಹೆರಾಲ್ಡ್‌’ ಮತ್ತು ‘ಪ್ರಜಾವಾಣಿ’ಯಲ್ಲಿ ಬುಧವಾರ (ಜೂನ್‌ 7) ಪ್ರಕಟವಾಗಿರುವ ಸಾಯಿನಾಥ್ ಅವರ ಲೇಖನವು ಹಲವು ಮಹತ್ತರವಾದ ವಿಚಾರಗಳನ್ನು ಒಳಗೊಂಡಿದೆ. ಟಿಪ್ಪು ಕುರಿತು ಬಿಜೆಪಿಯವರು ಸೃಷ್ಟಿಸಿರುವ ಗೊಂದಲಗಳಿಗೆ ‘ಮಲ್ಕಾನಿ’ ಅವರ ಮಾತುಗಳ ಮೂಲಕ ಪ್ರತಿಕ್ರಿಯಿಸುವ ಪ್ರಯತ್ನವನ್ನು ಈ ಲೇಖನ ಮಾಡಿದೆ. ಕೆ.ಆರ್‌.ಮಲ್ಕಾನಿಯವರ ಹಿನ್ನಲೆ, ಆರ್‌ಎಸ್‌ಎಸ್‌ ಮತ್ತು ಬಿಜೆಪಿಗಾಗಿ ಅವರು ಸಲ್ಲಿಸಿರುವ ಸೇವೆಯನ್ನು ಉಲ್ಲೇಖಿಸಲಾಗಿದೆ.

‘ದಿ ಗ್ರೇಟ್‌ನೆಸ್ ಆಫ್‌ ಟಿಪ್ಪು ಸುಲ್ತಾನ್‌’ ಎಂಬ ಶೀರ್ಷಿಕೆಯಲ್ಲಿ ‘ಡೆಕ್ಕನ್‌ ಹೆರಾಲ್ಡ್‌’ನಲ್ಲಿಯೂ, ‘ಟಿಪ್ಪು ಹಿರಿಮೆಗೆ ಮಸಿ ಬಳಿಯಲು ಸಾಧ್ಯವೆ?’ ಎಂಬ ತಲೆಬರೆಹದಲ್ಲಿ ‘ಪ್ರಜಾವಾಣಿ’ಯಲ್ಲಿಯೂ ಲೇಖನ ಪ್ರಕಟವಾಗಿದೆ.

ಮಲ್ಕಾನಿ ಅವರು ಟಿಪ್ಪುವನ್ನು ಹೇಗೆಲ್ಲ ಬಣ್ಣಿಸಿದ್ದರು ಎಂಬುದನ್ನು ಸಾಯಿನಾಥ್ ವಿಸ್ತೃತವಾಗಿ ಚರ್ಚಿಸಿದ್ದಾರೆ. ಮಲ್ಕಾನಿಯವರ ‘ಇಂಡಿಯಾ ಫಸ್ಟ್’ ಕೃತಿಯಲ್ಲಿ ದಾಖಲಾಗಿರುವ ಸಾಲುಗಳನ್ನು ಸಾಕ್ಷಿಯಾಗಿ ಒದಗಿಸಿದ್ದಾರೆ.

“ಅಕ್ಬರ್, ದಾರಾ ಶಿಕೋ ಹಾಗೂ ಟಿಪ್ಪು ಸುಲ್ತಾನ್‌ನಂತಹವರು ಹೀರೊಗಳೆಂದು ಪರಿಗಣಿಸಲ್ಪಡಬೇಕೇ ವಿನಾ ಖಳನಾಯಕರಾಗಿ ಅಲ್ಲ ಎನ್ನುವುದು ನನ್ನ ಅಭಿಪ್ರಾಯ. ಟಿಪ್ಪುವಿನ ಬಗ್ಗೆ ಹೆಚ್ಚೆಚ್ಚು ಓದಿದಷ್ಟೂ ನನಗೆ ಆತನ ವ್ಯಕ್ತಿತ್ವದ ಹಿರಿಮೆ ಮನವರಿಕೆಯಾಗಿದೆ. … (ಟಿಪ್ಪು ಸುಲ್ತಾನ್) ಮಾತ್ರವೇ ಬ್ರಿಟಿಷರ ವಿರುದ್ಧ ಹೋರಾಡುತ್ತಾ ಮಡಿದ ರಾಜಕುಮಾರ” ಎಂದು ಮಲ್ಕಾನಿಯವರು ಬರೆದಿರುವುದನ್ನು ಇಲ್ಲಿ ಪ್ರಸ್ತಾಪಿಸಲಾಗಿದೆ.

ಮುಂದುವರಿದು, “ಬ್ರಿಟಿಷರ ವಿರುದ್ಧ ಹೋರಾಡುವುದಷ್ಟಕ್ಕೇ ಟಿಪ್ಪು ತೃಪ್ತನಾಗಲಿಲ್ಲ, ಶಂಕಿತರಿಗೆ ಚಿತ್ರಹಿಂಸೆ ನೀಡುವುದನ್ನೂ ಸಾರ್ವಜನಿಕ ಕೆಲಸಗಳಿಗೆ ಜನರನ್ನು ಬಲವಂತವಾಗಿ ಕೂಲಿಗಳನ್ನಾಗಿ ಬಳಸಿಕೊಳ್ಳುವುದನ್ನೂ ವಿರೋಧಿಸಿದ್ದ. ಈತ ಪಾನ ನಿಷೇಧವನ್ನು ಜಾರಿಗೆ ತಂದ. ಮರಗಳನ್ನು ಕಡಿಯುವುದನ್ನು ವಿರೋಧಿಸಿದ. ಪ್ರತಿ ನಾಲ್ಕು ಮೈಲಿಗೆ ಒಂದು ಶಾಲೆಯನ್ನು ತೆರೆಯಲು ಯತ್ನಿಸಿದ. ಯಾವಾಗ ಶಸ್ತ್ರ ಉತ್ಪಾದನಾ ಕಾರ್ಖಾನೆಯಿಂದ ಕಾವೇರಿ ನದಿ ಕಲುಷಿತವಾಗುತ್ತಿದೆ ಎಂದು ಗೊತ್ತಾಯಿತೋ ತಕ್ಷಣ ಆತ ಆ ಕಾರ್ಖಾನೆಯನ್ನೇ ಸ್ಥಳಾಂತರಿಸಿದ. ಪರಿಸರವಾದಿಗಳಿಗೆ ಮಾದರಿ ಎನ್ನಬಹುದಾದ ರಾಜನೊಬ್ಬ ಅವನೊಳಗಿದ್ದ. ಭಾರತದ ರಾಜರುಗಳ ಪೈಕಿ ಟಿಪ್ಪು ಮಾತ್ರವೇ ವಿಶ್ವದೃಷ್ಟಿ ಉಳ್ಳವನಾಗಿದ್ದ. ಟಿಪ್ಪುವಿನ ಮರಣದಿಂದಾಗಿ ಭಾರತದ ಸ್ವಾತಂತ್ರ್ಯ ಒಂದೂವರೆ ಶತಮಾನದಷ್ಟು ಮುಂದೆ ಹೋಯಿತು… ಆತ ಬಯಸಿದ್ದರೆ, ಹಿಂದಿನ ಕೆಲ ಅರಸರಂತೆ, ಬ್ರಿಟಿಷರ ಅಡಿಯಾಳಾಗಿ ತನ್ನ ಅರಸುತನವನ್ನು ಉಳಿಸಿಕೊಳ್ಳಬಹುದಾಗಿತ್ತು. ಅಂದು ಅವನು ಹಾಗೆ ಮಾಡಿದ್ದೇ ಆಗಿದ್ದಲ್ಲಿ, ಇಂದು ಆತನ ಮರಿ, ಗಿರಿಮಕ್ಕಳು ಕೊಲ್ಕೊತ್ತಾದ ರಸ್ತೆಗಳಲ್ಲಿ ಸೈಕಲ್ ರಿಕ್ಷಾ ತುಳಿಯುತ್ತಾ ಬದುಕು ಸವೆಸಬೇಕಾದ ಅನಿವಾರ್ಯ ಸ್ಥಿತಿಗೆ ಸಿಲುಕುತ್ತಿರಲಿಲ್ಲ. ಗೌರವ ಕಳೆದುಕೊಂಡು ಬದುಕುವುದಕ್ಕಿಂತಲೂ ಸಾವು ಆತನ ಆಯ್ಕೆಯಾಗಿತ್ತು”- ಹೀಗೆ ಮಲ್ಕಾನಿಯವರು ಬಣ್ಣಿಸಿರುವುದಾಗಿ ಸಾಯಿನಾಥ್‌ ಬರೆದಿದ್ದಾರೆ.

ಮಲ್ಕಾನಿ ಅವರು ಟಿಪ್ಪು ಬಗ್ಗೆ ಬರೆದ ಲೇಖನವನ್ನು ಒಳಗೊಂಡ ಪುಸ್ತಕಕ್ಕೆ ಹಿಂದುತ್ವದ ಹೀರೊ ಎಲ್.ಕೆ.ಅಡ್ವಾಣಿ ಅವರೇ ಮುನ್ನುಡಿ ಬರೆದಿದ್ದರು. ಭಾರತದ ಉಪಪ್ರಧಾನಿಯಾಗಿದ್ದ ಅಡ್ವಾಣಿ ಅವರು ಮಲ್ಕಾನಿ ಅವರನ್ನು ‘ಮಹಾನ್ ಪತ್ರಕರ್ತ’ ಎಂದೇ ಬಣ್ಣಿಸುತ್ತಿದ್ದರು. ಆರ್‌ಎಸ್ಎಸ್ ಸಹ ಎಲ್ಲಿಯೂ ಮಲ್ಕಾನಿ ಅವರನ್ನು ನಿರಾಕರಿಸಿಲ್ಲ ಎಂದು ಸಾಯಿನಾಥ್‌ ಅಭಿಪ್ರಾಯಪಟ್ಟಿದ್ದಾರೆ.

ಮಲ್ಕಾನಿಯವರ ಹಿನ್ನೆಲೆಯ ಕುರಿತು ಬರೆಯುತ್ತಾ, “ಅವರು ಬಿಜೆಪಿಯ ಸ್ಥಾಪಕ ಸದಸ್ಯರಲ್ಲಿ ಒಬ್ಬರಾಗಿದ್ದರು. ಬಿಜೆಪಿಯ ಉಪಾಧ್ಯಕ್ಷರಾಗಿ ಹಲವಾರು ವರ್ಷ ಕಾರ್ಯನಿರ್ವಹಿಸಿದ್ದರು. ಆರ್‌ಎಸ್ಎಸ್‌ನ ಅತಿಮುಖ್ಯ ಚಿಂತಕರಲ್ಲಿ ಒಬ್ಬರಾಗಿದ್ದರು. ಆ ಸಂಘಟನೆಯ ಮಾಧ್ಯಮ ವ್ಯಕ್ತಿಯೂ ಆಗಿದ್ದರು. 1940ರ ದಶಕದಲ್ಲಿ ‘ದಿ ಹಿಂದೂಸ್ಥಾನ್ ಟೈಮ್ಸ್’ನಲ್ಲಿ ಕೆಲಕಾಲ ಕೆಲಸ ಮಾಡಿದ್ದರು (ಅದೇ ಸಮಯದಲ್ಲಿ ‘ಆರ್ಗನೈಸರ್’ ವಾರಪತ್ರಿಕೆಗೂ ಬರೆಯುತ್ತಿದ್ದರು). ಆನಂತರದಲ್ಲಿ ಅವರು ಪೂರ್ಣಾವಧಿಗೆ ಹಿಂದುತ್ವದ ತೆಕ್ಕೆಗೆ ಬಂದರು. ಆರ್‌ಎಸ್ಎಸ್‌ನ ದನಿಯಾಗಿದ್ದ ‘ಆರ್ಗನೈಸರ್’ಗೆ ಸುಮಾರು 35 ವರ್ಷದಷ್ಟು ದೀರ್ಘಕಾಲ ಸಂಪಾದಕರಾಗಿದ್ದು ಇವರೊಬ್ಬರೇ. ‘ಆರ್ಗನೈಸರ್’ನ ಹಿಂದಿ ಆವೃತ್ತಿ ‘ಪಾಂಚಜನ್ಯ’ದ ಸಂಪಾದಕರಾಗಿಯೂ ಕೆಲಸ ಮಾಡಿದ್ದರು” ಎಂದು ವಿವರಿಸಿದ್ದಾರೆ.

ಇದನ್ನೂ ಓದಿರಿ: ಟಿಪ್ಪು v/s ಸಾವರ್ಕರ್‌ ಎಂಬುದಕ್ಕೆ ನನ್ನ ಒಪ್ಪಿಗೆ ಇಲ್ಲ: ಯಡಿಯೂರಪ್ಪ

“ಪುದುಚೇರಿಯ ಲೆಫ್ಟಿನೆಂಟ್ ಗರ್ವನರ್ ಆಗಿ ಸೇವೆ ಸಲ್ಲಿಸುತ್ತಿದ್ದಾಗ 2003ರಲ್ಲಿ ನಿಧನರಾದ ಮಲ್ಕಾನಿ ಅವರು ಸ್ಪಷ್ಟ ಚಿಂತನೆ ಮತ್ತು ನೇರ ನುಡಿಯ ವ್ಯಕ್ತಿತ್ವದವರು. ಟಿಪ್ಪು, ಭಗತ್ ಸಿಂಗ್, ಹಿಜಾಬ್ ಹಾಗೂ ಮತ್ತಿತರ ವಿಷಯವಾಗಿ ಕರ್ನಾಟಕದಲ್ಲಿ ಅನಗತ್ಯ ಗಲಭೆಗಳನ್ನು ಸೃಷ್ಟಿಸಿದ ಗುಂಪಿನಂತಲ್ಲ” ಎಂದು ಬಣ್ಣಿಸಿದ್ದಾರೆ.

“ಮಲ್ಕಾನಿಯವರ ಈ ಆರ್‌ಎಸ್ಎಸ್ ಹೆಗ್ಗುರುತಿನ ಜೊತೆ ಬಿ.ಸಿ.ನಾಗೇಶ್‌ ಅವರನ್ನು ಹೋಲಿಸಿ ನೋಡಿದರೆ ಅವರು (ಬಿ.ಸಿ.ನಾಗೇಶ್) ತೀರಾ ಕೃಶವಾಗಿ ತೋರುತ್ತಾರೆ” ಎಂದು ಕುಟುಕಿರುವ ಸಾಯಿನಾಥ್, ನಾಗೇಶ್ ಅವರು ಶಿಕ್ಷಣ ಸಚಿವರಾಗಿದ್ದ ಅವಧಿಯಲ್ಲಿ ಟಿಪ್ಪು ಸುಲ್ತಾನ್‌, ಭಗತ್ ಸಿಂಗ್‌ ಕುರಿತ ಪಠ್ಯವನ್ನು ಕಿತ್ತು ಹಾಕಿದ್ದನ್ನು ಟೀಕಿಸಿದ್ದಾರೆ.

(‘ಪ್ರಜಾವಾಣಿ’ಯಲ್ಲಿ ಪ್ರಕಟವಾಗಿರುವ ಪೂರ್ಣ ಲೇಖನವನ್ನು ಓದಲು ‘ಇಲ್ಲಿ’ ಕ್ಲಿಕ್ ಮಾಡಿರಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...