Homeಮುಖಪುಟಹಿಂದೂ ಮುಸ್ಲಿಮರನ್ನು ವಿಭಜಿಸಲು AIMIM ಪಕ್ಷಕ್ಕೆ ಬಿಜೆಪಿ ಹಣ ನೀಡಿದೆ: ಮಮತಾ ಬ್ಯಾನರ್ಜಿ

ಹಿಂದೂ ಮುಸ್ಲಿಮರನ್ನು ವಿಭಜಿಸಲು AIMIM ಪಕ್ಷಕ್ಕೆ ಬಿಜೆಪಿ ಹಣ ನೀಡಿದೆ: ಮಮತಾ ಬ್ಯಾನರ್ಜಿ

- Advertisement -
- Advertisement -

ಬಿಜೆಪಿಯು ರಾಜ್ಯದಲ್ಲಿ ವಿಭಜಕ ರಾಜಕೀಯವನ್ನು ಮಾಡುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಆರೋಪಿಸಿದ್ದಾರೆ. ಅಖಿಲ ಭಾರತ ಮಜ್ಲಿಸ್-ಎ-ಇತ್ತಿಹಾದುಲ್ ಮುಸ್ಲೀಮೀನ್ (AIMIM) ಮತ್ತು ಇಂಡಿಯನ್ ಸೆಕ್ಯುಲರ್ ಫ್ರಂಟ್ (ಐಎಸ್ಎಫ್) ಪಕ್ಷಗಳಿಗೆ ಬಿಜೆಪಿಯು ಹಣ ನೀಡಿ ಪ್ರೋತ್ಸಾಹಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ರೈದಿಗಿ ಕ್ರೀಡಾಂಗಣದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಮಮತಾ, “ಹಿಂದೂಗಳು, ಮುಸ್ಲಿಮರು, ಸಿಖ್ಖರು ಮತ್ತು ಕ್ರಿಶ್ಚಿಯನ್ನರು ಹರೇ ಕೃಷ್ಣ ಹರೆ ಹರೆ, ತೃಣಮೂಲ ಘರೆ ಘರೆ ಎಂದು ಹೇಳುತ್ತಿದ್ದಾರೆ. ಬಿಜೆಪಿಯು ಹರೇ ಕೃಷ್ಣ ಹರೆ ಹರೆ, ಹಿಂದೂ, ಮುಸ್ಲಿಂ ಬೇರೆ ಬೇರೆ, ಪರಿಶಿಷ್ಟ ಜಾತಿ (ಎಸ್‌ಸಿ) ಬೇರೆ ಬೇರೆ ಎಂದು ಹೇಳುತ್ತಿದೆ. ಅವರು ಬಂಗಾಳವನ್ನು ನಾಶಪಡಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

“ನಮ್ಮ ಸಂಸ್ಕೃತಿ ಏನೆಂದರೆ, ಹಿಂದೂಗಳು ಮತ್ತು ಮುಸ್ಲಿಮರು ಪರಸ್ಪರ ಚಹಾ ಸೇವಿಸುತ್ತಾರೆ ಮತ್ತು ದುರ್ಗಾ ಪೂಜೆಯನ್ನು ಒಟ್ಟಿಗೆ ಆಚರಿಸುತ್ತಾರೆ. ನಮ್ಮ ಹಳ್ಳಿಗಳಲ್ಲಿ ಅಶಾಂತಿ ಇದ್ದರೆ ಬಿಜೆಪಿಗೆ ಲಾಭವಾಗುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಮಿತ್ರಪಕ್ಷಕ್ಕೆ ಬೆದರಿಕೆ: ಬಿಜೆಪಿ ಸಚಿವನಿಗೆ 48 ಗಂಟೆ ಪ್ರಚಾರ ಮಾಡದಂತೆ ನಿಷೇಧ

AIMIM ಮತ್ತು ಐಎಸ್‌ಎಫ್ ಮೇಲೆ ದಾಳಿ ಮಾಡಿದ ತೃಣಮೂಲ ಮಮತಾ, “ಹಿಂದೂ ಮತ್ತು ಮುಸ್ಲಿಮರನ್ನು ವಿಭಜಿಸಲು ಅವರಿಗೆ ಬಿಜೆಪಿ ಹಣ ನೀಡಿದೆ. ನಿಮಗೆ ವಿಭಜನೆ ಆಗಲು ಮನಸ್ಸಿಲ್ಲದೆ ಇದ್ದರೆ, ಎನ್ನಾರ್ಸಿ ಬೇಡವಾದರೆ ಅವರಿಗೆ ಮತ ಚಲಾಯಿಸಬೇಡಿ” ಎಂದು ಹೇಳಿದ್ದಾರೆ.

“ಅವರಿಗೆ ಮತ ನೀಡುವುದು ಬಿಜೆಪಿಗೆ ಮತ ನೀಡಿದಂತೆ. ನಂದಿಗ್ರಾಮದಲ್ಲಿ, ನಿಮ್ಮ ಮಗಳು ಮತ್ತು ಮಕ್ಕಳನ್ನು ಅಪಹರಿಸಲಾಗುವುದು, ಅದನ್ನೇ ಈ ಗೂಂಡಾಗಳು ಬೆದರಿಸುತ್ತಿದ್ದಾರೆ. ಹೊಗಿನವರಾದ ಬಿಜೆಪಿಯ ಗೂಂಡಾಗಳಿಗೆ ಮತಗಳನ್ನು ನೀಡಬೇಡಿ” ಎಂದು ಅವರು ಹೇಳಿದ್ದಾರೆ.

ಟಿಎಂಸಿಯಿಂದ ಟಿಕೆಟ್ ನಿರಾಕರಿಸಿದ ಜನರನ್ನು ಹೆಸರಿಸಿದ ಮಮತಾ, ಅವರು ಬಿಜೆಪಿಯ ಜನರು ಎಂದು ಆರೋಪಿಸಿದರು. “ನಿಮಗೆ ಮಮತಾ ಬೇಕಾದರೆ, ಟಿಎಂಸಿಗೆ ಮತ ನೀಡಿ. ಇದು ದೆಹಲಿ ಚುನಾವಣೆಯಲ್ಲ ಬಂಗಾಳದ ಚುನಾವಣೆ” ಎಂದು ಜನತೆಗೆ ನೆನಪಿಸಿದ್ದಾರೆ.

ಪಶ್ಚಿಮ ಬಂಗಾಳ ಚುನಾವಣೆಯ ಮೊದಲ ಎರಡು ಹಂತಗಳ ಮತದಾನ ಕ್ರಮವಾಗಿ ಮಾರ್ಚ್ 27 ಮತ್ತು ಏಪ್ರಿಲ್ 1 ರಂದು ನಡೆಯಿತು. ಮುಂದಿನ ಹಂತದ ಮತದಾನ ಏಪ್ರಿಲ್ 6 ರಂದು ನಡೆಯಲಿದೆ.

ಇದನ್ನೂ ಓದಿ: ನಾನು ಕರುಣಾನಿಧಿ ಮಗ ಎಂಬುದನ್ನು ಮರೆಯದಿರಿ, ನಿಮ್ಮ ಬೆದರಿಕೆಗೆ ಬಗ್ಗುವುದಿಲ್ಲ: ಐಟಿ ದಾಳಿಗೆ ಎಂ.ಕೆ. ಸ್ಟಾಲಿನ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....