Homeಮುಖಪುಟಹಿಂದೂ ಮುಸ್ಲಿಮರನ್ನು ವಿಭಜಿಸಲು AIMIM ಪಕ್ಷಕ್ಕೆ ಬಿಜೆಪಿ ಹಣ ನೀಡಿದೆ: ಮಮತಾ ಬ್ಯಾನರ್ಜಿ

ಹಿಂದೂ ಮುಸ್ಲಿಮರನ್ನು ವಿಭಜಿಸಲು AIMIM ಪಕ್ಷಕ್ಕೆ ಬಿಜೆಪಿ ಹಣ ನೀಡಿದೆ: ಮಮತಾ ಬ್ಯಾನರ್ಜಿ

- Advertisement -
- Advertisement -

ಬಿಜೆಪಿಯು ರಾಜ್ಯದಲ್ಲಿ ವಿಭಜಕ ರಾಜಕೀಯವನ್ನು ಮಾಡುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಆರೋಪಿಸಿದ್ದಾರೆ. ಅಖಿಲ ಭಾರತ ಮಜ್ಲಿಸ್-ಎ-ಇತ್ತಿಹಾದುಲ್ ಮುಸ್ಲೀಮೀನ್ (AIMIM) ಮತ್ತು ಇಂಡಿಯನ್ ಸೆಕ್ಯುಲರ್ ಫ್ರಂಟ್ (ಐಎಸ್ಎಫ್) ಪಕ್ಷಗಳಿಗೆ ಬಿಜೆಪಿಯು ಹಣ ನೀಡಿ ಪ್ರೋತ್ಸಾಹಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ರೈದಿಗಿ ಕ್ರೀಡಾಂಗಣದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಮಮತಾ, “ಹಿಂದೂಗಳು, ಮುಸ್ಲಿಮರು, ಸಿಖ್ಖರು ಮತ್ತು ಕ್ರಿಶ್ಚಿಯನ್ನರು ಹರೇ ಕೃಷ್ಣ ಹರೆ ಹರೆ, ತೃಣಮೂಲ ಘರೆ ಘರೆ ಎಂದು ಹೇಳುತ್ತಿದ್ದಾರೆ. ಬಿಜೆಪಿಯು ಹರೇ ಕೃಷ್ಣ ಹರೆ ಹರೆ, ಹಿಂದೂ, ಮುಸ್ಲಿಂ ಬೇರೆ ಬೇರೆ, ಪರಿಶಿಷ್ಟ ಜಾತಿ (ಎಸ್‌ಸಿ) ಬೇರೆ ಬೇರೆ ಎಂದು ಹೇಳುತ್ತಿದೆ. ಅವರು ಬಂಗಾಳವನ್ನು ನಾಶಪಡಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

“ನಮ್ಮ ಸಂಸ್ಕೃತಿ ಏನೆಂದರೆ, ಹಿಂದೂಗಳು ಮತ್ತು ಮುಸ್ಲಿಮರು ಪರಸ್ಪರ ಚಹಾ ಸೇವಿಸುತ್ತಾರೆ ಮತ್ತು ದುರ್ಗಾ ಪೂಜೆಯನ್ನು ಒಟ್ಟಿಗೆ ಆಚರಿಸುತ್ತಾರೆ. ನಮ್ಮ ಹಳ್ಳಿಗಳಲ್ಲಿ ಅಶಾಂತಿ ಇದ್ದರೆ ಬಿಜೆಪಿಗೆ ಲಾಭವಾಗುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಮಿತ್ರಪಕ್ಷಕ್ಕೆ ಬೆದರಿಕೆ: ಬಿಜೆಪಿ ಸಚಿವನಿಗೆ 48 ಗಂಟೆ ಪ್ರಚಾರ ಮಾಡದಂತೆ ನಿಷೇಧ

AIMIM ಮತ್ತು ಐಎಸ್‌ಎಫ್ ಮೇಲೆ ದಾಳಿ ಮಾಡಿದ ತೃಣಮೂಲ ಮಮತಾ, “ಹಿಂದೂ ಮತ್ತು ಮುಸ್ಲಿಮರನ್ನು ವಿಭಜಿಸಲು ಅವರಿಗೆ ಬಿಜೆಪಿ ಹಣ ನೀಡಿದೆ. ನಿಮಗೆ ವಿಭಜನೆ ಆಗಲು ಮನಸ್ಸಿಲ್ಲದೆ ಇದ್ದರೆ, ಎನ್ನಾರ್ಸಿ ಬೇಡವಾದರೆ ಅವರಿಗೆ ಮತ ಚಲಾಯಿಸಬೇಡಿ” ಎಂದು ಹೇಳಿದ್ದಾರೆ.

“ಅವರಿಗೆ ಮತ ನೀಡುವುದು ಬಿಜೆಪಿಗೆ ಮತ ನೀಡಿದಂತೆ. ನಂದಿಗ್ರಾಮದಲ್ಲಿ, ನಿಮ್ಮ ಮಗಳು ಮತ್ತು ಮಕ್ಕಳನ್ನು ಅಪಹರಿಸಲಾಗುವುದು, ಅದನ್ನೇ ಈ ಗೂಂಡಾಗಳು ಬೆದರಿಸುತ್ತಿದ್ದಾರೆ. ಹೊಗಿನವರಾದ ಬಿಜೆಪಿಯ ಗೂಂಡಾಗಳಿಗೆ ಮತಗಳನ್ನು ನೀಡಬೇಡಿ” ಎಂದು ಅವರು ಹೇಳಿದ್ದಾರೆ.

ಟಿಎಂಸಿಯಿಂದ ಟಿಕೆಟ್ ನಿರಾಕರಿಸಿದ ಜನರನ್ನು ಹೆಸರಿಸಿದ ಮಮತಾ, ಅವರು ಬಿಜೆಪಿಯ ಜನರು ಎಂದು ಆರೋಪಿಸಿದರು. “ನಿಮಗೆ ಮಮತಾ ಬೇಕಾದರೆ, ಟಿಎಂಸಿಗೆ ಮತ ನೀಡಿ. ಇದು ದೆಹಲಿ ಚುನಾವಣೆಯಲ್ಲ ಬಂಗಾಳದ ಚುನಾವಣೆ” ಎಂದು ಜನತೆಗೆ ನೆನಪಿಸಿದ್ದಾರೆ.

ಪಶ್ಚಿಮ ಬಂಗಾಳ ಚುನಾವಣೆಯ ಮೊದಲ ಎರಡು ಹಂತಗಳ ಮತದಾನ ಕ್ರಮವಾಗಿ ಮಾರ್ಚ್ 27 ಮತ್ತು ಏಪ್ರಿಲ್ 1 ರಂದು ನಡೆಯಿತು. ಮುಂದಿನ ಹಂತದ ಮತದಾನ ಏಪ್ರಿಲ್ 6 ರಂದು ನಡೆಯಲಿದೆ.

ಇದನ್ನೂ ಓದಿ: ನಾನು ಕರುಣಾನಿಧಿ ಮಗ ಎಂಬುದನ್ನು ಮರೆಯದಿರಿ, ನಿಮ್ಮ ಬೆದರಿಕೆಗೆ ಬಗ್ಗುವುದಿಲ್ಲ: ಐಟಿ ದಾಳಿಗೆ ಎಂ.ಕೆ. ಸ್ಟಾಲಿನ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...