Homeಮುಖಪುಟಕೇಜ್ರಿವಾಲ್‌ ಕಂಡರೆ ಬಿಜೆಪಿಗೆ ಹೆದರಿಕೆ, ಅವರು ಪ್ರಚಾರ ಮಾಡುವುದು ಇಷ್ಟವಿಲ್ಲ: ಭಗವಂತ್ ಮಾನ್

ಕೇಜ್ರಿವಾಲ್‌ ಕಂಡರೆ ಬಿಜೆಪಿಗೆ ಹೆದರಿಕೆ, ಅವರು ಪ್ರಚಾರ ಮಾಡುವುದು ಇಷ್ಟವಿಲ್ಲ: ಭಗವಂತ್ ಮಾನ್

- Advertisement -
- Advertisement -

‘ಅರವಿಂದ್ ಕೇಜ್ರಿವಾಲ್ ಅವರ ಬೆಳೆಯುತ್ತಿರುವ ವರ್ಚಸ್ಸಿನಿಂದ ಬಿಜೆಪಿಗೆ ಭಯವಿದೆ; ಆದ್ದರಿಂದ, ಅವರು ಲೋಕಸಭೆ ಚುನಾವಣೆಗೆ ಪ್ರಚಾರ ಮಾಡುವುದನ್ನು ಬಿಜೆಪಿ ಬಯಸುತ್ತಿಲ್ಲ’ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಹೇಳಿದ್ದಾರೆ.

ಇಂಡಿಯಾ ಟುಡೇ ಟಿವಿ ಎಕ್ಸಿಕ್ಯೂಟಿವ್ ಎಡಿಟರ್ ಪ್ರೀತಿ ಚೌಧರಿ ಅವರಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿರುವ ಭಗವಂತ್ ಮಾನ್, “ಕೇಜ್ರಿವಾಲ್ ಅವರನ್ನು ಬಂಧಿಸಲಾಗುವುದು ಎಂದು ನಾವು ಮೊದಲಿನಿಂದಲೂ ಹೇಳುತ್ತಿದ್ದೇವೆ. ಬಿಜೆಪಿಯವರಿಗೆ ಕೇಜ್ರಿವಾಲ್ ಅವರಂತಹ ದೊಡ್ಡ ನಾಯಕ ಪ್ರಚಾರ ಮಾಡಲು ಬಯಸುವುದಿಲ್ಲ. ಏಕೆಂದರೆ, ಅವರು ಹೆದರುತ್ತಾರೆ. ಬಿಜೆಪಿಯು ಕೇಜ್ರಿವಾಲ್ ಮತ್ತು ಎಎಪಿಯನ್ನು ಮುಗಿಸಲು ಬಯಸುತ್ತಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ತನಿಖಾ ಸಂಸ್ಥೆಯು ವಿಚಾರಣೆ ನಡೆಸಿದ ನಂತರ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಆಮ್ ಆದ್ಮಿ ಪಕ್ಷದ ಮುಖ್ಯಸ್ಥರು ಪ್ರಸ್ತುತ ಮಾರ್ಚ್ 28 ರವರೆಗೆ ತನಿಖಾ ಸಂಸ್ಥೆಯ ಕಸ್ಟಡಿಯಲ್ಲಿದ್ದಾರೆ.

ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ‘ಕಿಂಗ್‌ಪಿನ್’ ಎಂಬ ಜಾರಿ ನಿರ್ದೇಶನಾಲಯದ ಆರೋಪದ ಬಗ್ಗೆ ಮಾತನಾಡಿದ ಭಗವಂತ್ ಮಾನ್, “ಇದೊಂದು ರಾಜಕೀಯ ದ್ವೇಷ, ಒಬ್ಬ ಆರೋಪಿ ಶರತ್ ರೆಡ್ಡಿಯನ್ನು ಬಂಧಿಸಲಾಗಿದೆ. ಅವರು ಈ ಹಿಂದೆ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿಲ್ಲ ಎಂದು ಹೇಳಿದರು. ಆದರೆ, ಅವರನ್ನು ಮತ್ತೆ ಜೈಲಿನಲ್ಲಿ ವಿಚಾರಣೆಗೊಳಪಡಿಸಿದಾಗ ತನಗೆ ಗೊತ್ತು ಎಂದು ಹೇಳಿದ್ದರು. ಈಗ ಚುನಾವಣಾ ಬಾಂಡ್‌ಗಳ ಪಟ್ಟಿಯಲ್ಲಿ ಅವರ ಹೆಸರು ಕಾಣಿಸಿಕೊಂಡಿದ್ದು, ಬಿಜೆಪಿಗೆ ಅವರು ₹55 ಕೋಟಿ ದೇಣಿಗೆ ಕೊಟ್ಟಿದ್ದಾರೆ” ಎಂದರು.

ಕೇಜ್ರಿವಾಲ್ ವಿರುದ್ಧ ತನಿಖಾ ಸಂಸ್ಥೆಯ ಆರೋಪಗಳು ಸಾಬೀತುಪಡಿಸಲಾಗದ ಸುಳ್ಳು ಎಂದು ಭಗವಂತ್ ಮಾನ್ ಹೇಳಿದರು.

ದೆಹಲಿ ಸರ್ಕಾರವು ಜೈಲಿನಿಂದ ನಡೆಯುತ್ತದೆ ಎಂಬ ಎಎಪಿಯ ಪ್ರತಿಪಾದನೆಯ ಬಗ್ಗೆ ಕೇಳಿದಾಗ, “ಮುಖ್ಯಮಂತ್ರಿಯೊಬ್ಬರು ಭೌತಿಕವಾಗಿ ತಮ್ಮ ಕಚೇರಿಯಲ್ಲಿ ಇಲ್ಲದಿದ್ದರೂ ಸರ್ಕಾರವನ್ನು ನಡೆಸಬಾರದು ಎಂದು ಹೇಳುವ ಯಾವುದೇ ನಿಯಮವಿಲ್ಲ” ಎಂದು ಹೇಳಿದರು.

ಲೆಫ್ಟಿನೆಂಟ್ ಗವರ್ನರ್ ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡುತ್ತಾರೆಯೇ ಎಂಬ ಪ್ರಶ್ನೆಗೆ ಭಗವಂತ್ ಮಾನ್, “ನಮಗೆ ರಾಷ್ಟ್ರಪತಿ ಆಳ್ವಿಕೆ ಏಕೆ ಬೇಕು? ದೆಹಲಿಯಲ್ಲಿ ಏನಾಯಿತು? ಲೆಫ್ಟಿನೆಂಟ್ ಗವರ್ನರ್ ಆಯ್ಕೆಯಾಗುತ್ತಾರೆ ಮತ್ತು ಚುನಾಯಿತರಾಗುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ಚುನಾಯಿತ ಸರ್ಕಾರ ಕಾರ್ಯನಿರ್ವಹಿಸುತ್ತದೆ” ಎಂದರು.

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ರಾಜಕಾರಣಿಗಳ ಮೇಲೆ ಕೇಂದ್ರ ತನಿಖಾ ಸಂಸ್ಥೆಗಳು ಏಕೆ ದಾಳಿ ನಡೆಸುತ್ತಿಲ್ಲ ಎಂದು ಪಂಜಾಬ್ ಮುಖ್ಯಮಂತ್ರಿ ಪ್ರಶ್ನಿಸಿದರು. ಕೇಸರಿ ಪಕ್ಷವು ವಿರೋಧ ಪಕ್ಷಗಳನ್ನು “ಮುಗಿಸಲು ಬಯಸಿದೆ” ಎಂದು ಆರೋಪಿಸಿದರು.

“ಇಡಿ ತನಿಖಾ ಸಂಸ್ಥೆ ಅಲ್ಲ; ಅದು ಬಿಜೆಪಿಗೆ ಸಮಾನ. ಬಿಜೆಪಿಗೆ ನೀತಿ ಆಯೋಗ ಸಮಾನ. ಸಿಬಿಐ ಮತ್ತು ಆದಾಯ ತೆರಿಗೆ ಇಲಾಖೆಯೂ ಬಿಜೆಪಿಗೆ ಸಮ. ಬಿಜೆಪಿಯೇತರ ರಾಜ್ಯಗಳಲ್ಲಿ ಮಾತ್ರ ಏಕೆ ದಾಳಿ ನಡೆಯುತ್ತಿದೆ” ಎಂದು ಪಂಜಾಬ್ ಮುಖ್ಯಮಂತ್ರಿ ಪ್ರಶ್ನಿಸಿದ್ದಾರೆ.

“ನೀವು (ಬಿಜೆಪಿ) 370 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿದ್ದೀರಿ. ನೀವು ಮೋದಿ ಅಲೆಯ ಮೇಲೆ ಚುನಾವಣೆಗಳನ್ನು ಎದುರಿಸುತ್ತೀರಿ. ಪ್ರಧಾನಿ ನರೇಂದ್ರ ಮೋದಿ ಅಂತಹ ಎತ್ತರದ ನಾಯಕ, ನೀವು ಏಕೆ ಪ್ರತಿಪಕ್ಷಗಳಿಗೆ ಹೋರಾಡಲು ಅವಕಾಶ ನೀಡುತ್ತಿಲ್ಲ? ಇದು ಯಾವ ರೂಪವಾಗಿದೆ? ಪ್ರಜಾಪ್ರಭುತ್ವದ್ದಾ” ಎಂದು ಅವರು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

‘ನಾವು ನ್ಯಾಯಾಲಯಗಳಲ್ಲಿ ನಂಬಿಕೆ ಇಟ್ಟಿದ್ದೇವೆ, ಮನೀಷ್ ಸಿಸೋಡಿಯಾ, ಸಂಜಯ್ ಸಿಂಗ್ ಮತ್ತು ಸತ್ಯೇಂದ್ರ ಜೈನ್ ಸೇರಿದಂತೆ ಕೇಜ್ರಿವಾಲ್ ಮತ್ತು ಇತರ ಎಎಪಿ ನಾಯಕರ ನಿವಾಸಗಳಿಂದ ಜಾರಿ ನಿರ್ದೇಶನಾಲಯವು ಒಂದು ಪೈಸೆಯನ್ನೂ ಹುಡುಕಿಲ್ಲ’ ಎಂದು ಪ್ರತಿಪಾದಿಸಿದರು.

ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರು ಎಎಪಿಗೆ ಸೇರುತ್ತಾರೆ ಮತ್ತು ಪಕ್ಷದ ಆಡಳಿತವನ್ನು ವಹಿಸಿಕೊಳ್ಳುತ್ತಾರೆ ಎಂಬ ಊಹಾಪೋಹಗಳನ್ನು ಭಗವಂತ್ ಮಾನ್ ತಳ್ಳಿಹಾಕಿದರು.

ಲೋಕಸಭೆ ಪ್ರಚಾರಕ್ಕೆ ನೀವು ಎಎಪಿಯ ಮುಖವಾಗುತ್ತೀರಾ ಎಂಬ ಪ್ರಶ್ನೆಗೆ ಮಾನ್, ಪಕ್ಷಕ್ಕೆ ಅಂತಹ ಸಂಸ್ಕೃತಿ ಇಲ್ಲ ಎಂದು ಹೇಳಿದರು.

“ನಾವೆಲ್ಲರೂ ಕೇಜ್ರಿವಾಲ್‌ಗಳು; ನಮ್ಮ ಪಕ್ಷದ ಕ್ಯಾಪ್‌ನಲ್ಲಿ ‘ಮೇನ್ ಭಿ ಕೇಜ್ರಿವಾಲ್’ (ನಾನು ಕೇಜ್ರಿವಾಲ್) ಎಂದು ಬರೆಯಲಾಗಿದೆ. ಎಲ್ಲರೂ ನಾಯಕರು; ನಾವೆಲ್ಲರೂ ಪ್ರಚಾರ ಮಾಡಬಹುದು. ಪಕ್ಷದಿಂದ ನನಗೆ ಯಾವುದೇ ಜವಾಬ್ದಾರಿ ಸಿಕ್ಕರೂ ಅದನ್ನು ನಾನು ಮಾಡುತ್ತೇನೆ” ಎಂದು ಅವರು ಹೇಳಿದರು.

ಇದನ್ನೂ ಓದಿ; ‘ಮೋದಿಯನ್ನು 28 ಪೈಸೆ ಪಿಎಂ ಎಂದು ಕರೆಯಬೇಕು..’; ಕೇಂದ್ರದ ತೆರಿಗೆ ತಾರತಮ್ಯದ ವಿರುದ್ಧ ಉದಯನಿಧಿ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...