Homeಮುಖಪುಟಕೇಜ್ರಿವಾಲ್‌ ಕಂಡರೆ ಬಿಜೆಪಿಗೆ ಹೆದರಿಕೆ, ಅವರು ಪ್ರಚಾರ ಮಾಡುವುದು ಇಷ್ಟವಿಲ್ಲ: ಭಗವಂತ್ ಮಾನ್

ಕೇಜ್ರಿವಾಲ್‌ ಕಂಡರೆ ಬಿಜೆಪಿಗೆ ಹೆದರಿಕೆ, ಅವರು ಪ್ರಚಾರ ಮಾಡುವುದು ಇಷ್ಟವಿಲ್ಲ: ಭಗವಂತ್ ಮಾನ್

- Advertisement -
- Advertisement -

‘ಅರವಿಂದ್ ಕೇಜ್ರಿವಾಲ್ ಅವರ ಬೆಳೆಯುತ್ತಿರುವ ವರ್ಚಸ್ಸಿನಿಂದ ಬಿಜೆಪಿಗೆ ಭಯವಿದೆ; ಆದ್ದರಿಂದ, ಅವರು ಲೋಕಸಭೆ ಚುನಾವಣೆಗೆ ಪ್ರಚಾರ ಮಾಡುವುದನ್ನು ಬಿಜೆಪಿ ಬಯಸುತ್ತಿಲ್ಲ’ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಹೇಳಿದ್ದಾರೆ.

ಇಂಡಿಯಾ ಟುಡೇ ಟಿವಿ ಎಕ್ಸಿಕ್ಯೂಟಿವ್ ಎಡಿಟರ್ ಪ್ರೀತಿ ಚೌಧರಿ ಅವರಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿರುವ ಭಗವಂತ್ ಮಾನ್, “ಕೇಜ್ರಿವಾಲ್ ಅವರನ್ನು ಬಂಧಿಸಲಾಗುವುದು ಎಂದು ನಾವು ಮೊದಲಿನಿಂದಲೂ ಹೇಳುತ್ತಿದ್ದೇವೆ. ಬಿಜೆಪಿಯವರಿಗೆ ಕೇಜ್ರಿವಾಲ್ ಅವರಂತಹ ದೊಡ್ಡ ನಾಯಕ ಪ್ರಚಾರ ಮಾಡಲು ಬಯಸುವುದಿಲ್ಲ. ಏಕೆಂದರೆ, ಅವರು ಹೆದರುತ್ತಾರೆ. ಬಿಜೆಪಿಯು ಕೇಜ್ರಿವಾಲ್ ಮತ್ತು ಎಎಪಿಯನ್ನು ಮುಗಿಸಲು ಬಯಸುತ್ತಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ತನಿಖಾ ಸಂಸ್ಥೆಯು ವಿಚಾರಣೆ ನಡೆಸಿದ ನಂತರ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಆಮ್ ಆದ್ಮಿ ಪಕ್ಷದ ಮುಖ್ಯಸ್ಥರು ಪ್ರಸ್ತುತ ಮಾರ್ಚ್ 28 ರವರೆಗೆ ತನಿಖಾ ಸಂಸ್ಥೆಯ ಕಸ್ಟಡಿಯಲ್ಲಿದ್ದಾರೆ.

ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ‘ಕಿಂಗ್‌ಪಿನ್’ ಎಂಬ ಜಾರಿ ನಿರ್ದೇಶನಾಲಯದ ಆರೋಪದ ಬಗ್ಗೆ ಮಾತನಾಡಿದ ಭಗವಂತ್ ಮಾನ್, “ಇದೊಂದು ರಾಜಕೀಯ ದ್ವೇಷ, ಒಬ್ಬ ಆರೋಪಿ ಶರತ್ ರೆಡ್ಡಿಯನ್ನು ಬಂಧಿಸಲಾಗಿದೆ. ಅವರು ಈ ಹಿಂದೆ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿಲ್ಲ ಎಂದು ಹೇಳಿದರು. ಆದರೆ, ಅವರನ್ನು ಮತ್ತೆ ಜೈಲಿನಲ್ಲಿ ವಿಚಾರಣೆಗೊಳಪಡಿಸಿದಾಗ ತನಗೆ ಗೊತ್ತು ಎಂದು ಹೇಳಿದ್ದರು. ಈಗ ಚುನಾವಣಾ ಬಾಂಡ್‌ಗಳ ಪಟ್ಟಿಯಲ್ಲಿ ಅವರ ಹೆಸರು ಕಾಣಿಸಿಕೊಂಡಿದ್ದು, ಬಿಜೆಪಿಗೆ ಅವರು ₹55 ಕೋಟಿ ದೇಣಿಗೆ ಕೊಟ್ಟಿದ್ದಾರೆ” ಎಂದರು.

ಕೇಜ್ರಿವಾಲ್ ವಿರುದ್ಧ ತನಿಖಾ ಸಂಸ್ಥೆಯ ಆರೋಪಗಳು ಸಾಬೀತುಪಡಿಸಲಾಗದ ಸುಳ್ಳು ಎಂದು ಭಗವಂತ್ ಮಾನ್ ಹೇಳಿದರು.

ದೆಹಲಿ ಸರ್ಕಾರವು ಜೈಲಿನಿಂದ ನಡೆಯುತ್ತದೆ ಎಂಬ ಎಎಪಿಯ ಪ್ರತಿಪಾದನೆಯ ಬಗ್ಗೆ ಕೇಳಿದಾಗ, “ಮುಖ್ಯಮಂತ್ರಿಯೊಬ್ಬರು ಭೌತಿಕವಾಗಿ ತಮ್ಮ ಕಚೇರಿಯಲ್ಲಿ ಇಲ್ಲದಿದ್ದರೂ ಸರ್ಕಾರವನ್ನು ನಡೆಸಬಾರದು ಎಂದು ಹೇಳುವ ಯಾವುದೇ ನಿಯಮವಿಲ್ಲ” ಎಂದು ಹೇಳಿದರು.

ಲೆಫ್ಟಿನೆಂಟ್ ಗವರ್ನರ್ ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡುತ್ತಾರೆಯೇ ಎಂಬ ಪ್ರಶ್ನೆಗೆ ಭಗವಂತ್ ಮಾನ್, “ನಮಗೆ ರಾಷ್ಟ್ರಪತಿ ಆಳ್ವಿಕೆ ಏಕೆ ಬೇಕು? ದೆಹಲಿಯಲ್ಲಿ ಏನಾಯಿತು? ಲೆಫ್ಟಿನೆಂಟ್ ಗವರ್ನರ್ ಆಯ್ಕೆಯಾಗುತ್ತಾರೆ ಮತ್ತು ಚುನಾಯಿತರಾಗುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ಚುನಾಯಿತ ಸರ್ಕಾರ ಕಾರ್ಯನಿರ್ವಹಿಸುತ್ತದೆ” ಎಂದರು.

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ರಾಜಕಾರಣಿಗಳ ಮೇಲೆ ಕೇಂದ್ರ ತನಿಖಾ ಸಂಸ್ಥೆಗಳು ಏಕೆ ದಾಳಿ ನಡೆಸುತ್ತಿಲ್ಲ ಎಂದು ಪಂಜಾಬ್ ಮುಖ್ಯಮಂತ್ರಿ ಪ್ರಶ್ನಿಸಿದರು. ಕೇಸರಿ ಪಕ್ಷವು ವಿರೋಧ ಪಕ್ಷಗಳನ್ನು “ಮುಗಿಸಲು ಬಯಸಿದೆ” ಎಂದು ಆರೋಪಿಸಿದರು.

“ಇಡಿ ತನಿಖಾ ಸಂಸ್ಥೆ ಅಲ್ಲ; ಅದು ಬಿಜೆಪಿಗೆ ಸಮಾನ. ಬಿಜೆಪಿಗೆ ನೀತಿ ಆಯೋಗ ಸಮಾನ. ಸಿಬಿಐ ಮತ್ತು ಆದಾಯ ತೆರಿಗೆ ಇಲಾಖೆಯೂ ಬಿಜೆಪಿಗೆ ಸಮ. ಬಿಜೆಪಿಯೇತರ ರಾಜ್ಯಗಳಲ್ಲಿ ಮಾತ್ರ ಏಕೆ ದಾಳಿ ನಡೆಯುತ್ತಿದೆ” ಎಂದು ಪಂಜಾಬ್ ಮುಖ್ಯಮಂತ್ರಿ ಪ್ರಶ್ನಿಸಿದ್ದಾರೆ.

“ನೀವು (ಬಿಜೆಪಿ) 370 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿದ್ದೀರಿ. ನೀವು ಮೋದಿ ಅಲೆಯ ಮೇಲೆ ಚುನಾವಣೆಗಳನ್ನು ಎದುರಿಸುತ್ತೀರಿ. ಪ್ರಧಾನಿ ನರೇಂದ್ರ ಮೋದಿ ಅಂತಹ ಎತ್ತರದ ನಾಯಕ, ನೀವು ಏಕೆ ಪ್ರತಿಪಕ್ಷಗಳಿಗೆ ಹೋರಾಡಲು ಅವಕಾಶ ನೀಡುತ್ತಿಲ್ಲ? ಇದು ಯಾವ ರೂಪವಾಗಿದೆ? ಪ್ರಜಾಪ್ರಭುತ್ವದ್ದಾ” ಎಂದು ಅವರು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

‘ನಾವು ನ್ಯಾಯಾಲಯಗಳಲ್ಲಿ ನಂಬಿಕೆ ಇಟ್ಟಿದ್ದೇವೆ, ಮನೀಷ್ ಸಿಸೋಡಿಯಾ, ಸಂಜಯ್ ಸಿಂಗ್ ಮತ್ತು ಸತ್ಯೇಂದ್ರ ಜೈನ್ ಸೇರಿದಂತೆ ಕೇಜ್ರಿವಾಲ್ ಮತ್ತು ಇತರ ಎಎಪಿ ನಾಯಕರ ನಿವಾಸಗಳಿಂದ ಜಾರಿ ನಿರ್ದೇಶನಾಲಯವು ಒಂದು ಪೈಸೆಯನ್ನೂ ಹುಡುಕಿಲ್ಲ’ ಎಂದು ಪ್ರತಿಪಾದಿಸಿದರು.

ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರು ಎಎಪಿಗೆ ಸೇರುತ್ತಾರೆ ಮತ್ತು ಪಕ್ಷದ ಆಡಳಿತವನ್ನು ವಹಿಸಿಕೊಳ್ಳುತ್ತಾರೆ ಎಂಬ ಊಹಾಪೋಹಗಳನ್ನು ಭಗವಂತ್ ಮಾನ್ ತಳ್ಳಿಹಾಕಿದರು.

ಲೋಕಸಭೆ ಪ್ರಚಾರಕ್ಕೆ ನೀವು ಎಎಪಿಯ ಮುಖವಾಗುತ್ತೀರಾ ಎಂಬ ಪ್ರಶ್ನೆಗೆ ಮಾನ್, ಪಕ್ಷಕ್ಕೆ ಅಂತಹ ಸಂಸ್ಕೃತಿ ಇಲ್ಲ ಎಂದು ಹೇಳಿದರು.

“ನಾವೆಲ್ಲರೂ ಕೇಜ್ರಿವಾಲ್‌ಗಳು; ನಮ್ಮ ಪಕ್ಷದ ಕ್ಯಾಪ್‌ನಲ್ಲಿ ‘ಮೇನ್ ಭಿ ಕೇಜ್ರಿವಾಲ್’ (ನಾನು ಕೇಜ್ರಿವಾಲ್) ಎಂದು ಬರೆಯಲಾಗಿದೆ. ಎಲ್ಲರೂ ನಾಯಕರು; ನಾವೆಲ್ಲರೂ ಪ್ರಚಾರ ಮಾಡಬಹುದು. ಪಕ್ಷದಿಂದ ನನಗೆ ಯಾವುದೇ ಜವಾಬ್ದಾರಿ ಸಿಕ್ಕರೂ ಅದನ್ನು ನಾನು ಮಾಡುತ್ತೇನೆ” ಎಂದು ಅವರು ಹೇಳಿದರು.

ಇದನ್ನೂ ಓದಿ; ‘ಮೋದಿಯನ್ನು 28 ಪೈಸೆ ಪಿಎಂ ಎಂದು ಕರೆಯಬೇಕು..’; ಕೇಂದ್ರದ ತೆರಿಗೆ ತಾರತಮ್ಯದ ವಿರುದ್ಧ ಉದಯನಿಧಿ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...