Homeಮುಖಪುಟಕೇಜ್ರಿವಾಲ್‌ ಕಂಡರೆ ಬಿಜೆಪಿಗೆ ಹೆದರಿಕೆ, ಅವರು ಪ್ರಚಾರ ಮಾಡುವುದು ಇಷ್ಟವಿಲ್ಲ: ಭಗವಂತ್ ಮಾನ್

ಕೇಜ್ರಿವಾಲ್‌ ಕಂಡರೆ ಬಿಜೆಪಿಗೆ ಹೆದರಿಕೆ, ಅವರು ಪ್ರಚಾರ ಮಾಡುವುದು ಇಷ್ಟವಿಲ್ಲ: ಭಗವಂತ್ ಮಾನ್

- Advertisement -
- Advertisement -

‘ಅರವಿಂದ್ ಕೇಜ್ರಿವಾಲ್ ಅವರ ಬೆಳೆಯುತ್ತಿರುವ ವರ್ಚಸ್ಸಿನಿಂದ ಬಿಜೆಪಿಗೆ ಭಯವಿದೆ; ಆದ್ದರಿಂದ, ಅವರು ಲೋಕಸಭೆ ಚುನಾವಣೆಗೆ ಪ್ರಚಾರ ಮಾಡುವುದನ್ನು ಬಿಜೆಪಿ ಬಯಸುತ್ತಿಲ್ಲ’ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಹೇಳಿದ್ದಾರೆ.

ಇಂಡಿಯಾ ಟುಡೇ ಟಿವಿ ಎಕ್ಸಿಕ್ಯೂಟಿವ್ ಎಡಿಟರ್ ಪ್ರೀತಿ ಚೌಧರಿ ಅವರಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿರುವ ಭಗವಂತ್ ಮಾನ್, “ಕೇಜ್ರಿವಾಲ್ ಅವರನ್ನು ಬಂಧಿಸಲಾಗುವುದು ಎಂದು ನಾವು ಮೊದಲಿನಿಂದಲೂ ಹೇಳುತ್ತಿದ್ದೇವೆ. ಬಿಜೆಪಿಯವರಿಗೆ ಕೇಜ್ರಿವಾಲ್ ಅವರಂತಹ ದೊಡ್ಡ ನಾಯಕ ಪ್ರಚಾರ ಮಾಡಲು ಬಯಸುವುದಿಲ್ಲ. ಏಕೆಂದರೆ, ಅವರು ಹೆದರುತ್ತಾರೆ. ಬಿಜೆಪಿಯು ಕೇಜ್ರಿವಾಲ್ ಮತ್ತು ಎಎಪಿಯನ್ನು ಮುಗಿಸಲು ಬಯಸುತ್ತಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ತನಿಖಾ ಸಂಸ್ಥೆಯು ವಿಚಾರಣೆ ನಡೆಸಿದ ನಂತರ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಆಮ್ ಆದ್ಮಿ ಪಕ್ಷದ ಮುಖ್ಯಸ್ಥರು ಪ್ರಸ್ತುತ ಮಾರ್ಚ್ 28 ರವರೆಗೆ ತನಿಖಾ ಸಂಸ್ಥೆಯ ಕಸ್ಟಡಿಯಲ್ಲಿದ್ದಾರೆ.

ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ‘ಕಿಂಗ್‌ಪಿನ್’ ಎಂಬ ಜಾರಿ ನಿರ್ದೇಶನಾಲಯದ ಆರೋಪದ ಬಗ್ಗೆ ಮಾತನಾಡಿದ ಭಗವಂತ್ ಮಾನ್, “ಇದೊಂದು ರಾಜಕೀಯ ದ್ವೇಷ, ಒಬ್ಬ ಆರೋಪಿ ಶರತ್ ರೆಡ್ಡಿಯನ್ನು ಬಂಧಿಸಲಾಗಿದೆ. ಅವರು ಈ ಹಿಂದೆ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿಲ್ಲ ಎಂದು ಹೇಳಿದರು. ಆದರೆ, ಅವರನ್ನು ಮತ್ತೆ ಜೈಲಿನಲ್ಲಿ ವಿಚಾರಣೆಗೊಳಪಡಿಸಿದಾಗ ತನಗೆ ಗೊತ್ತು ಎಂದು ಹೇಳಿದ್ದರು. ಈಗ ಚುನಾವಣಾ ಬಾಂಡ್‌ಗಳ ಪಟ್ಟಿಯಲ್ಲಿ ಅವರ ಹೆಸರು ಕಾಣಿಸಿಕೊಂಡಿದ್ದು, ಬಿಜೆಪಿಗೆ ಅವರು ₹55 ಕೋಟಿ ದೇಣಿಗೆ ಕೊಟ್ಟಿದ್ದಾರೆ” ಎಂದರು.

ಕೇಜ್ರಿವಾಲ್ ವಿರುದ್ಧ ತನಿಖಾ ಸಂಸ್ಥೆಯ ಆರೋಪಗಳು ಸಾಬೀತುಪಡಿಸಲಾಗದ ಸುಳ್ಳು ಎಂದು ಭಗವಂತ್ ಮಾನ್ ಹೇಳಿದರು.

ದೆಹಲಿ ಸರ್ಕಾರವು ಜೈಲಿನಿಂದ ನಡೆಯುತ್ತದೆ ಎಂಬ ಎಎಪಿಯ ಪ್ರತಿಪಾದನೆಯ ಬಗ್ಗೆ ಕೇಳಿದಾಗ, “ಮುಖ್ಯಮಂತ್ರಿಯೊಬ್ಬರು ಭೌತಿಕವಾಗಿ ತಮ್ಮ ಕಚೇರಿಯಲ್ಲಿ ಇಲ್ಲದಿದ್ದರೂ ಸರ್ಕಾರವನ್ನು ನಡೆಸಬಾರದು ಎಂದು ಹೇಳುವ ಯಾವುದೇ ನಿಯಮವಿಲ್ಲ” ಎಂದು ಹೇಳಿದರು.

ಲೆಫ್ಟಿನೆಂಟ್ ಗವರ್ನರ್ ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡುತ್ತಾರೆಯೇ ಎಂಬ ಪ್ರಶ್ನೆಗೆ ಭಗವಂತ್ ಮಾನ್, “ನಮಗೆ ರಾಷ್ಟ್ರಪತಿ ಆಳ್ವಿಕೆ ಏಕೆ ಬೇಕು? ದೆಹಲಿಯಲ್ಲಿ ಏನಾಯಿತು? ಲೆಫ್ಟಿನೆಂಟ್ ಗವರ್ನರ್ ಆಯ್ಕೆಯಾಗುತ್ತಾರೆ ಮತ್ತು ಚುನಾಯಿತರಾಗುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ಚುನಾಯಿತ ಸರ್ಕಾರ ಕಾರ್ಯನಿರ್ವಹಿಸುತ್ತದೆ” ಎಂದರು.

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ರಾಜಕಾರಣಿಗಳ ಮೇಲೆ ಕೇಂದ್ರ ತನಿಖಾ ಸಂಸ್ಥೆಗಳು ಏಕೆ ದಾಳಿ ನಡೆಸುತ್ತಿಲ್ಲ ಎಂದು ಪಂಜಾಬ್ ಮುಖ್ಯಮಂತ್ರಿ ಪ್ರಶ್ನಿಸಿದರು. ಕೇಸರಿ ಪಕ್ಷವು ವಿರೋಧ ಪಕ್ಷಗಳನ್ನು “ಮುಗಿಸಲು ಬಯಸಿದೆ” ಎಂದು ಆರೋಪಿಸಿದರು.

“ಇಡಿ ತನಿಖಾ ಸಂಸ್ಥೆ ಅಲ್ಲ; ಅದು ಬಿಜೆಪಿಗೆ ಸಮಾನ. ಬಿಜೆಪಿಗೆ ನೀತಿ ಆಯೋಗ ಸಮಾನ. ಸಿಬಿಐ ಮತ್ತು ಆದಾಯ ತೆರಿಗೆ ಇಲಾಖೆಯೂ ಬಿಜೆಪಿಗೆ ಸಮ. ಬಿಜೆಪಿಯೇತರ ರಾಜ್ಯಗಳಲ್ಲಿ ಮಾತ್ರ ಏಕೆ ದಾಳಿ ನಡೆಯುತ್ತಿದೆ” ಎಂದು ಪಂಜಾಬ್ ಮುಖ್ಯಮಂತ್ರಿ ಪ್ರಶ್ನಿಸಿದ್ದಾರೆ.

“ನೀವು (ಬಿಜೆಪಿ) 370 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿದ್ದೀರಿ. ನೀವು ಮೋದಿ ಅಲೆಯ ಮೇಲೆ ಚುನಾವಣೆಗಳನ್ನು ಎದುರಿಸುತ್ತೀರಿ. ಪ್ರಧಾನಿ ನರೇಂದ್ರ ಮೋದಿ ಅಂತಹ ಎತ್ತರದ ನಾಯಕ, ನೀವು ಏಕೆ ಪ್ರತಿಪಕ್ಷಗಳಿಗೆ ಹೋರಾಡಲು ಅವಕಾಶ ನೀಡುತ್ತಿಲ್ಲ? ಇದು ಯಾವ ರೂಪವಾಗಿದೆ? ಪ್ರಜಾಪ್ರಭುತ್ವದ್ದಾ” ಎಂದು ಅವರು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

‘ನಾವು ನ್ಯಾಯಾಲಯಗಳಲ್ಲಿ ನಂಬಿಕೆ ಇಟ್ಟಿದ್ದೇವೆ, ಮನೀಷ್ ಸಿಸೋಡಿಯಾ, ಸಂಜಯ್ ಸಿಂಗ್ ಮತ್ತು ಸತ್ಯೇಂದ್ರ ಜೈನ್ ಸೇರಿದಂತೆ ಕೇಜ್ರಿವಾಲ್ ಮತ್ತು ಇತರ ಎಎಪಿ ನಾಯಕರ ನಿವಾಸಗಳಿಂದ ಜಾರಿ ನಿರ್ದೇಶನಾಲಯವು ಒಂದು ಪೈಸೆಯನ್ನೂ ಹುಡುಕಿಲ್ಲ’ ಎಂದು ಪ್ರತಿಪಾದಿಸಿದರು.

ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರು ಎಎಪಿಗೆ ಸೇರುತ್ತಾರೆ ಮತ್ತು ಪಕ್ಷದ ಆಡಳಿತವನ್ನು ವಹಿಸಿಕೊಳ್ಳುತ್ತಾರೆ ಎಂಬ ಊಹಾಪೋಹಗಳನ್ನು ಭಗವಂತ್ ಮಾನ್ ತಳ್ಳಿಹಾಕಿದರು.

ಲೋಕಸಭೆ ಪ್ರಚಾರಕ್ಕೆ ನೀವು ಎಎಪಿಯ ಮುಖವಾಗುತ್ತೀರಾ ಎಂಬ ಪ್ರಶ್ನೆಗೆ ಮಾನ್, ಪಕ್ಷಕ್ಕೆ ಅಂತಹ ಸಂಸ್ಕೃತಿ ಇಲ್ಲ ಎಂದು ಹೇಳಿದರು.

“ನಾವೆಲ್ಲರೂ ಕೇಜ್ರಿವಾಲ್‌ಗಳು; ನಮ್ಮ ಪಕ್ಷದ ಕ್ಯಾಪ್‌ನಲ್ಲಿ ‘ಮೇನ್ ಭಿ ಕೇಜ್ರಿವಾಲ್’ (ನಾನು ಕೇಜ್ರಿವಾಲ್) ಎಂದು ಬರೆಯಲಾಗಿದೆ. ಎಲ್ಲರೂ ನಾಯಕರು; ನಾವೆಲ್ಲರೂ ಪ್ರಚಾರ ಮಾಡಬಹುದು. ಪಕ್ಷದಿಂದ ನನಗೆ ಯಾವುದೇ ಜವಾಬ್ದಾರಿ ಸಿಕ್ಕರೂ ಅದನ್ನು ನಾನು ಮಾಡುತ್ತೇನೆ” ಎಂದು ಅವರು ಹೇಳಿದರು.

ಇದನ್ನೂ ಓದಿ; ‘ಮೋದಿಯನ್ನು 28 ಪೈಸೆ ಪಿಎಂ ಎಂದು ಕರೆಯಬೇಕು..’; ಕೇಂದ್ರದ ತೆರಿಗೆ ತಾರತಮ್ಯದ ವಿರುದ್ಧ ಉದಯನಿಧಿ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...