Homeಮುಖಪುಟಪತ್ರಕರ್ತರಿಗೆ ಬಿಜೆಪಿ ಲಂಚ: ಎಫ್‍ಐಆರ್ ದಾಖಲು, ಸಿಸಿಟಿವಿಯಲ್ಲಿ ಲಕೋಟೆ ಹಂಚುತ್ತಿರುವ ದೃಶ್ಯ ಸೆರೆ

ಪತ್ರಕರ್ತರಿಗೆ ಬಿಜೆಪಿ ಲಂಚ: ಎಫ್‍ಐಆರ್ ದಾಖಲು, ಸಿಸಿಟಿವಿಯಲ್ಲಿ ಲಕೋಟೆ ಹಂಚುತ್ತಿರುವ ದೃಶ್ಯ ಸೆರೆ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಜಮ್ಮು ಮತ್ತು ಕಾಶ್ಮೀರದ ಲೆಹ್ ಪ್ರಾಂತದಲ್ಲಿ ನಡೆಯಿತೆಂದು ಹೇಳಲಾದ ಘಟನೆಯೊಂದಕ್ಕೆ ಸಂಬಂಧಿಸಿದಂತೆ ಎಫ್‍ಐಆರ್ ದಾಖಲಾಗಿದೆ. ಬಿಜೆಪಿಯ ರಾಜ್ಯ ಅಧ್ಯಕ್ಷ ರವಿಂದರ್ ರೈನಾ ಮತ್ತು ಎಂಎಲ್‍ಸಿ ವಿಕ್ರಮ್ ರಂಧ್ವಾನಾ ಅವರ ಮೇಲೆ 7 ಪತ್ರಕರ್ತರು ಕಳೆದ ವಾರ ದೂರನ್ನು ನೀಡಿದ್ದರು. ಮೇ 2ರಂದು ಇವರಿಬ್ಬರು ನಡೆಸಿದ ಪತ್ರಿಕಾಗೋಷ್ಟಿಯ ನಂತರ ಹಣವಿದ್ದ ಲಕೋಟೆಗಳನ್ನು ತಮಗೆ ನೀಡಲಾಗಿತ್ತೆಂದೂ, ಬಿಜೆಪಿಯ ಪರ ಸುದ್ದಿಗಳನ್ನು ಬರೆಯಬೇಕೆಂದು ಸೂಚಿಸಲಾಗಿತ್ತೆಂದೂ ಅವರು ದೂರಿದ್ದರು.

ಲಕೋಟೆ ತೆರೆದು ನೋಡಿದಾಗ ಹಣವಿದ್ದುದು ಕಂಡುಬಂದು, ಅಲ್ಲಿಯೇ ಆಕ್ಷೇಪ ವ್ಯಕ್ತಪಡಿಸಿ, ಅದನ್ನು ಹಿಂತಿರುಗಿಸಿದ್ದಾಗಿಯೂ ಪತ್ರಕರ್ತರು ಹೇಳಿದ್ದಾರೆ. ಲೆಹ್‍ನ ಡಿಸಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಆವ್ನಿ ಲಾವಾಸಾ ಅವರು ಪೊಲೀಸರಿಗೆ ಈ ದೂರನ್ನು ರವಾನಿಸಿದ್ದರು. ಅದನ್ನು ಪೊಲೀಸರು ನ್ಯಾಯಾಲಯದ ಮುಂದೆ ಇರಿಸಿದ್ದರು. ನ್ಯಾಯಾಲಯವು ಮೊಕದ್ದಮೆ ದಾಖಲಿಸಿಕೊಳ್ಳಲು ಆದೇಶಿಸಿತು ಎಂದು ಇಂಡಿಯನ್ ಎಕ್ಸ್‍ಪ್ರೆಸ್ ವರದಿ ಮಾಡಿದೆ.

ಆನ್ವಿ ಲಾವಾಸಾ, ಲೆಹ್‍ನ ಚುನಾವಣಾಧಿಕಾರಿ

ಈ ಮಧ್ಯೆ ಲಕೋಟೆಗಳನ್ನು ವಿತರಿಸಿದ ಸಿಸಿಟಿವಿ ಫೂಟೇಜ್ ಇರುವ ವಿಡಿಯೋವನ್ನು ಎನ್‍ಡಿಟಿವಿ ಪ್ರಸಾರ ಮಾಡಿತು. ಆದರೆ, ಈ ವಿಡಿಯೋನ ಅಧಿಕೃತತೆ ಬಗ್ಗೆ ಗೊತ್ತಿಲ್ಲ ಎಂದು ಅದು ಹೇಳಿದೆ. ಸದರಿ ವಿಡಿಯೋವನ್ನು ಒಮರ್ ಅಬ್ದುಲ್ಲಾ ಸಹಾ ಟ್ವೀಟ್ ಮಾಡಿದ್ದಾರೆ.

ಆದರೆ ಬಿಜೆಪಿ ರಾಜ್ಯಾಧ್ಯಕ್ಷ ರವೀಂದರ್ ರೈನಾ ಈ ಆಪಾದನೆಗಳನ್ನು ನಿರಾಕರಿಸಿದ್ದರು, ಪತ್ರಿಕಾಗೋಷ್ಠಿ ಆದ ನಂತರ ತಾನು ಕೂಡಲೇ ಆ ಜಾಗದಿಂದ ಹೊರನಡೆದಿದ್ದೆ ಎಂದು ಹೇಳಿದ್ದರು. ಅದಾದ ನಂತರ ಮಂಗಳವಾರ ವಿಡಿಯೋ ಹೊರಬಿದ್ದಿತು. ಅದರಲ್ಲಿ ಲಕೋಟೆ ಹಂಚುವುದರಲ್ಲಿ ಎಂಎಲ್‍ಸಿ ರಂಧ್ವಾನಾ ಅವರಿರುವುದನ್ನು ಮಾಧ್ಯಮಗಳು ಪತ್ತೆ ಹಚ್ಚಿದವು. ಈ ಕುರಿತು ರೈನಾ ಅವರನ್ನು ಪ್ರಶ್ನಿಸಿದಾಗ, ‘ಮೇ 4ರಂದು ಕಾಶ್ಮೀರಕ್ಕೆ ಬರುತ್ತಿದ್ದ ನಿರ್ಮಲಾ ಸೀತಾರಾಮನ್ ಅವರ ಬಹಿರಂಗ ಸಭೆಯ ಆಹ್ವಾನ ಪತ್ರಿಕಗಳಿದ್ದವು. ಈ ಕುರಿತು ಪಕ್ಷವು ಪರಿಶೀಲಿಸುತ್ತದೆ’ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...