Homeಮುಖಪುಟಪತ್ರಕರ್ತರಿಗೆ ಬಿಜೆಪಿ ಲಂಚ: ಎಫ್‍ಐಆರ್ ದಾಖಲು, ಸಿಸಿಟಿವಿಯಲ್ಲಿ ಲಕೋಟೆ ಹಂಚುತ್ತಿರುವ ದೃಶ್ಯ ಸೆರೆ

ಪತ್ರಕರ್ತರಿಗೆ ಬಿಜೆಪಿ ಲಂಚ: ಎಫ್‍ಐಆರ್ ದಾಖಲು, ಸಿಸಿಟಿವಿಯಲ್ಲಿ ಲಕೋಟೆ ಹಂಚುತ್ತಿರುವ ದೃಶ್ಯ ಸೆರೆ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಜಮ್ಮು ಮತ್ತು ಕಾಶ್ಮೀರದ ಲೆಹ್ ಪ್ರಾಂತದಲ್ಲಿ ನಡೆಯಿತೆಂದು ಹೇಳಲಾದ ಘಟನೆಯೊಂದಕ್ಕೆ ಸಂಬಂಧಿಸಿದಂತೆ ಎಫ್‍ಐಆರ್ ದಾಖಲಾಗಿದೆ. ಬಿಜೆಪಿಯ ರಾಜ್ಯ ಅಧ್ಯಕ್ಷ ರವಿಂದರ್ ರೈನಾ ಮತ್ತು ಎಂಎಲ್‍ಸಿ ವಿಕ್ರಮ್ ರಂಧ್ವಾನಾ ಅವರ ಮೇಲೆ 7 ಪತ್ರಕರ್ತರು ಕಳೆದ ವಾರ ದೂರನ್ನು ನೀಡಿದ್ದರು. ಮೇ 2ರಂದು ಇವರಿಬ್ಬರು ನಡೆಸಿದ ಪತ್ರಿಕಾಗೋಷ್ಟಿಯ ನಂತರ ಹಣವಿದ್ದ ಲಕೋಟೆಗಳನ್ನು ತಮಗೆ ನೀಡಲಾಗಿತ್ತೆಂದೂ, ಬಿಜೆಪಿಯ ಪರ ಸುದ್ದಿಗಳನ್ನು ಬರೆಯಬೇಕೆಂದು ಸೂಚಿಸಲಾಗಿತ್ತೆಂದೂ ಅವರು ದೂರಿದ್ದರು.

ಲಕೋಟೆ ತೆರೆದು ನೋಡಿದಾಗ ಹಣವಿದ್ದುದು ಕಂಡುಬಂದು, ಅಲ್ಲಿಯೇ ಆಕ್ಷೇಪ ವ್ಯಕ್ತಪಡಿಸಿ, ಅದನ್ನು ಹಿಂತಿರುಗಿಸಿದ್ದಾಗಿಯೂ ಪತ್ರಕರ್ತರು ಹೇಳಿದ್ದಾರೆ. ಲೆಹ್‍ನ ಡಿಸಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಆವ್ನಿ ಲಾವಾಸಾ ಅವರು ಪೊಲೀಸರಿಗೆ ಈ ದೂರನ್ನು ರವಾನಿಸಿದ್ದರು. ಅದನ್ನು ಪೊಲೀಸರು ನ್ಯಾಯಾಲಯದ ಮುಂದೆ ಇರಿಸಿದ್ದರು. ನ್ಯಾಯಾಲಯವು ಮೊಕದ್ದಮೆ ದಾಖಲಿಸಿಕೊಳ್ಳಲು ಆದೇಶಿಸಿತು ಎಂದು ಇಂಡಿಯನ್ ಎಕ್ಸ್‍ಪ್ರೆಸ್ ವರದಿ ಮಾಡಿದೆ.

ಆನ್ವಿ ಲಾವಾಸಾ, ಲೆಹ್‍ನ ಚುನಾವಣಾಧಿಕಾರಿ

ಈ ಮಧ್ಯೆ ಲಕೋಟೆಗಳನ್ನು ವಿತರಿಸಿದ ಸಿಸಿಟಿವಿ ಫೂಟೇಜ್ ಇರುವ ವಿಡಿಯೋವನ್ನು ಎನ್‍ಡಿಟಿವಿ ಪ್ರಸಾರ ಮಾಡಿತು. ಆದರೆ, ಈ ವಿಡಿಯೋನ ಅಧಿಕೃತತೆ ಬಗ್ಗೆ ಗೊತ್ತಿಲ್ಲ ಎಂದು ಅದು ಹೇಳಿದೆ. ಸದರಿ ವಿಡಿಯೋವನ್ನು ಒಮರ್ ಅಬ್ದುಲ್ಲಾ ಸಹಾ ಟ್ವೀಟ್ ಮಾಡಿದ್ದಾರೆ.

ಆದರೆ ಬಿಜೆಪಿ ರಾಜ್ಯಾಧ್ಯಕ್ಷ ರವೀಂದರ್ ರೈನಾ ಈ ಆಪಾದನೆಗಳನ್ನು ನಿರಾಕರಿಸಿದ್ದರು, ಪತ್ರಿಕಾಗೋಷ್ಠಿ ಆದ ನಂತರ ತಾನು ಕೂಡಲೇ ಆ ಜಾಗದಿಂದ ಹೊರನಡೆದಿದ್ದೆ ಎಂದು ಹೇಳಿದ್ದರು. ಅದಾದ ನಂತರ ಮಂಗಳವಾರ ವಿಡಿಯೋ ಹೊರಬಿದ್ದಿತು. ಅದರಲ್ಲಿ ಲಕೋಟೆ ಹಂಚುವುದರಲ್ಲಿ ಎಂಎಲ್‍ಸಿ ರಂಧ್ವಾನಾ ಅವರಿರುವುದನ್ನು ಮಾಧ್ಯಮಗಳು ಪತ್ತೆ ಹಚ್ಚಿದವು. ಈ ಕುರಿತು ರೈನಾ ಅವರನ್ನು ಪ್ರಶ್ನಿಸಿದಾಗ, ‘ಮೇ 4ರಂದು ಕಾಶ್ಮೀರಕ್ಕೆ ಬರುತ್ತಿದ್ದ ನಿರ್ಮಲಾ ಸೀತಾರಾಮನ್ ಅವರ ಬಹಿರಂಗ ಸಭೆಯ ಆಹ್ವಾನ ಪತ್ರಿಕಗಳಿದ್ದವು. ಈ ಕುರಿತು ಪಕ್ಷವು ಪರಿಶೀಲಿಸುತ್ತದೆ’ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...