Homeಮುಖಪುಟಪತ್ರಕರ್ತರಿಗೆ ಬಿಜೆಪಿ ಲಂಚ: ಎಫ್‍ಐಆರ್ ದಾಖಲು, ಸಿಸಿಟಿವಿಯಲ್ಲಿ ಲಕೋಟೆ ಹಂಚುತ್ತಿರುವ ದೃಶ್ಯ ಸೆರೆ

ಪತ್ರಕರ್ತರಿಗೆ ಬಿಜೆಪಿ ಲಂಚ: ಎಫ್‍ಐಆರ್ ದಾಖಲು, ಸಿಸಿಟಿವಿಯಲ್ಲಿ ಲಕೋಟೆ ಹಂಚುತ್ತಿರುವ ದೃಶ್ಯ ಸೆರೆ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಜಮ್ಮು ಮತ್ತು ಕಾಶ್ಮೀರದ ಲೆಹ್ ಪ್ರಾಂತದಲ್ಲಿ ನಡೆಯಿತೆಂದು ಹೇಳಲಾದ ಘಟನೆಯೊಂದಕ್ಕೆ ಸಂಬಂಧಿಸಿದಂತೆ ಎಫ್‍ಐಆರ್ ದಾಖಲಾಗಿದೆ. ಬಿಜೆಪಿಯ ರಾಜ್ಯ ಅಧ್ಯಕ್ಷ ರವಿಂದರ್ ರೈನಾ ಮತ್ತು ಎಂಎಲ್‍ಸಿ ವಿಕ್ರಮ್ ರಂಧ್ವಾನಾ ಅವರ ಮೇಲೆ 7 ಪತ್ರಕರ್ತರು ಕಳೆದ ವಾರ ದೂರನ್ನು ನೀಡಿದ್ದರು. ಮೇ 2ರಂದು ಇವರಿಬ್ಬರು ನಡೆಸಿದ ಪತ್ರಿಕಾಗೋಷ್ಟಿಯ ನಂತರ ಹಣವಿದ್ದ ಲಕೋಟೆಗಳನ್ನು ತಮಗೆ ನೀಡಲಾಗಿತ್ತೆಂದೂ, ಬಿಜೆಪಿಯ ಪರ ಸುದ್ದಿಗಳನ್ನು ಬರೆಯಬೇಕೆಂದು ಸೂಚಿಸಲಾಗಿತ್ತೆಂದೂ ಅವರು ದೂರಿದ್ದರು.

ಲಕೋಟೆ ತೆರೆದು ನೋಡಿದಾಗ ಹಣವಿದ್ದುದು ಕಂಡುಬಂದು, ಅಲ್ಲಿಯೇ ಆಕ್ಷೇಪ ವ್ಯಕ್ತಪಡಿಸಿ, ಅದನ್ನು ಹಿಂತಿರುಗಿಸಿದ್ದಾಗಿಯೂ ಪತ್ರಕರ್ತರು ಹೇಳಿದ್ದಾರೆ. ಲೆಹ್‍ನ ಡಿಸಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಆವ್ನಿ ಲಾವಾಸಾ ಅವರು ಪೊಲೀಸರಿಗೆ ಈ ದೂರನ್ನು ರವಾನಿಸಿದ್ದರು. ಅದನ್ನು ಪೊಲೀಸರು ನ್ಯಾಯಾಲಯದ ಮುಂದೆ ಇರಿಸಿದ್ದರು. ನ್ಯಾಯಾಲಯವು ಮೊಕದ್ದಮೆ ದಾಖಲಿಸಿಕೊಳ್ಳಲು ಆದೇಶಿಸಿತು ಎಂದು ಇಂಡಿಯನ್ ಎಕ್ಸ್‍ಪ್ರೆಸ್ ವರದಿ ಮಾಡಿದೆ.

ಆನ್ವಿ ಲಾವಾಸಾ, ಲೆಹ್‍ನ ಚುನಾವಣಾಧಿಕಾರಿ

ಈ ಮಧ್ಯೆ ಲಕೋಟೆಗಳನ್ನು ವಿತರಿಸಿದ ಸಿಸಿಟಿವಿ ಫೂಟೇಜ್ ಇರುವ ವಿಡಿಯೋವನ್ನು ಎನ್‍ಡಿಟಿವಿ ಪ್ರಸಾರ ಮಾಡಿತು. ಆದರೆ, ಈ ವಿಡಿಯೋನ ಅಧಿಕೃತತೆ ಬಗ್ಗೆ ಗೊತ್ತಿಲ್ಲ ಎಂದು ಅದು ಹೇಳಿದೆ. ಸದರಿ ವಿಡಿಯೋವನ್ನು ಒಮರ್ ಅಬ್ದುಲ್ಲಾ ಸಹಾ ಟ್ವೀಟ್ ಮಾಡಿದ್ದಾರೆ.

ಆದರೆ ಬಿಜೆಪಿ ರಾಜ್ಯಾಧ್ಯಕ್ಷ ರವೀಂದರ್ ರೈನಾ ಈ ಆಪಾದನೆಗಳನ್ನು ನಿರಾಕರಿಸಿದ್ದರು, ಪತ್ರಿಕಾಗೋಷ್ಠಿ ಆದ ನಂತರ ತಾನು ಕೂಡಲೇ ಆ ಜಾಗದಿಂದ ಹೊರನಡೆದಿದ್ದೆ ಎಂದು ಹೇಳಿದ್ದರು. ಅದಾದ ನಂತರ ಮಂಗಳವಾರ ವಿಡಿಯೋ ಹೊರಬಿದ್ದಿತು. ಅದರಲ್ಲಿ ಲಕೋಟೆ ಹಂಚುವುದರಲ್ಲಿ ಎಂಎಲ್‍ಸಿ ರಂಧ್ವಾನಾ ಅವರಿರುವುದನ್ನು ಮಾಧ್ಯಮಗಳು ಪತ್ತೆ ಹಚ್ಚಿದವು. ಈ ಕುರಿತು ರೈನಾ ಅವರನ್ನು ಪ್ರಶ್ನಿಸಿದಾಗ, ‘ಮೇ 4ರಂದು ಕಾಶ್ಮೀರಕ್ಕೆ ಬರುತ್ತಿದ್ದ ನಿರ್ಮಲಾ ಸೀತಾರಾಮನ್ ಅವರ ಬಹಿರಂಗ ಸಭೆಯ ಆಹ್ವಾನ ಪತ್ರಿಕಗಳಿದ್ದವು. ಈ ಕುರಿತು ಪಕ್ಷವು ಪರಿಶೀಲಿಸುತ್ತದೆ’ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...