Homeಮುಖಪುಟಅತ್ಯಾಚಾರಿ ಕುಲದೀಪ್ ಸೆಂಗಾರ್‌ ಪತ್ನಿಗೆ ಜಿಲ್ಲಾ ಪಂಚಾಯತ್ ಟಿಕೆಟ್ ನೀಡಿದ ಬಿಜೆಪಿ

ಅತ್ಯಾಚಾರಿ ಕುಲದೀಪ್ ಸೆಂಗಾರ್‌ ಪತ್ನಿಗೆ ಜಿಲ್ಲಾ ಪಂಚಾಯತ್ ಟಿಕೆಟ್ ನೀಡಿದ ಬಿಜೆಪಿ

ಪಕ್ಷದ ಹಿರಿಯ ಮುಖಂಡರು ಅವರ ಪರವಾಗಿ ಮತ್ತು ಇತರ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.

- Advertisement -
- Advertisement -

ಮುಂಬರುವ ಉತ್ತರ ಪ್ರದೇಶದ ಪಂಚಾಯತ್‌‌ ಚುನಾವಣೆಗಳಲ್ಲಿ ಬಿಜೆಪಿಯು ರಾಜ್ಯದ ಐದು ಜಿಲ್ಲೆಗಳಲ್ಲಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಗುರುವಾರ ಘೋಷಿಸಿದೆ. ಈ ಪಟ್ಟಿಯಲ್ಲಿ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಪತ್ನಿ ಸಂಗೀತ ಸೇಂಗಾರ್ ಅವರ ಹೆಸರೂ ಕಾಣಿಸಿಕೊಂಡಿದೆ. ಕುಲದೀಪ್‌ ಸೆಂಗಾರ್‌ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಂತರ ಅವರ ಶಾಸಕ ಸ್ಥಾನದ ಸದಸ್ಯತ್ವವನ್ನು ರದ್ದುಪಡಿಸಲಾಯಿತು.

ಉನ್ನಾವೊದ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿರುವ ಸಂಗೀತಾಗೆ, ಫತೇಪುರ್ ಚೌರಾಸಿ ತೃತಾಯದ ಜಿಲ್ಲಾ ಪಂಚಾಯತ್ ಸ್ಥಾನದಿಂದ ಟಿಕೆಟ್ ನೀಡಲಾಗಿದೆ. ಉನ್ನಾವೊದ ವಿವಿಧ ಜಿಲ್ಲಾ ಪಂಚಾಯತ್ ವಾರ್ಡ್‌ಗಳಿಗೆ 51 ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಲಾಗಿದೆ.

ಇದನ್ನೂ ಓದಿ: ಉನ್ನಾವ್‌ ಅತ್ಯಾಚಾರ ಸಂತ್ರಸ್ತೆಯ ತಂದೆ ಕೊಲೆ ಪ್ರಕರಣ: ಬಿಜೆಪಿಯ ಮಾಜಿ ಶಾಸಕ ಕುಲದೀಪ್‌ ಸೆಂಗಾರ್‌ಗೆ 10 ವರ್ಷ ಜೈಲು

ಸಂಗೀತ 2016 ರಲ್ಲಿ ಉನ್ನಾವೊ ಜಿಲ್ಲೆಯಿಂದ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿದ್ದರು. ಆ ಸಮಯದಲ್ಲಿ ಅವರು ರಾಜಕೀಯ ಪಕ್ಷದ ಚಿಹ್ನೆಯ ಮೇಲೆ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ. ಆದರೆ ಈ ಬಾರಿ ಬಿಜೆಪಿ ಸೇರಿದಂತೆ ರಾಜಕೀಯ ಪಕ್ಷಗಳು ತನ್ನ ಅಭ್ಯರ್ಥಿಗಳನ್ನು ಅಧಿಕೃತವಾಗಿ ಘೋಷಿಸಲು ನಿರ್ಧರಿಸಿದೆ.

ಆಯ್ದ ಜಿಲ್ಲೆಗಳಿಂದ ಪ್ರತಿದಿನ ಅಭ್ಯರ್ಥಿಗಳನ್ನು ಘೋಷಿಸಲಾಗುತ್ತಿದೆ. ಗುರುವಾರ ಉನ್ನಾವೊ, ಮೌ, ಬಲರಾಂಪುರ್, ಬಸ್ತಿ ಮತ್ತು ಕುಶಿನಗರದಿಂದ ಆಭ್ಯರ್ಥಿಗಳನ್ನು ಘೋಷಿಸಲಾಯಿತು.

ತನ್ನ ಗಂಡನ ಶಾಸಕ ಸ್ಥಾನವು ರದ್ದುಗೊಂಡ ನಂತರ ಬಂಗಾರ್‌ಮೌ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಕಾಂತ್ ಕಟಿಯಾರ್ ಪರ ಸಂಗೀತ ಅಭಿಯಾನ ನಡೆಸಿದ್ದರು. ಈ ಬಾರಿ ಪಕ್ಷದ ಹಿರಿಯ ಮುಖಂಡರು ಅವರ ಪರವಾಗಿ ಮತ್ತು ಇತರ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.

ಇದನ್ನೂ ಓದಿ: ಅಪಘಾತಕ್ಕೀಡಾಗಿದ್ದ ಉನ್ನಾವ್ ಅತ್ಯಾಚಾರ ಸಂತ್ರಸ್ತೆ ಪರ ವಕೀಲ ಸಾವು

ಬಿಜೆಪಿ ಅಭ್ಯರ್ಥಿಯಾಗಿ, ಕುಲದೀಪ್ ಸೆಂಗಾರ್ 2017 ರಲ್ಲಿ ಉನ್ನಾವೊದ ಬಂಗಾರ್‌ಮೌ ವಿಧಾನಸಭಾ ಕ್ಷೇತ್ರದಿಂದ ನಿಂತು ಚುನಾವಣೆಯಲ್ಲಿ ಜಯಗಳಿಸಿದ್ದರು. ಆದಾಗ್ಯೂ, ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಂತರ ಅವರನ್ನು ಪಕ್ಷದಿಂದ ಹೊರಹಾಕಲಾಯಿತು.

ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದು ಮಾತ್ರವಲ್ಲದೆ, ಸಂತ್ರಸ್ತೆಯ ತಂದೆಯನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಲು ಸಂಚು ರೂಪಿಸಿದ್ದಕ್ಕಾಗಿ ಸಿಬಿಐ ಆರೋಪಪಟ್ಟಿ ಮಾಡಿತ್ತು. ಸಂತ್ರಸ್ತೆಯ ತಂದೆಯ ಕೊಲೆಗೆ ಸಂಬಂಧಿಸಿದಂತೆ ಸೆಂಗಾರ್‌ನ ಸಹೋದರ ಮತ್ತು ಇತರರ ಮೇಲೆ ಆರೋಪಪಟ್ಟಿ ಸಲ್ಲಿಸಲಾಗಿದೆ.

ಇದನ್ನೂ ಓದಿ: 8 ಪೊಲೀಸರನ್ನು ಗುಂಡಿಕ್ಕಿ ಕೊಂದ ಕ್ರಿಮಿನಲ್! ಉತ್ತರ ಪ್ರದೇಶದಲ್ಲೊಂದು ಭೀಕರ ಘಟನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ನೇರ ನಡೆ-ನುಡಿಯ, ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು: ಸಿಎಂ ಸಿದ್ದರಾಮಯ್ಯ

0
ನಿಷ್ಠುರ, ನೇರ ನಡೆ ನುಡಿಯ ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ...