Homeಮುಖಪುಟಅತ್ಯಾಚಾರಿ ಕುಲದೀಪ್ ಸೆಂಗಾರ್‌ ಪತ್ನಿಗೆ ಜಿಲ್ಲಾ ಪಂಚಾಯತ್ ಟಿಕೆಟ್ ನೀಡಿದ ಬಿಜೆಪಿ

ಅತ್ಯಾಚಾರಿ ಕುಲದೀಪ್ ಸೆಂಗಾರ್‌ ಪತ್ನಿಗೆ ಜಿಲ್ಲಾ ಪಂಚಾಯತ್ ಟಿಕೆಟ್ ನೀಡಿದ ಬಿಜೆಪಿ

ಪಕ್ಷದ ಹಿರಿಯ ಮುಖಂಡರು ಅವರ ಪರವಾಗಿ ಮತ್ತು ಇತರ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.

- Advertisement -
- Advertisement -

ಮುಂಬರುವ ಉತ್ತರ ಪ್ರದೇಶದ ಪಂಚಾಯತ್‌‌ ಚುನಾವಣೆಗಳಲ್ಲಿ ಬಿಜೆಪಿಯು ರಾಜ್ಯದ ಐದು ಜಿಲ್ಲೆಗಳಲ್ಲಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಗುರುವಾರ ಘೋಷಿಸಿದೆ. ಈ ಪಟ್ಟಿಯಲ್ಲಿ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಪತ್ನಿ ಸಂಗೀತ ಸೇಂಗಾರ್ ಅವರ ಹೆಸರೂ ಕಾಣಿಸಿಕೊಂಡಿದೆ. ಕುಲದೀಪ್‌ ಸೆಂಗಾರ್‌ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಂತರ ಅವರ ಶಾಸಕ ಸ್ಥಾನದ ಸದಸ್ಯತ್ವವನ್ನು ರದ್ದುಪಡಿಸಲಾಯಿತು.

ಉನ್ನಾವೊದ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿರುವ ಸಂಗೀತಾಗೆ, ಫತೇಪುರ್ ಚೌರಾಸಿ ತೃತಾಯದ ಜಿಲ್ಲಾ ಪಂಚಾಯತ್ ಸ್ಥಾನದಿಂದ ಟಿಕೆಟ್ ನೀಡಲಾಗಿದೆ. ಉನ್ನಾವೊದ ವಿವಿಧ ಜಿಲ್ಲಾ ಪಂಚಾಯತ್ ವಾರ್ಡ್‌ಗಳಿಗೆ 51 ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಲಾಗಿದೆ.

ಇದನ್ನೂ ಓದಿ: ಉನ್ನಾವ್‌ ಅತ್ಯಾಚಾರ ಸಂತ್ರಸ್ತೆಯ ತಂದೆ ಕೊಲೆ ಪ್ರಕರಣ: ಬಿಜೆಪಿಯ ಮಾಜಿ ಶಾಸಕ ಕುಲದೀಪ್‌ ಸೆಂಗಾರ್‌ಗೆ 10 ವರ್ಷ ಜೈಲು

ಸಂಗೀತ 2016 ರಲ್ಲಿ ಉನ್ನಾವೊ ಜಿಲ್ಲೆಯಿಂದ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿದ್ದರು. ಆ ಸಮಯದಲ್ಲಿ ಅವರು ರಾಜಕೀಯ ಪಕ್ಷದ ಚಿಹ್ನೆಯ ಮೇಲೆ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ. ಆದರೆ ಈ ಬಾರಿ ಬಿಜೆಪಿ ಸೇರಿದಂತೆ ರಾಜಕೀಯ ಪಕ್ಷಗಳು ತನ್ನ ಅಭ್ಯರ್ಥಿಗಳನ್ನು ಅಧಿಕೃತವಾಗಿ ಘೋಷಿಸಲು ನಿರ್ಧರಿಸಿದೆ.

ಆಯ್ದ ಜಿಲ್ಲೆಗಳಿಂದ ಪ್ರತಿದಿನ ಅಭ್ಯರ್ಥಿಗಳನ್ನು ಘೋಷಿಸಲಾಗುತ್ತಿದೆ. ಗುರುವಾರ ಉನ್ನಾವೊ, ಮೌ, ಬಲರಾಂಪುರ್, ಬಸ್ತಿ ಮತ್ತು ಕುಶಿನಗರದಿಂದ ಆಭ್ಯರ್ಥಿಗಳನ್ನು ಘೋಷಿಸಲಾಯಿತು.

ತನ್ನ ಗಂಡನ ಶಾಸಕ ಸ್ಥಾನವು ರದ್ದುಗೊಂಡ ನಂತರ ಬಂಗಾರ್‌ಮೌ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಕಾಂತ್ ಕಟಿಯಾರ್ ಪರ ಸಂಗೀತ ಅಭಿಯಾನ ನಡೆಸಿದ್ದರು. ಈ ಬಾರಿ ಪಕ್ಷದ ಹಿರಿಯ ಮುಖಂಡರು ಅವರ ಪರವಾಗಿ ಮತ್ತು ಇತರ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.

ಇದನ್ನೂ ಓದಿ: ಅಪಘಾತಕ್ಕೀಡಾಗಿದ್ದ ಉನ್ನಾವ್ ಅತ್ಯಾಚಾರ ಸಂತ್ರಸ್ತೆ ಪರ ವಕೀಲ ಸಾವು

ಬಿಜೆಪಿ ಅಭ್ಯರ್ಥಿಯಾಗಿ, ಕುಲದೀಪ್ ಸೆಂಗಾರ್ 2017 ರಲ್ಲಿ ಉನ್ನಾವೊದ ಬಂಗಾರ್‌ಮೌ ವಿಧಾನಸಭಾ ಕ್ಷೇತ್ರದಿಂದ ನಿಂತು ಚುನಾವಣೆಯಲ್ಲಿ ಜಯಗಳಿಸಿದ್ದರು. ಆದಾಗ್ಯೂ, ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಂತರ ಅವರನ್ನು ಪಕ್ಷದಿಂದ ಹೊರಹಾಕಲಾಯಿತು.

ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದು ಮಾತ್ರವಲ್ಲದೆ, ಸಂತ್ರಸ್ತೆಯ ತಂದೆಯನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಲು ಸಂಚು ರೂಪಿಸಿದ್ದಕ್ಕಾಗಿ ಸಿಬಿಐ ಆರೋಪಪಟ್ಟಿ ಮಾಡಿತ್ತು. ಸಂತ್ರಸ್ತೆಯ ತಂದೆಯ ಕೊಲೆಗೆ ಸಂಬಂಧಿಸಿದಂತೆ ಸೆಂಗಾರ್‌ನ ಸಹೋದರ ಮತ್ತು ಇತರರ ಮೇಲೆ ಆರೋಪಪಟ್ಟಿ ಸಲ್ಲಿಸಲಾಗಿದೆ.

ಇದನ್ನೂ ಓದಿ: 8 ಪೊಲೀಸರನ್ನು ಗುಂಡಿಕ್ಕಿ ಕೊಂದ ಕ್ರಿಮಿನಲ್! ಉತ್ತರ ಪ್ರದೇಶದಲ್ಲೊಂದು ಭೀಕರ ಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...