Homeಮುಖಪುಟಭಾರತ ಐಕ್ಯತಾ ಯಾತ್ರೆ ವಿರುದ್ಧ ಆಕ್ಷೇಪಾರ್ಹ ಸುದ್ದಿ ರೂಪದ ಜಾಹೀರಾತು ನೀಡಿದ ಬಿಜೆಪಿ: ತೀವ್ರ ಖಂಡನೆ

ಭಾರತ ಐಕ್ಯತಾ ಯಾತ್ರೆ ವಿರುದ್ಧ ಆಕ್ಷೇಪಾರ್ಹ ಸುದ್ದಿ ರೂಪದ ಜಾಹೀರಾತು ನೀಡಿದ ಬಿಜೆಪಿ: ತೀವ್ರ ಖಂಡನೆ

- Advertisement -
- Advertisement -

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಮಹತ್ವದ ಭಾರತ ಐಕ್ಯತಾ ಯಾತ್ರೆಯ 5ನೇ ದಿನವಾದ ಇಂದು ಪಾದಯಾತ್ರೆಯಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡ ಹೆಜ್ಜೆ ಹಾಕಿದ್ದಾರೆ. ಇದೇ ಸಂದರ್ಭದಲ್ಲಿ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷವನ್ನು ನಿಂದಿಸುವ ಆಕ್ಷೇಪಾರ್ಹ ಸುದ್ದಿ ರೂಪದ ಜಾಹೀರಾತು ನೀಡಿರುವ ಬಿಜೆಪಿ ಪಕ್ಷದ ನಡೆಗೆ ತೀವ್ರ ವಿರೋಧ ವ್ಯಕ್ತವಾಗಿದೆ.

ಮುಂಬೈ ಮೇಲೆ ಉಗ್ರರು ಎರಗಿದ್ದಾಗ ಮಜಾ ಮಾಡುತ್ತಿದ್ದ ರಾಹುಲ್ ಗಾಂಧಿ ಎಂಬ ತಲೆ ಬರಹ ಸೇರಿದಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್, ಮಾಜಿ ಸ್ಪೀಕರ್ ರಮೇಶ್ ಕುಮಾರ್, ಟಿಪ್ಪು ಜಯಂತಿ ಮತ್ತು ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಕುರಿತು ನಿಂದಿಸಿ ಸುದ್ದಿಯಂತೆ ಕಾಣುವ ಜಾಹೀರಾತನ್ನು ಬಿಜೆಪಿ ಪಕ್ಷವು ಹೊಸದಿಗಂತ, ವಿಶ್ವವಾಣಿ, ಕನ್ನಡ ಪ್ರಭ ಮತ್ತು ಸಂಯುಕ್ತ ಕರ್ನಾಟಕ ಪತ್ರಿಕೆಗಳಿಗೆ ನೀಡಿದೆ.

ಇದು ಬಿಜೆಪಿ ಪಕ್ಷದ ಕೀಳು ಮಟ್ಟದ ರಾಜಕೀಯ, ಭಾರತ ಐಕ್ಯತಾ ಯಾತ್ರೆಯ ಯಶಸ್ಸು ಸಹಿಸಲಾಗದೆ ಹತಾಶೆಗೆ ಬಿದ್ದು ಇಂತಹ ಜಾಹೀರಾತು ನೀಡಿದೆ ಎಂದು ಹಲವರು ಕಿಡಿಕಾರಿದ್ದಾರೆ. ಅಲ್ಲದೆ ಇಂತಹ ಪತ್ರಿಕಾ ನೀತಿಗೆ ಹೊರತಾದ ಜಾಹೀರಾತು ಪ್ರಕಟಿಸಿದ ಆ ನಾಲ್ಕು ಪತ್ರಿಕೆಗಳ ವಿರುದ್ಧ ಹರಿಹಾಯ್ದಿದ್ದಾರೆ.

“ಇದು ಅತ್ಯಂತ ನೀಚ ಜಾಹೀರಾತು. ಪತ್ರಿಕೋದ್ಯಮ ಪಾತಾಳಕ್ಕೆ ತಲುಪಿರುವುದಕ್ಕೆ ಸಾಕ್ಷಿ. ಮೂರೂ ಪತ್ರಿಕೆಗಳಿಗೆ ಲೀಡ್ ಸುದ್ದಿ ಜಾಹೀರಾತನ್ನು ಡಿಜೈನ್, ಹೆಡಿಂಗ್ ಸಮೇತ ನೀಡಿದೆ ಬಿಜೆಪಿ. ಬಿಲ್ಲು ಸಹ ದುಬಾರಿಯೇ ಇರಬಹುದು. ಉಳಿದೆರಡು ಪತ್ರಿಕೆಗಳ ವಿಷಯ ಹಾಗಿರಲಿ, ಕನ್ನಡಪ್ರಭ ಹೀಗೆ ಬೀದಿಯಲ್ಲಿ ಬೆತ್ತಲಾಗಬಾರದಿತ್ತು‌” ಎಂದು ಪತ್ರಕರ್ತ, ಹೋರಾಟಗಾರ ದಿನೇಶ್ ಕುಮಾರ್ ಎಸ್‌.ಸಿ ಅಭಿಪ್ರಾಯಪಟ್ಟಿದ್ದಾರೆ.

ಇಂದು ಬೆಳಗ್ಗೆ ನಾಲ್ಕು ಪತ್ರಿಕೆಗಳಲ್ಲಿ ಬಿಜೆಪಿಯ ಸುದ್ದಿ ಮುಖವಾಡದ ಪೂರ್ಣಪುಟ ಜಾಹೀರಾತುಗಳನ್ನು ನೋಡಿದ ಬಳಿಕ ಒಂದು ವಿಚಾರ ಸ್ಪಷ್ಟವಾಯಿತು. ರಾಹುಲ್ ಗಾಂಧಿ, ಪರಿವಾರವನ್ನು “ಬೆಳೆಸಿದ್ದಾರೆ!” ಅಂದರೆ, ರಾಹುಲ್ ಈಗ ಪಪ್ಪು ಅಲ್ಲ ಎಂಬುದನ್ನು ಸ್ವತಃ ಬಿಜೆಪಿ ಮತ್ತದರ ಪರಿವಾರ ಒಪ್ಪಿಕೊಂಡಿದೆ. ಅವರಿಗೀಗ ರಾಹುಲ್ ಅಧಿಕಾರಕ್ಕಾಗಿ ತಮಗೆ ಗಂಭೀರ ಪ್ರತಿಸ್ಪರ್ಧಿ ಅನ್ನಿಸತೊಡಗಿದೆ. ಹಾಗಾಗಿ ಮೊದಲ ಬಾರಿಗೆ, “ಪಪ್ಪು” ಪದ ಬಳಕೆ ಮಾಡದೆ, ರಾಹುಲ್ ಗಾಂಧಿ ಅವರ ವಿರುದ್ಧ ಗಂಭೀರವಾದ ರಾಜಕೀಯ ಆಪಾದನೆ ಮಾಡಿದೆ. ರಾಹುಲ್ ಅವರ ಭಾರತ್ ಜೋಡೋ ಯಾತ್ರೆ, ರಾಜಕೀಯವಾಗಿ ಯಶಸ್ಸು ಕಾಣುತ್ತಿದೆ ಎಂಬುದು ಬಿಜೆಪಿ ಮತ್ತದರ ಪರಿವಾರಕ್ಕೆ ಅನ್ನಿಸತೊಡಗಿರುವುದರ ಪರಿಣಾಮ ಇದು. ಇಷ್ಟರ ಮಟ್ಟಿಗೆ ಕಾಂಗ್ರೆಸ್ಸಿಗರು ಈ ಜಾಹೀರಾತುಗಳ ಬಗ್ಗೆ ಸಂತಸಪಡಬೇಕು ಎಂದು ಚಿಂತಕರಾದ ರಾಜರಾಂ ತಲ್ಲೂರುರವರು ಅಭಿಪ್ರಾಯಪಟ್ಟಿದ್ದಾರೆ.

ಕಳೆದ ವಾರ ಸಹ ಕರ್ನಾಟಕಕ್ಕೆ ಭಾರತ ಐಕ್ಯತಾ ಯಾತ್ರೆ ಆಗಮಿಸುವ ಸಂದರ್ಭದಲ್ಲಿ ಬಿಜೆಪಿ ಪಕ್ಷವು ಕನ್ನಡಪ್ರಭ ಪತ್ರಿಕೆಯಲ್ಲಿ ಸುಳ್ಳುಗಳಿಂದ ಕೂಡಿದ ನಿಂದನಾತ್ಮಕ ಜಾಹೀರಾತು ನೀಡಿ ಟೀಕೆಗೆ ಗುರಿಯಾಗಿತ್ತು. ಅದನ್ನು ಇಂದು ಸಹ ಮುಂದುವರೆಸಿದೆ. ಇದಕ್ಕೆ ಕಾಂಗ್ರೆಸ್ ಪಕ್ಷದ ಪ್ರತಿಕ್ರಿಯೆ ಹೇಗಿರುತ್ತದೆ ಎಂದು ಕಾದು ನೋಡಬೇಕಿದೆ.

ಇದನ್ನೂ ಓದಿ: 5ನೇ ದಿನದ ಭಾರತ ಐಕ್ಯತಾ ಯಾತ್ರೆ ಆರಂಭ: ಜೊತೆಗೂಡಿದ ಸೋನಿಯಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಾರತ್ ಜೋಡೋ ಯಾತ್ರೆಯ ಯಶಸ್ಸು ಮನುವಾದಿಗಳನ್ನು ಕಂಗೆಡಿಸಿದೆ. ಅದ್ದರಿಂದ ಅವರು ಹೆಂಡ ಕುಡಿದ ಮಂಗನಂತೆ ಆಡುತ್ತಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....