Homeಮುಖಪುಟಭಾರತ ಐಕ್ಯತಾ ಯಾತ್ರೆ ವಿರುದ್ಧ ಆಕ್ಷೇಪಾರ್ಹ ಸುದ್ದಿ ರೂಪದ ಜಾಹೀರಾತು ನೀಡಿದ ಬಿಜೆಪಿ: ತೀವ್ರ ಖಂಡನೆ

ಭಾರತ ಐಕ್ಯತಾ ಯಾತ್ರೆ ವಿರುದ್ಧ ಆಕ್ಷೇಪಾರ್ಹ ಸುದ್ದಿ ರೂಪದ ಜಾಹೀರಾತು ನೀಡಿದ ಬಿಜೆಪಿ: ತೀವ್ರ ಖಂಡನೆ

- Advertisement -
- Advertisement -

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಮಹತ್ವದ ಭಾರತ ಐಕ್ಯತಾ ಯಾತ್ರೆಯ 5ನೇ ದಿನವಾದ ಇಂದು ಪಾದಯಾತ್ರೆಯಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡ ಹೆಜ್ಜೆ ಹಾಕಿದ್ದಾರೆ. ಇದೇ ಸಂದರ್ಭದಲ್ಲಿ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷವನ್ನು ನಿಂದಿಸುವ ಆಕ್ಷೇಪಾರ್ಹ ಸುದ್ದಿ ರೂಪದ ಜಾಹೀರಾತು ನೀಡಿರುವ ಬಿಜೆಪಿ ಪಕ್ಷದ ನಡೆಗೆ ತೀವ್ರ ವಿರೋಧ ವ್ಯಕ್ತವಾಗಿದೆ.

ಮುಂಬೈ ಮೇಲೆ ಉಗ್ರರು ಎರಗಿದ್ದಾಗ ಮಜಾ ಮಾಡುತ್ತಿದ್ದ ರಾಹುಲ್ ಗಾಂಧಿ ಎಂಬ ತಲೆ ಬರಹ ಸೇರಿದಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್, ಮಾಜಿ ಸ್ಪೀಕರ್ ರಮೇಶ್ ಕುಮಾರ್, ಟಿಪ್ಪು ಜಯಂತಿ ಮತ್ತು ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಕುರಿತು ನಿಂದಿಸಿ ಸುದ್ದಿಯಂತೆ ಕಾಣುವ ಜಾಹೀರಾತನ್ನು ಬಿಜೆಪಿ ಪಕ್ಷವು ಹೊಸದಿಗಂತ, ವಿಶ್ವವಾಣಿ, ಕನ್ನಡ ಪ್ರಭ ಮತ್ತು ಸಂಯುಕ್ತ ಕರ್ನಾಟಕ ಪತ್ರಿಕೆಗಳಿಗೆ ನೀಡಿದೆ.

ಇದು ಬಿಜೆಪಿ ಪಕ್ಷದ ಕೀಳು ಮಟ್ಟದ ರಾಜಕೀಯ, ಭಾರತ ಐಕ್ಯತಾ ಯಾತ್ರೆಯ ಯಶಸ್ಸು ಸಹಿಸಲಾಗದೆ ಹತಾಶೆಗೆ ಬಿದ್ದು ಇಂತಹ ಜಾಹೀರಾತು ನೀಡಿದೆ ಎಂದು ಹಲವರು ಕಿಡಿಕಾರಿದ್ದಾರೆ. ಅಲ್ಲದೆ ಇಂತಹ ಪತ್ರಿಕಾ ನೀತಿಗೆ ಹೊರತಾದ ಜಾಹೀರಾತು ಪ್ರಕಟಿಸಿದ ಆ ನಾಲ್ಕು ಪತ್ರಿಕೆಗಳ ವಿರುದ್ಧ ಹರಿಹಾಯ್ದಿದ್ದಾರೆ.

“ಇದು ಅತ್ಯಂತ ನೀಚ ಜಾಹೀರಾತು. ಪತ್ರಿಕೋದ್ಯಮ ಪಾತಾಳಕ್ಕೆ ತಲುಪಿರುವುದಕ್ಕೆ ಸಾಕ್ಷಿ. ಮೂರೂ ಪತ್ರಿಕೆಗಳಿಗೆ ಲೀಡ್ ಸುದ್ದಿ ಜಾಹೀರಾತನ್ನು ಡಿಜೈನ್, ಹೆಡಿಂಗ್ ಸಮೇತ ನೀಡಿದೆ ಬಿಜೆಪಿ. ಬಿಲ್ಲು ಸಹ ದುಬಾರಿಯೇ ಇರಬಹುದು. ಉಳಿದೆರಡು ಪತ್ರಿಕೆಗಳ ವಿಷಯ ಹಾಗಿರಲಿ, ಕನ್ನಡಪ್ರಭ ಹೀಗೆ ಬೀದಿಯಲ್ಲಿ ಬೆತ್ತಲಾಗಬಾರದಿತ್ತು‌” ಎಂದು ಪತ್ರಕರ್ತ, ಹೋರಾಟಗಾರ ದಿನೇಶ್ ಕುಮಾರ್ ಎಸ್‌.ಸಿ ಅಭಿಪ್ರಾಯಪಟ್ಟಿದ್ದಾರೆ.

ಇಂದು ಬೆಳಗ್ಗೆ ನಾಲ್ಕು ಪತ್ರಿಕೆಗಳಲ್ಲಿ ಬಿಜೆಪಿಯ ಸುದ್ದಿ ಮುಖವಾಡದ ಪೂರ್ಣಪುಟ ಜಾಹೀರಾತುಗಳನ್ನು ನೋಡಿದ ಬಳಿಕ ಒಂದು ವಿಚಾರ ಸ್ಪಷ್ಟವಾಯಿತು. ರಾಹುಲ್ ಗಾಂಧಿ, ಪರಿವಾರವನ್ನು “ಬೆಳೆಸಿದ್ದಾರೆ!” ಅಂದರೆ, ರಾಹುಲ್ ಈಗ ಪಪ್ಪು ಅಲ್ಲ ಎಂಬುದನ್ನು ಸ್ವತಃ ಬಿಜೆಪಿ ಮತ್ತದರ ಪರಿವಾರ ಒಪ್ಪಿಕೊಂಡಿದೆ. ಅವರಿಗೀಗ ರಾಹುಲ್ ಅಧಿಕಾರಕ್ಕಾಗಿ ತಮಗೆ ಗಂಭೀರ ಪ್ರತಿಸ್ಪರ್ಧಿ ಅನ್ನಿಸತೊಡಗಿದೆ. ಹಾಗಾಗಿ ಮೊದಲ ಬಾರಿಗೆ, “ಪಪ್ಪು” ಪದ ಬಳಕೆ ಮಾಡದೆ, ರಾಹುಲ್ ಗಾಂಧಿ ಅವರ ವಿರುದ್ಧ ಗಂಭೀರವಾದ ರಾಜಕೀಯ ಆಪಾದನೆ ಮಾಡಿದೆ. ರಾಹುಲ್ ಅವರ ಭಾರತ್ ಜೋಡೋ ಯಾತ್ರೆ, ರಾಜಕೀಯವಾಗಿ ಯಶಸ್ಸು ಕಾಣುತ್ತಿದೆ ಎಂಬುದು ಬಿಜೆಪಿ ಮತ್ತದರ ಪರಿವಾರಕ್ಕೆ ಅನ್ನಿಸತೊಡಗಿರುವುದರ ಪರಿಣಾಮ ಇದು. ಇಷ್ಟರ ಮಟ್ಟಿಗೆ ಕಾಂಗ್ರೆಸ್ಸಿಗರು ಈ ಜಾಹೀರಾತುಗಳ ಬಗ್ಗೆ ಸಂತಸಪಡಬೇಕು ಎಂದು ಚಿಂತಕರಾದ ರಾಜರಾಂ ತಲ್ಲೂರುರವರು ಅಭಿಪ್ರಾಯಪಟ್ಟಿದ್ದಾರೆ.

ಕಳೆದ ವಾರ ಸಹ ಕರ್ನಾಟಕಕ್ಕೆ ಭಾರತ ಐಕ್ಯತಾ ಯಾತ್ರೆ ಆಗಮಿಸುವ ಸಂದರ್ಭದಲ್ಲಿ ಬಿಜೆಪಿ ಪಕ್ಷವು ಕನ್ನಡಪ್ರಭ ಪತ್ರಿಕೆಯಲ್ಲಿ ಸುಳ್ಳುಗಳಿಂದ ಕೂಡಿದ ನಿಂದನಾತ್ಮಕ ಜಾಹೀರಾತು ನೀಡಿ ಟೀಕೆಗೆ ಗುರಿಯಾಗಿತ್ತು. ಅದನ್ನು ಇಂದು ಸಹ ಮುಂದುವರೆಸಿದೆ. ಇದಕ್ಕೆ ಕಾಂಗ್ರೆಸ್ ಪಕ್ಷದ ಪ್ರತಿಕ್ರಿಯೆ ಹೇಗಿರುತ್ತದೆ ಎಂದು ಕಾದು ನೋಡಬೇಕಿದೆ.

ಇದನ್ನೂ ಓದಿ: 5ನೇ ದಿನದ ಭಾರತ ಐಕ್ಯತಾ ಯಾತ್ರೆ ಆರಂಭ: ಜೊತೆಗೂಡಿದ ಸೋನಿಯಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಾರತ್ ಜೋಡೋ ಯಾತ್ರೆಯ ಯಶಸ್ಸು ಮನುವಾದಿಗಳನ್ನು ಕಂಗೆಡಿಸಿದೆ. ಅದ್ದರಿಂದ ಅವರು ಹೆಂಡ ಕುಡಿದ ಮಂಗನಂತೆ ಆಡುತ್ತಿದ್ದಾರೆ.

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...