Homeಮುಖಪುಟಭಾರತ ಐಕ್ಯತಾ ಯಾತ್ರೆ ವಿರುದ್ಧ ಆಕ್ಷೇಪಾರ್ಹ ಸುದ್ದಿ ರೂಪದ ಜಾಹೀರಾತು ನೀಡಿದ ಬಿಜೆಪಿ: ತೀವ್ರ ಖಂಡನೆ

ಭಾರತ ಐಕ್ಯತಾ ಯಾತ್ರೆ ವಿರುದ್ಧ ಆಕ್ಷೇಪಾರ್ಹ ಸುದ್ದಿ ರೂಪದ ಜಾಹೀರಾತು ನೀಡಿದ ಬಿಜೆಪಿ: ತೀವ್ರ ಖಂಡನೆ

- Advertisement -
- Advertisement -

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಮಹತ್ವದ ಭಾರತ ಐಕ್ಯತಾ ಯಾತ್ರೆಯ 5ನೇ ದಿನವಾದ ಇಂದು ಪಾದಯಾತ್ರೆಯಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡ ಹೆಜ್ಜೆ ಹಾಕಿದ್ದಾರೆ. ಇದೇ ಸಂದರ್ಭದಲ್ಲಿ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷವನ್ನು ನಿಂದಿಸುವ ಆಕ್ಷೇಪಾರ್ಹ ಸುದ್ದಿ ರೂಪದ ಜಾಹೀರಾತು ನೀಡಿರುವ ಬಿಜೆಪಿ ಪಕ್ಷದ ನಡೆಗೆ ತೀವ್ರ ವಿರೋಧ ವ್ಯಕ್ತವಾಗಿದೆ.

ಮುಂಬೈ ಮೇಲೆ ಉಗ್ರರು ಎರಗಿದ್ದಾಗ ಮಜಾ ಮಾಡುತ್ತಿದ್ದ ರಾಹುಲ್ ಗಾಂಧಿ ಎಂಬ ತಲೆ ಬರಹ ಸೇರಿದಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್, ಮಾಜಿ ಸ್ಪೀಕರ್ ರಮೇಶ್ ಕುಮಾರ್, ಟಿಪ್ಪು ಜಯಂತಿ ಮತ್ತು ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಕುರಿತು ನಿಂದಿಸಿ ಸುದ್ದಿಯಂತೆ ಕಾಣುವ ಜಾಹೀರಾತನ್ನು ಬಿಜೆಪಿ ಪಕ್ಷವು ಹೊಸದಿಗಂತ, ವಿಶ್ವವಾಣಿ, ಕನ್ನಡ ಪ್ರಭ ಮತ್ತು ಸಂಯುಕ್ತ ಕರ್ನಾಟಕ ಪತ್ರಿಕೆಗಳಿಗೆ ನೀಡಿದೆ.

ಇದು ಬಿಜೆಪಿ ಪಕ್ಷದ ಕೀಳು ಮಟ್ಟದ ರಾಜಕೀಯ, ಭಾರತ ಐಕ್ಯತಾ ಯಾತ್ರೆಯ ಯಶಸ್ಸು ಸಹಿಸಲಾಗದೆ ಹತಾಶೆಗೆ ಬಿದ್ದು ಇಂತಹ ಜಾಹೀರಾತು ನೀಡಿದೆ ಎಂದು ಹಲವರು ಕಿಡಿಕಾರಿದ್ದಾರೆ. ಅಲ್ಲದೆ ಇಂತಹ ಪತ್ರಿಕಾ ನೀತಿಗೆ ಹೊರತಾದ ಜಾಹೀರಾತು ಪ್ರಕಟಿಸಿದ ಆ ನಾಲ್ಕು ಪತ್ರಿಕೆಗಳ ವಿರುದ್ಧ ಹರಿಹಾಯ್ದಿದ್ದಾರೆ.

“ಇದು ಅತ್ಯಂತ ನೀಚ ಜಾಹೀರಾತು. ಪತ್ರಿಕೋದ್ಯಮ ಪಾತಾಳಕ್ಕೆ ತಲುಪಿರುವುದಕ್ಕೆ ಸಾಕ್ಷಿ. ಮೂರೂ ಪತ್ರಿಕೆಗಳಿಗೆ ಲೀಡ್ ಸುದ್ದಿ ಜಾಹೀರಾತನ್ನು ಡಿಜೈನ್, ಹೆಡಿಂಗ್ ಸಮೇತ ನೀಡಿದೆ ಬಿಜೆಪಿ. ಬಿಲ್ಲು ಸಹ ದುಬಾರಿಯೇ ಇರಬಹುದು. ಉಳಿದೆರಡು ಪತ್ರಿಕೆಗಳ ವಿಷಯ ಹಾಗಿರಲಿ, ಕನ್ನಡಪ್ರಭ ಹೀಗೆ ಬೀದಿಯಲ್ಲಿ ಬೆತ್ತಲಾಗಬಾರದಿತ್ತು‌” ಎಂದು ಪತ್ರಕರ್ತ, ಹೋರಾಟಗಾರ ದಿನೇಶ್ ಕುಮಾರ್ ಎಸ್‌.ಸಿ ಅಭಿಪ್ರಾಯಪಟ್ಟಿದ್ದಾರೆ.

ಇಂದು ಬೆಳಗ್ಗೆ ನಾಲ್ಕು ಪತ್ರಿಕೆಗಳಲ್ಲಿ ಬಿಜೆಪಿಯ ಸುದ್ದಿ ಮುಖವಾಡದ ಪೂರ್ಣಪುಟ ಜಾಹೀರಾತುಗಳನ್ನು ನೋಡಿದ ಬಳಿಕ ಒಂದು ವಿಚಾರ ಸ್ಪಷ್ಟವಾಯಿತು. ರಾಹುಲ್ ಗಾಂಧಿ, ಪರಿವಾರವನ್ನು “ಬೆಳೆಸಿದ್ದಾರೆ!” ಅಂದರೆ, ರಾಹುಲ್ ಈಗ ಪಪ್ಪು ಅಲ್ಲ ಎಂಬುದನ್ನು ಸ್ವತಃ ಬಿಜೆಪಿ ಮತ್ತದರ ಪರಿವಾರ ಒಪ್ಪಿಕೊಂಡಿದೆ. ಅವರಿಗೀಗ ರಾಹುಲ್ ಅಧಿಕಾರಕ್ಕಾಗಿ ತಮಗೆ ಗಂಭೀರ ಪ್ರತಿಸ್ಪರ್ಧಿ ಅನ್ನಿಸತೊಡಗಿದೆ. ಹಾಗಾಗಿ ಮೊದಲ ಬಾರಿಗೆ, “ಪಪ್ಪು” ಪದ ಬಳಕೆ ಮಾಡದೆ, ರಾಹುಲ್ ಗಾಂಧಿ ಅವರ ವಿರುದ್ಧ ಗಂಭೀರವಾದ ರಾಜಕೀಯ ಆಪಾದನೆ ಮಾಡಿದೆ. ರಾಹುಲ್ ಅವರ ಭಾರತ್ ಜೋಡೋ ಯಾತ್ರೆ, ರಾಜಕೀಯವಾಗಿ ಯಶಸ್ಸು ಕಾಣುತ್ತಿದೆ ಎಂಬುದು ಬಿಜೆಪಿ ಮತ್ತದರ ಪರಿವಾರಕ್ಕೆ ಅನ್ನಿಸತೊಡಗಿರುವುದರ ಪರಿಣಾಮ ಇದು. ಇಷ್ಟರ ಮಟ್ಟಿಗೆ ಕಾಂಗ್ರೆಸ್ಸಿಗರು ಈ ಜಾಹೀರಾತುಗಳ ಬಗ್ಗೆ ಸಂತಸಪಡಬೇಕು ಎಂದು ಚಿಂತಕರಾದ ರಾಜರಾಂ ತಲ್ಲೂರುರವರು ಅಭಿಪ್ರಾಯಪಟ್ಟಿದ್ದಾರೆ.

ಕಳೆದ ವಾರ ಸಹ ಕರ್ನಾಟಕಕ್ಕೆ ಭಾರತ ಐಕ್ಯತಾ ಯಾತ್ರೆ ಆಗಮಿಸುವ ಸಂದರ್ಭದಲ್ಲಿ ಬಿಜೆಪಿ ಪಕ್ಷವು ಕನ್ನಡಪ್ರಭ ಪತ್ರಿಕೆಯಲ್ಲಿ ಸುಳ್ಳುಗಳಿಂದ ಕೂಡಿದ ನಿಂದನಾತ್ಮಕ ಜಾಹೀರಾತು ನೀಡಿ ಟೀಕೆಗೆ ಗುರಿಯಾಗಿತ್ತು. ಅದನ್ನು ಇಂದು ಸಹ ಮುಂದುವರೆಸಿದೆ. ಇದಕ್ಕೆ ಕಾಂಗ್ರೆಸ್ ಪಕ್ಷದ ಪ್ರತಿಕ್ರಿಯೆ ಹೇಗಿರುತ್ತದೆ ಎಂದು ಕಾದು ನೋಡಬೇಕಿದೆ.

ಇದನ್ನೂ ಓದಿ: 5ನೇ ದಿನದ ಭಾರತ ಐಕ್ಯತಾ ಯಾತ್ರೆ ಆರಂಭ: ಜೊತೆಗೂಡಿದ ಸೋನಿಯಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಾರತ್ ಜೋಡೋ ಯಾತ್ರೆಯ ಯಶಸ್ಸು ಮನುವಾದಿಗಳನ್ನು ಕಂಗೆಡಿಸಿದೆ. ಅದ್ದರಿಂದ ಅವರು ಹೆಂಡ ಕುಡಿದ ಮಂಗನಂತೆ ಆಡುತ್ತಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...