Homeಮುಖಪುಟಚುನಾವಣಾ ಬಾಂಡ್‌: ಒಟ್ಟು ನಿಧಿಯ 50% ಸ್ವೀಕರಿಸಿದ್ದು ಬಿಜೆಪಿ: ಅಂಕಿಅಂಶ ಬಯಲು ಮಾಡಿದ ADR

ಚುನಾವಣಾ ಬಾಂಡ್‌: ಒಟ್ಟು ನಿಧಿಯ 50% ಸ್ವೀಕರಿಸಿದ್ದು ಬಿಜೆಪಿ: ಅಂಕಿಅಂಶ ಬಯಲು ಮಾಡಿದ ADR

- Advertisement -
- Advertisement -

2017-18ರಲ್ಲಿ ಚುನಾವಣಾ ಬಾಂಡ್‌ಗಳನ್ನು ಪರಿಚಯಿಸಿದಾಗಿನಿಂದ, ಬಿಜೆಪಿಯು ಚುನಾವಣಾ ಬಾಂಡ್‌ಗಳ ಮೂಲಕ ಒಟ್ಟು ನಿಧಿಯ ಸುಮಾರು 50% ಸ್ವೀಕರಿಸಿದ್ದು, ಅದು ಬರೊಬ್ಬರಿ 7,700ಕೋಟಿ ರೂ. ಆಗಿದೆ ಎಂದು ಎಡಿಆರ್‌ ವರದಿಯು ಬಹಿರಂಗಪಡಿಸಿದೆ.

ಅಸೋಸಿಯೇಷನ್ ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್‌(ಎಡಿಆರ್‌) ಮಾಹಿತಿ ಪ್ರಕಾರ, 2017-18 ಮತ್ತು 2018-19ರ ಎರಡು ವರ್ಷಗಳಲ್ಲಿ ಬಿಜೆಪಿ ಕ್ರಮವಾಗಿ 1,450.9 ಕೋಟಿ ಮತ್ತು 210 ಕೋಟಿ ರೂಪಾಯಿಗಳನ್ನು ದೇಣಿಗೆ ಪಡೆದಿದೆ ಮತ್ತು ಏಪ್ರಿಲ್ 12, 2019 ರಿಂದ ಜನವರಿ 24, 2024 ರಲ್ಲಿ 6,060.5 ಕೋಟಿ ರೂ.ಮೌಲ್ಯದ  ಬಾಂಡ್‌ ಪಡೆದಿದೆ. ಇದರ ಒಟ್ಟು ಮೌಲ್ಯ 7,721.4 ಕೋಟಿ ರೂ.ಆಗಿದ್ದು, ಇದು ಇಲ್ಲಿಯವರೆಗಿನ ಒಟ್ಟು ಮೊತ್ತ ಅಂದರೆ 15,529 ಕೋಟಿ ಸುಮಾರು 50%ರಷ್ಟಾಗಿರುತ್ತದೆ.

ಕಾಂಗ್ರೆಸ್ ಎರಡು ವರ್ಷಗಳಲ್ಲಿ 383.3 ಕೋಟಿ ಮತ್ತು 5 ಕೋಟಿ ಪಡೆದಿದೆ ಮತ್ತು ಒಟ್ಟು ಇಲ್ಲಿಯವರೆಗೆ 1,810 ಕೋಟಿ ರೂ.ಚುನಾವಣಾ ಬಾಂಡ್‌ ಕಾಂಗ್ರೆಸ್‌ ಪಡೆದುಕೊಂಡಿದೆ. ಎರಡು ವರ್ಷಗಳಲ್ಲಿ ಟಿಎಂಸಿ 97.3 ಕೋಟಿ ದೇಣಿಗೆಯನ್ನು ಮೊದಲು ಪಡೆದಿದ್ದು, ಪಕ್ಷ ಒಟ್ಟು 1706.8 ಕೋಟಿ ರೂಪಾಯಿಗಳನ್ನು ಗಳಿಸಿದೆ ಎಂದು ಎಸ್ ಬಿಐ ನೀಡಿರುವ ಅಂಕಿ ಅಂಶಗಳಿಂದ ತಿಳಿದು ಬರುತ್ತದೆ.

2018-19ರಲ್ಲಿ ಬಿಜೆಡಿ 213.5 ಕೋಟಿ ರೂಪಾಯಿ ದೇಣಿಗೆ ಪಡೆದಿದ್ದು, 2017-18ರಲ್ಲಿ ಯಾವುದೇ ದೇಣಿಗೆ ಸ್ವೀಕರಿಸಿಲ್ಲ. ಗುರುವಾರದ ಅಂಕಿ ಅಂಶ ಬಹಿರಂಗಗೊಂಡಾಗ ಬಿಜೆಡಿ ಸಂಗ್ರಹಿಸಿದ ಒಟ್ಟು ದೇಣಿಗೆ ಮೊತ್ತ 989 ಕೋಟಿ ಎನ್ನುವುದು ತಿಳಿದು ಬಂದಿದೆ. 2019ರ ಏಪ್ರಿಲ್ 1ರಿಂದ 2019ರ ಏಪ್ರಿಲ್ 11ರವರೆಗಿನ ಅಂಕಿ ಅಂಶಗಳು ಇದರಲ್ಲಿ ಸೇರಿಲ್ಲ. ಈ ಅವಧಿಯ ಕೇವಲ 11 ದಿನಗಳಲ್ಲಿ ಲೋಕಸಭಾ ಚುನಾವಣೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳು ನಿರತವಾಗಿದ್ದು ದೊಡ್ಡ ಪ್ರಮಾಣದ ನಗದು ಹರಿದಿರುವ ಸಾಧ್ಯತೆ ಇದೆ.

2017ರಲ್ಲಿ ಚುನಾವಣಾ ಬಾಂಡ್‌ ಪ್ರಾರಂಭವಾದ ದಿನಗಳಿಂದ ಈ ವರ್ಷದ ಆರಂಭದಲ್ಲಿ ಸುಪ್ರೀಂಕೋರ್ಟ್ ಚುನಾವಣಾ ಬಾಂಡ್‌ನಿಷೇಧಿಸುವವರೆಗೆ ಯಾವ ಪಕ್ಷ ಚುನಾವಣಾ ಬಾಂಡ್‌ಗಳ ಮೂಲಕ ಎಷ್ಟು ಹಣವನ್ನು ಪಡೆದಿದೆ ಎಂಬ ಸಂಪೂರ್ಣ ವಿವರಗಳು ಲಭ್ಯವಾಗಿಲ್ಲ. ಈ ಬಗ್ಗೆ ಎಸ್‌ಬಿಐ ಸಂಪೂರ್ಣ ಮಾಹಿತಿ ನೀಡಿದರೆ ಇದರ ಒಟ್ಟು ಮೊತ್ತ ಬಹಿರಂಗವಾಗಲಿದೆ.

ಸುಪ್ರೀಂಕೋರ್ಟ್‌ ಖಡಕ್ ನಿರ್ದೇಶನದ ಬಳಿಕ ಎಸ್‌ಬಿಐ ಕೇಂದ್ರ ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್‌ ಕುರಿತು ಮಾಹಿತಿಯನ್ನು ನೀಡಿತ್ತು. ಈ ಕುರಿತ ಮಾಹಿತಿ ನಿನ್ನೆ ಬಿಡುಗಡೆಯಾಗಿದ್ದು, ರಾಜಕೀಯ ಪಕ್ಷಗಳಿಗೆ ಚುನಾವಣಾ ಬಾಂಡ್‌ ಮೂಲಕ ಹರಿದು ಬಂದ ಮೊತ್ತದ ಮಾಹಿತಿ ಲಭ್ಯವಾಗಿದೆ. ಆದರೆ ಎಸ್‌ಬಿಐ  ಈ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ನೀಡಿಲ್ಲ ಎನ್ನುವುದು ಆ ಬಳಿಕ ಬಹಿರಂಗವಾಗಿದೆ.

ಆರ್‌ಟಿಐ ಮಾಹಿತಿ ಪ್ರಕಾರ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮಾರ್ಚ್ 2018ರಿಂದ 16,518 ಕೋಟಿ ಮೌಲ್ಯದ 28,030 ಚುನಾವಣಾ ಬಾಂಡ್‌ಗಳನ್ನು ಮಾರಾಟ ಮಾಡಿದೆ, ಆದರೆ ಗುರುವಾರ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಖರೀದಿದಾರರ ಪಟ್ಟಿಯಲ್ಲಿ ಕೇವಲ 18,871 ಬಾಂಡ್‌ಗಳ ಮಾರಾಟ ಮಾಡಿರುವ ಬಗ್ಗೆ ಮಾತ್ರ ಮಾಹಿತಿ ಇದ್ದು, ಅದರ ಮೌಲ್ಯ 12,516 ಕೋಟಿ ರೂ.ಆಗಿದೆ. ಇನ್ನುಳಿದವುಗಳ ಬಗ್ಗೆ ಮಾಹಿತಿ ನೀಡಿಲ್ಲ ಎಂದು ತಿಳಿದು ಬಂದಿದೆ.

ಇದನ್ನು ಓದಿ: 4,002 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್ ಮಾಹಿತಿ ಇನ್ನೂ ಬಹಿರಂಗಗೊಂಡಿಲ್ಲ: ಯಾಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...