Homeಮುಖಪುಟಚುನಾವಣಾ ಬಾಂಡ್‌: ಒಟ್ಟು ನಿಧಿಯ 50% ಸ್ವೀಕರಿಸಿದ್ದು ಬಿಜೆಪಿ: ಅಂಕಿಅಂಶ ಬಯಲು ಮಾಡಿದ ADR

ಚುನಾವಣಾ ಬಾಂಡ್‌: ಒಟ್ಟು ನಿಧಿಯ 50% ಸ್ವೀಕರಿಸಿದ್ದು ಬಿಜೆಪಿ: ಅಂಕಿಅಂಶ ಬಯಲು ಮಾಡಿದ ADR

- Advertisement -
- Advertisement -

2017-18ರಲ್ಲಿ ಚುನಾವಣಾ ಬಾಂಡ್‌ಗಳನ್ನು ಪರಿಚಯಿಸಿದಾಗಿನಿಂದ, ಬಿಜೆಪಿಯು ಚುನಾವಣಾ ಬಾಂಡ್‌ಗಳ ಮೂಲಕ ಒಟ್ಟು ನಿಧಿಯ ಸುಮಾರು 50% ಸ್ವೀಕರಿಸಿದ್ದು, ಅದು ಬರೊಬ್ಬರಿ 7,700ಕೋಟಿ ರೂ. ಆಗಿದೆ ಎಂದು ಎಡಿಆರ್‌ ವರದಿಯು ಬಹಿರಂಗಪಡಿಸಿದೆ.

ಅಸೋಸಿಯೇಷನ್ ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್‌(ಎಡಿಆರ್‌) ಮಾಹಿತಿ ಪ್ರಕಾರ, 2017-18 ಮತ್ತು 2018-19ರ ಎರಡು ವರ್ಷಗಳಲ್ಲಿ ಬಿಜೆಪಿ ಕ್ರಮವಾಗಿ 1,450.9 ಕೋಟಿ ಮತ್ತು 210 ಕೋಟಿ ರೂಪಾಯಿಗಳನ್ನು ದೇಣಿಗೆ ಪಡೆದಿದೆ ಮತ್ತು ಏಪ್ರಿಲ್ 12, 2019 ರಿಂದ ಜನವರಿ 24, 2024 ರಲ್ಲಿ 6,060.5 ಕೋಟಿ ರೂ.ಮೌಲ್ಯದ  ಬಾಂಡ್‌ ಪಡೆದಿದೆ. ಇದರ ಒಟ್ಟು ಮೌಲ್ಯ 7,721.4 ಕೋಟಿ ರೂ.ಆಗಿದ್ದು, ಇದು ಇಲ್ಲಿಯವರೆಗಿನ ಒಟ್ಟು ಮೊತ್ತ ಅಂದರೆ 15,529 ಕೋಟಿ ಸುಮಾರು 50%ರಷ್ಟಾಗಿರುತ್ತದೆ.

ಕಾಂಗ್ರೆಸ್ ಎರಡು ವರ್ಷಗಳಲ್ಲಿ 383.3 ಕೋಟಿ ಮತ್ತು 5 ಕೋಟಿ ಪಡೆದಿದೆ ಮತ್ತು ಒಟ್ಟು ಇಲ್ಲಿಯವರೆಗೆ 1,810 ಕೋಟಿ ರೂ.ಚುನಾವಣಾ ಬಾಂಡ್‌ ಕಾಂಗ್ರೆಸ್‌ ಪಡೆದುಕೊಂಡಿದೆ. ಎರಡು ವರ್ಷಗಳಲ್ಲಿ ಟಿಎಂಸಿ 97.3 ಕೋಟಿ ದೇಣಿಗೆಯನ್ನು ಮೊದಲು ಪಡೆದಿದ್ದು, ಪಕ್ಷ ಒಟ್ಟು 1706.8 ಕೋಟಿ ರೂಪಾಯಿಗಳನ್ನು ಗಳಿಸಿದೆ ಎಂದು ಎಸ್ ಬಿಐ ನೀಡಿರುವ ಅಂಕಿ ಅಂಶಗಳಿಂದ ತಿಳಿದು ಬರುತ್ತದೆ.

2018-19ರಲ್ಲಿ ಬಿಜೆಡಿ 213.5 ಕೋಟಿ ರೂಪಾಯಿ ದೇಣಿಗೆ ಪಡೆದಿದ್ದು, 2017-18ರಲ್ಲಿ ಯಾವುದೇ ದೇಣಿಗೆ ಸ್ವೀಕರಿಸಿಲ್ಲ. ಗುರುವಾರದ ಅಂಕಿ ಅಂಶ ಬಹಿರಂಗಗೊಂಡಾಗ ಬಿಜೆಡಿ ಸಂಗ್ರಹಿಸಿದ ಒಟ್ಟು ದೇಣಿಗೆ ಮೊತ್ತ 989 ಕೋಟಿ ಎನ್ನುವುದು ತಿಳಿದು ಬಂದಿದೆ. 2019ರ ಏಪ್ರಿಲ್ 1ರಿಂದ 2019ರ ಏಪ್ರಿಲ್ 11ರವರೆಗಿನ ಅಂಕಿ ಅಂಶಗಳು ಇದರಲ್ಲಿ ಸೇರಿಲ್ಲ. ಈ ಅವಧಿಯ ಕೇವಲ 11 ದಿನಗಳಲ್ಲಿ ಲೋಕಸಭಾ ಚುನಾವಣೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳು ನಿರತವಾಗಿದ್ದು ದೊಡ್ಡ ಪ್ರಮಾಣದ ನಗದು ಹರಿದಿರುವ ಸಾಧ್ಯತೆ ಇದೆ.

2017ರಲ್ಲಿ ಚುನಾವಣಾ ಬಾಂಡ್‌ ಪ್ರಾರಂಭವಾದ ದಿನಗಳಿಂದ ಈ ವರ್ಷದ ಆರಂಭದಲ್ಲಿ ಸುಪ್ರೀಂಕೋರ್ಟ್ ಚುನಾವಣಾ ಬಾಂಡ್‌ನಿಷೇಧಿಸುವವರೆಗೆ ಯಾವ ಪಕ್ಷ ಚುನಾವಣಾ ಬಾಂಡ್‌ಗಳ ಮೂಲಕ ಎಷ್ಟು ಹಣವನ್ನು ಪಡೆದಿದೆ ಎಂಬ ಸಂಪೂರ್ಣ ವಿವರಗಳು ಲಭ್ಯವಾಗಿಲ್ಲ. ಈ ಬಗ್ಗೆ ಎಸ್‌ಬಿಐ ಸಂಪೂರ್ಣ ಮಾಹಿತಿ ನೀಡಿದರೆ ಇದರ ಒಟ್ಟು ಮೊತ್ತ ಬಹಿರಂಗವಾಗಲಿದೆ.

ಸುಪ್ರೀಂಕೋರ್ಟ್‌ ಖಡಕ್ ನಿರ್ದೇಶನದ ಬಳಿಕ ಎಸ್‌ಬಿಐ ಕೇಂದ್ರ ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್‌ ಕುರಿತು ಮಾಹಿತಿಯನ್ನು ನೀಡಿತ್ತು. ಈ ಕುರಿತ ಮಾಹಿತಿ ನಿನ್ನೆ ಬಿಡುಗಡೆಯಾಗಿದ್ದು, ರಾಜಕೀಯ ಪಕ್ಷಗಳಿಗೆ ಚುನಾವಣಾ ಬಾಂಡ್‌ ಮೂಲಕ ಹರಿದು ಬಂದ ಮೊತ್ತದ ಮಾಹಿತಿ ಲಭ್ಯವಾಗಿದೆ. ಆದರೆ ಎಸ್‌ಬಿಐ  ಈ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ನೀಡಿಲ್ಲ ಎನ್ನುವುದು ಆ ಬಳಿಕ ಬಹಿರಂಗವಾಗಿದೆ.

ಆರ್‌ಟಿಐ ಮಾಹಿತಿ ಪ್ರಕಾರ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮಾರ್ಚ್ 2018ರಿಂದ 16,518 ಕೋಟಿ ಮೌಲ್ಯದ 28,030 ಚುನಾವಣಾ ಬಾಂಡ್‌ಗಳನ್ನು ಮಾರಾಟ ಮಾಡಿದೆ, ಆದರೆ ಗುರುವಾರ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಖರೀದಿದಾರರ ಪಟ್ಟಿಯಲ್ಲಿ ಕೇವಲ 18,871 ಬಾಂಡ್‌ಗಳ ಮಾರಾಟ ಮಾಡಿರುವ ಬಗ್ಗೆ ಮಾತ್ರ ಮಾಹಿತಿ ಇದ್ದು, ಅದರ ಮೌಲ್ಯ 12,516 ಕೋಟಿ ರೂ.ಆಗಿದೆ. ಇನ್ನುಳಿದವುಗಳ ಬಗ್ಗೆ ಮಾಹಿತಿ ನೀಡಿಲ್ಲ ಎಂದು ತಿಳಿದು ಬಂದಿದೆ.

ಇದನ್ನು ಓದಿ: 4,002 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್ ಮಾಹಿತಿ ಇನ್ನೂ ಬಹಿರಂಗಗೊಂಡಿಲ್ಲ: ಯಾಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...