Homeಮುಖಪುಟಚುನಾವಣಾ ಬಾಂಡ್‌: ಒಟ್ಟು ನಿಧಿಯ 50% ಸ್ವೀಕರಿಸಿದ್ದು ಬಿಜೆಪಿ: ಅಂಕಿಅಂಶ ಬಯಲು ಮಾಡಿದ ADR

ಚುನಾವಣಾ ಬಾಂಡ್‌: ಒಟ್ಟು ನಿಧಿಯ 50% ಸ್ವೀಕರಿಸಿದ್ದು ಬಿಜೆಪಿ: ಅಂಕಿಅಂಶ ಬಯಲು ಮಾಡಿದ ADR

- Advertisement -
- Advertisement -

2017-18ರಲ್ಲಿ ಚುನಾವಣಾ ಬಾಂಡ್‌ಗಳನ್ನು ಪರಿಚಯಿಸಿದಾಗಿನಿಂದ, ಬಿಜೆಪಿಯು ಚುನಾವಣಾ ಬಾಂಡ್‌ಗಳ ಮೂಲಕ ಒಟ್ಟು ನಿಧಿಯ ಸುಮಾರು 50% ಸ್ವೀಕರಿಸಿದ್ದು, ಅದು ಬರೊಬ್ಬರಿ 7,700ಕೋಟಿ ರೂ. ಆಗಿದೆ ಎಂದು ಎಡಿಆರ್‌ ವರದಿಯು ಬಹಿರಂಗಪಡಿಸಿದೆ.

ಅಸೋಸಿಯೇಷನ್ ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್‌(ಎಡಿಆರ್‌) ಮಾಹಿತಿ ಪ್ರಕಾರ, 2017-18 ಮತ್ತು 2018-19ರ ಎರಡು ವರ್ಷಗಳಲ್ಲಿ ಬಿಜೆಪಿ ಕ್ರಮವಾಗಿ 1,450.9 ಕೋಟಿ ಮತ್ತು 210 ಕೋಟಿ ರೂಪಾಯಿಗಳನ್ನು ದೇಣಿಗೆ ಪಡೆದಿದೆ ಮತ್ತು ಏಪ್ರಿಲ್ 12, 2019 ರಿಂದ ಜನವರಿ 24, 2024 ರಲ್ಲಿ 6,060.5 ಕೋಟಿ ರೂ.ಮೌಲ್ಯದ  ಬಾಂಡ್‌ ಪಡೆದಿದೆ. ಇದರ ಒಟ್ಟು ಮೌಲ್ಯ 7,721.4 ಕೋಟಿ ರೂ.ಆಗಿದ್ದು, ಇದು ಇಲ್ಲಿಯವರೆಗಿನ ಒಟ್ಟು ಮೊತ್ತ ಅಂದರೆ 15,529 ಕೋಟಿ ಸುಮಾರು 50%ರಷ್ಟಾಗಿರುತ್ತದೆ.

ಕಾಂಗ್ರೆಸ್ ಎರಡು ವರ್ಷಗಳಲ್ಲಿ 383.3 ಕೋಟಿ ಮತ್ತು 5 ಕೋಟಿ ಪಡೆದಿದೆ ಮತ್ತು ಒಟ್ಟು ಇಲ್ಲಿಯವರೆಗೆ 1,810 ಕೋಟಿ ರೂ.ಚುನಾವಣಾ ಬಾಂಡ್‌ ಕಾಂಗ್ರೆಸ್‌ ಪಡೆದುಕೊಂಡಿದೆ. ಎರಡು ವರ್ಷಗಳಲ್ಲಿ ಟಿಎಂಸಿ 97.3 ಕೋಟಿ ದೇಣಿಗೆಯನ್ನು ಮೊದಲು ಪಡೆದಿದ್ದು, ಪಕ್ಷ ಒಟ್ಟು 1706.8 ಕೋಟಿ ರೂಪಾಯಿಗಳನ್ನು ಗಳಿಸಿದೆ ಎಂದು ಎಸ್ ಬಿಐ ನೀಡಿರುವ ಅಂಕಿ ಅಂಶಗಳಿಂದ ತಿಳಿದು ಬರುತ್ತದೆ.

2018-19ರಲ್ಲಿ ಬಿಜೆಡಿ 213.5 ಕೋಟಿ ರೂಪಾಯಿ ದೇಣಿಗೆ ಪಡೆದಿದ್ದು, 2017-18ರಲ್ಲಿ ಯಾವುದೇ ದೇಣಿಗೆ ಸ್ವೀಕರಿಸಿಲ್ಲ. ಗುರುವಾರದ ಅಂಕಿ ಅಂಶ ಬಹಿರಂಗಗೊಂಡಾಗ ಬಿಜೆಡಿ ಸಂಗ್ರಹಿಸಿದ ಒಟ್ಟು ದೇಣಿಗೆ ಮೊತ್ತ 989 ಕೋಟಿ ಎನ್ನುವುದು ತಿಳಿದು ಬಂದಿದೆ. 2019ರ ಏಪ್ರಿಲ್ 1ರಿಂದ 2019ರ ಏಪ್ರಿಲ್ 11ರವರೆಗಿನ ಅಂಕಿ ಅಂಶಗಳು ಇದರಲ್ಲಿ ಸೇರಿಲ್ಲ. ಈ ಅವಧಿಯ ಕೇವಲ 11 ದಿನಗಳಲ್ಲಿ ಲೋಕಸಭಾ ಚುನಾವಣೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳು ನಿರತವಾಗಿದ್ದು ದೊಡ್ಡ ಪ್ರಮಾಣದ ನಗದು ಹರಿದಿರುವ ಸಾಧ್ಯತೆ ಇದೆ.

2017ರಲ್ಲಿ ಚುನಾವಣಾ ಬಾಂಡ್‌ ಪ್ರಾರಂಭವಾದ ದಿನಗಳಿಂದ ಈ ವರ್ಷದ ಆರಂಭದಲ್ಲಿ ಸುಪ್ರೀಂಕೋರ್ಟ್ ಚುನಾವಣಾ ಬಾಂಡ್‌ನಿಷೇಧಿಸುವವರೆಗೆ ಯಾವ ಪಕ್ಷ ಚುನಾವಣಾ ಬಾಂಡ್‌ಗಳ ಮೂಲಕ ಎಷ್ಟು ಹಣವನ್ನು ಪಡೆದಿದೆ ಎಂಬ ಸಂಪೂರ್ಣ ವಿವರಗಳು ಲಭ್ಯವಾಗಿಲ್ಲ. ಈ ಬಗ್ಗೆ ಎಸ್‌ಬಿಐ ಸಂಪೂರ್ಣ ಮಾಹಿತಿ ನೀಡಿದರೆ ಇದರ ಒಟ್ಟು ಮೊತ್ತ ಬಹಿರಂಗವಾಗಲಿದೆ.

ಸುಪ್ರೀಂಕೋರ್ಟ್‌ ಖಡಕ್ ನಿರ್ದೇಶನದ ಬಳಿಕ ಎಸ್‌ಬಿಐ ಕೇಂದ್ರ ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್‌ ಕುರಿತು ಮಾಹಿತಿಯನ್ನು ನೀಡಿತ್ತು. ಈ ಕುರಿತ ಮಾಹಿತಿ ನಿನ್ನೆ ಬಿಡುಗಡೆಯಾಗಿದ್ದು, ರಾಜಕೀಯ ಪಕ್ಷಗಳಿಗೆ ಚುನಾವಣಾ ಬಾಂಡ್‌ ಮೂಲಕ ಹರಿದು ಬಂದ ಮೊತ್ತದ ಮಾಹಿತಿ ಲಭ್ಯವಾಗಿದೆ. ಆದರೆ ಎಸ್‌ಬಿಐ  ಈ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ನೀಡಿಲ್ಲ ಎನ್ನುವುದು ಆ ಬಳಿಕ ಬಹಿರಂಗವಾಗಿದೆ.

ಆರ್‌ಟಿಐ ಮಾಹಿತಿ ಪ್ರಕಾರ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮಾರ್ಚ್ 2018ರಿಂದ 16,518 ಕೋಟಿ ಮೌಲ್ಯದ 28,030 ಚುನಾವಣಾ ಬಾಂಡ್‌ಗಳನ್ನು ಮಾರಾಟ ಮಾಡಿದೆ, ಆದರೆ ಗುರುವಾರ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಖರೀದಿದಾರರ ಪಟ್ಟಿಯಲ್ಲಿ ಕೇವಲ 18,871 ಬಾಂಡ್‌ಗಳ ಮಾರಾಟ ಮಾಡಿರುವ ಬಗ್ಗೆ ಮಾತ್ರ ಮಾಹಿತಿ ಇದ್ದು, ಅದರ ಮೌಲ್ಯ 12,516 ಕೋಟಿ ರೂ.ಆಗಿದೆ. ಇನ್ನುಳಿದವುಗಳ ಬಗ್ಗೆ ಮಾಹಿತಿ ನೀಡಿಲ್ಲ ಎಂದು ತಿಳಿದು ಬಂದಿದೆ.

ಇದನ್ನು ಓದಿ: 4,002 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್ ಮಾಹಿತಿ ಇನ್ನೂ ಬಹಿರಂಗಗೊಂಡಿಲ್ಲ: ಯಾಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...