Homeಕರ್ನಾಟಕಬಿಜೆಪಿ ಸರ್ಕಾರ ಕೋರ್ಟ್‌ಗೆ ಸಲ್ಲಿಸಿದ್ದ ಪಂಚಮಸಾಲಿ 2ಎ ಮೀಸಲಾತಿಯ ಅಫಿಡೆವಿಟ್ ಸದನದ ಮುಂದೆ ಮಂಡಿಸುವೆ -...

ಬಿಜೆಪಿ ಸರ್ಕಾರ ಕೋರ್ಟ್‌ಗೆ ಸಲ್ಲಿಸಿದ್ದ ಪಂಚಮಸಾಲಿ 2ಎ ಮೀಸಲಾತಿಯ ಅಫಿಡೆವಿಟ್ ಸದನದ ಮುಂದೆ ಮಂಡಿಸುವೆ – ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಹಿಂದಿನ ಸರ್ಕಾರ ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿದ ಪಂಚಮಸಾಲಿ 2ಎ ಮೀಸಲಾತಿಯ ಅಫಿಡೆವಿಟ್ ಹಾಗೂ ನ್ಯಾಯಾಲಯದ ಆದೇಶವನ್ನು ಸದನ ಮುಂದೆ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ಸೋಮವಾರ ಆರಂಭವಾದ ಚಳಿಗಾಲದ ಅಧಿವೇಶನದಲ್ಲಿ, ಪತ್ರಿಪಕ್ಷಗಳ ಪ್ರಶ್ನೆಗಳಿಗೆ ಅವರು ಉತ್ತರಿಸಿದ್ದಾರೆ. ಬಿಜೆಪಿ ಸರ್ಕಾರ

“ಪಂಚಮಸಾಲಿಗಳನ್ನು 2ಎ ಸೇರಿಸಲು ಬಹಳ ದಿನಗಳಿಂದ ಹೋರಾಟ ನಡೆಸಲಾಗುತ್ತಿದೆ. ನಾನು ಮುಖ್ಯಮಂತ್ರಿಯಾದ ಮೇಲೆ ಜಯಮೃತ್ಯುಂಜಯ ಸ್ವಾಮೀಜಿ ಸೇರಿದಂತೆ ಪಂಚಮಸಾಲಿ ಮುಖಂಡರೊಂದಿಗೆ ಎರಡು ಬಾರಿ ಸಭೆ ನಡೆಸಿದ್ದೇನೆ. ಪಂಚಮಸಾಲಿಗಳು ಮೀಸಲಾತಿ ಕೇಳಲು ನಾನು ಅಡ್ಡಿಯಾಗಿಲ್ಲ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ರಾಜ್ಯದಲ್ಲಿ ಹಿಂದುಳಿದ ವರ್ಗಗಳನ್ನು ಪ್ರವರ್ಗ-1, ಪ್ರವರ್ಗ-2ಎ, ಪ್ರವರ್ಗ-3ಎ ಹಾಗೂ ಪ್ರವರ್ಗ-3ಬಿ ಎಂದು ವಿಂಗಡಸಲಾಗಿದೆ. ವೀರಶೈವ ಲಿಂಗಾಯಿತ ಹಾಗೂ ಪಂಚಮಸಾಲಿ ಜಾತಿಗಳು 3ಬಿ ಅಡಿ ಮೀಸಲಾತಿ ಪಡೆಯುತ್ತಿವೆ. ಪಂಚಮಸಾಲಿಗಳನ್ನು 2ಎ ಸೇರಿಸಲು ರಾಜ್ಯದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವರದಿ ಪಡೆಯುವುದು ಅವಶ್ಯಕವಾಗಿದೆ. ಈ ಹಿನ್ನಲೆಯಲ್ಲಿ ಆಯೋಗದ ಮುಂದೆ ಮೀಸಲಾತಿ ವಿಚಾರವನ್ನು ಮಂಡಿಸುವಂತೆ ಪಂಚಮಸಾಲಿ ಹೋರಟಗಾರರಿಗೆ ತಿಳಿಸಿದ್ದೇನೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಬಿಜೆಪಿ ಸರ್ಕಾರ

“ಬಸವರಾಜ ಬೊಮ್ಮಾಯಿ ಅವರ ಹಿಂದಿನ ಸರ್ಕಾರ ಪಂಚಮಸಾಲಿಗಳನ್ನು 2ಎ ಸೇರಿಸಿಲ್ಲ ಬದಲಾಗಿ, ಅಲ್ಪಸಂಖ್ಯಾತ ಮುಸ್ಲಿಂರಿಗೆ ನೀಡಿದ್ದ ಶೇ.4 ರಷ್ಟು ಮೀಸಲಾತಿಯನ್ನು ರದ್ದುಪಡಿಸಿ, 3ಎ ಹಾಗೂ 3ಬಿ ಗೆ ತಲಾ ಶೇ.2 ರಂತೆ ಮೀಸಲಾತಿ ಹಂಚಿಕೆ ಮಾಡಿತ್ತು. ಇದನ್ನು ಆಕ್ಷೇಪಿಸಿ ಮುಸ್ಲಿಮರು ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು” ಎಂದು ಸಿಎಂ ಹೇಳಿದ್ದಾರೆ.

“ಈ ಪ್ರಕರಣದ ವಿಚಾರಣೆ ವೇಳೆ ಹಿಂದಿನ ಬಿಜೆಪಿ ಸರ್ಕಾರ ಮುಸ್ಲಿಮರ ಮೀಸಲಾತಿ ರದ್ದು ಪಡಿಸುವುದಿಲ್ಲ. ಯತಾಸ್ಥಿತಿಯನ್ನು ಮುಂದುವರಿಸಿಕೊಂಡು ಹೋಗುವುದಾಗಿ ಅಫಿಡೆವಿಡ್ ಸಲ್ಲಿಸಿದೆ. ಇದರ ಆಧಾರದ ಮೇಲೆ ಸರ್ವೋಚ್ಚ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಆದೇಶವನ್ನು ಬದಲಾಯಿಸಲು ಯಾರಿಂದಲೂ ಸಾದ್ಯವಿಲ್ಲ. ಇದರ ಪ್ರತಿಯನ್ನು ನಾಳೆಯೇ ಸದನ ಮುಂದೆ ಮಂಡಿಸುವೆ” ಎಂದು ಸ್ಪಷ್ಟಪಡಿಸಿದ್ದಾರೆ.

ಶಾಸಕ ಅರವಿಂದ ಬೆಲ್ಲದ್ ಮಂಗಳವಾರ ಪಂಚಮಸಾಲಿ 2ಎ ಮೀಸಲಾತಿ ಹೋರಾಟ ನಡೆಯಲಿದೆ. ಆದ್ದರಿಂದ ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಬುಧವಾರ ಸದನದ ಮುಂದೆ ಮಂಡಿಸುವಂತೆ ಮುಖ್ಯಮಂತ್ರಿಗಳಲ್ಲಿ ಸಭಾಧ್ಯಕ್ಷರ ಮೂಲಕ ಕೋರಿದ್ದಾರೆ.

ಇದನ್ನೂ ಓದಿ: ಜಾರ್ಜ್ ಸೊರೊಸ್ ಫೌಂಡೇಶನ್ ಹಣಕಾಸು ಸಂಸ್ಥೆಯೊಂದಿಗೆ ಸೋನಿಯಾ ಗಾಂಧಿ ಸಂಪರ್ಕ ಹೊಂದಿದ್ದಾರೆ: ಬಿಜೆಪಿ ಆರೋಪ

 

ಜಾರ್ಜ್ ಸೊರೊಸ್ ಫೌಂಡೇಶನ್ ಹಣಕಾಸು ಸಂಸ್ಥೆಯೊಂದಿಗೆ ಸೋನಿಯಾ ಗಾಂಧಿ ಸಂಪರ್ಕ ಹೊಂದಿದ್ದಾರೆ: ಬಿಜೆಪಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ: ಬುಡಕಟ್ಟು ವಿಶ್ವವಿದ್ಯಾಲಯ ಹಾಸ್ಟೆಲ್ ಒಳಗೆ ಅಸ್ಸಾಮಿ ವಿದ್ಯಾರ್ಥಿ ಮೇಲೆ ಗುಂಪು ಹಲ್ಲೆ

ಮಧ್ಯಪ್ರದೇಶದ ಇಂದಿರಾ ಗಾಂಧಿ ರಾಷ್ಟ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಹಾಸ್ಟೆಲ್ ಕೋಣೆಯೊಳಗೆ ಐದು ಜನ ವಿದ್ಯಾರ್ಥಿಗಳ ತಂಡವು ಅಸ್ಸಾಮಿ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ. ಗುಂಪು ಆತನಿಗೆ ಇಲ್ಲಿಯೇ ಸಾಯಬೇಕು ಎಂದು...

ಮಹಿಳೆಯರ ಜೊತೆ ಪುರುಷರಿಗೂ ಉಚಿತ ಬಸ್‌ ಪ್ರಯಾಣ, ಗ್ರಾಮೀಣರಿಗೆ 150 ಕೂಲಿ ದಿನ : ಮೊದಲ ಹಂತದ ಪ್ರಣಾಳಿಕೆ ಬಿಡುಗಡೆ ಮಾಡಿದ ಎಐಎಡಿಎಂಕೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಶನಿವಾರ (ಜ.17) ಪಕ್ಷದ ಮೊದಲ ಹಂತದ ಪ್ರಣಾಳಿಕೆ (ಚುನಾವಣಾ ಭರವಸೆ) ಬಿಡುಗಡೆ ಮಾಡಿದ್ದಾರೆ. ಕರ್ನಾಟಕದ ಗೃಹಲಕ್ಷ್ಮಿ ಯೋಜನೆಯಂತೆ ಎಲ್ಲಾ ಪಡಿತರ...

ಛತ್ತೀಸ್‌ಗಢ| ಬಿಜಾಪುರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರು ಸಾವು

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳೊಂದಿಗಿನ ಎನ್‌ಕೌಂಟರ್‌ನಲ್ಲಿ ಕನಿಷ್ಠ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲೆಯ ವಾಯುವ್ಯ ಪ್ರದೇಶದ ಅರಣ್ಯ ಬೆಟ್ಟಗಳಲ್ಲಿ ಶನಿವಾರ ಬೆಳಿಗ್ಗೆ ಗುಂಡಿನ ಚಕಮಕಿ ನಡೆಯಿತು. ಹಿರಿಯ...

ಮಮತಾ ಬ್ಯಾನರ್ಜಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಸುವೇಂದು ಅಧಿಕಾರಿ

ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಶುಕ್ರವಾರ (ಜ.16) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ 100 ಕೋಟಿ ರೂ.ಗಳ ಪರಿಹಾರ ಕೋರಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಮಮತಾ...

ಕೋಮುವಾದ ಕಾರಣಕ್ಕೆ ಬಾಲಿವುಡ್‌ನಲ್ಲಿ ಅವಕಾಶ ಕಡಿಮೆ; ರೆಹಮಾನ್ ಹೇಳಿಕೆ ತಳ್ಳಿಹಾಕಿದ ಜಾವೇದ್ ಅಖ್ತರ್

ಯಶಸ್ವೀ ಸಂಗೀತಗಾರನಾಗಿ ಹಲವು ಕೊಡುಗೆ ನೀಡಿದ್ದರೂ ಕೆಲವರಿಗೆ ಹೊರಗಿನವನು ಎಂಬ ಭಾವನೆ ಹೋಗಿಲ್ಲ. ಕಳೆದ ಎಂಟು ವರ್ಷಗಳಲ್ಲಿ ಬಾಲಿವುಡ್‌ನ ಕದ ಮುಚ್ಚಿದೆ ಎಂಬ ಬಗ್ಗೆ ಎ.ಆರ್. ರೆಹಮಾನ್ ಹೇಳಿಕೆಯನ್ನು ಹಿರಿಯ ಗೀತೆ ರಚನೆಕಾರ...

14 ವರ್ಷದ ದಲಿತ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ : 16 ವರ್ಷದ ಬಾಲಕನನ್ನು ವಶಕ್ಕೆ ಪಡೆದ ಪೊಲೀಸರು

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ 14 ವರ್ಷದ ದಲಿತ ಬಾಲಕಿಯ ಭೀಕರ ಅತ್ಯಾಚಾರ, ಕೊಲೆ ನಡೆದಿದ್ದು, ಈ ಸಂಬಂಧ 16 ವರ್ಷದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುರುವಾರ (ಜ.15) ಬೆಳಿಗ್ಗೆ ಶಾಲೆಗೆ ಹೋದ...

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮುಸ್ಲಿಮರನ್ನು ಎರಡನೇ ದರ್ಜೆಯ ನಾಗರಿಕರಂತೆ ನಡೆಸಿಕೊಳ್ಳುತ್ತದೆ: ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬಿಜೆಪಿ ಆಡಳಿತದ ಕೇಂದ್ರ ಸರ್ಕಾರದ ವಿರುದ್ಧ ತಮ್ಮ ವಾಗ್ದಾಳಿ ನಡೆಸಿದ್ದಾರೆ. ಪೌರತ್ವ ಕಾಯ್ದೆ ಮತ್ತು ಹೊಸ ವಕ್ಫ್ ಕಾಯ್ದೆಯಂತಹ ಅದರ ವಿವಿಧ ಕಾನೂನುಗಳು ಮತ್ತು ನೀತಿಗಳು...

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: 114 ಸ್ಥಾನಗಳೊಂದಿಗೆ ಪ್ರಮುಖ ಪಕ್ಷವಾಗಿ ಹೊರಹೊಮ್ಮಿದ ಎಐಎಂಐಎಂ

ಮಹಾರಾಷ್ಟ್ರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅಖಿಲ ಭಾರತ ಮಜ್ಲಿಸ್ ಇ ಇತ್ತೆಹಾದುಲ್ ಮುಸ್ಲಿಮೀನ್ ಪಕ್ಷವು (ಎಐಎಂಐಎಂ) 114 ಸ್ಥಾನಗಳನ್ನು ಗೆದ್ದು, 2017 ರ ಸ್ಥಳೀಯ ಸಂಸ್ಥೆ ಚುನಾವಣೆಗಳಿಗಿಂತ ತನ್ನ ಸಂಖ್ಯೆಯನ್ನು ತೀವ್ರವಾಗಿ ಹೆಚ್ಚಿಸಿಕೊಂಡಿದೆ....

ವಲಸೆ ಕಾರ್ಮಿಕರ ಶೆಡ್‌ಗಳಿಗೆ ತೆರಳಿ ಅನೈತಿಕ ಪೊಲೀಸ್‌ಗಿರಿ : ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಬಂಧನ

ವಲಸೆ ಕಾರ್ಮಿಕರ ಶೆಡ್‌ಗಳಿಗೆ ತೆರಳಿ ಅವರ ಗೌಪ್ಯ ದಾಖಲೆಗಳನ್ನು ಪಡೆದು ಪೌರತ್ವ ಪರಿಶೀಲಿಸುವ ಮೂಲಕ ಅನೈತಿಕ ಪೊಲೀಸ್‌ಗಿರಿ ಮಾಡುತ್ತಿದ್ದ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿಯನ್ನು ಬನ್ನೇರುಘಟ್ಟ ಪೊಲೀಸರು ಶುಕ್ರವಾರ (ಜ.16) ತಡರಾತ್ರಿ ಬಂಧಿಸಿದ್ದಾರೆ...

ಬಳ್ಳಾರಿ| ಬಂಡಿಹಟ್ಟಿ-ದಾನಪ್ಪ ಬೀದಿ ಬಡರೈತರ ಮೇಲೆ ದೌರ್ಜನ್ಯ; ಪ್ರತಾಪರೆಡ್ಡಿ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಬಳ್ಳಾರಿ ಜಿಲ್ಲೆಯ ಬಂಡಿಹಟ್ಟಿ-ದಾನಪ್ಪ ಬೀದಿಯ ಬಡರೈತರ ಮೇಲೆ ದೌರ್ಜನ್ಯ ಎಸಗುತ್ತಿರುವ ಎನ್‌.ಪ್ರತಾಪ ರೆಡ್ಡಿ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು 'ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ' ಮುಖಂಡರು ಆಗ್ರಹಿಸಿದರು....