Homeಮುಖಪುಟಪ್ರತಿಭಟನಾ ನಿರತ ರೈತರಿಗೆ ನೆರಳು ನೀಡುತ್ತಿದ್ದ ಮರಗಳ ಕೊಂಬೆ ಕತ್ತರಿಸಿದ ಬಿಜೆಪಿ ಸರ್ಕಾರ!

ಪ್ರತಿಭಟನಾ ನಿರತ ರೈತರಿಗೆ ನೆರಳು ನೀಡುತ್ತಿದ್ದ ಮರಗಳ ಕೊಂಬೆ ಕತ್ತರಿಸಿದ ಬಿಜೆಪಿ ಸರ್ಕಾರ!

‘ಚಕ್ರವರ್ತಿ ಬೆತ್ತಲಾಗಿದ್ದಾನೆ’ ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

ಹೊಸ ಕೃಷಿ ಕಾಯ್ದೆಯನ್ನು ವಿರೋಧಿಸಿ ಒಕ್ಕೂಟ ಸರ್ಕಾರದ ವಿರುದ್ದ ರೈತರು ನಡೆಸುತ್ತಿರುವ ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ಕರ್ನಲ್‌ನಲ್ಲಿ ಇತ್ತೀಚೆಗೆ ರೈತರ ಮೇಲೆ ಹಲ್ಲೆ ನಡೆಸಿದ್ದ ಹರಿಯಾಣದ ಮನೋಹರ್‌‌ಲಾಲ್‌ ಕಟ್ಟರ್‌ ಸರ್ಕಾರದ ವಿರುದ್ದವು ರೈತರು ಹೋರಾಟಕ್ಕೆ ವೇದಿಕೆ ಸಿದ್ದಗೊಳಿಸಿದ್ದಾರೆ. ಕಳೆದ ಕೆಲವು ದಿನದಿಂದ ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ಹೋರಾಟದ ಮಾದರಿಯಲ್ಲಿ ರಾಜ್ಯದ ಕರ್ನಲ್‌ ಜಿಲ್ಲಾ ಕೇಂದ್ರವನ್ನು ರೈತರು ಶಾಶ್ವತ ರೈತ ಹೋರಾಟದ ಸ್ಥಳವನ್ನಾಗಿ ಮಾಡಿದ್ದಾರೆ.

ರೈತರು ಕರ್ನಲ್‌ನ ಮಿನಿ ಸೆಕ್ರೆಟರಿಯೇಟ್‌ನ ಹೊರಗೆ ಹೋರಾಟ ಮಾಡುತ್ತಿದ್ದಾರೆ. ಈ ವೇಳೆ ಬಿಸಿಲಿನಿಂದ ರಕ್ಷಿಸಿಕೊಳ್ಳಲು ಸೆಕ್ರಟರಿಯೇಟ್‌ನ ಹೊರಗೆ ಇರುವ ಮರಗಳನ್ನು ರೈತರು ನೆರಳಿಗಾಗಿ ಆಶ್ರಯಿಸಿದ್ದರು. ಆದರೆ ಗುರುವಾರ ರಾತ್ರಿ ಈ ಮರಗಳ ಕೊಂಬೆಗಳನ್ನು ಸರ್ಕಾರ ಕತ್ತರಿಸಿದೆ ಎಂದು ವರದಿಯಾಗಿದೆ. ಈ ಮೂಲಕ, ಸಾಧ್ಯವಿರುವ ಎಲ್ಲಾ ದಾರಿಯ ಮುಖಾಂತರ ರೈತರನ್ನು ಮಣಿಸಲು ಸರ್ಕಾರ ಹೊರಟಿದೆ ಎಂದು ಸಾಬೀತುಪಡಿಸಿದೆ.

ಇದನ್ನೂ ಓದಿ: ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ – ಫೇಕ್‌, ಸುಳ್ಳು ಮತ್ತು ತಿರುಚುವಿಕೆಯೇ `ಜೀವಾಳ’

ಹೋರಾಟಗಾರರು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದು, ‘ಚಕ್ರವರ್ತಿ ಬೆತ್ತಲಾಗಿದ್ದಾನೆ’ ಎಂದು ಕಿಡಿ ಕಾರಿದ್ದಾರೆ.

“ರೈತರು ಮತ್ತು ಪೊಲೀಸರು ಕರ್ನಾಲ್‌ನ ಮಿನಿ ಸೆಕ್ರೆಟರಿಯೇಟ್‌ ಹೊರಗೆ ಬಿಸಿಲಿನಿಂದ ತಪ್ಪಿಸಿಕೊಳ್ಳಲು ಮರಗಳ ಕೆಳಗೆ ಕುಳಿತುಕೊಳ್ಳುತ್ತಿದ್ದರು. ರೈತರಿಗೆ ಕಷ್ಟಕರವಾಗಲು ಹರಿಯಾಣ ಆಡಳಿತವು ಮರದ ಕೊಂಬೆಗಳನ್ನು ಕತ್ತರಿಸಿದೆ. ನಿನ್ನೆ ರಾತ್ರಿ ಆ ಮರಗಳ ಕೊಂಬೆಗಳನ್ನು ಕತ್ತರಿಸಲಾಗಿದೆ ಎಂದು ವರದಿಯಾಗಿದೆ. ಚಕ್ರವರ್ತಿ ಬೆತ್ತಲಾಗಿದ್ದಾನೆ” ಎಂದು ರೈತ ಹೋರಾಟಗಳನ್ನು ನಿರಂತರವಾಗಿ ವರದಿ ಮಾಡುತ್ತಿರುವ ಹೋರಾಟಗಾರ ಸಂದೀಪ್‌ ಸಿಂಗ್ ಹೇಳಿದ್ದಾರೆ. ಈ ಬಗ್ಗೆ ಅವರು ಅಲ್ಲಿನ ವಿಡಿಯೋಗಳನ್ನು ತಮ್ಮ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: ರಾಜಸ್ಥಾನದಲ್ಲಿ ಬಿಜೆಪಿ V/s ಬಿಜೆಪಿ: ವಿಪಕ್ಷ ನಾಯಕನ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸಿದ ಬಿಜೆಪಿಯ ಹಿರಿಯ ನಾಯಕ

ಸಂದೀಪ್‌ ಸಿಂಗ್ ಅವರ ವಿಡಿಯೊವನ್ನು ಶೇರ್‌ ಮಾಡಿರುವ ಪತ್ರಕರ್ತೆ ಸ್ವಾತಿ ಚತುರ್ವೇದಿ ಅವರು, “ಪ್ರತಿಭಟನಾ ನಿರತ ರೈತರ ಮೇಲೆ ದಾಳಿ ಮಾಡಲು ಮರದ ಕೊಂಬೆಗಳನ್ನು ಕತ್ತರಿಸಿದ ಖಟ್ಟರ್ ಆಡಳಿತಕ್ಕೆ ನಾಚಿಕೆಯಾಗಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಖ್ಯಾತ ವಕೀಲ, ಮಾನವ ಹಕ್ಕುಗಳ ಹೋರಾಟಗಾರ ಪ್ರಶಾಂತ್ ಭೂಷಣ್‌ ಅವರು, “ರೈತರು ನೆರಳಿನಲ್ಲಿ ಕುಳಿತುಕೊಳ್ಳಬಾರದು ಎಂದು ಖಟ್ಟರ್ ಸರ್ಕಾರವು ಮರಗಳ ಕೊಂಬೆಗಳನ್ನು ಕತ್ತರಿಸಿತು. ತಮ್ಮ ಮೇಲೆ ಕ್ರೂರ ಲಾಠಿ ಚಾರ್ಜ್ ಮಾಡಿರುವುದನ್ನು ವಿರೋಧಿಸಿ ರೈತರು ಆ ಮರಗಳ ಅಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಬಿಜೆಪಿಯ ಭ್ರಷ್ಟತನ, ಕ್ರೌರ್ಯ ಮತ್ತು ಅಮಾನವೀಯ ನಡೆಯನ್ನು ಎಂದಿಗೂ ಕನಿಷ್ಠವಾಗಿ ಅಂದಾಜಿಸಬೇಡಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ತ್ರಿಪುರ: ಹಲವು ಪತ್ರಿಕಾ ಕಚೇರಿಗಳ ಮೇಲೆ ಬಿಜೆಪಿ ಕಾರ್ಯಕರ್ತರ ದಾಳಿ- ಸಿಪಿಎಂ ಕಚೇರಿಗೆ ಬೆಂಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದತ್ತಾಂಶ ಸಂರಕ್ಷಣಾ ಕಾನೂನಿನಡಿಯಲ್ಲಿ ಆರ್‌ಟಿಐ ತಿದ್ದುಪಡಿಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾಯ್ದೆಯ ಮೂಲಕ ಪರಿಚಯಿಸಲಾದ ಮಾಹಿತಿ ಹಕ್ಕು ಕಾಯ್ದೆಗೆ ತಿದ್ದುಪಡಿಯನ್ನು ತಡೆಹಿಡಿಯಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ ಎಂದು 'ಬಾರ್ ಮತ್ತು ಬೆಂಚ್' ವರದಿ ಮಾಡಿದೆ. ಸಾರ್ವಜನಿಕ ಹಿತಾಸಕ್ತಿಯ ಆಧಾರದ...

ಅಜಿತ್ ಪವಾರ್ ಸಾವು : ಎರಡೂ ಫ್ಲೈಟ್ ರೆಕಾರ್ಡರ್‌ಗಳು ಹಾನಿಗೊಳಗಾಗಿವೆ ಎಂದ ವಿಮಾನಯಾನ ಸಚಿವಾಲಯ

ಬಾರಾಮತಿಯಲ್ಲಿ ಜನವರಿ 28 ರಂದು ಅಜಿತ್ ಪವಾರ್ ಅವರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಅಪಘಾತಕ್ಕೀಡಾದ ಬಗ್ಗೆ ನಾಗರಿಕ ವಿಮಾನಯಾನ ಸಚಿವಾಲಯವು ಮಂಗಳವಾರ (ಫೆ.17) ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ವಿಮಾನದ ಎರಡೂ ಸ್ವತಂತ್ರ ಫ್ಲೈಟ್...

ರಾಜಸ್ಥಾನ| ಮೊದಲ ಬಜೆಟ್‌ನಲ್ಲಿ ಪಕ್ಷವು ‘ಗಂಡು ಮಗುವಿಗೆ ಜನ್ಮ ನೀಡಿದೆ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ

ರಾಜಸ್ಥಾನದ ಬಿಜೆಪಿ ಶಾಸಕ ಬಹದ್ದೂರ್ ಸಿಂಗ್ ಕೋಲಿ, ತಮ್ಮ ಪಕ್ಷ ಮತ್ತು ಕಾಂಗ್ರೆಸ್ ಮಂಡಿಸಿದ ಬಜೆಟ್‌ಗಳನ್ನು ಗಂಡು ಮತ್ತು ಹೆಣ್ಣು ಮಗುವಿನ ಜನನಕ್ಕೆ ಹೋಲಿಸಿದ ಬಳಿಕ ವಿಧಾನಸಭೆಯಲ್ಲಿ ವಿವಾದ ಭುಗಿಲೆದ್ದಿತು. ರಾಜ್ಯ ಬಜೆಟ್ ಮೇಲಿನ...

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಖ್ ರೆಹಮಾನ್ ಪ್ರಮಾಣವಚನ ಸ್ವೀಕಾರ

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ನಾಯಕ ತಾರಿಖ್ ರೆಹಮಾನ್ ಅವರು ಮಂಗಳವಾರ (ಫೆ.17) ಪ್ರಮಾಣ ವಚನ ಸ್ವೀಕರಿಸಿದರು. ಪದಗ್ರಹಣ ಕಾರ್ಯಕ್ರಮವು ಸಂಪ್ರದಾಯದಂತೆ ಅಧ್ಯಕ್ಷೀಯ ಅರಮನೆಯಲ್ಲಿ ನಡೆಯುವ ಬದಲು, ಢಾಕಾದ ರಾಷ್ಟ್ರೀಯ...

ಮಹಾರಾಷ್ಟ್ರ| ಪರೀಕ್ಷೆಯ ಸಮಯದಲ್ಲಿ ಸಾಮೂಹಿಕ ನಕಲಿಗೆ ಬೆಂಬಲಿಸಿದ 5 ಜನ ಶಿಕ್ಷಕರ ಅಮಾನತು

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೇಂದ್ರವೊಂದರಲ್ಲಿ ನಡೆದ 12 ನೇ ತರಗತಿಯ ಹೆಚ್‌ಎಸ್‌ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಸಮಯದಲ್ಲಿ ದೊಡ್ಡ ಪ್ರಮಾಣದಲ್ಲಿ ನಕಲು ಮಾಡಲು ಅನುಕೂಲ ಮಾಡಿಕೊಟ್ಟ ಆರೋಪದ ಮೇಲೆ ಸಿಕ್ಕಿಬಿದ್ದ ಐದು ಶಿಕ್ಷಕರನ್ನು...

ಬಿಜೆಪಿ ವಿರುದ್ಧ 40% ಕಮಿಷನ್ ಜಾಹೀರಾತು : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

ಜಾಹೀರಾತಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್ ಮಂಗಳವಾರ (ಫೆ.17) ರದ್ದುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ & ಬೆಂಚ್ ವರದಿ ಮಾಡಿದೆ. ಪ್ರಕರಣ ರದ್ದುಕೋರಿ...

‘ನಾವು ಎಐ ಯುಗದಲ್ಲಿದ್ದೇವೆ..’; ಸೋನಮ್ ವಾಂಗ್‌ಚುಕ್ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಅಸಮಾಧಾನ

ಲಡಾಖ್ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ವಿರುದ್ಧ ಸಲ್ಲಿಸಿದ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರವನ್ನು ಪ್ರಶ್ನಿಸಿದೆ. ಕೃತಕ ಬುದ್ಧಿಮತ್ತೆ (ಎಐ) ಕಾಲದಲ್ಲಿ ಅನುವಾದ ನಿಖರವಾಗಿರಬೇಕು ಎಂದು ಹೇಳಿದೆ. ನ್ಯಾಯಮೂರ್ತಿಗಳಾದ...

ಬಜೆಟ್ ಅಧಿವೇಶನದಲ್ಲಿ ‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ದೌರ್ಜನ್ಯವನ್ನು ತಡೆಯುವ ಸಲುವಾಗಿ ತುರ್ತಾಗಿ 'ರೋಹಿತ್ ವೇಮುಲ ಕಾಯ್ದೆ'ಯನ್ನು ಜಾರಿಗೊಳಿಸಬೇಕು ಎಂದು 'ರೋಹಿತ್ ವೇಮುಲ ಕಾಯ್ದೆಗಾಗಿ ಜನಾಂದೋಲನ' ತಂಡ ರಾಜ್ಯ ಸರ್ಕಾರವನ್ನು ಆಗ್ರಹಿಸಿತು. ಮಂಗಳವಾರ (ಫೆ.17) ಬೆಂಗಳೂರಿನ ಪ್ರೆಸ್‌...

ಖಾಸಗಿ ಜಾಗದಲ್ಲಿ ನಮಾಝ್ ತಡೆದ ಅಧಿಕಾರಿಗಳು: ನ್ಯಾಯಾಂಗ ನಿಂದನೆ ನೋಟಿಸ್ ನೀಡಿದ ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮೊಹಮ್ಮದ್‌ಗಂಜ್ ಗ್ರಾಮದ ಖಾಲಿ ಮನೆಯೊಂದರಲ್ಲಿ ಮುಸ್ಲಿಂ ಸಮುದಾಯದವರು ನಮಾಝ್ ಮಾಡುವುದನ್ನು ತಡೆದ ಜಿಲ್ಲಾಧಿಕಾರಿ ಅವಿನಾಶ್ ಸಿಂಗ್ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ಅವರಿಗೆ ಅಲಹಾಬಾದ್...

ರೂ. 80 ಸಾವಿರ ಕೋಟಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ಎನ್‌ಜಿಟಿ ಹಸಿರು ನಿಶಾನೆ

ತೀವ್ರ ವಿರೋಧಗಳ ನಡುವೆಯೇ 80 ಸಾವಿರ ಕೋಟಿ ರೂಪಾಯಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ) ಸೋಮವಾರ (ಫೆ.16) ಹಸಿರು ನಿಶಾನೆ ತೋರಿದೆ. ಆರು ಸದಸ್ಯರ ಎನ್‌ಜಿಟಿಯ ವಿಶೇಷ...