Homeಮುಖಪುಟಪ್ರತಿಭಟನಾ ನಿರತ ರೈತರಿಗೆ ನೆರಳು ನೀಡುತ್ತಿದ್ದ ಮರಗಳ ಕೊಂಬೆ ಕತ್ತರಿಸಿದ ಬಿಜೆಪಿ ಸರ್ಕಾರ!

ಪ್ರತಿಭಟನಾ ನಿರತ ರೈತರಿಗೆ ನೆರಳು ನೀಡುತ್ತಿದ್ದ ಮರಗಳ ಕೊಂಬೆ ಕತ್ತರಿಸಿದ ಬಿಜೆಪಿ ಸರ್ಕಾರ!

‘ಚಕ್ರವರ್ತಿ ಬೆತ್ತಲಾಗಿದ್ದಾನೆ’ ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

ಹೊಸ ಕೃಷಿ ಕಾಯ್ದೆಯನ್ನು ವಿರೋಧಿಸಿ ಒಕ್ಕೂಟ ಸರ್ಕಾರದ ವಿರುದ್ದ ರೈತರು ನಡೆಸುತ್ತಿರುವ ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ಕರ್ನಲ್‌ನಲ್ಲಿ ಇತ್ತೀಚೆಗೆ ರೈತರ ಮೇಲೆ ಹಲ್ಲೆ ನಡೆಸಿದ್ದ ಹರಿಯಾಣದ ಮನೋಹರ್‌‌ಲಾಲ್‌ ಕಟ್ಟರ್‌ ಸರ್ಕಾರದ ವಿರುದ್ದವು ರೈತರು ಹೋರಾಟಕ್ಕೆ ವೇದಿಕೆ ಸಿದ್ದಗೊಳಿಸಿದ್ದಾರೆ. ಕಳೆದ ಕೆಲವು ದಿನದಿಂದ ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ಹೋರಾಟದ ಮಾದರಿಯಲ್ಲಿ ರಾಜ್ಯದ ಕರ್ನಲ್‌ ಜಿಲ್ಲಾ ಕೇಂದ್ರವನ್ನು ರೈತರು ಶಾಶ್ವತ ರೈತ ಹೋರಾಟದ ಸ್ಥಳವನ್ನಾಗಿ ಮಾಡಿದ್ದಾರೆ.

ರೈತರು ಕರ್ನಲ್‌ನ ಮಿನಿ ಸೆಕ್ರೆಟರಿಯೇಟ್‌ನ ಹೊರಗೆ ಹೋರಾಟ ಮಾಡುತ್ತಿದ್ದಾರೆ. ಈ ವೇಳೆ ಬಿಸಿಲಿನಿಂದ ರಕ್ಷಿಸಿಕೊಳ್ಳಲು ಸೆಕ್ರಟರಿಯೇಟ್‌ನ ಹೊರಗೆ ಇರುವ ಮರಗಳನ್ನು ರೈತರು ನೆರಳಿಗಾಗಿ ಆಶ್ರಯಿಸಿದ್ದರು. ಆದರೆ ಗುರುವಾರ ರಾತ್ರಿ ಈ ಮರಗಳ ಕೊಂಬೆಗಳನ್ನು ಸರ್ಕಾರ ಕತ್ತರಿಸಿದೆ ಎಂದು ವರದಿಯಾಗಿದೆ. ಈ ಮೂಲಕ, ಸಾಧ್ಯವಿರುವ ಎಲ್ಲಾ ದಾರಿಯ ಮುಖಾಂತರ ರೈತರನ್ನು ಮಣಿಸಲು ಸರ್ಕಾರ ಹೊರಟಿದೆ ಎಂದು ಸಾಬೀತುಪಡಿಸಿದೆ.

ಇದನ್ನೂ ಓದಿ: ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ – ಫೇಕ್‌, ಸುಳ್ಳು ಮತ್ತು ತಿರುಚುವಿಕೆಯೇ `ಜೀವಾಳ’

ಹೋರಾಟಗಾರರು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದು, ‘ಚಕ್ರವರ್ತಿ ಬೆತ್ತಲಾಗಿದ್ದಾನೆ’ ಎಂದು ಕಿಡಿ ಕಾರಿದ್ದಾರೆ.

“ರೈತರು ಮತ್ತು ಪೊಲೀಸರು ಕರ್ನಾಲ್‌ನ ಮಿನಿ ಸೆಕ್ರೆಟರಿಯೇಟ್‌ ಹೊರಗೆ ಬಿಸಿಲಿನಿಂದ ತಪ್ಪಿಸಿಕೊಳ್ಳಲು ಮರಗಳ ಕೆಳಗೆ ಕುಳಿತುಕೊಳ್ಳುತ್ತಿದ್ದರು. ರೈತರಿಗೆ ಕಷ್ಟಕರವಾಗಲು ಹರಿಯಾಣ ಆಡಳಿತವು ಮರದ ಕೊಂಬೆಗಳನ್ನು ಕತ್ತರಿಸಿದೆ. ನಿನ್ನೆ ರಾತ್ರಿ ಆ ಮರಗಳ ಕೊಂಬೆಗಳನ್ನು ಕತ್ತರಿಸಲಾಗಿದೆ ಎಂದು ವರದಿಯಾಗಿದೆ. ಚಕ್ರವರ್ತಿ ಬೆತ್ತಲಾಗಿದ್ದಾನೆ” ಎಂದು ರೈತ ಹೋರಾಟಗಳನ್ನು ನಿರಂತರವಾಗಿ ವರದಿ ಮಾಡುತ್ತಿರುವ ಹೋರಾಟಗಾರ ಸಂದೀಪ್‌ ಸಿಂಗ್ ಹೇಳಿದ್ದಾರೆ. ಈ ಬಗ್ಗೆ ಅವರು ಅಲ್ಲಿನ ವಿಡಿಯೋಗಳನ್ನು ತಮ್ಮ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: ರಾಜಸ್ಥಾನದಲ್ಲಿ ಬಿಜೆಪಿ V/s ಬಿಜೆಪಿ: ವಿಪಕ್ಷ ನಾಯಕನ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸಿದ ಬಿಜೆಪಿಯ ಹಿರಿಯ ನಾಯಕ

ಸಂದೀಪ್‌ ಸಿಂಗ್ ಅವರ ವಿಡಿಯೊವನ್ನು ಶೇರ್‌ ಮಾಡಿರುವ ಪತ್ರಕರ್ತೆ ಸ್ವಾತಿ ಚತುರ್ವೇದಿ ಅವರು, “ಪ್ರತಿಭಟನಾ ನಿರತ ರೈತರ ಮೇಲೆ ದಾಳಿ ಮಾಡಲು ಮರದ ಕೊಂಬೆಗಳನ್ನು ಕತ್ತರಿಸಿದ ಖಟ್ಟರ್ ಆಡಳಿತಕ್ಕೆ ನಾಚಿಕೆಯಾಗಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಖ್ಯಾತ ವಕೀಲ, ಮಾನವ ಹಕ್ಕುಗಳ ಹೋರಾಟಗಾರ ಪ್ರಶಾಂತ್ ಭೂಷಣ್‌ ಅವರು, “ರೈತರು ನೆರಳಿನಲ್ಲಿ ಕುಳಿತುಕೊಳ್ಳಬಾರದು ಎಂದು ಖಟ್ಟರ್ ಸರ್ಕಾರವು ಮರಗಳ ಕೊಂಬೆಗಳನ್ನು ಕತ್ತರಿಸಿತು. ತಮ್ಮ ಮೇಲೆ ಕ್ರೂರ ಲಾಠಿ ಚಾರ್ಜ್ ಮಾಡಿರುವುದನ್ನು ವಿರೋಧಿಸಿ ರೈತರು ಆ ಮರಗಳ ಅಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಬಿಜೆಪಿಯ ಭ್ರಷ್ಟತನ, ಕ್ರೌರ್ಯ ಮತ್ತು ಅಮಾನವೀಯ ನಡೆಯನ್ನು ಎಂದಿಗೂ ಕನಿಷ್ಠವಾಗಿ ಅಂದಾಜಿಸಬೇಡಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ತ್ರಿಪುರ: ಹಲವು ಪತ್ರಿಕಾ ಕಚೇರಿಗಳ ಮೇಲೆ ಬಿಜೆಪಿ ಕಾರ್ಯಕರ್ತರ ದಾಳಿ- ಸಿಪಿಎಂ ಕಚೇರಿಗೆ ಬೆಂಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...