Homeಮುಖಪುಟಪ್ರತಿಭಟನಾ ನಿರತ ರೈತರಿಗೆ ನೆರಳು ನೀಡುತ್ತಿದ್ದ ಮರಗಳ ಕೊಂಬೆ ಕತ್ತರಿಸಿದ ಬಿಜೆಪಿ ಸರ್ಕಾರ!

ಪ್ರತಿಭಟನಾ ನಿರತ ರೈತರಿಗೆ ನೆರಳು ನೀಡುತ್ತಿದ್ದ ಮರಗಳ ಕೊಂಬೆ ಕತ್ತರಿಸಿದ ಬಿಜೆಪಿ ಸರ್ಕಾರ!

‘ಚಕ್ರವರ್ತಿ ಬೆತ್ತಲಾಗಿದ್ದಾನೆ’ ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

ಹೊಸ ಕೃಷಿ ಕಾಯ್ದೆಯನ್ನು ವಿರೋಧಿಸಿ ಒಕ್ಕೂಟ ಸರ್ಕಾರದ ವಿರುದ್ದ ರೈತರು ನಡೆಸುತ್ತಿರುವ ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ಕರ್ನಲ್‌ನಲ್ಲಿ ಇತ್ತೀಚೆಗೆ ರೈತರ ಮೇಲೆ ಹಲ್ಲೆ ನಡೆಸಿದ್ದ ಹರಿಯಾಣದ ಮನೋಹರ್‌‌ಲಾಲ್‌ ಕಟ್ಟರ್‌ ಸರ್ಕಾರದ ವಿರುದ್ದವು ರೈತರು ಹೋರಾಟಕ್ಕೆ ವೇದಿಕೆ ಸಿದ್ದಗೊಳಿಸಿದ್ದಾರೆ. ಕಳೆದ ಕೆಲವು ದಿನದಿಂದ ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ಹೋರಾಟದ ಮಾದರಿಯಲ್ಲಿ ರಾಜ್ಯದ ಕರ್ನಲ್‌ ಜಿಲ್ಲಾ ಕೇಂದ್ರವನ್ನು ರೈತರು ಶಾಶ್ವತ ರೈತ ಹೋರಾಟದ ಸ್ಥಳವನ್ನಾಗಿ ಮಾಡಿದ್ದಾರೆ.

ರೈತರು ಕರ್ನಲ್‌ನ ಮಿನಿ ಸೆಕ್ರೆಟರಿಯೇಟ್‌ನ ಹೊರಗೆ ಹೋರಾಟ ಮಾಡುತ್ತಿದ್ದಾರೆ. ಈ ವೇಳೆ ಬಿಸಿಲಿನಿಂದ ರಕ್ಷಿಸಿಕೊಳ್ಳಲು ಸೆಕ್ರಟರಿಯೇಟ್‌ನ ಹೊರಗೆ ಇರುವ ಮರಗಳನ್ನು ರೈತರು ನೆರಳಿಗಾಗಿ ಆಶ್ರಯಿಸಿದ್ದರು. ಆದರೆ ಗುರುವಾರ ರಾತ್ರಿ ಈ ಮರಗಳ ಕೊಂಬೆಗಳನ್ನು ಸರ್ಕಾರ ಕತ್ತರಿಸಿದೆ ಎಂದು ವರದಿಯಾಗಿದೆ. ಈ ಮೂಲಕ, ಸಾಧ್ಯವಿರುವ ಎಲ್ಲಾ ದಾರಿಯ ಮುಖಾಂತರ ರೈತರನ್ನು ಮಣಿಸಲು ಸರ್ಕಾರ ಹೊರಟಿದೆ ಎಂದು ಸಾಬೀತುಪಡಿಸಿದೆ.

ಇದನ್ನೂ ಓದಿ: ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ – ಫೇಕ್‌, ಸುಳ್ಳು ಮತ್ತು ತಿರುಚುವಿಕೆಯೇ `ಜೀವಾಳ’

ಹೋರಾಟಗಾರರು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದು, ‘ಚಕ್ರವರ್ತಿ ಬೆತ್ತಲಾಗಿದ್ದಾನೆ’ ಎಂದು ಕಿಡಿ ಕಾರಿದ್ದಾರೆ.

“ರೈತರು ಮತ್ತು ಪೊಲೀಸರು ಕರ್ನಾಲ್‌ನ ಮಿನಿ ಸೆಕ್ರೆಟರಿಯೇಟ್‌ ಹೊರಗೆ ಬಿಸಿಲಿನಿಂದ ತಪ್ಪಿಸಿಕೊಳ್ಳಲು ಮರಗಳ ಕೆಳಗೆ ಕುಳಿತುಕೊಳ್ಳುತ್ತಿದ್ದರು. ರೈತರಿಗೆ ಕಷ್ಟಕರವಾಗಲು ಹರಿಯಾಣ ಆಡಳಿತವು ಮರದ ಕೊಂಬೆಗಳನ್ನು ಕತ್ತರಿಸಿದೆ. ನಿನ್ನೆ ರಾತ್ರಿ ಆ ಮರಗಳ ಕೊಂಬೆಗಳನ್ನು ಕತ್ತರಿಸಲಾಗಿದೆ ಎಂದು ವರದಿಯಾಗಿದೆ. ಚಕ್ರವರ್ತಿ ಬೆತ್ತಲಾಗಿದ್ದಾನೆ” ಎಂದು ರೈತ ಹೋರಾಟಗಳನ್ನು ನಿರಂತರವಾಗಿ ವರದಿ ಮಾಡುತ್ತಿರುವ ಹೋರಾಟಗಾರ ಸಂದೀಪ್‌ ಸಿಂಗ್ ಹೇಳಿದ್ದಾರೆ. ಈ ಬಗ್ಗೆ ಅವರು ಅಲ್ಲಿನ ವಿಡಿಯೋಗಳನ್ನು ತಮ್ಮ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: ರಾಜಸ್ಥಾನದಲ್ಲಿ ಬಿಜೆಪಿ V/s ಬಿಜೆಪಿ: ವಿಪಕ್ಷ ನಾಯಕನ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸಿದ ಬಿಜೆಪಿಯ ಹಿರಿಯ ನಾಯಕ

ಸಂದೀಪ್‌ ಸಿಂಗ್ ಅವರ ವಿಡಿಯೊವನ್ನು ಶೇರ್‌ ಮಾಡಿರುವ ಪತ್ರಕರ್ತೆ ಸ್ವಾತಿ ಚತುರ್ವೇದಿ ಅವರು, “ಪ್ರತಿಭಟನಾ ನಿರತ ರೈತರ ಮೇಲೆ ದಾಳಿ ಮಾಡಲು ಮರದ ಕೊಂಬೆಗಳನ್ನು ಕತ್ತರಿಸಿದ ಖಟ್ಟರ್ ಆಡಳಿತಕ್ಕೆ ನಾಚಿಕೆಯಾಗಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಖ್ಯಾತ ವಕೀಲ, ಮಾನವ ಹಕ್ಕುಗಳ ಹೋರಾಟಗಾರ ಪ್ರಶಾಂತ್ ಭೂಷಣ್‌ ಅವರು, “ರೈತರು ನೆರಳಿನಲ್ಲಿ ಕುಳಿತುಕೊಳ್ಳಬಾರದು ಎಂದು ಖಟ್ಟರ್ ಸರ್ಕಾರವು ಮರಗಳ ಕೊಂಬೆಗಳನ್ನು ಕತ್ತರಿಸಿತು. ತಮ್ಮ ಮೇಲೆ ಕ್ರೂರ ಲಾಠಿ ಚಾರ್ಜ್ ಮಾಡಿರುವುದನ್ನು ವಿರೋಧಿಸಿ ರೈತರು ಆ ಮರಗಳ ಅಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಬಿಜೆಪಿಯ ಭ್ರಷ್ಟತನ, ಕ್ರೌರ್ಯ ಮತ್ತು ಅಮಾನವೀಯ ನಡೆಯನ್ನು ಎಂದಿಗೂ ಕನಿಷ್ಠವಾಗಿ ಅಂದಾಜಿಸಬೇಡಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ತ್ರಿಪುರ: ಹಲವು ಪತ್ರಿಕಾ ಕಚೇರಿಗಳ ಮೇಲೆ ಬಿಜೆಪಿ ಕಾರ್ಯಕರ್ತರ ದಾಳಿ- ಸಿಪಿಎಂ ಕಚೇರಿಗೆ ಬೆಂಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...