Homeಮುಖಪುಟದ್ವೇಷಭಾಷಣ, ಕೋಮು ಹಿಂಸೆ ಸೇರಿ 385 ಪ್ರಕರಣಗಳನ್ನು ಕೈಬಿಟ್ಟ ಬಿಜೆಪಿ ಸರ್ಕಾರ

ದ್ವೇಷಭಾಷಣ, ಕೋಮು ಹಿಂಸೆ ಸೇರಿ 385 ಪ್ರಕರಣಗಳನ್ನು ಕೈಬಿಟ್ಟ ಬಿಜೆಪಿ ಸರ್ಕಾರ

ಬಿಜೆಪಿ ಸರ್ಕಾರದ ಈ ನಡೆಯಿಂದ ಸುಮಾರು 1000ಕ್ಕೂ ಹೆಚ್ಚು ಬಲಪಂಥೀಯ ಕಾರ್ಯಕರ್ತರು ಕಾನೂನಿನ ಕುಣಿಕೆಯಿಂದ ಪಾರಾಗಿದ್ದು, ಅವರಲ್ಲಿ ಕೆಲ ಬಿಜೆಪಿ ಸಂಸದರು ಮತ್ತು ಶಾಸಕರು ಸೇರಿದ್ದಾರೆ.

- Advertisement -
- Advertisement -

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಈ ನಾಲ್ಕು ವರ್ಷಗಳಲ್ಲಿ ಏಳು ಪ್ರತ್ಯೇಕ ಆದೇಶಗಳ ಮೂಲಕ ದ್ವೇಷಭಾಷಣ, ಕೋಮು ಹಿಂಸೆ ಸೇರಿ 385 ಪ್ರಕರಣಗಳನ್ನು ಹಿಂಪಡೆದಿದೆ ಎಂದು ತಿಳಿದುಬಂದಿದೆ. ಅವುಗಳಲ್ಲಿ 182 ದ್ವೇಷ ಭಾಷಣ, ಕೋಮು ಹಿಂಸೆ, ಮತೀಯ ಗೂಂಡಾಗಿರಿ ಪ್ರಕರಣಗಳು ಸೇರಿರುವುದು ಆತಂಕಕ್ಕೆ ಎಡೆ ಮಾಡಿದೆ.

ಬಿ.ಎಸ್ ಯಡಿಯೂರಪ್ಪನವರು ಸಿ.ಎಂ ಆಗಿದ್ದ ಮತ್ತು ಬಸವರಾಜ ಬೊಮ್ಮಾಯಿ ಗೃಹ ಸಚಿವರಾಗಿದ್ದ ಫೆಬ್ರವರಿ 11, 2020ರಿಂದ ಬಸವರಾಜ ಬೊಮ್ಮಾಯಿಯವರು ಸಿಎಂ ಆಗಿರುವ, ಆರಗ ಜ್ಞಾನೇಂದ್ರ ಗೃಹ ಸಚಿವರಾಗಿರುವ ಫೆಬ್ರವರಿ 28, 2023ರ ನಡುವಿನ ಅವಧಿಯಲ್ಲಿ ಏಳು ಪತ್ಯೇಕ ಆದೇಶಗಳ ಮೂಲಕ 385 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲಾಗಿದೆ ಎಂದು ಆರ್‌ಟಿಐ ಮಾಹಿತಿ ಆದರಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಬಿಜೆಪಿ ಸರ್ಕಾರದ ಈ ನಡೆಯಿಂದ ಸುಮಾರು 1000ಕ್ಕೂ ಹೆಚ್ಚು ಬಲಪಂಥೀಯ ಕಾರ್ಯಕರ್ತರು ಕಾನೂನಿನ ಕುಣಿಕೆಯಿಂದ ಪಾರಾಗಿದ್ದು, ಅವರಲ್ಲಿ ಕೆಲ ಬಿಜೆಪಿ ಸಂಸದರು ಮತ್ತು ಶಾಸಕರು ಸೇರಿದ್ದಾರೆ ಎನ್ನಲಾಗಿದೆ.

ಈ ರೀತಿ ಪ್ರಕರಣಗಳನ್ನು ವಾಪಸ್ ಪಡೆಯಬೇಕಾದರೆ ಗೃಹ ಸಚಿವರಿಂದ ಶಿಫಾರಸ್ಸಿನ ಮೇರೆಗೆ ರಾಜ್ಯ ಸಚಿವ ಸಂಪುಟ ಮತ್ತು ಸಚಿವ ಸಂಪುಟದ ಉಪ ಸಮಿತಿ ಅನುಮತಿ ನೀಡಬೇಕಿರುತ್ತದೆ. 2013 ರಿಂದ 2018ರ ಅವಧಿಯಲ್ಲಿ ದಾಖಲಾಗಿದ್ದ ಸುಮಾರು 182 ಕೋಮು ಹಿಂಸೆ ಪ್ರಕರಣಗಳನ್ನು ಬಿಜೆಪಿ ಸರ್ಕಾರ ಕೈಬಿಟ್ಟಿದೆ.

ಈಗ ಸರ್ಕಾರ ಕೈಬಿಟ್ಟಿರುವ ಪ್ರಕರಣಗಳಲ್ಲಿ ಸುಮಾರು 45 ಪ್ರಕರಣಗಳು ಉತ್ತರ ಕನ್ನಡ ಜಿಲ್ಲೆಗೆ ಸಂಬಂಧಿಸಿವೆ. ಪರೇಶ್ ಮೇಸ್ತಾ ಎಂಬ ಯುವಕನ ಸಾವಿನ ಸಂದರ್ಭದಲ್ಲಿ ಬಲಪಂಥೀಯ ಕಾರ್ಯಕರ್ತರು ಕೋಮು ಗಲಭೆಗಳನ್ನು ಹುಟ್ಟು ಹಾಕಿದ್ದರು. ಮುಸ್ಲಿಮರ ಅಂಗಡಿಗಳಿಗೆ ಬೆಂಕಿ ಹಚ್ಚುವುದು, ಲೂಟಿ ಮಾಡುವುದು ಸೇರಿ 45 ಪ್ರಕರಣಗಳಲ್ಲಿ 300 ಆರೋಪಿಗಳನ್ನು ಗುರುತಿಸಲಾಗಿತ್ತು. ಅದರಲ್ಲಿ 66 ಜನ ಕೊಲೆಯತ್ನದ ಪ್ರಕರಣ ಎದುರಿಸುತ್ತಿದ್ದರು. ಆದರೆ ನಂತರ ಪರೇಶ್ ಮೇಸ್ತನ ಕೊಲೆ ಆಕಸ್ಮಿಕ ಎಂದು ಸಿಬಿಐ ತನಿಖೆ ನಡೆಸಿ ವರದಿ ಸಲ್ಲಿಸಿತ್ತು. ಈಗ ಆ ಎಲ್ಲಾ ಪ್ರಕರಣಗಳನ್ನು ವಾಪಸ್ ಪಡೆಯಲಾಗಿದೆ.

ಮೈಸೂರು ಸಂಸದ ಪ್ರತಾಪ್ ಸಿಂಹ ಮತ್ತು ಶಾಸಕ ಎಂ.ಪಿ ರೇಣುಕಾಚಾರ್ಯರವರ ಮೇಲಿನ ಪ್ರಕರಣಗಳನ್ನು ಸಹ ಕೈಬಿಡಲಾಗಿದೆ.

ಬಸವರಾಜ ಬೊಮ್ಮಾಯಿಯವರು ಗೃಹ ಸಚಿವರಾಗಿದ್ದ ವೇಳೆ ಆಗಸ್ಟ್ 13, 2020ರಂದು ಉಡುಪಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ “ಹಲವು ಗಲಭೆಗಳಲ್ಲಿ ಭಾಗಿಯಾಗಿ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್‌ ಎದುರು ನೋಡ್ರಿ ನಿಮ್ಮ ಮೇಲೆ ಯಾವುದೇ ಕೇಸು ಇದ್ದರೂ ತೆಗೆದು ಹಾಕುತ್ತೇವೆ” ಎಂದು ಹೇಳಿದ್ದರು. ಆ ವಿಡಿಯೋವನ್ನು ನಾನುಗೌರಿ.ಕಾಂ ಬಯಲಿಗೆಳೆದಿತ್ತು.

ಈ ವಿಡಿಯೋ ವೈರಲ್ ಆಗುತ್ತದ್ದಂತೆ ಯೂಟರ್ನ್ ಹೊಡೆದಿದ್ದ ಬೊಮ್ಮಾಯಿಯವರು, “ವಿಶ್ವ ಹಿಂದೂ ಪರಿಷತ್ ಮುಖಂಡರ ಮೇಲಿನ ಯಾವುದೇ ಕೇಸ್ ಇದ್ದರೂ ತೆಗೆದುಹಾಕ್ತೀವಿ ಎಂದು ನಾನು ಹೇಳಿಲ್ಲ. ಅವರು ಮನವಿ ಕೊಟ್ಟು ಅನ್ಯಾಯ ಸರಿಪಡಿಸಿ ಎಂದು ಹೇಳಿದ್ದಾರೆ. ಹಾಗಾಗಿ ಯಾರಿಗೆ ಅನ್ಯಾಯವಾದರೂ ಅದನ್ನು ಸರಿಪಡಿಸುವ ಕೆಲಸ ನನ್ನದು” ಎಂದಿದ್ದರು. ಆದರೆ ಈಗ ಆರ್‌ಟಿಐ ದಾಖಲೆಗಳ ಪ್ರಕಾರ ಬಲಪಂಥೀಯ ಕಾರ್ಯಕರ್ತರ ಮೇಲಿನ 385 ಪ್ರಕರಣಗಳನ್ನು ತೆಗೆದು ಹಾಕಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ವಿವಾದಾತ್ಮಕ ವಿಡಿಯೋ: ಗಲಭೆಗಳಲ್ಲಿ ಭಾಗಿಯಾದ ಆರೋಪಿಗೆ ʼಎಲ್ಲಾ ಕೇಸು ತೆಗೆದು ಹಾಕುತ್ತೇವೆʼ ಎಂದ ಗೃಹ ಸಚಿವರು!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಭಾರತದಲ್ಲಿ ಬಿಕ್ಕಟ್ಟಿನಲ್ಲಿ ಪತ್ರಿಕಾ ಸ್ವಾತಂತ್ರ್ಯ: ವರದಿ

0
ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಸ್ಥಿತಿ ಅತ್ಯಂತ ಕಟ್ಟದಾಗಿದ್ದು, ನೆರೆಯ ಪಾಕಿಸ್ತಾನ, ಶ್ರೀಲಂಕಾ, ನೇಪಾಳಕ್ಕಿಂತಲೂ ಕಳಪೆಯಾಗಿದೆ. ಇದು ಪ್ರಜಾಪ್ರಭುತ್ವ ದೇಶಕ್ಕೆ ಯೋಗ್ಯವಾದ ಬೆಳವಣಿಗೆಯಲ್ಲ ಎಂದು ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ (ಆರ್‌ಎಸ್‌ಎಫ್) ಬಿಡುಗಡೆ ಮಾಡಿದ 2024ರ...