Homeಮುಖಪುಟದ್ವೇಷಭಾಷಣ, ಕೋಮು ಹಿಂಸೆ ಸೇರಿ 385 ಪ್ರಕರಣಗಳನ್ನು ಕೈಬಿಟ್ಟ ಬಿಜೆಪಿ ಸರ್ಕಾರ

ದ್ವೇಷಭಾಷಣ, ಕೋಮು ಹಿಂಸೆ ಸೇರಿ 385 ಪ್ರಕರಣಗಳನ್ನು ಕೈಬಿಟ್ಟ ಬಿಜೆಪಿ ಸರ್ಕಾರ

ಬಿಜೆಪಿ ಸರ್ಕಾರದ ಈ ನಡೆಯಿಂದ ಸುಮಾರು 1000ಕ್ಕೂ ಹೆಚ್ಚು ಬಲಪಂಥೀಯ ಕಾರ್ಯಕರ್ತರು ಕಾನೂನಿನ ಕುಣಿಕೆಯಿಂದ ಪಾರಾಗಿದ್ದು, ಅವರಲ್ಲಿ ಕೆಲ ಬಿಜೆಪಿ ಸಂಸದರು ಮತ್ತು ಶಾಸಕರು ಸೇರಿದ್ದಾರೆ.

- Advertisement -
- Advertisement -

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಈ ನಾಲ್ಕು ವರ್ಷಗಳಲ್ಲಿ ಏಳು ಪ್ರತ್ಯೇಕ ಆದೇಶಗಳ ಮೂಲಕ ದ್ವೇಷಭಾಷಣ, ಕೋಮು ಹಿಂಸೆ ಸೇರಿ 385 ಪ್ರಕರಣಗಳನ್ನು ಹಿಂಪಡೆದಿದೆ ಎಂದು ತಿಳಿದುಬಂದಿದೆ. ಅವುಗಳಲ್ಲಿ 182 ದ್ವೇಷ ಭಾಷಣ, ಕೋಮು ಹಿಂಸೆ, ಮತೀಯ ಗೂಂಡಾಗಿರಿ ಪ್ರಕರಣಗಳು ಸೇರಿರುವುದು ಆತಂಕಕ್ಕೆ ಎಡೆ ಮಾಡಿದೆ.

ಬಿ.ಎಸ್ ಯಡಿಯೂರಪ್ಪನವರು ಸಿ.ಎಂ ಆಗಿದ್ದ ಮತ್ತು ಬಸವರಾಜ ಬೊಮ್ಮಾಯಿ ಗೃಹ ಸಚಿವರಾಗಿದ್ದ ಫೆಬ್ರವರಿ 11, 2020ರಿಂದ ಬಸವರಾಜ ಬೊಮ್ಮಾಯಿಯವರು ಸಿಎಂ ಆಗಿರುವ, ಆರಗ ಜ್ಞಾನೇಂದ್ರ ಗೃಹ ಸಚಿವರಾಗಿರುವ ಫೆಬ್ರವರಿ 28, 2023ರ ನಡುವಿನ ಅವಧಿಯಲ್ಲಿ ಏಳು ಪತ್ಯೇಕ ಆದೇಶಗಳ ಮೂಲಕ 385 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲಾಗಿದೆ ಎಂದು ಆರ್‌ಟಿಐ ಮಾಹಿತಿ ಆದರಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಬಿಜೆಪಿ ಸರ್ಕಾರದ ಈ ನಡೆಯಿಂದ ಸುಮಾರು 1000ಕ್ಕೂ ಹೆಚ್ಚು ಬಲಪಂಥೀಯ ಕಾರ್ಯಕರ್ತರು ಕಾನೂನಿನ ಕುಣಿಕೆಯಿಂದ ಪಾರಾಗಿದ್ದು, ಅವರಲ್ಲಿ ಕೆಲ ಬಿಜೆಪಿ ಸಂಸದರು ಮತ್ತು ಶಾಸಕರು ಸೇರಿದ್ದಾರೆ ಎನ್ನಲಾಗಿದೆ.

ಈ ರೀತಿ ಪ್ರಕರಣಗಳನ್ನು ವಾಪಸ್ ಪಡೆಯಬೇಕಾದರೆ ಗೃಹ ಸಚಿವರಿಂದ ಶಿಫಾರಸ್ಸಿನ ಮೇರೆಗೆ ರಾಜ್ಯ ಸಚಿವ ಸಂಪುಟ ಮತ್ತು ಸಚಿವ ಸಂಪುಟದ ಉಪ ಸಮಿತಿ ಅನುಮತಿ ನೀಡಬೇಕಿರುತ್ತದೆ. 2013 ರಿಂದ 2018ರ ಅವಧಿಯಲ್ಲಿ ದಾಖಲಾಗಿದ್ದ ಸುಮಾರು 182 ಕೋಮು ಹಿಂಸೆ ಪ್ರಕರಣಗಳನ್ನು ಬಿಜೆಪಿ ಸರ್ಕಾರ ಕೈಬಿಟ್ಟಿದೆ.

ಈಗ ಸರ್ಕಾರ ಕೈಬಿಟ್ಟಿರುವ ಪ್ರಕರಣಗಳಲ್ಲಿ ಸುಮಾರು 45 ಪ್ರಕರಣಗಳು ಉತ್ತರ ಕನ್ನಡ ಜಿಲ್ಲೆಗೆ ಸಂಬಂಧಿಸಿವೆ. ಪರೇಶ್ ಮೇಸ್ತಾ ಎಂಬ ಯುವಕನ ಸಾವಿನ ಸಂದರ್ಭದಲ್ಲಿ ಬಲಪಂಥೀಯ ಕಾರ್ಯಕರ್ತರು ಕೋಮು ಗಲಭೆಗಳನ್ನು ಹುಟ್ಟು ಹಾಕಿದ್ದರು. ಮುಸ್ಲಿಮರ ಅಂಗಡಿಗಳಿಗೆ ಬೆಂಕಿ ಹಚ್ಚುವುದು, ಲೂಟಿ ಮಾಡುವುದು ಸೇರಿ 45 ಪ್ರಕರಣಗಳಲ್ಲಿ 300 ಆರೋಪಿಗಳನ್ನು ಗುರುತಿಸಲಾಗಿತ್ತು. ಅದರಲ್ಲಿ 66 ಜನ ಕೊಲೆಯತ್ನದ ಪ್ರಕರಣ ಎದುರಿಸುತ್ತಿದ್ದರು. ಆದರೆ ನಂತರ ಪರೇಶ್ ಮೇಸ್ತನ ಕೊಲೆ ಆಕಸ್ಮಿಕ ಎಂದು ಸಿಬಿಐ ತನಿಖೆ ನಡೆಸಿ ವರದಿ ಸಲ್ಲಿಸಿತ್ತು. ಈಗ ಆ ಎಲ್ಲಾ ಪ್ರಕರಣಗಳನ್ನು ವಾಪಸ್ ಪಡೆಯಲಾಗಿದೆ.

ಮೈಸೂರು ಸಂಸದ ಪ್ರತಾಪ್ ಸಿಂಹ ಮತ್ತು ಶಾಸಕ ಎಂ.ಪಿ ರೇಣುಕಾಚಾರ್ಯರವರ ಮೇಲಿನ ಪ್ರಕರಣಗಳನ್ನು ಸಹ ಕೈಬಿಡಲಾಗಿದೆ.

ಬಸವರಾಜ ಬೊಮ್ಮಾಯಿಯವರು ಗೃಹ ಸಚಿವರಾಗಿದ್ದ ವೇಳೆ ಆಗಸ್ಟ್ 13, 2020ರಂದು ಉಡುಪಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ “ಹಲವು ಗಲಭೆಗಳಲ್ಲಿ ಭಾಗಿಯಾಗಿ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್‌ ಎದುರು ನೋಡ್ರಿ ನಿಮ್ಮ ಮೇಲೆ ಯಾವುದೇ ಕೇಸು ಇದ್ದರೂ ತೆಗೆದು ಹಾಕುತ್ತೇವೆ” ಎಂದು ಹೇಳಿದ್ದರು. ಆ ವಿಡಿಯೋವನ್ನು ನಾನುಗೌರಿ.ಕಾಂ ಬಯಲಿಗೆಳೆದಿತ್ತು.

ಈ ವಿಡಿಯೋ ವೈರಲ್ ಆಗುತ್ತದ್ದಂತೆ ಯೂಟರ್ನ್ ಹೊಡೆದಿದ್ದ ಬೊಮ್ಮಾಯಿಯವರು, “ವಿಶ್ವ ಹಿಂದೂ ಪರಿಷತ್ ಮುಖಂಡರ ಮೇಲಿನ ಯಾವುದೇ ಕೇಸ್ ಇದ್ದರೂ ತೆಗೆದುಹಾಕ್ತೀವಿ ಎಂದು ನಾನು ಹೇಳಿಲ್ಲ. ಅವರು ಮನವಿ ಕೊಟ್ಟು ಅನ್ಯಾಯ ಸರಿಪಡಿಸಿ ಎಂದು ಹೇಳಿದ್ದಾರೆ. ಹಾಗಾಗಿ ಯಾರಿಗೆ ಅನ್ಯಾಯವಾದರೂ ಅದನ್ನು ಸರಿಪಡಿಸುವ ಕೆಲಸ ನನ್ನದು” ಎಂದಿದ್ದರು. ಆದರೆ ಈಗ ಆರ್‌ಟಿಐ ದಾಖಲೆಗಳ ಪ್ರಕಾರ ಬಲಪಂಥೀಯ ಕಾರ್ಯಕರ್ತರ ಮೇಲಿನ 385 ಪ್ರಕರಣಗಳನ್ನು ತೆಗೆದು ಹಾಕಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ವಿವಾದಾತ್ಮಕ ವಿಡಿಯೋ: ಗಲಭೆಗಳಲ್ಲಿ ಭಾಗಿಯಾದ ಆರೋಪಿಗೆ ʼಎಲ್ಲಾ ಕೇಸು ತೆಗೆದು ಹಾಕುತ್ತೇವೆʼ ಎಂದ ಗೃಹ ಸಚಿವರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...