Homeಮುಖಪುಟದ್ವೇಷಭಾಷಣ, ಕೋಮು ಹಿಂಸೆ ಸೇರಿ 385 ಪ್ರಕರಣಗಳನ್ನು ಕೈಬಿಟ್ಟ ಬಿಜೆಪಿ ಸರ್ಕಾರ

ದ್ವೇಷಭಾಷಣ, ಕೋಮು ಹಿಂಸೆ ಸೇರಿ 385 ಪ್ರಕರಣಗಳನ್ನು ಕೈಬಿಟ್ಟ ಬಿಜೆಪಿ ಸರ್ಕಾರ

ಬಿಜೆಪಿ ಸರ್ಕಾರದ ಈ ನಡೆಯಿಂದ ಸುಮಾರು 1000ಕ್ಕೂ ಹೆಚ್ಚು ಬಲಪಂಥೀಯ ಕಾರ್ಯಕರ್ತರು ಕಾನೂನಿನ ಕುಣಿಕೆಯಿಂದ ಪಾರಾಗಿದ್ದು, ಅವರಲ್ಲಿ ಕೆಲ ಬಿಜೆಪಿ ಸಂಸದರು ಮತ್ತು ಶಾಸಕರು ಸೇರಿದ್ದಾರೆ.

- Advertisement -
- Advertisement -

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಈ ನಾಲ್ಕು ವರ್ಷಗಳಲ್ಲಿ ಏಳು ಪ್ರತ್ಯೇಕ ಆದೇಶಗಳ ಮೂಲಕ ದ್ವೇಷಭಾಷಣ, ಕೋಮು ಹಿಂಸೆ ಸೇರಿ 385 ಪ್ರಕರಣಗಳನ್ನು ಹಿಂಪಡೆದಿದೆ ಎಂದು ತಿಳಿದುಬಂದಿದೆ. ಅವುಗಳಲ್ಲಿ 182 ದ್ವೇಷ ಭಾಷಣ, ಕೋಮು ಹಿಂಸೆ, ಮತೀಯ ಗೂಂಡಾಗಿರಿ ಪ್ರಕರಣಗಳು ಸೇರಿರುವುದು ಆತಂಕಕ್ಕೆ ಎಡೆ ಮಾಡಿದೆ.

ಬಿ.ಎಸ್ ಯಡಿಯೂರಪ್ಪನವರು ಸಿ.ಎಂ ಆಗಿದ್ದ ಮತ್ತು ಬಸವರಾಜ ಬೊಮ್ಮಾಯಿ ಗೃಹ ಸಚಿವರಾಗಿದ್ದ ಫೆಬ್ರವರಿ 11, 2020ರಿಂದ ಬಸವರಾಜ ಬೊಮ್ಮಾಯಿಯವರು ಸಿಎಂ ಆಗಿರುವ, ಆರಗ ಜ್ಞಾನೇಂದ್ರ ಗೃಹ ಸಚಿವರಾಗಿರುವ ಫೆಬ್ರವರಿ 28, 2023ರ ನಡುವಿನ ಅವಧಿಯಲ್ಲಿ ಏಳು ಪತ್ಯೇಕ ಆದೇಶಗಳ ಮೂಲಕ 385 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲಾಗಿದೆ ಎಂದು ಆರ್‌ಟಿಐ ಮಾಹಿತಿ ಆದರಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಬಿಜೆಪಿ ಸರ್ಕಾರದ ಈ ನಡೆಯಿಂದ ಸುಮಾರು 1000ಕ್ಕೂ ಹೆಚ್ಚು ಬಲಪಂಥೀಯ ಕಾರ್ಯಕರ್ತರು ಕಾನೂನಿನ ಕುಣಿಕೆಯಿಂದ ಪಾರಾಗಿದ್ದು, ಅವರಲ್ಲಿ ಕೆಲ ಬಿಜೆಪಿ ಸಂಸದರು ಮತ್ತು ಶಾಸಕರು ಸೇರಿದ್ದಾರೆ ಎನ್ನಲಾಗಿದೆ.

ಈ ರೀತಿ ಪ್ರಕರಣಗಳನ್ನು ವಾಪಸ್ ಪಡೆಯಬೇಕಾದರೆ ಗೃಹ ಸಚಿವರಿಂದ ಶಿಫಾರಸ್ಸಿನ ಮೇರೆಗೆ ರಾಜ್ಯ ಸಚಿವ ಸಂಪುಟ ಮತ್ತು ಸಚಿವ ಸಂಪುಟದ ಉಪ ಸಮಿತಿ ಅನುಮತಿ ನೀಡಬೇಕಿರುತ್ತದೆ. 2013 ರಿಂದ 2018ರ ಅವಧಿಯಲ್ಲಿ ದಾಖಲಾಗಿದ್ದ ಸುಮಾರು 182 ಕೋಮು ಹಿಂಸೆ ಪ್ರಕರಣಗಳನ್ನು ಬಿಜೆಪಿ ಸರ್ಕಾರ ಕೈಬಿಟ್ಟಿದೆ.

ಈಗ ಸರ್ಕಾರ ಕೈಬಿಟ್ಟಿರುವ ಪ್ರಕರಣಗಳಲ್ಲಿ ಸುಮಾರು 45 ಪ್ರಕರಣಗಳು ಉತ್ತರ ಕನ್ನಡ ಜಿಲ್ಲೆಗೆ ಸಂಬಂಧಿಸಿವೆ. ಪರೇಶ್ ಮೇಸ್ತಾ ಎಂಬ ಯುವಕನ ಸಾವಿನ ಸಂದರ್ಭದಲ್ಲಿ ಬಲಪಂಥೀಯ ಕಾರ್ಯಕರ್ತರು ಕೋಮು ಗಲಭೆಗಳನ್ನು ಹುಟ್ಟು ಹಾಕಿದ್ದರು. ಮುಸ್ಲಿಮರ ಅಂಗಡಿಗಳಿಗೆ ಬೆಂಕಿ ಹಚ್ಚುವುದು, ಲೂಟಿ ಮಾಡುವುದು ಸೇರಿ 45 ಪ್ರಕರಣಗಳಲ್ಲಿ 300 ಆರೋಪಿಗಳನ್ನು ಗುರುತಿಸಲಾಗಿತ್ತು. ಅದರಲ್ಲಿ 66 ಜನ ಕೊಲೆಯತ್ನದ ಪ್ರಕರಣ ಎದುರಿಸುತ್ತಿದ್ದರು. ಆದರೆ ನಂತರ ಪರೇಶ್ ಮೇಸ್ತನ ಕೊಲೆ ಆಕಸ್ಮಿಕ ಎಂದು ಸಿಬಿಐ ತನಿಖೆ ನಡೆಸಿ ವರದಿ ಸಲ್ಲಿಸಿತ್ತು. ಈಗ ಆ ಎಲ್ಲಾ ಪ್ರಕರಣಗಳನ್ನು ವಾಪಸ್ ಪಡೆಯಲಾಗಿದೆ.

ಮೈಸೂರು ಸಂಸದ ಪ್ರತಾಪ್ ಸಿಂಹ ಮತ್ತು ಶಾಸಕ ಎಂ.ಪಿ ರೇಣುಕಾಚಾರ್ಯರವರ ಮೇಲಿನ ಪ್ರಕರಣಗಳನ್ನು ಸಹ ಕೈಬಿಡಲಾಗಿದೆ.

ಬಸವರಾಜ ಬೊಮ್ಮಾಯಿಯವರು ಗೃಹ ಸಚಿವರಾಗಿದ್ದ ವೇಳೆ ಆಗಸ್ಟ್ 13, 2020ರಂದು ಉಡುಪಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ “ಹಲವು ಗಲಭೆಗಳಲ್ಲಿ ಭಾಗಿಯಾಗಿ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್‌ ಎದುರು ನೋಡ್ರಿ ನಿಮ್ಮ ಮೇಲೆ ಯಾವುದೇ ಕೇಸು ಇದ್ದರೂ ತೆಗೆದು ಹಾಕುತ್ತೇವೆ” ಎಂದು ಹೇಳಿದ್ದರು. ಆ ವಿಡಿಯೋವನ್ನು ನಾನುಗೌರಿ.ಕಾಂ ಬಯಲಿಗೆಳೆದಿತ್ತು.

ಈ ವಿಡಿಯೋ ವೈರಲ್ ಆಗುತ್ತದ್ದಂತೆ ಯೂಟರ್ನ್ ಹೊಡೆದಿದ್ದ ಬೊಮ್ಮಾಯಿಯವರು, “ವಿಶ್ವ ಹಿಂದೂ ಪರಿಷತ್ ಮುಖಂಡರ ಮೇಲಿನ ಯಾವುದೇ ಕೇಸ್ ಇದ್ದರೂ ತೆಗೆದುಹಾಕ್ತೀವಿ ಎಂದು ನಾನು ಹೇಳಿಲ್ಲ. ಅವರು ಮನವಿ ಕೊಟ್ಟು ಅನ್ಯಾಯ ಸರಿಪಡಿಸಿ ಎಂದು ಹೇಳಿದ್ದಾರೆ. ಹಾಗಾಗಿ ಯಾರಿಗೆ ಅನ್ಯಾಯವಾದರೂ ಅದನ್ನು ಸರಿಪಡಿಸುವ ಕೆಲಸ ನನ್ನದು” ಎಂದಿದ್ದರು. ಆದರೆ ಈಗ ಆರ್‌ಟಿಐ ದಾಖಲೆಗಳ ಪ್ರಕಾರ ಬಲಪಂಥೀಯ ಕಾರ್ಯಕರ್ತರ ಮೇಲಿನ 385 ಪ್ರಕರಣಗಳನ್ನು ತೆಗೆದು ಹಾಕಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ವಿವಾದಾತ್ಮಕ ವಿಡಿಯೋ: ಗಲಭೆಗಳಲ್ಲಿ ಭಾಗಿಯಾದ ಆರೋಪಿಗೆ ʼಎಲ್ಲಾ ಕೇಸು ತೆಗೆದು ಹಾಕುತ್ತೇವೆʼ ಎಂದ ಗೃಹ ಸಚಿವರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...