Homeಮುಖಪುಟಲಕ್ಷಕ್ಕೂ ಹೆಚ್ಚಿನ ಕೋವಿಡ್ ಸಾವಿನ ಸಂಖ್ಯೆ ಮುಚ್ಚಿಟ್ಟಿದ್ದ ಬಿಜೆಪಿ ಸರ್ಕಾರ; ಜಸ್ಟೀಸ್ ಕುನ್ಹಾ ಆಯೋಗದ ವರದಿಯಲ್ಲಿ...

ಲಕ್ಷಕ್ಕೂ ಹೆಚ್ಚಿನ ಕೋವಿಡ್ ಸಾವಿನ ಸಂಖ್ಯೆ ಮುಚ್ಚಿಟ್ಟಿದ್ದ ಬಿಜೆಪಿ ಸರ್ಕಾರ; ಜಸ್ಟೀಸ್ ಕುನ್ಹಾ ಆಯೋಗದ ವರದಿಯಲ್ಲಿ ಬಹಿರಂಗ

- Advertisement -
- Advertisement -

ಬಿ.ಎಸ್‌ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು, ಬರೋಬ್ಬರಿ 1.2 ಲಕ್ಷ ಜನರ ಕೋವಿಡ್ ಸಾವಿನ ಅಂಕಿಅಂಶವನ್ನೇ ಮುಚ್ಚಿಟ್ಟಿತ್ತು ಎಂಬ ಆಘಾತಕಾರಿ ಮಾಹಿತಿಯು ನಿವೃತ್ತ ನ್ಯಾಯಮೂರ್ತಿ ಕುನ್ಹಾ ಆಯೋಗದ ತನಿಖಾ ವರದಿಯಿಂದ ಬಹಿರಂಗವಾಗಿದೆ ಎಂದು ‘ಈದಿನ.ಕಾಮ್’ ವರದಿ ಮಾಡಿದೆ.

ಬಿಜೆಪಿ ಅವಧಿಯ ಕೊರೋನ ಕಾಲದ ಆರ್ಥಿಕ ಹಗರಣದ ಕುರಿತು ತನಿಖೆ ನಡೆಸಿರುವ ನಿವೃತ್ತ ನ್ಯಾಯಮೂರ್ತಿ ಕುನ್ಹಾ ಆಯೋಗದ ವರದಿಯಲ್ಲಿ ಹಲವಾರು ಆಘಾತಕಾರಿ ಅಂಶಗಳು ಬಹಿರಂಗಗೊಳ್ಳುತ್ತಿವೆ. 2020ರಲ್ಲಿ ಅಂದಿನ ಬಿ.ಎಸ್‌ ಯಡಿಯೂರಪ್ಪ ನೇತೃತ್ವದ ಸರ್ಕಾರ ₹330 ಪಿಪಿಇ ಕಿಟ್‌ಗಳಿಗೆ ಚೂನಾ ಕಂಪನಿಯಿಂದ ₹2,117 ಕೊಟ್ಟು ಖರೀದಿ ಮಾಡಿದೆ ಎಂಬ ಸ್ಪೋಟಕ ಸತ್ಯ ಹೊರಬಿದ್ದಿದೆ.

ತಮ್ಮ ವೈಯಕ್ತಿಕ ಲಾಭ ಹಾಗೂ ಚೀನಾ ಮೂಲದ ಕಂಪನಿಗಳ ಲಾಭಕ್ಕಾಗಿ ಅಂದಿನ ಸಿಎಂ ಯಡಿಯೂರಪ್ಪ, ಆರೋಗ್ಯ ಸಚಿವ ಶ್ರೀರಾಮುಲು ಆರ್ಥಿಕ ಭ್ರಷ್ಟಾಚಾರ ಮಾಡಿದ್ದಾರೆ ಎಂಬ ಮಾಹಿತಿ ಕಳೆದ ವಾರ ಬಹಿರಂಗವಾಗಿತ್ತು. ಇದೀಗ, ಬಿಜೆಪಿ ಸರ್ಕಾರ, ಬರೋಬ್ಬರಿ 1.2 ಲಕ್ಷ ಜನರ ಸಾವಿನ ಅಂಕಿಅಂಶವನ್ನೇ ಮುಚ್ಚಿಟ್ಟಿತ್ತು ಎಂಬ ಆಘಾತಕಾರಿ ಮಾಹಿತಿಯು ತನಿಖಾ ವರದಿಯಿಂದ ಬಹಿರಂಗವಾಗಿದೆ.

ಕೇಂದ್ರ ಸರ್ಕಾರದ ಲೆಕ್ಕಪತ್ರ ಮತ್ತು ಅಂಕಿಅಂಶಗಳ ನಿರ್ದೇಶನಾಲಯವು ರಾಜ್ಯದಲ್ಲಿ 2020ರ ಜನವರಿಯಿಂದ ಜುಲೈವರೆಗೆ 2,69,029 ಹಾಗೂ 2021ರ ಜನವರಿಯಿಂದ ಜುಲೈವರೆಗೆ 4,26,943 ಮಂದಿ ಕೋವಿಡ್‌ನಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಿದೆ. ಅಂದರೆ, 2020ಕ್ಕಿಂತ 2021ರಲ್ಲಿ ಸಾವುಗಳ ಸಂಖ್ಯೆ 1,57,914ರಷ್ಟು ಹೆಚ್ಚಾಗಿದೆ. ಆದರೆ, ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸಾವಿನ ಸಂಖ್ಯೆಗಳ ಅಂತರವು ಕೇವಲ 37,206 ಎಂದು ತಪ್ಪು ಮಾಹಿತಿ ನೀಡಿದೆ. ಆ ಮೂಲಕ, ಸುಮಾರು 1,20,708 ಸಾವುಗಳ ಮಾಹಿತಿಯನ್ನೇ ಮುಚ್ಚಿಟ್ಟಿದೆ. ತಪ್ಪು ಮಾಹಿತಿ ನೀಡುವ ಮೂಲಕ ಸರ್ಕಾರ ಮತ್ತು ಅಧಿಕಾರಿಗಳು ಘೋರ ಅಪರಾಧ ಎಸಗಿದ್ದಾರೆ ಎಂದು ತನಿಖಾ ಆಯೋಗ ಹೇಳಿದೆ.

ಕೋವಿಡ್ ಹಗರಣದ ಸಂಬಂಧ ಕುನ್ಹಾ ಆಯೋಗ ಸಲ್ಲಿಸಿರುವ ಮಧ್ಯಂತರ ವರದಿಯಲ್ಲಿ, “ಬಿ.ಎಸ್. ಯಡಿಯೂರಪ್ಪ ಮತ್ತು ಶ್ರೀರಾಮುಲು ಅವಧಿಯಲ್ಲಿ ಸರ್ಕಾರವು ಕೊರೋನ ಟೆಸ್ಟ್‌ಗಾಗಿ ಖಾಸಗಿ ಲ್ಯಾಬ್‌ಗಳಿಗೆ ₹6.93 ಕೋಟಿ ಕೊಟ್ಟಿದೆ. ಆದರೆ, ಅವುಗಳ ಪೈಕಿ 14 ಲ್ಯಾಬ್‌ಗಳು ಐಸಿಎಂಆರ್​ನಿಂದ ಮ್ಯಾನತೆಯನ್ನೇ ಪಡೆದಿಲ್ಲ. ಅವುಗಳು ಟಿಪಿಸಿಆರ್‌ (TPCR) ಟೆಸ್ಟ್​ಗೆ ಆ ಲ್ಯಾಬ್‌ಗಳ ಸಾಮರ್ಥ್ಯ ಮತ್ತು ಕ್ಷಮತೆ ಗುರುತಿಸಲಾಗಿಲ್ಲ. ಸಾಮರ್ಥ್ಯ, ಕ್ಷಮತೆ ಪರಿಶೀಲಿಸದೆ ಖಾಸಗಿ ಲ್ಯಾಬ್‌ಗಳಿಗೆ ಕೊರೋನ ಪರೀಕ್ಷೆಗೆ ಅನುಮತಿ ನೀಡಿ, ಹಣ ಸಂದಾಯ ಮಾಡಲಾಗಿದೆ. ಅಲ್ಲದೆ, 8 ಲ್ಯಾಬ್‌ಗಳಿಗೆ ಅನುಮತಿ ಪಡೆಯದೆ ₹4.28 ಕೋಟಿ ಸಂದಾಯ ಮಾಡಲಾಗಿದೆ” ಎಂದು ಹೇಳಿದೆ.

ಮತ್ತೊಂದೆಡೆ, ಕೋವಿಡ್ ಜಾಹೀರಾತುವಿನಲ್ಲಿಯೂ ಅಕ್ರಮ ನಡೆದಿದೆ ಎಂದು ವರದಿ ಹೇಳಿದೆ. “ಕೋವಿಡ್‌ ಕುರಿತ ಮಾಹಿತಿ ಮತ್ತು ಪ್ರಚಾರಕ್ಕಾಗಿ ಇಟ್ಟಿದ್ದ ₹7.3 ಕೋಟಿ ಹಣದಲ್ಲೂ ಸಾಕಷ್ಟು ಅಕ್ರಮ ನಡೆದಿವೆ. ಬಿಎಂಟಿಸಿ ಮಾನ್ಯೇಜಿಂಗ್ ಡೈರೆಕ್ಟರ್‌ (ಎಂಡಿ) ಸಲಹೆ ಮೇರೆಗೆ ಯಾವುದೇ ಅನುಮತಿ ಪಡೆಯದೆ, ಚುಕ್ಕಿ ಟಾಕೀಸ್ ಎಂಬ ಸಂಸ್ಥೆಗೆ ₹8.85 ಲಕ್ಷ ಹಣವನ್ನು ನಿಯಮ ಬಾಹಿರವಾಗಿ ಪಾವತಿ ಮಾಡಲಾಗಿದೆ. ಪ್ರಚಾರದ ಹಣದಲ್ಲಿ ₹5 ಕೋಟಿ ಹಣಕ್ಕೆ ಯಾವುದೇ ದಾಖಲೆಗಳನ್ನು ಇಲಾಖೆ ಒದಗಿಸಿಲ್ಲ” ಎಂದು ಆಯೋಗ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

“ಕೋವಿಡ್‌ ಆಪ್ತಮಿತ್ರ ಸೇವೆಯಲ್ಲಿಯೂ ಗೋಲ್‌ಮಾಲ್ ನಡೆದಿದೆ. ಈ ಸೇವೆಗಾಗಿ ಸುಮಾರು ₹5 ಕೋಟಿ ಹಣ ನಿಗದಿ ಮಾಡಲಾಗಿತ್ತು. ಆಪ್ತಮಿತ್ರ ಸೇವೆ ಒದಗಿಸಲು ಎರಡು ಬಿಪಿಓ ಸಂಸ್ಥೆಗಳಿಗೆ ₹4.9 ಕೋಟಿ ಹಣ ಸಂದಾಯ ಮಾಡಲಾಗಿದೆ” ಎಂಬುದನ್ನು ತನಿಖಾ ಆಯೋಗ ಗಮನಿಸಿದೆ.

“ಈ ಎರಡೂ ಬಿಪಿಓ ಸೇವಾ ಸಂಸ್ಥೆಗಳಿಗೆ ಯಾವುದೇ ಅಗ್ರಿಮೆಂಟ್ ಇಲ್ಲದೆ ಕೆಲಸ ಮಾಡಲಾಗಿದೆ. ಕೆಲಸ ನೀಡಿದ್ದಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯ ಬಳಿ ಯಾವುದೇ ಸೂಕ್ತ ದಾಖಲೆಗಳಿಲ್ಲ. ಬಿಪಿಓ ಸಂಸ್ಥೆಗಳಿಗೆ ಹಣ ಪಾವತಿ ಮಾಡಿರುವ ಫೈಲ್‌ ಅನ್ನು ತನಿಖಾ ಆಯೋಗಕ್ಕೆ ಇಲಾಖೆ ಒದಗಿಸಿಲ್ಲ. ಹೀಗಾಗಿ, ಆ ಬಿಪಿಓ ಸಂಸ್ಥೆಗೆ ನೀಡಿರುವ ಹಣವನ್ನ ವಾಪಸ್ ಪಡೆಯಬೇಕು” ಎಂದು ತನಿಖಾ ಆಯೋಗ ಶಿಫಾರಸ್ಸು ಮಾಡಿದೆ.

ಇದನ್ನೂ ಓದಿ; ಕೋವಿಡ್ ತನಿಖೆ ಕುರಿತು ಹೇಳಿಕೆ; ಪ್ರಲ್ಹಾದ್ ಜೋಶಿ ವಿರುದ್ಧ ಕ್ರಮಕ್ಕೆ ರಾಜ್ಯಪಾಲರಿಗೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...