Homeಮುಖಪುಟಲಕ್ಷಕ್ಕೂ ಹೆಚ್ಚಿನ ಕೋವಿಡ್ ಸಾವಿನ ಸಂಖ್ಯೆ ಮುಚ್ಚಿಟ್ಟಿದ್ದ ಬಿಜೆಪಿ ಸರ್ಕಾರ; ಜಸ್ಟೀಸ್ ಕುನ್ಹಾ ಆಯೋಗದ ವರದಿಯಲ್ಲಿ...

ಲಕ್ಷಕ್ಕೂ ಹೆಚ್ಚಿನ ಕೋವಿಡ್ ಸಾವಿನ ಸಂಖ್ಯೆ ಮುಚ್ಚಿಟ್ಟಿದ್ದ ಬಿಜೆಪಿ ಸರ್ಕಾರ; ಜಸ್ಟೀಸ್ ಕುನ್ಹಾ ಆಯೋಗದ ವರದಿಯಲ್ಲಿ ಬಹಿರಂಗ

- Advertisement -
- Advertisement -

ಬಿ.ಎಸ್‌ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು, ಬರೋಬ್ಬರಿ 1.2 ಲಕ್ಷ ಜನರ ಕೋವಿಡ್ ಸಾವಿನ ಅಂಕಿಅಂಶವನ್ನೇ ಮುಚ್ಚಿಟ್ಟಿತ್ತು ಎಂಬ ಆಘಾತಕಾರಿ ಮಾಹಿತಿಯು ನಿವೃತ್ತ ನ್ಯಾಯಮೂರ್ತಿ ಕುನ್ಹಾ ಆಯೋಗದ ತನಿಖಾ ವರದಿಯಿಂದ ಬಹಿರಂಗವಾಗಿದೆ ಎಂದು ‘ಈದಿನ.ಕಾಮ್’ ವರದಿ ಮಾಡಿದೆ.

ಬಿಜೆಪಿ ಅವಧಿಯ ಕೊರೋನ ಕಾಲದ ಆರ್ಥಿಕ ಹಗರಣದ ಕುರಿತು ತನಿಖೆ ನಡೆಸಿರುವ ನಿವೃತ್ತ ನ್ಯಾಯಮೂರ್ತಿ ಕುನ್ಹಾ ಆಯೋಗದ ವರದಿಯಲ್ಲಿ ಹಲವಾರು ಆಘಾತಕಾರಿ ಅಂಶಗಳು ಬಹಿರಂಗಗೊಳ್ಳುತ್ತಿವೆ. 2020ರಲ್ಲಿ ಅಂದಿನ ಬಿ.ಎಸ್‌ ಯಡಿಯೂರಪ್ಪ ನೇತೃತ್ವದ ಸರ್ಕಾರ ₹330 ಪಿಪಿಇ ಕಿಟ್‌ಗಳಿಗೆ ಚೂನಾ ಕಂಪನಿಯಿಂದ ₹2,117 ಕೊಟ್ಟು ಖರೀದಿ ಮಾಡಿದೆ ಎಂಬ ಸ್ಪೋಟಕ ಸತ್ಯ ಹೊರಬಿದ್ದಿದೆ.

ತಮ್ಮ ವೈಯಕ್ತಿಕ ಲಾಭ ಹಾಗೂ ಚೀನಾ ಮೂಲದ ಕಂಪನಿಗಳ ಲಾಭಕ್ಕಾಗಿ ಅಂದಿನ ಸಿಎಂ ಯಡಿಯೂರಪ್ಪ, ಆರೋಗ್ಯ ಸಚಿವ ಶ್ರೀರಾಮುಲು ಆರ್ಥಿಕ ಭ್ರಷ್ಟಾಚಾರ ಮಾಡಿದ್ದಾರೆ ಎಂಬ ಮಾಹಿತಿ ಕಳೆದ ವಾರ ಬಹಿರಂಗವಾಗಿತ್ತು. ಇದೀಗ, ಬಿಜೆಪಿ ಸರ್ಕಾರ, ಬರೋಬ್ಬರಿ 1.2 ಲಕ್ಷ ಜನರ ಸಾವಿನ ಅಂಕಿಅಂಶವನ್ನೇ ಮುಚ್ಚಿಟ್ಟಿತ್ತು ಎಂಬ ಆಘಾತಕಾರಿ ಮಾಹಿತಿಯು ತನಿಖಾ ವರದಿಯಿಂದ ಬಹಿರಂಗವಾಗಿದೆ.

ಕೇಂದ್ರ ಸರ್ಕಾರದ ಲೆಕ್ಕಪತ್ರ ಮತ್ತು ಅಂಕಿಅಂಶಗಳ ನಿರ್ದೇಶನಾಲಯವು ರಾಜ್ಯದಲ್ಲಿ 2020ರ ಜನವರಿಯಿಂದ ಜುಲೈವರೆಗೆ 2,69,029 ಹಾಗೂ 2021ರ ಜನವರಿಯಿಂದ ಜುಲೈವರೆಗೆ 4,26,943 ಮಂದಿ ಕೋವಿಡ್‌ನಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಿದೆ. ಅಂದರೆ, 2020ಕ್ಕಿಂತ 2021ರಲ್ಲಿ ಸಾವುಗಳ ಸಂಖ್ಯೆ 1,57,914ರಷ್ಟು ಹೆಚ್ಚಾಗಿದೆ. ಆದರೆ, ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸಾವಿನ ಸಂಖ್ಯೆಗಳ ಅಂತರವು ಕೇವಲ 37,206 ಎಂದು ತಪ್ಪು ಮಾಹಿತಿ ನೀಡಿದೆ. ಆ ಮೂಲಕ, ಸುಮಾರು 1,20,708 ಸಾವುಗಳ ಮಾಹಿತಿಯನ್ನೇ ಮುಚ್ಚಿಟ್ಟಿದೆ. ತಪ್ಪು ಮಾಹಿತಿ ನೀಡುವ ಮೂಲಕ ಸರ್ಕಾರ ಮತ್ತು ಅಧಿಕಾರಿಗಳು ಘೋರ ಅಪರಾಧ ಎಸಗಿದ್ದಾರೆ ಎಂದು ತನಿಖಾ ಆಯೋಗ ಹೇಳಿದೆ.

ಕೋವಿಡ್ ಹಗರಣದ ಸಂಬಂಧ ಕುನ್ಹಾ ಆಯೋಗ ಸಲ್ಲಿಸಿರುವ ಮಧ್ಯಂತರ ವರದಿಯಲ್ಲಿ, “ಬಿ.ಎಸ್. ಯಡಿಯೂರಪ್ಪ ಮತ್ತು ಶ್ರೀರಾಮುಲು ಅವಧಿಯಲ್ಲಿ ಸರ್ಕಾರವು ಕೊರೋನ ಟೆಸ್ಟ್‌ಗಾಗಿ ಖಾಸಗಿ ಲ್ಯಾಬ್‌ಗಳಿಗೆ ₹6.93 ಕೋಟಿ ಕೊಟ್ಟಿದೆ. ಆದರೆ, ಅವುಗಳ ಪೈಕಿ 14 ಲ್ಯಾಬ್‌ಗಳು ಐಸಿಎಂಆರ್​ನಿಂದ ಮ್ಯಾನತೆಯನ್ನೇ ಪಡೆದಿಲ್ಲ. ಅವುಗಳು ಟಿಪಿಸಿಆರ್‌ (TPCR) ಟೆಸ್ಟ್​ಗೆ ಆ ಲ್ಯಾಬ್‌ಗಳ ಸಾಮರ್ಥ್ಯ ಮತ್ತು ಕ್ಷಮತೆ ಗುರುತಿಸಲಾಗಿಲ್ಲ. ಸಾಮರ್ಥ್ಯ, ಕ್ಷಮತೆ ಪರಿಶೀಲಿಸದೆ ಖಾಸಗಿ ಲ್ಯಾಬ್‌ಗಳಿಗೆ ಕೊರೋನ ಪರೀಕ್ಷೆಗೆ ಅನುಮತಿ ನೀಡಿ, ಹಣ ಸಂದಾಯ ಮಾಡಲಾಗಿದೆ. ಅಲ್ಲದೆ, 8 ಲ್ಯಾಬ್‌ಗಳಿಗೆ ಅನುಮತಿ ಪಡೆಯದೆ ₹4.28 ಕೋಟಿ ಸಂದಾಯ ಮಾಡಲಾಗಿದೆ” ಎಂದು ಹೇಳಿದೆ.

ಮತ್ತೊಂದೆಡೆ, ಕೋವಿಡ್ ಜಾಹೀರಾತುವಿನಲ್ಲಿಯೂ ಅಕ್ರಮ ನಡೆದಿದೆ ಎಂದು ವರದಿ ಹೇಳಿದೆ. “ಕೋವಿಡ್‌ ಕುರಿತ ಮಾಹಿತಿ ಮತ್ತು ಪ್ರಚಾರಕ್ಕಾಗಿ ಇಟ್ಟಿದ್ದ ₹7.3 ಕೋಟಿ ಹಣದಲ್ಲೂ ಸಾಕಷ್ಟು ಅಕ್ರಮ ನಡೆದಿವೆ. ಬಿಎಂಟಿಸಿ ಮಾನ್ಯೇಜಿಂಗ್ ಡೈರೆಕ್ಟರ್‌ (ಎಂಡಿ) ಸಲಹೆ ಮೇರೆಗೆ ಯಾವುದೇ ಅನುಮತಿ ಪಡೆಯದೆ, ಚುಕ್ಕಿ ಟಾಕೀಸ್ ಎಂಬ ಸಂಸ್ಥೆಗೆ ₹8.85 ಲಕ್ಷ ಹಣವನ್ನು ನಿಯಮ ಬಾಹಿರವಾಗಿ ಪಾವತಿ ಮಾಡಲಾಗಿದೆ. ಪ್ರಚಾರದ ಹಣದಲ್ಲಿ ₹5 ಕೋಟಿ ಹಣಕ್ಕೆ ಯಾವುದೇ ದಾಖಲೆಗಳನ್ನು ಇಲಾಖೆ ಒದಗಿಸಿಲ್ಲ” ಎಂದು ಆಯೋಗ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

“ಕೋವಿಡ್‌ ಆಪ್ತಮಿತ್ರ ಸೇವೆಯಲ್ಲಿಯೂ ಗೋಲ್‌ಮಾಲ್ ನಡೆದಿದೆ. ಈ ಸೇವೆಗಾಗಿ ಸುಮಾರು ₹5 ಕೋಟಿ ಹಣ ನಿಗದಿ ಮಾಡಲಾಗಿತ್ತು. ಆಪ್ತಮಿತ್ರ ಸೇವೆ ಒದಗಿಸಲು ಎರಡು ಬಿಪಿಓ ಸಂಸ್ಥೆಗಳಿಗೆ ₹4.9 ಕೋಟಿ ಹಣ ಸಂದಾಯ ಮಾಡಲಾಗಿದೆ” ಎಂಬುದನ್ನು ತನಿಖಾ ಆಯೋಗ ಗಮನಿಸಿದೆ.

“ಈ ಎರಡೂ ಬಿಪಿಓ ಸೇವಾ ಸಂಸ್ಥೆಗಳಿಗೆ ಯಾವುದೇ ಅಗ್ರಿಮೆಂಟ್ ಇಲ್ಲದೆ ಕೆಲಸ ಮಾಡಲಾಗಿದೆ. ಕೆಲಸ ನೀಡಿದ್ದಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯ ಬಳಿ ಯಾವುದೇ ಸೂಕ್ತ ದಾಖಲೆಗಳಿಲ್ಲ. ಬಿಪಿಓ ಸಂಸ್ಥೆಗಳಿಗೆ ಹಣ ಪಾವತಿ ಮಾಡಿರುವ ಫೈಲ್‌ ಅನ್ನು ತನಿಖಾ ಆಯೋಗಕ್ಕೆ ಇಲಾಖೆ ಒದಗಿಸಿಲ್ಲ. ಹೀಗಾಗಿ, ಆ ಬಿಪಿಓ ಸಂಸ್ಥೆಗೆ ನೀಡಿರುವ ಹಣವನ್ನ ವಾಪಸ್ ಪಡೆಯಬೇಕು” ಎಂದು ತನಿಖಾ ಆಯೋಗ ಶಿಫಾರಸ್ಸು ಮಾಡಿದೆ.

ಇದನ್ನೂ ಓದಿ; ಕೋವಿಡ್ ತನಿಖೆ ಕುರಿತು ಹೇಳಿಕೆ; ಪ್ರಲ್ಹಾದ್ ಜೋಶಿ ವಿರುದ್ಧ ಕ್ರಮಕ್ಕೆ ರಾಜ್ಯಪಾಲರಿಗೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...