Homeಮುಖಪುಟಲಕ್ಷಕ್ಕೂ ಹೆಚ್ಚಿನ ಕೋವಿಡ್ ಸಾವಿನ ಸಂಖ್ಯೆ ಮುಚ್ಚಿಟ್ಟಿದ್ದ ಬಿಜೆಪಿ ಸರ್ಕಾರ; ಜಸ್ಟೀಸ್ ಕುನ್ಹಾ ಆಯೋಗದ ವರದಿಯಲ್ಲಿ...

ಲಕ್ಷಕ್ಕೂ ಹೆಚ್ಚಿನ ಕೋವಿಡ್ ಸಾವಿನ ಸಂಖ್ಯೆ ಮುಚ್ಚಿಟ್ಟಿದ್ದ ಬಿಜೆಪಿ ಸರ್ಕಾರ; ಜಸ್ಟೀಸ್ ಕುನ್ಹಾ ಆಯೋಗದ ವರದಿಯಲ್ಲಿ ಬಹಿರಂಗ

- Advertisement -
- Advertisement -

ಬಿ.ಎಸ್‌ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು, ಬರೋಬ್ಬರಿ 1.2 ಲಕ್ಷ ಜನರ ಕೋವಿಡ್ ಸಾವಿನ ಅಂಕಿಅಂಶವನ್ನೇ ಮುಚ್ಚಿಟ್ಟಿತ್ತು ಎಂಬ ಆಘಾತಕಾರಿ ಮಾಹಿತಿಯು ನಿವೃತ್ತ ನ್ಯಾಯಮೂರ್ತಿ ಕುನ್ಹಾ ಆಯೋಗದ ತನಿಖಾ ವರದಿಯಿಂದ ಬಹಿರಂಗವಾಗಿದೆ ಎಂದು ‘ಈದಿನ.ಕಾಮ್’ ವರದಿ ಮಾಡಿದೆ.

ಬಿಜೆಪಿ ಅವಧಿಯ ಕೊರೋನ ಕಾಲದ ಆರ್ಥಿಕ ಹಗರಣದ ಕುರಿತು ತನಿಖೆ ನಡೆಸಿರುವ ನಿವೃತ್ತ ನ್ಯಾಯಮೂರ್ತಿ ಕುನ್ಹಾ ಆಯೋಗದ ವರದಿಯಲ್ಲಿ ಹಲವಾರು ಆಘಾತಕಾರಿ ಅಂಶಗಳು ಬಹಿರಂಗಗೊಳ್ಳುತ್ತಿವೆ. 2020ರಲ್ಲಿ ಅಂದಿನ ಬಿ.ಎಸ್‌ ಯಡಿಯೂರಪ್ಪ ನೇತೃತ್ವದ ಸರ್ಕಾರ ₹330 ಪಿಪಿಇ ಕಿಟ್‌ಗಳಿಗೆ ಚೂನಾ ಕಂಪನಿಯಿಂದ ₹2,117 ಕೊಟ್ಟು ಖರೀದಿ ಮಾಡಿದೆ ಎಂಬ ಸ್ಪೋಟಕ ಸತ್ಯ ಹೊರಬಿದ್ದಿದೆ.

ತಮ್ಮ ವೈಯಕ್ತಿಕ ಲಾಭ ಹಾಗೂ ಚೀನಾ ಮೂಲದ ಕಂಪನಿಗಳ ಲಾಭಕ್ಕಾಗಿ ಅಂದಿನ ಸಿಎಂ ಯಡಿಯೂರಪ್ಪ, ಆರೋಗ್ಯ ಸಚಿವ ಶ್ರೀರಾಮುಲು ಆರ್ಥಿಕ ಭ್ರಷ್ಟಾಚಾರ ಮಾಡಿದ್ದಾರೆ ಎಂಬ ಮಾಹಿತಿ ಕಳೆದ ವಾರ ಬಹಿರಂಗವಾಗಿತ್ತು. ಇದೀಗ, ಬಿಜೆಪಿ ಸರ್ಕಾರ, ಬರೋಬ್ಬರಿ 1.2 ಲಕ್ಷ ಜನರ ಸಾವಿನ ಅಂಕಿಅಂಶವನ್ನೇ ಮುಚ್ಚಿಟ್ಟಿತ್ತು ಎಂಬ ಆಘಾತಕಾರಿ ಮಾಹಿತಿಯು ತನಿಖಾ ವರದಿಯಿಂದ ಬಹಿರಂಗವಾಗಿದೆ.

ಕೇಂದ್ರ ಸರ್ಕಾರದ ಲೆಕ್ಕಪತ್ರ ಮತ್ತು ಅಂಕಿಅಂಶಗಳ ನಿರ್ದೇಶನಾಲಯವು ರಾಜ್ಯದಲ್ಲಿ 2020ರ ಜನವರಿಯಿಂದ ಜುಲೈವರೆಗೆ 2,69,029 ಹಾಗೂ 2021ರ ಜನವರಿಯಿಂದ ಜುಲೈವರೆಗೆ 4,26,943 ಮಂದಿ ಕೋವಿಡ್‌ನಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಿದೆ. ಅಂದರೆ, 2020ಕ್ಕಿಂತ 2021ರಲ್ಲಿ ಸಾವುಗಳ ಸಂಖ್ಯೆ 1,57,914ರಷ್ಟು ಹೆಚ್ಚಾಗಿದೆ. ಆದರೆ, ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸಾವಿನ ಸಂಖ್ಯೆಗಳ ಅಂತರವು ಕೇವಲ 37,206 ಎಂದು ತಪ್ಪು ಮಾಹಿತಿ ನೀಡಿದೆ. ಆ ಮೂಲಕ, ಸುಮಾರು 1,20,708 ಸಾವುಗಳ ಮಾಹಿತಿಯನ್ನೇ ಮುಚ್ಚಿಟ್ಟಿದೆ. ತಪ್ಪು ಮಾಹಿತಿ ನೀಡುವ ಮೂಲಕ ಸರ್ಕಾರ ಮತ್ತು ಅಧಿಕಾರಿಗಳು ಘೋರ ಅಪರಾಧ ಎಸಗಿದ್ದಾರೆ ಎಂದು ತನಿಖಾ ಆಯೋಗ ಹೇಳಿದೆ.

ಕೋವಿಡ್ ಹಗರಣದ ಸಂಬಂಧ ಕುನ್ಹಾ ಆಯೋಗ ಸಲ್ಲಿಸಿರುವ ಮಧ್ಯಂತರ ವರದಿಯಲ್ಲಿ, “ಬಿ.ಎಸ್. ಯಡಿಯೂರಪ್ಪ ಮತ್ತು ಶ್ರೀರಾಮುಲು ಅವಧಿಯಲ್ಲಿ ಸರ್ಕಾರವು ಕೊರೋನ ಟೆಸ್ಟ್‌ಗಾಗಿ ಖಾಸಗಿ ಲ್ಯಾಬ್‌ಗಳಿಗೆ ₹6.93 ಕೋಟಿ ಕೊಟ್ಟಿದೆ. ಆದರೆ, ಅವುಗಳ ಪೈಕಿ 14 ಲ್ಯಾಬ್‌ಗಳು ಐಸಿಎಂಆರ್​ನಿಂದ ಮ್ಯಾನತೆಯನ್ನೇ ಪಡೆದಿಲ್ಲ. ಅವುಗಳು ಟಿಪಿಸಿಆರ್‌ (TPCR) ಟೆಸ್ಟ್​ಗೆ ಆ ಲ್ಯಾಬ್‌ಗಳ ಸಾಮರ್ಥ್ಯ ಮತ್ತು ಕ್ಷಮತೆ ಗುರುತಿಸಲಾಗಿಲ್ಲ. ಸಾಮರ್ಥ್ಯ, ಕ್ಷಮತೆ ಪರಿಶೀಲಿಸದೆ ಖಾಸಗಿ ಲ್ಯಾಬ್‌ಗಳಿಗೆ ಕೊರೋನ ಪರೀಕ್ಷೆಗೆ ಅನುಮತಿ ನೀಡಿ, ಹಣ ಸಂದಾಯ ಮಾಡಲಾಗಿದೆ. ಅಲ್ಲದೆ, 8 ಲ್ಯಾಬ್‌ಗಳಿಗೆ ಅನುಮತಿ ಪಡೆಯದೆ ₹4.28 ಕೋಟಿ ಸಂದಾಯ ಮಾಡಲಾಗಿದೆ” ಎಂದು ಹೇಳಿದೆ.

ಮತ್ತೊಂದೆಡೆ, ಕೋವಿಡ್ ಜಾಹೀರಾತುವಿನಲ್ಲಿಯೂ ಅಕ್ರಮ ನಡೆದಿದೆ ಎಂದು ವರದಿ ಹೇಳಿದೆ. “ಕೋವಿಡ್‌ ಕುರಿತ ಮಾಹಿತಿ ಮತ್ತು ಪ್ರಚಾರಕ್ಕಾಗಿ ಇಟ್ಟಿದ್ದ ₹7.3 ಕೋಟಿ ಹಣದಲ್ಲೂ ಸಾಕಷ್ಟು ಅಕ್ರಮ ನಡೆದಿವೆ. ಬಿಎಂಟಿಸಿ ಮಾನ್ಯೇಜಿಂಗ್ ಡೈರೆಕ್ಟರ್‌ (ಎಂಡಿ) ಸಲಹೆ ಮೇರೆಗೆ ಯಾವುದೇ ಅನುಮತಿ ಪಡೆಯದೆ, ಚುಕ್ಕಿ ಟಾಕೀಸ್ ಎಂಬ ಸಂಸ್ಥೆಗೆ ₹8.85 ಲಕ್ಷ ಹಣವನ್ನು ನಿಯಮ ಬಾಹಿರವಾಗಿ ಪಾವತಿ ಮಾಡಲಾಗಿದೆ. ಪ್ರಚಾರದ ಹಣದಲ್ಲಿ ₹5 ಕೋಟಿ ಹಣಕ್ಕೆ ಯಾವುದೇ ದಾಖಲೆಗಳನ್ನು ಇಲಾಖೆ ಒದಗಿಸಿಲ್ಲ” ಎಂದು ಆಯೋಗ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

“ಕೋವಿಡ್‌ ಆಪ್ತಮಿತ್ರ ಸೇವೆಯಲ್ಲಿಯೂ ಗೋಲ್‌ಮಾಲ್ ನಡೆದಿದೆ. ಈ ಸೇವೆಗಾಗಿ ಸುಮಾರು ₹5 ಕೋಟಿ ಹಣ ನಿಗದಿ ಮಾಡಲಾಗಿತ್ತು. ಆಪ್ತಮಿತ್ರ ಸೇವೆ ಒದಗಿಸಲು ಎರಡು ಬಿಪಿಓ ಸಂಸ್ಥೆಗಳಿಗೆ ₹4.9 ಕೋಟಿ ಹಣ ಸಂದಾಯ ಮಾಡಲಾಗಿದೆ” ಎಂಬುದನ್ನು ತನಿಖಾ ಆಯೋಗ ಗಮನಿಸಿದೆ.

“ಈ ಎರಡೂ ಬಿಪಿಓ ಸೇವಾ ಸಂಸ್ಥೆಗಳಿಗೆ ಯಾವುದೇ ಅಗ್ರಿಮೆಂಟ್ ಇಲ್ಲದೆ ಕೆಲಸ ಮಾಡಲಾಗಿದೆ. ಕೆಲಸ ನೀಡಿದ್ದಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯ ಬಳಿ ಯಾವುದೇ ಸೂಕ್ತ ದಾಖಲೆಗಳಿಲ್ಲ. ಬಿಪಿಓ ಸಂಸ್ಥೆಗಳಿಗೆ ಹಣ ಪಾವತಿ ಮಾಡಿರುವ ಫೈಲ್‌ ಅನ್ನು ತನಿಖಾ ಆಯೋಗಕ್ಕೆ ಇಲಾಖೆ ಒದಗಿಸಿಲ್ಲ. ಹೀಗಾಗಿ, ಆ ಬಿಪಿಓ ಸಂಸ್ಥೆಗೆ ನೀಡಿರುವ ಹಣವನ್ನ ವಾಪಸ್ ಪಡೆಯಬೇಕು” ಎಂದು ತನಿಖಾ ಆಯೋಗ ಶಿಫಾರಸ್ಸು ಮಾಡಿದೆ.

ಇದನ್ನೂ ಓದಿ; ಕೋವಿಡ್ ತನಿಖೆ ಕುರಿತು ಹೇಳಿಕೆ; ಪ್ರಲ್ಹಾದ್ ಜೋಶಿ ವಿರುದ್ಧ ಕ್ರಮಕ್ಕೆ ರಾಜ್ಯಪಾಲರಿಗೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...