Homeಕರ್ನಾಟಕಬಿಜೆಪಿ ಸರಕಾರ ಕೃಷಿ ಉತ್ಪನ್ನ ಮಾರಾಟದಲ್ಲಿಯೂ ಮಾಫಿಯ ಸೃಷ್ಠಿ ಮಾಡುತ್ತಿದೆ: ಕರ್ನಾಟಕ ಪ್ರಾಂತ ರೈತ ಸಂಘ

ಬಿಜೆಪಿ ಸರಕಾರ ಕೃಷಿ ಉತ್ಪನ್ನ ಮಾರಾಟದಲ್ಲಿಯೂ ಮಾಫಿಯ ಸೃಷ್ಠಿ ಮಾಡುತ್ತಿದೆ: ಕರ್ನಾಟಕ ಪ್ರಾಂತ ರೈತ ಸಂಘ

- Advertisement -
- Advertisement -

ರಾಜ್ಯ ಬಿಜೆಪಿ ನೇತೃತ್ವದ ಸರಕಾರ ರೈತರ ಕೃಷಿ ಉತ್ಪನ್ನಗಳ ಮಾರಾಟದಲ್ಲಿಯೂ ಮಾಫಿಯಾ ಸೃಷ್ಠಿ ಮಾಡುತ್ತಿದೆ. ರೈತರು ಇನ್ನು ಸುಮ್ಮನೆ ಕುಳಿತರೆ ಬೀದಿ ಪಾಲಾಗುವ ಪರಿಸ್ಥಿತಿ ಬರಲಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಾರುತಿ ಮಾನ್ಪಡೆ ವಿಜಯಪುರದಲ್ಲಿ ಇಂದು ತಿಳಿಸಿದ್ದಾರೆ.

ಜೂನ್ 27 ರಿಂದ ಒಂದು ವಾರಗಳ ಕಾಲ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ರಾಜ್ಯದ 1,000 ಭಾಗಗಳಲ್ಲಿ ಹೋರಾಟ ನಡೆಸಲು ರೈತ ಹಾಗೂ ಕಾರ್ಮಿಕ ಸಂಗಟನೆಗಳು ನಿರ್ಧರಿಸಿದ್ದು, ಇದಕ್ಕಾಗಿ 10 ಸಂಘಟನೆಗಳು ಸೇರಿಕೊಂಡು ಅಖಿಲ ಭಾರತ ಕಿಸಾನ್ ಸಂಘರ್ಷ ಸಮಿತಿ ರಚಿಸಿಕೊಂಡಿವೆ ಎಂದು ಅವರು ಹೇಳಿದ್ದಾರೆ.

“ಕೇಂದ್ರ ಸರ್ಕಾರ ಮೂರು ಸುಗ್ರಿವಾಜ್ಞೆಗಳನ್ನು ತಂದಿದ್ದು, ಎಪಿಎಂಸಿ ಕಾಯಿದೆಗೆ ತಿದ್ದುಪಡಿ ಮಾಡಿ ಒಂದು ದೇಶ ಒಂದು ಮಾರುಕಟ್ಟೆ ಹೆಸರಿನಲ್ಲಿ ಇಡೀ ದೇಶದ ಕೃಷಿ ಮಾರುಕಟ್ಟೆಯನ್ನು ಹಾಳು ಮಾಡಿದೆ. ಕಾರ್ಪೋರೇಟ್ ಕಂಪನಿಗಳಿಗೆ ಅನುಕೂಲ ಕಲ್ಪಿಸುತ್ತಿದೆ.” ಎಂದು ಅವರು ಆರೋಪಿಸಿದ್ದಾರೆ.

“ಈ ಕಾಯಿದೆಗಳು ರೈತರ ವಿರೋಧಿಯಾಗಿದ್ದು, ಈ ಹಿನ್ನೆಲೆಯಲ್ಲಿ ಕಾಯಿದೆಗಳನ್ನು ರದ್ದು ಮಾಡಲು ಅಖಿಲ ಭಾರತ ಕಿಸಾನ ಸಂಘರ್ಷ ಸಮಿತಿ ಜೂನ್ 10 ರಂದು ಸಭೆ ನಡೆಸಿ ಹೋರಾಟದ ರೂಪುರೇಷೆ ನಿರ್ಧರಿಸಿದೆ. ಅಲ್ಲದೇ, ಇದರ ಜೊತೆ ಕರ್ನಾಟಕದಲ್ಲಿ ತಿದ್ದುಪಡಿ ಮಾಡಲಾಗಿರುವ 1961 ಭೂ ಕಾಯಿದೆ ತಿದ್ದುಪಡಿಯನ್ನು ವಿರೋಧಿಸಿ ಈ ಹೋರಾಟ ನಡೆಸಲಾಗುತ್ತಿದೆ” ಎಂದು ಮಾರುತಿ ಮಾನ್ಪಡೆ ತಿಳಿಸಿದ್ದಾರೆ.

“ಯಾರು ಬೇಕಾದವರೂ ಕೃಷಿ ಭೂಮಿಯನ್ನು ಖರೀದಿಸುವುದರಿಂದ ಭೂ ಮಾಫಿಯಾ ಹೆಚ್ಚಾಗುತ್ತದೆ. ರಾಜ್ಯ ಬಿಜೆಪಿ ನೇತೃತ್ವದ ಸರಕಾರ ರೈತರ ಕೃಷಿ ಉತ್ಪನ್ನಗಳ ಮಾರಾಟದಲ್ಲಿಯೂ ಮಾಫಿಯಾ ಸೃಷ್ಠಿ ಮಾಡುತ್ತಿದ್ದು, ರೈತರು ಇನ್ನು ಸುಮ್ಮನೆ ಕುಳಿತರೆ ಅನ್ನದಾತರು ಬೀದಿ ಪಾಲಾಗುವ ಪರಿಸ್ಥಿತಿ ಬರಲಿದೆ” ಎಂದು ಅವರು ಹೇಳಿದ್ದಾರೆ.

“ಈ ಕಾಯಿದೆಯಿಂದ ವ್ಯವಸಾಯದಲ್ಲಿ ತೊಡಗಿರುವ ಎಲ್ಲ ರೈತರು, ಗೇಣಿದಾರರು, ಕೃಷಿ ಕೂಲಿಕಾರರು, ಕಾರ್ಮಿಕರು, ಕಸಬುದಾರರು ಮತ್ತು ಇದನ್ನೇ ನಂಬಿ ಕೆಲಸ ಮಾಡುವ ಸಣ್ಣ ವ್ಯಾಪಾರಿಗಳು, ಕೃಷಿ ವ್ಯಾಪಾರಿಗಳು ತೀವ್ರ ಸಂಕಷ್ಟಕ್ಕೆ ಒಳಗಾಗಲಿದ್ದಾರೆ” ಎಂದು ಎಚ್ಚರಿಸಿದ್ದಾರೆ.

“ಒಟ್ಟಾರೆ ಗ್ರಾಮೀಣ ಪ್ರದೇಶವನ್ನು ಸ್ಮಶಾನ ಮಾಡುವ ಮತ್ತು ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳನ್ನು ನಾಶ ಮಾಡಿ ರಾಜ್ಯವನ್ನು ತೀವ್ರ ಸಂಕಷ್ಟಕ್ಕೆ ನೂಕುವ ಹುನ್ನಾರ ಇದರ ಹಿಂದೆ ಅಡಗಿದೆ” ಎಂದು ಮಾರುತಿ ಮಾನ್ಪಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಓದಿ: ಎಲ್ಲರಿಗೂ ಭೂಮಿ ಕೊಡಿ, ಸರ್ಕಾರದ ಮುಂದೆ ರೈತರನ್ನು ಭಿಕ್ಷುಕರನ್ನಾಗಿ ಮಾಡಬೇಡಿ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...