Homeಕರ್ನಾಟಕಬಿಜೆಪಿ ಸರಕಾರ ಕೃಷಿ ಉತ್ಪನ್ನ ಮಾರಾಟದಲ್ಲಿಯೂ ಮಾಫಿಯ ಸೃಷ್ಠಿ ಮಾಡುತ್ತಿದೆ: ಕರ್ನಾಟಕ ಪ್ರಾಂತ ರೈತ ಸಂಘ

ಬಿಜೆಪಿ ಸರಕಾರ ಕೃಷಿ ಉತ್ಪನ್ನ ಮಾರಾಟದಲ್ಲಿಯೂ ಮಾಫಿಯ ಸೃಷ್ಠಿ ಮಾಡುತ್ತಿದೆ: ಕರ್ನಾಟಕ ಪ್ರಾಂತ ರೈತ ಸಂಘ

- Advertisement -
- Advertisement -

ರಾಜ್ಯ ಬಿಜೆಪಿ ನೇತೃತ್ವದ ಸರಕಾರ ರೈತರ ಕೃಷಿ ಉತ್ಪನ್ನಗಳ ಮಾರಾಟದಲ್ಲಿಯೂ ಮಾಫಿಯಾ ಸೃಷ್ಠಿ ಮಾಡುತ್ತಿದೆ. ರೈತರು ಇನ್ನು ಸುಮ್ಮನೆ ಕುಳಿತರೆ ಬೀದಿ ಪಾಲಾಗುವ ಪರಿಸ್ಥಿತಿ ಬರಲಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಾರುತಿ ಮಾನ್ಪಡೆ ವಿಜಯಪುರದಲ್ಲಿ ಇಂದು ತಿಳಿಸಿದ್ದಾರೆ.

ಜೂನ್ 27 ರಿಂದ ಒಂದು ವಾರಗಳ ಕಾಲ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ರಾಜ್ಯದ 1,000 ಭಾಗಗಳಲ್ಲಿ ಹೋರಾಟ ನಡೆಸಲು ರೈತ ಹಾಗೂ ಕಾರ್ಮಿಕ ಸಂಗಟನೆಗಳು ನಿರ್ಧರಿಸಿದ್ದು, ಇದಕ್ಕಾಗಿ 10 ಸಂಘಟನೆಗಳು ಸೇರಿಕೊಂಡು ಅಖಿಲ ಭಾರತ ಕಿಸಾನ್ ಸಂಘರ್ಷ ಸಮಿತಿ ರಚಿಸಿಕೊಂಡಿವೆ ಎಂದು ಅವರು ಹೇಳಿದ್ದಾರೆ.

“ಕೇಂದ್ರ ಸರ್ಕಾರ ಮೂರು ಸುಗ್ರಿವಾಜ್ಞೆಗಳನ್ನು ತಂದಿದ್ದು, ಎಪಿಎಂಸಿ ಕಾಯಿದೆಗೆ ತಿದ್ದುಪಡಿ ಮಾಡಿ ಒಂದು ದೇಶ ಒಂದು ಮಾರುಕಟ್ಟೆ ಹೆಸರಿನಲ್ಲಿ ಇಡೀ ದೇಶದ ಕೃಷಿ ಮಾರುಕಟ್ಟೆಯನ್ನು ಹಾಳು ಮಾಡಿದೆ. ಕಾರ್ಪೋರೇಟ್ ಕಂಪನಿಗಳಿಗೆ ಅನುಕೂಲ ಕಲ್ಪಿಸುತ್ತಿದೆ.” ಎಂದು ಅವರು ಆರೋಪಿಸಿದ್ದಾರೆ.

“ಈ ಕಾಯಿದೆಗಳು ರೈತರ ವಿರೋಧಿಯಾಗಿದ್ದು, ಈ ಹಿನ್ನೆಲೆಯಲ್ಲಿ ಕಾಯಿದೆಗಳನ್ನು ರದ್ದು ಮಾಡಲು ಅಖಿಲ ಭಾರತ ಕಿಸಾನ ಸಂಘರ್ಷ ಸಮಿತಿ ಜೂನ್ 10 ರಂದು ಸಭೆ ನಡೆಸಿ ಹೋರಾಟದ ರೂಪುರೇಷೆ ನಿರ್ಧರಿಸಿದೆ. ಅಲ್ಲದೇ, ಇದರ ಜೊತೆ ಕರ್ನಾಟಕದಲ್ಲಿ ತಿದ್ದುಪಡಿ ಮಾಡಲಾಗಿರುವ 1961 ಭೂ ಕಾಯಿದೆ ತಿದ್ದುಪಡಿಯನ್ನು ವಿರೋಧಿಸಿ ಈ ಹೋರಾಟ ನಡೆಸಲಾಗುತ್ತಿದೆ” ಎಂದು ಮಾರುತಿ ಮಾನ್ಪಡೆ ತಿಳಿಸಿದ್ದಾರೆ.

“ಯಾರು ಬೇಕಾದವರೂ ಕೃಷಿ ಭೂಮಿಯನ್ನು ಖರೀದಿಸುವುದರಿಂದ ಭೂ ಮಾಫಿಯಾ ಹೆಚ್ಚಾಗುತ್ತದೆ. ರಾಜ್ಯ ಬಿಜೆಪಿ ನೇತೃತ್ವದ ಸರಕಾರ ರೈತರ ಕೃಷಿ ಉತ್ಪನ್ನಗಳ ಮಾರಾಟದಲ್ಲಿಯೂ ಮಾಫಿಯಾ ಸೃಷ್ಠಿ ಮಾಡುತ್ತಿದ್ದು, ರೈತರು ಇನ್ನು ಸುಮ್ಮನೆ ಕುಳಿತರೆ ಅನ್ನದಾತರು ಬೀದಿ ಪಾಲಾಗುವ ಪರಿಸ್ಥಿತಿ ಬರಲಿದೆ” ಎಂದು ಅವರು ಹೇಳಿದ್ದಾರೆ.

“ಈ ಕಾಯಿದೆಯಿಂದ ವ್ಯವಸಾಯದಲ್ಲಿ ತೊಡಗಿರುವ ಎಲ್ಲ ರೈತರು, ಗೇಣಿದಾರರು, ಕೃಷಿ ಕೂಲಿಕಾರರು, ಕಾರ್ಮಿಕರು, ಕಸಬುದಾರರು ಮತ್ತು ಇದನ್ನೇ ನಂಬಿ ಕೆಲಸ ಮಾಡುವ ಸಣ್ಣ ವ್ಯಾಪಾರಿಗಳು, ಕೃಷಿ ವ್ಯಾಪಾರಿಗಳು ತೀವ್ರ ಸಂಕಷ್ಟಕ್ಕೆ ಒಳಗಾಗಲಿದ್ದಾರೆ” ಎಂದು ಎಚ್ಚರಿಸಿದ್ದಾರೆ.

“ಒಟ್ಟಾರೆ ಗ್ರಾಮೀಣ ಪ್ರದೇಶವನ್ನು ಸ್ಮಶಾನ ಮಾಡುವ ಮತ್ತು ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳನ್ನು ನಾಶ ಮಾಡಿ ರಾಜ್ಯವನ್ನು ತೀವ್ರ ಸಂಕಷ್ಟಕ್ಕೆ ನೂಕುವ ಹುನ್ನಾರ ಇದರ ಹಿಂದೆ ಅಡಗಿದೆ” ಎಂದು ಮಾರುತಿ ಮಾನ್ಪಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಓದಿ: ಎಲ್ಲರಿಗೂ ಭೂಮಿ ಕೊಡಿ, ಸರ್ಕಾರದ ಮುಂದೆ ರೈತರನ್ನು ಭಿಕ್ಷುಕರನ್ನಾಗಿ ಮಾಡಬೇಡಿ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...