Homeಕರ್ನಾಟಕವಿದ್ಯುತ್ ದರ ಏರಿಸಿದ ಬಿಜೆಪಿ ಸರ್ಕಾರ ಆತ್ಮವಂಚಕತನದ ಮಾತಾಡುತ್ತಿದೆ: ಕಾಂಗ್ರೆಸ್ ಆಕ್ರೋಶ

ವಿದ್ಯುತ್ ದರ ಏರಿಸಿದ ಬಿಜೆಪಿ ಸರ್ಕಾರ ಆತ್ಮವಂಚಕತನದ ಮಾತಾಡುತ್ತಿದೆ: ಕಾಂಗ್ರೆಸ್ ಆಕ್ರೋಶ

ಚುನಾವಣೆ ಮುಗಿದ ಎರಡು ದಿನ ನಂತರ ಮೇ 12ರಂದು ದರ ಏರಿಕೆಗೆ ಒಪ್ಪಿಗೆ ನೀಡಲಾಗಿತ್ತು. ಹಾಗಾಗಿ ಬಿಜೆಪಿ ಸರ್ಕಾರ ಇದ್ದಾಗಲೇ ಈ ಆದೇಶ ಹೊರಡಿಸಿರುವುದು ಸ್ಪಷ್ಟವಾಗಿದೆ.

- Advertisement -
- Advertisement -

ವಿದ್ಯುತ್ ದರ ಏರಿಸಿ, ಚುನಾವಣೆಯ ನಂತರ ಜಾರಿಗೆ ಬರುವಂತೆ ತಂತ್ರ ರೂಪಿಸಿದ ಬಿಜೆಪಿ ಪಕ್ಷವು
ಈಗ ವಿದ್ಯುತ್ ದರ ಏರಿಕೆಯ ಬಗ್ಗೆ ಆತ್ಮವಂಚಕತನದ ಮಾತಾಡುತ್ತಿದೆ.. ಬಿಜೆಪಿಗೆ ಆತ್ಮ ಇದ್ದರೆ ಆತ್ಮಸಾಕ್ಷಿಯಿಂದ ಬೆಲೆ ಏರಿಸಿದ್ದನ್ನು ಒಪ್ಪಿಕೊಂಡು ಜನರ ಕ್ಷಮೆ ಕೇಳಲಿ ಎಂದು ಕಾಂಗ್ರೆಸ್ ಪಕ್ಷ ಆಗ್ರಹಿಸಿದೆ.

ಬಿಜೆಪಿ ಪಕ್ಷ ಮೇ 12 ರಂದು ವಿದ್ಯುತ್ ದರ ಏರಿಸಿ ಈಗ ನಮ್ಮ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

“ಮುಂಬಾಗಿಲಿನಲ್ಲಿ ನಿಂತು ಎಲ್ಲರಿಗೂ ಉಚಿತ ವಿದ್ಯುತ್ ಅಂತ ಹೇಳಿ, ಹಿಂಬಾಗಿಲಿನಿಂದ ವಿದ್ಯುತ್ ಬೆಲೆಗಳನ್ನು ಗಗನಕ್ಕೆ ಏರಿಸಿರುವ #ATMSarkara ತಂತ್ರ ಬಯಲಾಗಿದೆ. ಸಿದ್ದರಾಮಯ್ಯನವರೇ, ಇದೀಗ ತಮ್ಮದೇ ಪಕ್ಷದ ಮತ್ತೋರ್ವ ಶಾಸಕ ತನ್ವೀರ್ ಸೇಠ್‌ರವರು ನಿಮಗೆ ಪತ್ರಬರೆದು ನೀವು ಮಾಡುತ್ತಿರುವುದು ತಪ್ಪು ಎಂದು ಹೇಳಿದರೂ, ಅದನ್ನು ಲೆಕ್ಕಿಸದಿರುವಷ್ಟು ಭಂಡರಾಗಿದ್ದೀರ? ತಮ್ಮ ಭಂಡತನದಿಂದ ರಾಜ್ಯಕ್ಕೆ ಕೆಡಕಾಗುತ್ತಿದೆ ನೆನಪಿರಲಿ” ಎಂದು ಇಂದು ಬೆಳಿಗ್ಗೆ ಬಿಜೆಪಿ ಟ್ವೀಟ್ ಮಾಡಿದೆ.

ವಿದ್ಯುತ್ ದರ ಏರಿಕೆಗೆ ಯಾರು ಕಾರಣ?

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (ಕೆಇಆರ್‌ಸಿ) ಏಪ್ರಿಲ್ 1ರಿಂದ ಪೂರ್ವಾನ್ವಯವಾಗುವಂತೆ ವಿದ್ಯುತ್ ದರ ಹೆಚ್ಚಿಸಿ ಮೇ 12ರಂದು ಆದೇಶ ಹೊರಡಿಸಿದೆ. ಅದರಂತೆ ಜೂನ್ ತಿಂಗಳಿನಿಂದ ಗ್ರಾಹಕರಿಗೆ ಎರಡು ಸ್ತರಗಳಲ್ಲಿ (ಸ್ಪ್ಯಾಬ್‌ಗಳಲ್ಲಿ) ವಿದ್ಯುತ್‌ ಯೂನಿಟ್ ದರ ನಿಗದಿಪಡಿಸಿದೆ. ಗ್ರಾಹಕರು ಬಳಸಿದ 100 ಯೂನಿಟ್‌ವರೆಗಿನ ವಿದ್ಯುತ್‌ಗೆ ಪ್ರತಿ ಯೂನಿಟ್‌ಗೆ ‍4.15 ಪೈಸೆ ವಿಧಿಸಲಾಗುತ್ತಿದೆ. 100 ಯೂನಿಟ್ ಮೀರಿದರೆ, ಬಳಸಿದ ಅಷ್ಟೂ ಯೂನಿಟ್‌ ವಿದ್ಯುತ್‌ಗೆ 7ರೂನಂತೆ ದರ ವಿಧಿಸಲಾಗುತ್ತಿದೆ. ಹೀಗಾಗಿ, ಜುಲೈ ತಿಂಗಳಲ್ಲಿ 100 ಯೂನಿಟ್‌ಗಿಂತ ಹೆಚ್ಚು ವಿದ್ಯುತ್‌ ಬಳಕೆ ಮಾಡಿದ ಗ್ರಾಹಕರಿಗೆ ಪ್ರತಿ ಯೂನಿಟ್‌ಗೆ 7ರೂ ದರ ಲೆಕ್ಕ ಹಾಕಿ ಬಿಲ್ ನೀಡಲಾಗಿದೆ. ಹಾಗಾಗಿ ಹಲವರ ವಿದ್ಯುತ್ ಬಿಲ್ ಡಬಲ್ ಆಗಿದೆ.

ವಿದ್ಯುತ್‌ ದರ ಏರಿಕೆ ಪ್ರಸ್ತಾವನೆಯನ್ನು ಎಸ್ಕಾಂಗಳು ಕೆಇಆರ್‌ಸಿ ಮುಂದೆ ಇಟ್ಟಿದ್ದರೂ ಚುನಾವಣೆ ನಡೆಯುತ್ತಿದ್ದ ಹೊತ್ತಿನಲ್ಲಿ ಅನುಮೋದನೆ ನೀಡಿರಲಿಲ್ಲ. ಚುನಾವಣೆ ಮುಗಿದ ಎರಡು ದಿನ ನಂತರ ಮೇ 12ರಂದು ದರ ಏರಿಕೆಗೆ ಒಪ್ಪಿಗೆ ನೀಡಲಾಗಿತ್ತು. ಹಾಗಾಗಿ ಬಿಜೆಪಿ ಸರ್ಕಾರ ಇದ್ದಾಗಲೇ ಈ ಆದೇಶ ಹೊರಡಿಸಿರುವುದು ಸ್ಪಷ್ಟವಾಗಿದೆ.

ಬೊಮ್ಮಾಯಿ ಸರ್ಕಾರದ ವಿದ್ಯುತ್ ದರ ಏರಿಕೆ ಆದೇಶ ವಾಪಸ್ ಪಡೆಯಲು ಆಗ್ರಹ

ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸಿಎಂ ಆಗಿದ್ದ ಬಸವರಾಜ ಬೊಮ್ಮಾಯಿಯವರ ವಿದ್ಯುತ್ ಬೆಲೆ ಏರಿಕೆ ಆದೇಶ ವಾಪಸ್ ಪಡೆಯಿರಿ ಎಂದು ಮೈಸೂರಿನ ಶಾಸಕ ತನ್ವೀರ್ ಸೇಠ್‌ರವರು ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ.

ವಿದ್ಯುತ್ ಬೆಲೆ ಏರಿಕೆ ನಿರ್ಧಾರವನ್ನು ಹಿಂದಿನ ಬಿಜೆಪಿ ಸರ್ಕಾರ ತೆಗೆದುಕೊಂಡಿದೆ. ಆದರೆ ಜನರು ಈಗಿನ ಕಾಂಗ್ರೆಸ್ ಸರ್ಕಾರ ಬೆಲೆ ಏರಿಸಿದೆ ಎಂದು ತಪ್ಪು ಇಳಿಸಿದ್ದಾರೆ. ಇದರಿಂದ ಪಕ್ಷದ ಗೌರವ ಹಾಳಾಗುತ್ತಿದೆ. ಹಾಗಾಗಿ ವಿದ್ಯುತ್ ಬೆಲೆ ಏರಿಕೆ ಆದೇಶವನ್ನು ವಾಪಸ್ ಪಡೆಯಿರಿ ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಬೊಮ್ಮಾಯಿ ಸರ್ಕಾರದ ವಿದ್ಯುತ್ ಬೆಲೆ ಏರಿಕೆ ಆದೇಶ ವಾಪಸ್ ಪಡೆಯಿರಿ: ಸಿಎಂಗೆ ಶಾಸಕ ತನ್ವೀರ್ ಸೇಠ್ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...