Homeಕರ್ನಾಟಕವಿದ್ಯುತ್ ದರ ಏರಿಸಿದ ಬಿಜೆಪಿ ಸರ್ಕಾರ ಆತ್ಮವಂಚಕತನದ ಮಾತಾಡುತ್ತಿದೆ: ಕಾಂಗ್ರೆಸ್ ಆಕ್ರೋಶ

ವಿದ್ಯುತ್ ದರ ಏರಿಸಿದ ಬಿಜೆಪಿ ಸರ್ಕಾರ ಆತ್ಮವಂಚಕತನದ ಮಾತಾಡುತ್ತಿದೆ: ಕಾಂಗ್ರೆಸ್ ಆಕ್ರೋಶ

ಚುನಾವಣೆ ಮುಗಿದ ಎರಡು ದಿನ ನಂತರ ಮೇ 12ರಂದು ದರ ಏರಿಕೆಗೆ ಒಪ್ಪಿಗೆ ನೀಡಲಾಗಿತ್ತು. ಹಾಗಾಗಿ ಬಿಜೆಪಿ ಸರ್ಕಾರ ಇದ್ದಾಗಲೇ ಈ ಆದೇಶ ಹೊರಡಿಸಿರುವುದು ಸ್ಪಷ್ಟವಾಗಿದೆ.

- Advertisement -
- Advertisement -

ವಿದ್ಯುತ್ ದರ ಏರಿಸಿ, ಚುನಾವಣೆಯ ನಂತರ ಜಾರಿಗೆ ಬರುವಂತೆ ತಂತ್ರ ರೂಪಿಸಿದ ಬಿಜೆಪಿ ಪಕ್ಷವು
ಈಗ ವಿದ್ಯುತ್ ದರ ಏರಿಕೆಯ ಬಗ್ಗೆ ಆತ್ಮವಂಚಕತನದ ಮಾತಾಡುತ್ತಿದೆ.. ಬಿಜೆಪಿಗೆ ಆತ್ಮ ಇದ್ದರೆ ಆತ್ಮಸಾಕ್ಷಿಯಿಂದ ಬೆಲೆ ಏರಿಸಿದ್ದನ್ನು ಒಪ್ಪಿಕೊಂಡು ಜನರ ಕ್ಷಮೆ ಕೇಳಲಿ ಎಂದು ಕಾಂಗ್ರೆಸ್ ಪಕ್ಷ ಆಗ್ರಹಿಸಿದೆ.

ಬಿಜೆಪಿ ಪಕ್ಷ ಮೇ 12 ರಂದು ವಿದ್ಯುತ್ ದರ ಏರಿಸಿ ಈಗ ನಮ್ಮ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

“ಮುಂಬಾಗಿಲಿನಲ್ಲಿ ನಿಂತು ಎಲ್ಲರಿಗೂ ಉಚಿತ ವಿದ್ಯುತ್ ಅಂತ ಹೇಳಿ, ಹಿಂಬಾಗಿಲಿನಿಂದ ವಿದ್ಯುತ್ ಬೆಲೆಗಳನ್ನು ಗಗನಕ್ಕೆ ಏರಿಸಿರುವ #ATMSarkara ತಂತ್ರ ಬಯಲಾಗಿದೆ. ಸಿದ್ದರಾಮಯ್ಯನವರೇ, ಇದೀಗ ತಮ್ಮದೇ ಪಕ್ಷದ ಮತ್ತೋರ್ವ ಶಾಸಕ ತನ್ವೀರ್ ಸೇಠ್‌ರವರು ನಿಮಗೆ ಪತ್ರಬರೆದು ನೀವು ಮಾಡುತ್ತಿರುವುದು ತಪ್ಪು ಎಂದು ಹೇಳಿದರೂ, ಅದನ್ನು ಲೆಕ್ಕಿಸದಿರುವಷ್ಟು ಭಂಡರಾಗಿದ್ದೀರ? ತಮ್ಮ ಭಂಡತನದಿಂದ ರಾಜ್ಯಕ್ಕೆ ಕೆಡಕಾಗುತ್ತಿದೆ ನೆನಪಿರಲಿ” ಎಂದು ಇಂದು ಬೆಳಿಗ್ಗೆ ಬಿಜೆಪಿ ಟ್ವೀಟ್ ಮಾಡಿದೆ.

ವಿದ್ಯುತ್ ದರ ಏರಿಕೆಗೆ ಯಾರು ಕಾರಣ?

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (ಕೆಇಆರ್‌ಸಿ) ಏಪ್ರಿಲ್ 1ರಿಂದ ಪೂರ್ವಾನ್ವಯವಾಗುವಂತೆ ವಿದ್ಯುತ್ ದರ ಹೆಚ್ಚಿಸಿ ಮೇ 12ರಂದು ಆದೇಶ ಹೊರಡಿಸಿದೆ. ಅದರಂತೆ ಜೂನ್ ತಿಂಗಳಿನಿಂದ ಗ್ರಾಹಕರಿಗೆ ಎರಡು ಸ್ತರಗಳಲ್ಲಿ (ಸ್ಪ್ಯಾಬ್‌ಗಳಲ್ಲಿ) ವಿದ್ಯುತ್‌ ಯೂನಿಟ್ ದರ ನಿಗದಿಪಡಿಸಿದೆ. ಗ್ರಾಹಕರು ಬಳಸಿದ 100 ಯೂನಿಟ್‌ವರೆಗಿನ ವಿದ್ಯುತ್‌ಗೆ ಪ್ರತಿ ಯೂನಿಟ್‌ಗೆ ‍4.15 ಪೈಸೆ ವಿಧಿಸಲಾಗುತ್ತಿದೆ. 100 ಯೂನಿಟ್ ಮೀರಿದರೆ, ಬಳಸಿದ ಅಷ್ಟೂ ಯೂನಿಟ್‌ ವಿದ್ಯುತ್‌ಗೆ 7ರೂನಂತೆ ದರ ವಿಧಿಸಲಾಗುತ್ತಿದೆ. ಹೀಗಾಗಿ, ಜುಲೈ ತಿಂಗಳಲ್ಲಿ 100 ಯೂನಿಟ್‌ಗಿಂತ ಹೆಚ್ಚು ವಿದ್ಯುತ್‌ ಬಳಕೆ ಮಾಡಿದ ಗ್ರಾಹಕರಿಗೆ ಪ್ರತಿ ಯೂನಿಟ್‌ಗೆ 7ರೂ ದರ ಲೆಕ್ಕ ಹಾಕಿ ಬಿಲ್ ನೀಡಲಾಗಿದೆ. ಹಾಗಾಗಿ ಹಲವರ ವಿದ್ಯುತ್ ಬಿಲ್ ಡಬಲ್ ಆಗಿದೆ.

ವಿದ್ಯುತ್‌ ದರ ಏರಿಕೆ ಪ್ರಸ್ತಾವನೆಯನ್ನು ಎಸ್ಕಾಂಗಳು ಕೆಇಆರ್‌ಸಿ ಮುಂದೆ ಇಟ್ಟಿದ್ದರೂ ಚುನಾವಣೆ ನಡೆಯುತ್ತಿದ್ದ ಹೊತ್ತಿನಲ್ಲಿ ಅನುಮೋದನೆ ನೀಡಿರಲಿಲ್ಲ. ಚುನಾವಣೆ ಮುಗಿದ ಎರಡು ದಿನ ನಂತರ ಮೇ 12ರಂದು ದರ ಏರಿಕೆಗೆ ಒಪ್ಪಿಗೆ ನೀಡಲಾಗಿತ್ತು. ಹಾಗಾಗಿ ಬಿಜೆಪಿ ಸರ್ಕಾರ ಇದ್ದಾಗಲೇ ಈ ಆದೇಶ ಹೊರಡಿಸಿರುವುದು ಸ್ಪಷ್ಟವಾಗಿದೆ.

ಬೊಮ್ಮಾಯಿ ಸರ್ಕಾರದ ವಿದ್ಯುತ್ ದರ ಏರಿಕೆ ಆದೇಶ ವಾಪಸ್ ಪಡೆಯಲು ಆಗ್ರಹ

ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸಿಎಂ ಆಗಿದ್ದ ಬಸವರಾಜ ಬೊಮ್ಮಾಯಿಯವರ ವಿದ್ಯುತ್ ಬೆಲೆ ಏರಿಕೆ ಆದೇಶ ವಾಪಸ್ ಪಡೆಯಿರಿ ಎಂದು ಮೈಸೂರಿನ ಶಾಸಕ ತನ್ವೀರ್ ಸೇಠ್‌ರವರು ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ.

ವಿದ್ಯುತ್ ಬೆಲೆ ಏರಿಕೆ ನಿರ್ಧಾರವನ್ನು ಹಿಂದಿನ ಬಿಜೆಪಿ ಸರ್ಕಾರ ತೆಗೆದುಕೊಂಡಿದೆ. ಆದರೆ ಜನರು ಈಗಿನ ಕಾಂಗ್ರೆಸ್ ಸರ್ಕಾರ ಬೆಲೆ ಏರಿಸಿದೆ ಎಂದು ತಪ್ಪು ಇಳಿಸಿದ್ದಾರೆ. ಇದರಿಂದ ಪಕ್ಷದ ಗೌರವ ಹಾಳಾಗುತ್ತಿದೆ. ಹಾಗಾಗಿ ವಿದ್ಯುತ್ ಬೆಲೆ ಏರಿಕೆ ಆದೇಶವನ್ನು ವಾಪಸ್ ಪಡೆಯಿರಿ ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಬೊಮ್ಮಾಯಿ ಸರ್ಕಾರದ ವಿದ್ಯುತ್ ಬೆಲೆ ಏರಿಕೆ ಆದೇಶ ವಾಪಸ್ ಪಡೆಯಿರಿ: ಸಿಎಂಗೆ ಶಾಸಕ ತನ್ವೀರ್ ಸೇಠ್ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...