Homeಕರ್ನಾಟಕವಿದ್ಯುತ್ ದರ ಏರಿಸಿದ ಬಿಜೆಪಿ ಸರ್ಕಾರ ಆತ್ಮವಂಚಕತನದ ಮಾತಾಡುತ್ತಿದೆ: ಕಾಂಗ್ರೆಸ್ ಆಕ್ರೋಶ

ವಿದ್ಯುತ್ ದರ ಏರಿಸಿದ ಬಿಜೆಪಿ ಸರ್ಕಾರ ಆತ್ಮವಂಚಕತನದ ಮಾತಾಡುತ್ತಿದೆ: ಕಾಂಗ್ರೆಸ್ ಆಕ್ರೋಶ

ಚುನಾವಣೆ ಮುಗಿದ ಎರಡು ದಿನ ನಂತರ ಮೇ 12ರಂದು ದರ ಏರಿಕೆಗೆ ಒಪ್ಪಿಗೆ ನೀಡಲಾಗಿತ್ತು. ಹಾಗಾಗಿ ಬಿಜೆಪಿ ಸರ್ಕಾರ ಇದ್ದಾಗಲೇ ಈ ಆದೇಶ ಹೊರಡಿಸಿರುವುದು ಸ್ಪಷ್ಟವಾಗಿದೆ.

- Advertisement -
- Advertisement -

ವಿದ್ಯುತ್ ದರ ಏರಿಸಿ, ಚುನಾವಣೆಯ ನಂತರ ಜಾರಿಗೆ ಬರುವಂತೆ ತಂತ್ರ ರೂಪಿಸಿದ ಬಿಜೆಪಿ ಪಕ್ಷವು
ಈಗ ವಿದ್ಯುತ್ ದರ ಏರಿಕೆಯ ಬಗ್ಗೆ ಆತ್ಮವಂಚಕತನದ ಮಾತಾಡುತ್ತಿದೆ.. ಬಿಜೆಪಿಗೆ ಆತ್ಮ ಇದ್ದರೆ ಆತ್ಮಸಾಕ್ಷಿಯಿಂದ ಬೆಲೆ ಏರಿಸಿದ್ದನ್ನು ಒಪ್ಪಿಕೊಂಡು ಜನರ ಕ್ಷಮೆ ಕೇಳಲಿ ಎಂದು ಕಾಂಗ್ರೆಸ್ ಪಕ್ಷ ಆಗ್ರಹಿಸಿದೆ.

ಬಿಜೆಪಿ ಪಕ್ಷ ಮೇ 12 ರಂದು ವಿದ್ಯುತ್ ದರ ಏರಿಸಿ ಈಗ ನಮ್ಮ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

“ಮುಂಬಾಗಿಲಿನಲ್ಲಿ ನಿಂತು ಎಲ್ಲರಿಗೂ ಉಚಿತ ವಿದ್ಯುತ್ ಅಂತ ಹೇಳಿ, ಹಿಂಬಾಗಿಲಿನಿಂದ ವಿದ್ಯುತ್ ಬೆಲೆಗಳನ್ನು ಗಗನಕ್ಕೆ ಏರಿಸಿರುವ #ATMSarkara ತಂತ್ರ ಬಯಲಾಗಿದೆ. ಸಿದ್ದರಾಮಯ್ಯನವರೇ, ಇದೀಗ ತಮ್ಮದೇ ಪಕ್ಷದ ಮತ್ತೋರ್ವ ಶಾಸಕ ತನ್ವೀರ್ ಸೇಠ್‌ರವರು ನಿಮಗೆ ಪತ್ರಬರೆದು ನೀವು ಮಾಡುತ್ತಿರುವುದು ತಪ್ಪು ಎಂದು ಹೇಳಿದರೂ, ಅದನ್ನು ಲೆಕ್ಕಿಸದಿರುವಷ್ಟು ಭಂಡರಾಗಿದ್ದೀರ? ತಮ್ಮ ಭಂಡತನದಿಂದ ರಾಜ್ಯಕ್ಕೆ ಕೆಡಕಾಗುತ್ತಿದೆ ನೆನಪಿರಲಿ” ಎಂದು ಇಂದು ಬೆಳಿಗ್ಗೆ ಬಿಜೆಪಿ ಟ್ವೀಟ್ ಮಾಡಿದೆ.

ವಿದ್ಯುತ್ ದರ ಏರಿಕೆಗೆ ಯಾರು ಕಾರಣ?

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (ಕೆಇಆರ್‌ಸಿ) ಏಪ್ರಿಲ್ 1ರಿಂದ ಪೂರ್ವಾನ್ವಯವಾಗುವಂತೆ ವಿದ್ಯುತ್ ದರ ಹೆಚ್ಚಿಸಿ ಮೇ 12ರಂದು ಆದೇಶ ಹೊರಡಿಸಿದೆ. ಅದರಂತೆ ಜೂನ್ ತಿಂಗಳಿನಿಂದ ಗ್ರಾಹಕರಿಗೆ ಎರಡು ಸ್ತರಗಳಲ್ಲಿ (ಸ್ಪ್ಯಾಬ್‌ಗಳಲ್ಲಿ) ವಿದ್ಯುತ್‌ ಯೂನಿಟ್ ದರ ನಿಗದಿಪಡಿಸಿದೆ. ಗ್ರಾಹಕರು ಬಳಸಿದ 100 ಯೂನಿಟ್‌ವರೆಗಿನ ವಿದ್ಯುತ್‌ಗೆ ಪ್ರತಿ ಯೂನಿಟ್‌ಗೆ ‍4.15 ಪೈಸೆ ವಿಧಿಸಲಾಗುತ್ತಿದೆ. 100 ಯೂನಿಟ್ ಮೀರಿದರೆ, ಬಳಸಿದ ಅಷ್ಟೂ ಯೂನಿಟ್‌ ವಿದ್ಯುತ್‌ಗೆ 7ರೂನಂತೆ ದರ ವಿಧಿಸಲಾಗುತ್ತಿದೆ. ಹೀಗಾಗಿ, ಜುಲೈ ತಿಂಗಳಲ್ಲಿ 100 ಯೂನಿಟ್‌ಗಿಂತ ಹೆಚ್ಚು ವಿದ್ಯುತ್‌ ಬಳಕೆ ಮಾಡಿದ ಗ್ರಾಹಕರಿಗೆ ಪ್ರತಿ ಯೂನಿಟ್‌ಗೆ 7ರೂ ದರ ಲೆಕ್ಕ ಹಾಕಿ ಬಿಲ್ ನೀಡಲಾಗಿದೆ. ಹಾಗಾಗಿ ಹಲವರ ವಿದ್ಯುತ್ ಬಿಲ್ ಡಬಲ್ ಆಗಿದೆ.

ವಿದ್ಯುತ್‌ ದರ ಏರಿಕೆ ಪ್ರಸ್ತಾವನೆಯನ್ನು ಎಸ್ಕಾಂಗಳು ಕೆಇಆರ್‌ಸಿ ಮುಂದೆ ಇಟ್ಟಿದ್ದರೂ ಚುನಾವಣೆ ನಡೆಯುತ್ತಿದ್ದ ಹೊತ್ತಿನಲ್ಲಿ ಅನುಮೋದನೆ ನೀಡಿರಲಿಲ್ಲ. ಚುನಾವಣೆ ಮುಗಿದ ಎರಡು ದಿನ ನಂತರ ಮೇ 12ರಂದು ದರ ಏರಿಕೆಗೆ ಒಪ್ಪಿಗೆ ನೀಡಲಾಗಿತ್ತು. ಹಾಗಾಗಿ ಬಿಜೆಪಿ ಸರ್ಕಾರ ಇದ್ದಾಗಲೇ ಈ ಆದೇಶ ಹೊರಡಿಸಿರುವುದು ಸ್ಪಷ್ಟವಾಗಿದೆ.

ಬೊಮ್ಮಾಯಿ ಸರ್ಕಾರದ ವಿದ್ಯುತ್ ದರ ಏರಿಕೆ ಆದೇಶ ವಾಪಸ್ ಪಡೆಯಲು ಆಗ್ರಹ

ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸಿಎಂ ಆಗಿದ್ದ ಬಸವರಾಜ ಬೊಮ್ಮಾಯಿಯವರ ವಿದ್ಯುತ್ ಬೆಲೆ ಏರಿಕೆ ಆದೇಶ ವಾಪಸ್ ಪಡೆಯಿರಿ ಎಂದು ಮೈಸೂರಿನ ಶಾಸಕ ತನ್ವೀರ್ ಸೇಠ್‌ರವರು ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ.

ವಿದ್ಯುತ್ ಬೆಲೆ ಏರಿಕೆ ನಿರ್ಧಾರವನ್ನು ಹಿಂದಿನ ಬಿಜೆಪಿ ಸರ್ಕಾರ ತೆಗೆದುಕೊಂಡಿದೆ. ಆದರೆ ಜನರು ಈಗಿನ ಕಾಂಗ್ರೆಸ್ ಸರ್ಕಾರ ಬೆಲೆ ಏರಿಸಿದೆ ಎಂದು ತಪ್ಪು ಇಳಿಸಿದ್ದಾರೆ. ಇದರಿಂದ ಪಕ್ಷದ ಗೌರವ ಹಾಳಾಗುತ್ತಿದೆ. ಹಾಗಾಗಿ ವಿದ್ಯುತ್ ಬೆಲೆ ಏರಿಕೆ ಆದೇಶವನ್ನು ವಾಪಸ್ ಪಡೆಯಿರಿ ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಬೊಮ್ಮಾಯಿ ಸರ್ಕಾರದ ವಿದ್ಯುತ್ ಬೆಲೆ ಏರಿಕೆ ಆದೇಶ ವಾಪಸ್ ಪಡೆಯಿರಿ: ಸಿಎಂಗೆ ಶಾಸಕ ತನ್ವೀರ್ ಸೇಠ್ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...