Homeಕರ್ನಾಟಕಬಿಜೆಪಿ ಸರ್ಕಾರ ಒಂದೂ ಯೋಜನೆ ರೂಪಿಸಿಲ್ಲ: ಸಿಡಿದ ಸಿದ್ದರಾಮಯ್ಯ!

ಬಿಜೆಪಿ ಸರ್ಕಾರ ಒಂದೂ ಯೋಜನೆ ರೂಪಿಸಿಲ್ಲ: ಸಿಡಿದ ಸಿದ್ದರಾಮಯ್ಯ!

ನಾವು ರೂಪಿಸಿ ಅನುಷ್ಠಾನಕ್ಕೆ ತಂದ ಯೋಜನೆಗಳಿಗೂ ಅನುದಾನವನ್ನು ನಿಲ್ಲಿಸಿದ್ದಾರೆ. ಯಡಿಯೂರಪ್ಪ ಸರ್ಕಾರ ಅಭಿವೃದ್ಧಿ ಕೆಲಸಗಳನ್ನೇ ಮಾಡಿಲ್ಲ

- Advertisement -
ಅನ್ನಭಾಗ್ಯ ಯೋಜನೆ ಅನುಷ್ಠಾನದಿಂದ ಬಡವರ ಹಸಿವು ನೀಗಿಸಲು ಸಾಧ್ಯವಾಯಿತು. ನಮ್ಮ ಸರ್ಕಾರ ಇದ್ದ ಸಂದರ್ಭದಲ್ಲಿ ಜಾರಿಯಾದ ಜನಪರ ಯೋಜನೆಗಳನ್ನು ಬಿಟ್ಟು ಮತ್ತೆ ಬಂದ ಸರ್ಕಾರಗಳು ಯಾವುದೇ ಯೋಜನೆಯನ್ನು ರೂಪಿಸಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಶಿರಾ ಉಪಚುನಾವಣೆಯ ಹಿನ್ನೆಲೆಯಲ್ಲಿ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಅಭ್ಯರ್ಥಿ ಟಿ.ಬಿ.ಜಯಚಂದ್ರ ಪರವಾಗಿ ಮತಯಾಚನೆ ಮಾಡಿ, ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಅನ್ನಭಾಗ್ಯ, ಶಾದಿ ಭಾಗ್ಯ, ಶೂ ಭಾಗ್ಯ ಹೀಗೆ ಹಲವು ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಅನುಷ್ಠಾನಗೊಳಿಸಿದೆವು. ಇದರಿಂದ ಬಡವರು ಹಸಿವು ನೀಗಿಸಿಕೊಳ್ಳಲು, ವಿವಾಹಕ್ಕೆ ನೆರವು, ಶಾಲಾ ಮಕ್ಕಳ ಶೂ ಹಾಕಿಕೊಂಡು ಶಾಲೆಗೆ ಹೋಗಲು ಅವಕಾಶ ನೀಡಿದಂತಾಯಿತು ಎಂದು ತಿಳಿಸಿದರು.

ಇದನ್ನೂ ಓದಿ: ಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

ಕಾಂಗ್ರೆಸ್ ಸರ್ಕಾರದ ನಂತರ ಬಂದ ಎಚ್.ಡಿ.ಕುಮಾರಸ್ವಾಮಿ ಮತ್ತು ಈಗಿನ ಬಿ.ಎಸ್.ಯಡಿಯೂರಪ್ಪ ಸರ್ಕಾರಗಳು ಯಾವುದೇ ಯೋಜನೆ ರೂಪಿಸಿಲ್ಲ. ನಾವು ರೂಪಿಸಿ ಅನುಷ್ಠಾನಕ್ಕೆ ತಂದ ಯೋಜನೆಗಳಿಗೂ ಅನುದಾನವನ್ನು ನಿಲ್ಲಿಸಿದ್ದಾರೆ. ಯಡಿಯೂರಪ್ಪ ಸರ್ಕಾರ ಅಭಿವೃದ್ಧಿ ಕೆಲಸಗಳನ್ನೇ ಮಾಡಿಲ್ಲ. ಹಾಗಾಗಿ ಅಭಿವೃದ್ಧಿಗಾಗಿ ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ಮತ ಹಾಕಿ ಗೆಲ್ಲಿಸಿ ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ತಮ್ಮ ಗ್ರಾಮಕ್ಕೆ ಬರುವಂತೆ ಸಿದ್ದರಾಮಯ್ಯ ಅವರನ್ನು ಕೋರಿದರು. “ನಿಗದಿಪಡಿಸಿರುವ ಗ್ರಾಮಗಳಲ್ಲಿ ಪ್ರಚಾರ ನಡೆಸುತ್ತೇನೆ. ಎಲ್ಲಾ ಗ್ರಾಮಗಳಿಗೂ ಭೇಟಿ ನೀಡಲು ಆಗುವುದಿಲ್ಲ. ಟಿ.ಬಿ.ಜಯಚಂದ್ರ ಅವರು ಏನೆಂಬುದು ನಿಮಗೆ ಗೊತ್ತಿದೆ. ನವೆಂಬರ್ 3ರಂದು ಮತಕೇಂದ್ರಕ್ಕೆ ಬಂದು ಕಾಂಗ್ರೆಸ್ ಪರವಾಗಿ ಹಕ್ಕು ಚಲಾಯಿಸಿ” ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ಸಿದ್ದರಾಮಯ್ಯ ಅವರನ್ನು ನೋಡಲು ಜನರು ಮುಗಿಬೀಳುತ್ತಿದ್ದ ದೃಶ್ಯ ಸಾಮಾನ್ಯವಾಗಿ ಕಂಡು ಬಂತು. ಈ ಸಂದರ್ಭದಲ್ಲಿ ಅಭ್ಯರ್ಥಿ ಟಿ.ಬಿ.ಜಯಚಂದ್ರ ಮತ್ತು ಶಿರಾ ಚುನಾವಣೆಯ ಉಸ್ತುವಾರಿ ಕೆ.ಎನ್.ರಾಜಣ್ಣ ಉಪಸ್ಥಿತರಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...