Homeರಾಜಕೀಯಕಳೆದ ಏಳು ವರ್ಷಗಳಿಂದ ಅಂಬೇಂಡ್ಕರ್‌ ಹೆಸರಿನಲ್ಲಿ ನೀಡಲಾಗುವ ಪ್ರಶಸ್ತಿಗಳನ್ನು ನೀಡದ ಮೋದಿ ನೇತೃತ್ವದ ಬಿಜೆಪಿ ಸರ್ಕಾರ!

ಕಳೆದ ಏಳು ವರ್ಷಗಳಿಂದ ಅಂಬೇಂಡ್ಕರ್‌ ಹೆಸರಿನಲ್ಲಿ ನೀಡಲಾಗುವ ಪ್ರಶಸ್ತಿಗಳನ್ನು ನೀಡದ ಮೋದಿ ನೇತೃತ್ವದ ಬಿಜೆಪಿ ಸರ್ಕಾರ!

- Advertisement -
- Advertisement -

ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್‌ ಡಾ.ಬಿ.ಆರ್‌. ಅಂಬೇಡ್ಕರ್‌ ಅವರ ಹೆಸರಿನ ರಾಷ್ಟ್ರೀಯ ಪ್ರಶಸ್ತಿಯನ್ನು ಬಿಜೆಪಿ ನೇತೃತ್ವದ ನರೇಂದ್ರ ಮೋದಿಯವರ ಸರ್ಕಾರ ಕಳೆದ ಏಳು ವರ್ಷಗಳ ಅಧಿಕಾರವಧಿಯಲ್ಲಿ ಒಮ್ಮೆಯೂ ನೀಡಿಲ್ಲ. ಡಾ. ಅಂಬೇಡ್ಕರ್‌ ದಿನಾಚರಣೆ ಅಂಗವಾಗಿ ವಿತರಿಸಲಾಗುತ್ತಿದ್ದ ʼಅಂಬೇಡ್ಕರ್‌ ರಾಷ್ಟ್ರೀಯ ಪ್ರಶಸ್ತಿʼಯನ್ನು ನೀಡದೆ ಕಡೆಗಣಿಸುವ ನೀತಿಯನ್ನು ಮೋದಿ ಸರ್ಕಾರ ಅಳವಡಿಸಿಕೊಂಡಿದೆ.

ತಮಾಷೆಯ ಸಂಗತಿಯೆಂದರೆ ಅಂಬೇಡ್ಕರ್‌ ಹೆಸರಿನ ಯಾವುದೇ ಪ್ರಶಸ್ತಿಯನ್ನು ಕೊಡದಿದ್ದರೂ ಕೂಡ ಪ್ರತಿ ವರ್ಷ ಈ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸುವ ಜಾಹೀರಾತುಗಳು ಮಾತ್ರ ವಾಡಿಕೆಯಂತೆ ಎಲ್ಲೆಡೆ ರಾರಾಜಿಸುತ್ತವೆ. ಇದಕ್ಕಾಗಿ ಪ್ರತಿವರ್ಷ ಸುಮಾರು 50 ಲಕ್ಷ ರೂಪಾಯಿಗಳ ಬೊಕ್ಕಸದ ಹಣವೂ ವೆಚ್ಚವಾಗುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ಮಾಹಿತಿ ಪಡೆಯಲು ಸಂಸ್ಥೆಯ ನಿರ್ದೇಶಕ ವಿಕಾಸ್‌ ತ್ರಿವೇದಿಯವರನ್ನು ‘ದ ವೈರ್‌’ನ ವರದಿಗಾರರು ಸಂಪರ್ಕಿಸಿದಾಗ, ಈ ವರ್ಷ ಕೂಡ ಪ್ರಶಸ್ತಿಗಳನ್ನು ಕೊಡಲಾಗುತ್ತಿಲ್ಲ ಎಂಬುದನ್ನು ಖಚಿತಪಡಿಸಿದ್ದಾರೆ. ಅದಕ್ಕೆ ‘ಆಡಳಿತಾತ್ಮಕ’ ತೊಡಕುಗಳು ಕಾರಣವಂತೆ! ಕಳೆದ ಏಳು ವರ್ಷಗಳಿಂದಲೂ ಇದೇ ‘ಆಡಳಿತಾತ್ಮಕ’ ತೊಡಕುಗಳ ಕಾರಣ ಒಡ್ಡಿ ಪ್ರಶಸ್ತಿಯನ್ನು ಮೂಲೆಗುಂಪು ಮಾಡಲಾಗಿದೆ. ಈ ಫೌಂಡೇಷನ್‌ನ ಆಂತರಿಕ ಮಾಹಿತಿಯ ಪ್ರಕಾರ ಈ ಪ್ರಶಸ್ತಿಗಳನ್ನೇ ಮರುಪರಿಶೀಲಿಸಲಾಗುತ್ತಿದೆ!

ಇದನ್ನೂ ಓದಿ: ಅಗತ್ಯವಿದ್ದರಷ್ಟೆ ಈಶ್ವರಪ್ಪರನ್ನು ಪೊಲೀಸರು ಬಂಧಿಸಲಿದ್ದಾರೆ: ಸಿಎಂ ಬೊಮ್ಮಾಯಿ

ವಿಪರ್ಯಾಸವೆಂದರೆ, ಅರ್ಜಿ ಆಹ್ವಾನಿಸಿ ಜಾಹೀರಾತು ಕೊಟ್ಟಿರುವ ಫೌಂಡೇಷನ್‌ನಿಂದ ಪ್ರಶಸ್ತಿ ಕೊಡದಿರುವ ಬಗ್ಗೆ ಯಾವುದೇ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ ಅಥವಾ ಅವರ ಜಾಲತಾಣದಲ್ಲಿ ಜಾಲಾಡಿದರೂ ಈ ಬಗ್ಗೆ ಯಾವುದೇ ಮಾಹಿತಿಯಿಲ್ಲ. ‘ದ ವೈರ್‌’ನಲ್ಲಿ ವರದಿಯಾಗಿರುವಂತೆ, ಜಾಹೀರಾತು ಪ್ರಕಟಿಸಿದ ನಂತರ ಪ್ರಧಾನ ಮಂತ್ರಿಯ ಕಚೇರಿಯು ಪ್ರಶಸ್ತಿಗಳಿಗೆ ಸಂಬಂಧಿಸಿ ಹೆಚ್ಚುವರಿ ಮಾಹಿತಿ ಕೋರಿದೆ.

1992ರಲ್ಲಿ ‘ಡಾ.ಅಂಬೇಡ್ಕರ್‌ ರಾಷ್ಟ್ರೀಯ ಪ್ರಶಸ್ತಿ’ಯನ್ನು ಹಾಗೂ 1995ರಲ್ಲಿ ‘ಡಾ.ಅಂಬೇಡ್ಕರ್‌ ಅಂತಾರಾಷ್ಟ್ರೀಯ ಪ್ರಶಸ್ತಿ’ಯನ್ನು ಸ್ಥಾಪಿಸಲಾಗಿತ್ತು. ಅಂಬೇಡ್ಕರ್‌ ಅವರ ಆಶಯಗಳ ಈಡೇರಿಕೆಗಾಗಿ ಕೆಲಸ ಮಾಡುವ ವ್ಯಕ್ತಿಗಳು ಅಥವಾ ಸಂಘಟನೆಗಳಿಗೆ ಈ ರಾಷ್ಟ್ರೀಯ ಪ್ರಶಸ್ತಿ ಕೊಡಲಾಗುತ್ತದೆ. ಹಾಗೆಯೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಸಮಾನತೆ ಮತ್ತು ಅನ್ಯಾಯಗಳ ವಿರುದ್ಧ ಗಮನಾರ್ಹ ಕೆಲಸ ಮಾಡಿದವರಿಗೆ ಈ ಅಂತಾರಾಷ್ಟ್ರೀಯ ಪ್ರಶಸ್ತಿ ಕೊಡಲಾಗುತ್ತದೆ. ರಾಷ್ಟ್ರೀಯ ಪ್ರಶಸ್ತಿಯು ₹10 ಲಕ್ಷ ಹಾಗೂ ಅಂತಾರಾಷ್ಟ್ರೀಯ ಪ್ರಶಸ್ತಿಯು ₹15 ಲಕ್ಷ ನಗದು ಬಹುಮಾನ ಒಳಗೊಂಡಿವೆ.

ಕಳೆದ ಏಳು ವರ್ಷಗಳಿಂದ ಅಂಬೇಂಡ್ಕರ್‌ ಹೆಸರಿನಲ್ಲಿ ನೀಡಲಾಗುವ ಪ್ರಶಸ್ತಿಗಳನ್ನು ನೀಡದ ಮೋದಿ ನೇತೃತ್ವದ ಬಿಜೆಪಿ ಸರ್ಕಾರ!
ಡಾ. ಅಂಬೇಡ್ಕರ್ ರಾಷ್ಟ್ರೀಯ ಪ್ರಶಸ್ತಿ, 2015 ರ ಪೋಸ್ಟರ್.

ಒಕ್ಕೂಟ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯಡಿ ಒಂದು ಸ್ವಾಯತ್ತ ಸಂಸ್ಥೆಯಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ.ಅಂಬೇಡ್ಕರ್‌ ಫೌಂಡೇಷನ್‌ ಈ ಪ್ರಶಸ್ತಿ ಪ್ರಧಾನ ಪ್ರಕ್ರಿಯೆಯ ಉಸ್ತುವಾರಿ ಹೊತ್ತಿದೆ. ಇಲಾಖೆಯ ಸಚಿವರು ಈ ಸಂಸ್ಥೆಯ ಚೇರ್ಮನ್‌ ಆಗಿದ್ದು, ಕೆಲವು ಉನ್ನತ ಅಧಿಕಾರಿಗಳು ಹಾಗೂ ಕೆಲವು ನಾಮಾಂಕಿತ ಸದಸ್ಯರು ಕೂಡ ಈ ಸಂಸ್ಥೆಯ ಸದಸ್ಯರಾಗಿರುತ್ತಾರೆ.

ಇದನ್ನೂ ಓದಿ: ಅಂಬೇಡ್ಕರ್‌ ಈಗ ಇದ್ದಿದ್ದರೆ ಬಿಜೆಪಿಗರು ಅವರನ್ನು ಪಾಕ್ ಪರ ಎನ್ನುತ್ತಿದ್ದರು: ಮೆಹಬೂಬಾ ಮುಫ್ತಿ

ರಾಜಕೀಯ ಲಾಭಕ್ಕಾಗಿ ಅಂಬೇಡ್ಕರ್‌ ಅವರ ಹೆಸರನ್ನು ಬಳಸಿಕೊಳ್ಳುವಲ್ಲಿ ನರೇಂದ್ರ ಮೋದಿಯವರು ಹಿಂದೆ ಬಿದ್ದಿಲ್ಲ. ಸಂದರ್ಭ ಒದಗಿದಾಗೆಲ್ಲಾ ಅಂಬೇಡ್ಕರ್‌ ಪ್ರತಿಮೆಗೆ ಹಾರ ಹಾಕಿ ಫೋಟೋ ತೆಗೆಸಿಕೊಳ್ಳುವುದು, ಬಣ್ಣದ ಮಾತುಗಳಲ್ಲಿ ಹೊಗಳುವುದನ್ನು ಒಂದು ಸಂಪ್ರದಾಯದಂತೆ ಪಾಲಿಸುತ್ತಾ ಬಂದಿದ್ದಾರೆ. ಈ ನಡೆಗಳು ಅಂಬೇಡ್ಕರ್‌ರನ್ನು ದೈವೀಕರಿಸಿ, ಕೇವಲ ಮೂರ್ತಿ ಪೂಜೆಗೆ ಸೀಮಿತಗೊಳಿಸುವ ಹುನ್ನಾರದ ಭಾಗ ಎನ್ನಬಹುದು.

ವಾಸ್ತವದಲ್ಲಿ ಅವರು ಪ್ರತಿನಿಧಿಸುವ ಭಾರತೀಯ ಜನತಾ ಪಕ್ಷ ಹಾಗೂ ಅದರ ಹಿಂದಿನ ಆರೆಸ್ಸೆಸ್‌ ಕೂಟ ಅಂಬೇಡ್ಕರ್‌ ಅವರ ವಿಚಾರಗಳಿಗೆ ಕಳಂಕ ಹಚ್ಚಲು, ಅವರ ನೆನಪನ್ನು ಮರೆಮಾಡಲು ನಿರಂತರವಾಗಿ ಪ್ರಯತ್ನಿಸುತ್ತಲೇ ಇದೆ. ಯಾಕೆಂದರೆ ಅಂಬೇಡ್ಕರ್‌ ಅವರು ಪ್ರತಿಪಾದಿಸುವ ಸ್ವಾತಂತ್ರ್ಯ, ಸಮಾನತೆಯ ವಿಚಾರಗಳು ಆರೆಸ್ಸೆಸ್‌ ಪ್ರತಿಪಾದಿಸುವ ಮನುವಾದಿ ವಿಚಾರಗಳಿಗೆ ತದ್ವಿರುದ್ಧವಾಗಿವೆ. ಹೀಗಾಗಿ ಅಂಬೇಡ್ಕರ್‌ ಅವರ ವಿಚಾರವನ್ನು ಬಹಳ ಹಿಂದಿನಿಂದಲೂ ವಿರೋಧಿಸುತ್ತಲೇ ಬಂದಿದ್ದಾರೆ.

ಉದಾಹರಣೆಗೆ ಭಾರತ ತನ್ನ ಸಂವಿಧಾನವನ್ನು ಅಂಗೀಕರಿಸಿದ ಬೆನ್ನಹಿಂದೆಯೇ ಅಂದರೆ 1949ರ ನವಂಬರ್‌ 30ರಂದು ಆರೆಸ್ಸೆಸ್‌ ತನ್ನ ಮುಖವಾಣಿ ‘ಆರ್ಗನೈಸರ್‌’ನಲ್ಲಿ ಹೀಗೆಂದು ಬರೆದಿತ್ತು: “ಭಾರತದ ಸಂವಿಧಾನದ ಹೀನಾಯ ಸಂಗತಿಯೆಂದರೆ ಇದರಲ್ಲಿ ಭಾರತೀಯ ಎಂಬುದು ಏನೂ ಇಲ್ಲ…ಇದರಲ್ಲಿ ಪ್ರಾಚೀನ ಭಾರತೀಯ ಸಾಂವಿಧಾನಿಕ ಕಾನೂನುಗಳು ಎಲ್ಲಿಯೂ ಕಾಣಿಸುವುದಿಲ್ಲ…ಮನುವಿನ ಕಾನೂನುಗಳು ಬಹಳ ಹಿಂದೆಯೇ ರಚಿತವಾಗಿವೆ. ಮನುಸ್ಮೃತಿಯಲ್ಲಿ ಹೇಳಲಾಗಿರುವ ಈ ಕಾನೂನುಗಳು ಇಂದಿಗೂ ಮಾನ್ಯವಾಗಿವೆ…ಆದರೆ ನಮ್ಮ ಸಂವಿಧಾನದ ಪಂಡಿತರು ಈ ಅಂಶಗಳನ್ನು ಲೆಕ್ಕಕ್ಕೇ ತೆಗೆದುಕೊಂಡಿಲ್ಲ”

ಇದನ್ನೂ ಓದಿ: ‘ಬಿಫೆಸ್‌’ನಲ್ಲಿ ಸಾವರ್ಕರ್‌ ಪ್ರತ್ಯಕ್ಷ; ಮಾದರಿ ವ್ಯಕ್ತಿಗಳ ಪೈಕಿ ‘ಅಂಬೇಡ್ಕರ್‌’ ನಾಪತ್ತೆ!

ಈ ಶಕ್ತಿಗಳು ಅಂಬೇಡ್ಕರ್‌ ಹಾಗೂ ಸಂವಿಧಾನದ ಮೇಲೆ ಅಂದಿನಿಂದಲೂ ದಾಳಿ ಮಾಡುತ್ತಿದ್ದವು ಎಂಬುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ? ಬಾಬಾ ಸಾಹೇಬರು ನಮ್ಮ ಸಂವಿಧಾನವನ್ನು ರಚಿಸುವ ಎಷ್ಟೋ ವರ್ಷಗಳ ಮುಂಚೆಯೇ ಮನುಸ್ಮೃತಿಯನ್ನು ಬಹಿರಂಗವಾಗಿಯೇ ಸುಟ್ಟುಹಾಕಿ ಪ್ರತಿಭಟಿಸಿದ್ದರು ಎಂಬುದನ್ನು ಇಲ್ಲಿ ನೆನಪಿಸಿಕೊಳ್ಳಬೇಕು.

ಬಿಜೆಪಿ ಮತ್ತು ಆರೆಸ್ಸೆಸ್‌ ಕೂಟ ಅಂಬೇಡ್ಕರ್‌ ಅವರ ನೆನಪನ್ನು ಮರೆಮಾಡಲು ಅಥವಾ ಅವರನ್ನು ಕಡೆಗಣಿಸಲು ಅನಾದಿಯಿಂದಲೂ ನಾನಾ ತಂತ್ರಗಳನ್ನು ಹೆಣೆಯುತ್ತಾ ಬಂದಿದೆ. ಅಂಬೇಡ್ಕರ್‌ ಅವರು ನಮ್ಮನ್ನಗಲಿದ ಡಿಸೆಂಬರ್‌ 6ನೇ ದಿನವನ್ನು ‘ಮಹಾಪರಿನಿರ್ವಾಣ ದಿನ’ವನ್ನಾಗಿ ದೇಶಾದ್ಯಂತ ಆಚರಿಸಲಾಗುತ್ತಿದೆ. ಅಂದು ಲಕ್ಷಾಂತರ ಅಂಬೇಡ್ಕರ್‌ ಅಭಿಮಾನಿಗಳು ಅವರ ಸಮಾಧಿ ಸ್ಥಳವಿರುವ ಚೈತ್ಯಭೂಮಿಗೆ ಭೇಟಿ ನೀಡುತ್ತಾರೆ. ಅಂಬೇಡ್ಕರ್‌ ಅವರ ಬದುಕು ಮತ್ತು ಹೋರಾಟವನ್ನು ನೆನೆಯುತ್ತಾರೆ. ಅವರ ವಿಚಾರಗಳಿಂದ ಸ್ಫೂರ್ತಿ ಪಡೆಯುತ್ತಾರೆ.

1992ರಲ್ಲಿ ಬಾಬ್ರಿ ಮಸೀದಿಯನ್ನು ಕೆಡವಲು ಆರೆಸ್ಸೆಸ್‌ ಕೂಟ ಆರಿಸಿಕೊಂಡಿದ್ದು ಇದೇ ಡಿಸೆಂಬರ್ ಆರನೇ ದಿನವನ್ನು. ತದನಂತರದಲ್ಲಿ ವಿಶ್ವ ಹಿಂದೂ ಪರಿಷತ್‌, ಭಜರಂಗದಳ ಮುಂತಾದ ಕೇಸರಿ ಕೂಟದ ಸಂಘಟನೆಗಳು ಡಿಸೆಂಬರ್‌ ಆರರಂದು ‘ಶೌರ್ಯ ದಿವಸ್‌’ ಅಥವಾ ‘ವಿಜಯ್‌ ದಿವಸ್‌’ ಆಗಿ ಆಚರಿಸುತ್ತಾ ಬಂದಿದ್ದಾರೆ. ಇದು ಕಾಕತಾಳೀಯವೇನಲ್ಲ; ಒಂದೇ ಕಲ್ಲಿಗೆ ಎರಡು ಹಕ್ಕಿಗಳನ್ನು ಹೊಡೆಯುವ ನಿಪುಣ ತಂತ್ರ.

ಇದನ್ನೂ ಓದಿ: ‘ಅಂಬೇಡ್ಕರ್‌ರಿಗೆ ಅವಮಾನವಾದರೆ ಶೋಷಿತ ಸಮುದಾಯ ಸುಮ್ಮನಿರುವುದಿಲ್ಲ’

ಅಂಬೇಡ್ಕರ್‌ ಅವರ ನೆನಪುಗಳನ್ನು ಮಸುಕುಗೊಳಿಸಿ, ಅವರನ್ನು ನೇಪಥ್ಯಕ್ಕೆ ಸರಿಸುವ ಉದ್ದೇಶ ಒಂದು ಕಾರ್ಯಸೂಚಿಯಾದರೆ, ಅಂಬೇಡ್ಕರ್‌ ಅವರ ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಪ್ರಜಾತಂತ್ರದ ವಿಚಾರಗಳನ್ನು ಬದಿಗೆ ಸರಿಸಿ ಒಡೆದು ಆಳುವ ದ್ವೇಷರಾಜಕಾರಣವನ್ನು ಜನಮಾನಸದಲ್ಲಿ ಬಿತ್ತುವುದು ಮತ್ತೊಂದು ಕಾರ್ಯಸೂಚಿ. ಹಾಗೆಯೇ ನಾವು ಸಂವಿಧಾನ ಅಳವಡಿಸಿಕೊಂಡ ನವಂಬರ್‌ 26 ರ ಸುತ್ತಮುತ್ತ ಹಿಂಸೆಗೆ ಪ್ರಚೋದನೆ ನೀಡುವ, ದ್ವೇಷ ಭಾಷಣಗಳಿಗೆ ಕುಖ್ಯಾತವಾಗಿರುವ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಇವುಗಳನ್ನು ‘ಧರ್ಮ ಸಂಸತ್‌’ ಎಂದು ಕರೆಯಲಾಗುತ್ತದೆ. ಈ ಸಂಸತ್‌ ಎಂಬ ಪದವನ್ನೂ ಕೂಡ ಬಹಳ ತಂತ್ರಗಾರಿಕೆಯಿಂದ ಧರ್ಮದ ಜೊತೆ ಜೋಡಿಸಲಾಗಿದೆ. ದೇಶದ ಪ್ರಜಾತಂತ್ರ ಪ್ರೇಮಿಗಳು ಇನ್ನಾದರೂ ಎಚ್ಚೆತ್ತುಕೊಳ್ಳುವರೆ? ಇನ್‌ಪುಟ್‌‌: ದಿ ವೈರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...