Homeರಾಜಕೀಯಕಳೆದ ಏಳು ವರ್ಷಗಳಿಂದ ಅಂಬೇಂಡ್ಕರ್‌ ಹೆಸರಿನಲ್ಲಿ ನೀಡಲಾಗುವ ಪ್ರಶಸ್ತಿಗಳನ್ನು ನೀಡದ ಮೋದಿ ನೇತೃತ್ವದ ಬಿಜೆಪಿ ಸರ್ಕಾರ!

ಕಳೆದ ಏಳು ವರ್ಷಗಳಿಂದ ಅಂಬೇಂಡ್ಕರ್‌ ಹೆಸರಿನಲ್ಲಿ ನೀಡಲಾಗುವ ಪ್ರಶಸ್ತಿಗಳನ್ನು ನೀಡದ ಮೋದಿ ನೇತೃತ್ವದ ಬಿಜೆಪಿ ಸರ್ಕಾರ!

- Advertisement -
- Advertisement -

ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್‌ ಡಾ.ಬಿ.ಆರ್‌. ಅಂಬೇಡ್ಕರ್‌ ಅವರ ಹೆಸರಿನ ರಾಷ್ಟ್ರೀಯ ಪ್ರಶಸ್ತಿಯನ್ನು ಬಿಜೆಪಿ ನೇತೃತ್ವದ ನರೇಂದ್ರ ಮೋದಿಯವರ ಸರ್ಕಾರ ಕಳೆದ ಏಳು ವರ್ಷಗಳ ಅಧಿಕಾರವಧಿಯಲ್ಲಿ ಒಮ್ಮೆಯೂ ನೀಡಿಲ್ಲ. ಡಾ. ಅಂಬೇಡ್ಕರ್‌ ದಿನಾಚರಣೆ ಅಂಗವಾಗಿ ವಿತರಿಸಲಾಗುತ್ತಿದ್ದ ʼಅಂಬೇಡ್ಕರ್‌ ರಾಷ್ಟ್ರೀಯ ಪ್ರಶಸ್ತಿʼಯನ್ನು ನೀಡದೆ ಕಡೆಗಣಿಸುವ ನೀತಿಯನ್ನು ಮೋದಿ ಸರ್ಕಾರ ಅಳವಡಿಸಿಕೊಂಡಿದೆ.

ತಮಾಷೆಯ ಸಂಗತಿಯೆಂದರೆ ಅಂಬೇಡ್ಕರ್‌ ಹೆಸರಿನ ಯಾವುದೇ ಪ್ರಶಸ್ತಿಯನ್ನು ಕೊಡದಿದ್ದರೂ ಕೂಡ ಪ್ರತಿ ವರ್ಷ ಈ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸುವ ಜಾಹೀರಾತುಗಳು ಮಾತ್ರ ವಾಡಿಕೆಯಂತೆ ಎಲ್ಲೆಡೆ ರಾರಾಜಿಸುತ್ತವೆ. ಇದಕ್ಕಾಗಿ ಪ್ರತಿವರ್ಷ ಸುಮಾರು 50 ಲಕ್ಷ ರೂಪಾಯಿಗಳ ಬೊಕ್ಕಸದ ಹಣವೂ ವೆಚ್ಚವಾಗುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ಮಾಹಿತಿ ಪಡೆಯಲು ಸಂಸ್ಥೆಯ ನಿರ್ದೇಶಕ ವಿಕಾಸ್‌ ತ್ರಿವೇದಿಯವರನ್ನು ‘ದ ವೈರ್‌’ನ ವರದಿಗಾರರು ಸಂಪರ್ಕಿಸಿದಾಗ, ಈ ವರ್ಷ ಕೂಡ ಪ್ರಶಸ್ತಿಗಳನ್ನು ಕೊಡಲಾಗುತ್ತಿಲ್ಲ ಎಂಬುದನ್ನು ಖಚಿತಪಡಿಸಿದ್ದಾರೆ. ಅದಕ್ಕೆ ‘ಆಡಳಿತಾತ್ಮಕ’ ತೊಡಕುಗಳು ಕಾರಣವಂತೆ! ಕಳೆದ ಏಳು ವರ್ಷಗಳಿಂದಲೂ ಇದೇ ‘ಆಡಳಿತಾತ್ಮಕ’ ತೊಡಕುಗಳ ಕಾರಣ ಒಡ್ಡಿ ಪ್ರಶಸ್ತಿಯನ್ನು ಮೂಲೆಗುಂಪು ಮಾಡಲಾಗಿದೆ. ಈ ಫೌಂಡೇಷನ್‌ನ ಆಂತರಿಕ ಮಾಹಿತಿಯ ಪ್ರಕಾರ ಈ ಪ್ರಶಸ್ತಿಗಳನ್ನೇ ಮರುಪರಿಶೀಲಿಸಲಾಗುತ್ತಿದೆ!

ಇದನ್ನೂ ಓದಿ: ಅಗತ್ಯವಿದ್ದರಷ್ಟೆ ಈಶ್ವರಪ್ಪರನ್ನು ಪೊಲೀಸರು ಬಂಧಿಸಲಿದ್ದಾರೆ: ಸಿಎಂ ಬೊಮ್ಮಾಯಿ

ವಿಪರ್ಯಾಸವೆಂದರೆ, ಅರ್ಜಿ ಆಹ್ವಾನಿಸಿ ಜಾಹೀರಾತು ಕೊಟ್ಟಿರುವ ಫೌಂಡೇಷನ್‌ನಿಂದ ಪ್ರಶಸ್ತಿ ಕೊಡದಿರುವ ಬಗ್ಗೆ ಯಾವುದೇ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ ಅಥವಾ ಅವರ ಜಾಲತಾಣದಲ್ಲಿ ಜಾಲಾಡಿದರೂ ಈ ಬಗ್ಗೆ ಯಾವುದೇ ಮಾಹಿತಿಯಿಲ್ಲ. ‘ದ ವೈರ್‌’ನಲ್ಲಿ ವರದಿಯಾಗಿರುವಂತೆ, ಜಾಹೀರಾತು ಪ್ರಕಟಿಸಿದ ನಂತರ ಪ್ರಧಾನ ಮಂತ್ರಿಯ ಕಚೇರಿಯು ಪ್ರಶಸ್ತಿಗಳಿಗೆ ಸಂಬಂಧಿಸಿ ಹೆಚ್ಚುವರಿ ಮಾಹಿತಿ ಕೋರಿದೆ.

1992ರಲ್ಲಿ ‘ಡಾ.ಅಂಬೇಡ್ಕರ್‌ ರಾಷ್ಟ್ರೀಯ ಪ್ರಶಸ್ತಿ’ಯನ್ನು ಹಾಗೂ 1995ರಲ್ಲಿ ‘ಡಾ.ಅಂಬೇಡ್ಕರ್‌ ಅಂತಾರಾಷ್ಟ್ರೀಯ ಪ್ರಶಸ್ತಿ’ಯನ್ನು ಸ್ಥಾಪಿಸಲಾಗಿತ್ತು. ಅಂಬೇಡ್ಕರ್‌ ಅವರ ಆಶಯಗಳ ಈಡೇರಿಕೆಗಾಗಿ ಕೆಲಸ ಮಾಡುವ ವ್ಯಕ್ತಿಗಳು ಅಥವಾ ಸಂಘಟನೆಗಳಿಗೆ ಈ ರಾಷ್ಟ್ರೀಯ ಪ್ರಶಸ್ತಿ ಕೊಡಲಾಗುತ್ತದೆ. ಹಾಗೆಯೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಸಮಾನತೆ ಮತ್ತು ಅನ್ಯಾಯಗಳ ವಿರುದ್ಧ ಗಮನಾರ್ಹ ಕೆಲಸ ಮಾಡಿದವರಿಗೆ ಈ ಅಂತಾರಾಷ್ಟ್ರೀಯ ಪ್ರಶಸ್ತಿ ಕೊಡಲಾಗುತ್ತದೆ. ರಾಷ್ಟ್ರೀಯ ಪ್ರಶಸ್ತಿಯು ₹10 ಲಕ್ಷ ಹಾಗೂ ಅಂತಾರಾಷ್ಟ್ರೀಯ ಪ್ರಶಸ್ತಿಯು ₹15 ಲಕ್ಷ ನಗದು ಬಹುಮಾನ ಒಳಗೊಂಡಿವೆ.

ಕಳೆದ ಏಳು ವರ್ಷಗಳಿಂದ ಅಂಬೇಂಡ್ಕರ್‌ ಹೆಸರಿನಲ್ಲಿ ನೀಡಲಾಗುವ ಪ್ರಶಸ್ತಿಗಳನ್ನು ನೀಡದ ಮೋದಿ ನೇತೃತ್ವದ ಬಿಜೆಪಿ ಸರ್ಕಾರ!
ಡಾ. ಅಂಬೇಡ್ಕರ್ ರಾಷ್ಟ್ರೀಯ ಪ್ರಶಸ್ತಿ, 2015 ರ ಪೋಸ್ಟರ್.

ಒಕ್ಕೂಟ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯಡಿ ಒಂದು ಸ್ವಾಯತ್ತ ಸಂಸ್ಥೆಯಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ.ಅಂಬೇಡ್ಕರ್‌ ಫೌಂಡೇಷನ್‌ ಈ ಪ್ರಶಸ್ತಿ ಪ್ರಧಾನ ಪ್ರಕ್ರಿಯೆಯ ಉಸ್ತುವಾರಿ ಹೊತ್ತಿದೆ. ಇಲಾಖೆಯ ಸಚಿವರು ಈ ಸಂಸ್ಥೆಯ ಚೇರ್ಮನ್‌ ಆಗಿದ್ದು, ಕೆಲವು ಉನ್ನತ ಅಧಿಕಾರಿಗಳು ಹಾಗೂ ಕೆಲವು ನಾಮಾಂಕಿತ ಸದಸ್ಯರು ಕೂಡ ಈ ಸಂಸ್ಥೆಯ ಸದಸ್ಯರಾಗಿರುತ್ತಾರೆ.

ಇದನ್ನೂ ಓದಿ: ಅಂಬೇಡ್ಕರ್‌ ಈಗ ಇದ್ದಿದ್ದರೆ ಬಿಜೆಪಿಗರು ಅವರನ್ನು ಪಾಕ್ ಪರ ಎನ್ನುತ್ತಿದ್ದರು: ಮೆಹಬೂಬಾ ಮುಫ್ತಿ

ರಾಜಕೀಯ ಲಾಭಕ್ಕಾಗಿ ಅಂಬೇಡ್ಕರ್‌ ಅವರ ಹೆಸರನ್ನು ಬಳಸಿಕೊಳ್ಳುವಲ್ಲಿ ನರೇಂದ್ರ ಮೋದಿಯವರು ಹಿಂದೆ ಬಿದ್ದಿಲ್ಲ. ಸಂದರ್ಭ ಒದಗಿದಾಗೆಲ್ಲಾ ಅಂಬೇಡ್ಕರ್‌ ಪ್ರತಿಮೆಗೆ ಹಾರ ಹಾಕಿ ಫೋಟೋ ತೆಗೆಸಿಕೊಳ್ಳುವುದು, ಬಣ್ಣದ ಮಾತುಗಳಲ್ಲಿ ಹೊಗಳುವುದನ್ನು ಒಂದು ಸಂಪ್ರದಾಯದಂತೆ ಪಾಲಿಸುತ್ತಾ ಬಂದಿದ್ದಾರೆ. ಈ ನಡೆಗಳು ಅಂಬೇಡ್ಕರ್‌ರನ್ನು ದೈವೀಕರಿಸಿ, ಕೇವಲ ಮೂರ್ತಿ ಪೂಜೆಗೆ ಸೀಮಿತಗೊಳಿಸುವ ಹುನ್ನಾರದ ಭಾಗ ಎನ್ನಬಹುದು.

ವಾಸ್ತವದಲ್ಲಿ ಅವರು ಪ್ರತಿನಿಧಿಸುವ ಭಾರತೀಯ ಜನತಾ ಪಕ್ಷ ಹಾಗೂ ಅದರ ಹಿಂದಿನ ಆರೆಸ್ಸೆಸ್‌ ಕೂಟ ಅಂಬೇಡ್ಕರ್‌ ಅವರ ವಿಚಾರಗಳಿಗೆ ಕಳಂಕ ಹಚ್ಚಲು, ಅವರ ನೆನಪನ್ನು ಮರೆಮಾಡಲು ನಿರಂತರವಾಗಿ ಪ್ರಯತ್ನಿಸುತ್ತಲೇ ಇದೆ. ಯಾಕೆಂದರೆ ಅಂಬೇಡ್ಕರ್‌ ಅವರು ಪ್ರತಿಪಾದಿಸುವ ಸ್ವಾತಂತ್ರ್ಯ, ಸಮಾನತೆಯ ವಿಚಾರಗಳು ಆರೆಸ್ಸೆಸ್‌ ಪ್ರತಿಪಾದಿಸುವ ಮನುವಾದಿ ವಿಚಾರಗಳಿಗೆ ತದ್ವಿರುದ್ಧವಾಗಿವೆ. ಹೀಗಾಗಿ ಅಂಬೇಡ್ಕರ್‌ ಅವರ ವಿಚಾರವನ್ನು ಬಹಳ ಹಿಂದಿನಿಂದಲೂ ವಿರೋಧಿಸುತ್ತಲೇ ಬಂದಿದ್ದಾರೆ.

ಉದಾಹರಣೆಗೆ ಭಾರತ ತನ್ನ ಸಂವಿಧಾನವನ್ನು ಅಂಗೀಕರಿಸಿದ ಬೆನ್ನಹಿಂದೆಯೇ ಅಂದರೆ 1949ರ ನವಂಬರ್‌ 30ರಂದು ಆರೆಸ್ಸೆಸ್‌ ತನ್ನ ಮುಖವಾಣಿ ‘ಆರ್ಗನೈಸರ್‌’ನಲ್ಲಿ ಹೀಗೆಂದು ಬರೆದಿತ್ತು: “ಭಾರತದ ಸಂವಿಧಾನದ ಹೀನಾಯ ಸಂಗತಿಯೆಂದರೆ ಇದರಲ್ಲಿ ಭಾರತೀಯ ಎಂಬುದು ಏನೂ ಇಲ್ಲ…ಇದರಲ್ಲಿ ಪ್ರಾಚೀನ ಭಾರತೀಯ ಸಾಂವಿಧಾನಿಕ ಕಾನೂನುಗಳು ಎಲ್ಲಿಯೂ ಕಾಣಿಸುವುದಿಲ್ಲ…ಮನುವಿನ ಕಾನೂನುಗಳು ಬಹಳ ಹಿಂದೆಯೇ ರಚಿತವಾಗಿವೆ. ಮನುಸ್ಮೃತಿಯಲ್ಲಿ ಹೇಳಲಾಗಿರುವ ಈ ಕಾನೂನುಗಳು ಇಂದಿಗೂ ಮಾನ್ಯವಾಗಿವೆ…ಆದರೆ ನಮ್ಮ ಸಂವಿಧಾನದ ಪಂಡಿತರು ಈ ಅಂಶಗಳನ್ನು ಲೆಕ್ಕಕ್ಕೇ ತೆಗೆದುಕೊಂಡಿಲ್ಲ”

ಇದನ್ನೂ ಓದಿ: ‘ಬಿಫೆಸ್‌’ನಲ್ಲಿ ಸಾವರ್ಕರ್‌ ಪ್ರತ್ಯಕ್ಷ; ಮಾದರಿ ವ್ಯಕ್ತಿಗಳ ಪೈಕಿ ‘ಅಂಬೇಡ್ಕರ್‌’ ನಾಪತ್ತೆ!

ಈ ಶಕ್ತಿಗಳು ಅಂಬೇಡ್ಕರ್‌ ಹಾಗೂ ಸಂವಿಧಾನದ ಮೇಲೆ ಅಂದಿನಿಂದಲೂ ದಾಳಿ ಮಾಡುತ್ತಿದ್ದವು ಎಂಬುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ? ಬಾಬಾ ಸಾಹೇಬರು ನಮ್ಮ ಸಂವಿಧಾನವನ್ನು ರಚಿಸುವ ಎಷ್ಟೋ ವರ್ಷಗಳ ಮುಂಚೆಯೇ ಮನುಸ್ಮೃತಿಯನ್ನು ಬಹಿರಂಗವಾಗಿಯೇ ಸುಟ್ಟುಹಾಕಿ ಪ್ರತಿಭಟಿಸಿದ್ದರು ಎಂಬುದನ್ನು ಇಲ್ಲಿ ನೆನಪಿಸಿಕೊಳ್ಳಬೇಕು.

ಬಿಜೆಪಿ ಮತ್ತು ಆರೆಸ್ಸೆಸ್‌ ಕೂಟ ಅಂಬೇಡ್ಕರ್‌ ಅವರ ನೆನಪನ್ನು ಮರೆಮಾಡಲು ಅಥವಾ ಅವರನ್ನು ಕಡೆಗಣಿಸಲು ಅನಾದಿಯಿಂದಲೂ ನಾನಾ ತಂತ್ರಗಳನ್ನು ಹೆಣೆಯುತ್ತಾ ಬಂದಿದೆ. ಅಂಬೇಡ್ಕರ್‌ ಅವರು ನಮ್ಮನ್ನಗಲಿದ ಡಿಸೆಂಬರ್‌ 6ನೇ ದಿನವನ್ನು ‘ಮಹಾಪರಿನಿರ್ವಾಣ ದಿನ’ವನ್ನಾಗಿ ದೇಶಾದ್ಯಂತ ಆಚರಿಸಲಾಗುತ್ತಿದೆ. ಅಂದು ಲಕ್ಷಾಂತರ ಅಂಬೇಡ್ಕರ್‌ ಅಭಿಮಾನಿಗಳು ಅವರ ಸಮಾಧಿ ಸ್ಥಳವಿರುವ ಚೈತ್ಯಭೂಮಿಗೆ ಭೇಟಿ ನೀಡುತ್ತಾರೆ. ಅಂಬೇಡ್ಕರ್‌ ಅವರ ಬದುಕು ಮತ್ತು ಹೋರಾಟವನ್ನು ನೆನೆಯುತ್ತಾರೆ. ಅವರ ವಿಚಾರಗಳಿಂದ ಸ್ಫೂರ್ತಿ ಪಡೆಯುತ್ತಾರೆ.

1992ರಲ್ಲಿ ಬಾಬ್ರಿ ಮಸೀದಿಯನ್ನು ಕೆಡವಲು ಆರೆಸ್ಸೆಸ್‌ ಕೂಟ ಆರಿಸಿಕೊಂಡಿದ್ದು ಇದೇ ಡಿಸೆಂಬರ್ ಆರನೇ ದಿನವನ್ನು. ತದನಂತರದಲ್ಲಿ ವಿಶ್ವ ಹಿಂದೂ ಪರಿಷತ್‌, ಭಜರಂಗದಳ ಮುಂತಾದ ಕೇಸರಿ ಕೂಟದ ಸಂಘಟನೆಗಳು ಡಿಸೆಂಬರ್‌ ಆರರಂದು ‘ಶೌರ್ಯ ದಿವಸ್‌’ ಅಥವಾ ‘ವಿಜಯ್‌ ದಿವಸ್‌’ ಆಗಿ ಆಚರಿಸುತ್ತಾ ಬಂದಿದ್ದಾರೆ. ಇದು ಕಾಕತಾಳೀಯವೇನಲ್ಲ; ಒಂದೇ ಕಲ್ಲಿಗೆ ಎರಡು ಹಕ್ಕಿಗಳನ್ನು ಹೊಡೆಯುವ ನಿಪುಣ ತಂತ್ರ.

ಇದನ್ನೂ ಓದಿ: ‘ಅಂಬೇಡ್ಕರ್‌ರಿಗೆ ಅವಮಾನವಾದರೆ ಶೋಷಿತ ಸಮುದಾಯ ಸುಮ್ಮನಿರುವುದಿಲ್ಲ’

ಅಂಬೇಡ್ಕರ್‌ ಅವರ ನೆನಪುಗಳನ್ನು ಮಸುಕುಗೊಳಿಸಿ, ಅವರನ್ನು ನೇಪಥ್ಯಕ್ಕೆ ಸರಿಸುವ ಉದ್ದೇಶ ಒಂದು ಕಾರ್ಯಸೂಚಿಯಾದರೆ, ಅಂಬೇಡ್ಕರ್‌ ಅವರ ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಪ್ರಜಾತಂತ್ರದ ವಿಚಾರಗಳನ್ನು ಬದಿಗೆ ಸರಿಸಿ ಒಡೆದು ಆಳುವ ದ್ವೇಷರಾಜಕಾರಣವನ್ನು ಜನಮಾನಸದಲ್ಲಿ ಬಿತ್ತುವುದು ಮತ್ತೊಂದು ಕಾರ್ಯಸೂಚಿ. ಹಾಗೆಯೇ ನಾವು ಸಂವಿಧಾನ ಅಳವಡಿಸಿಕೊಂಡ ನವಂಬರ್‌ 26 ರ ಸುತ್ತಮುತ್ತ ಹಿಂಸೆಗೆ ಪ್ರಚೋದನೆ ನೀಡುವ, ದ್ವೇಷ ಭಾಷಣಗಳಿಗೆ ಕುಖ್ಯಾತವಾಗಿರುವ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಇವುಗಳನ್ನು ‘ಧರ್ಮ ಸಂಸತ್‌’ ಎಂದು ಕರೆಯಲಾಗುತ್ತದೆ. ಈ ಸಂಸತ್‌ ಎಂಬ ಪದವನ್ನೂ ಕೂಡ ಬಹಳ ತಂತ್ರಗಾರಿಕೆಯಿಂದ ಧರ್ಮದ ಜೊತೆ ಜೋಡಿಸಲಾಗಿದೆ. ದೇಶದ ಪ್ರಜಾತಂತ್ರ ಪ್ರೇಮಿಗಳು ಇನ್ನಾದರೂ ಎಚ್ಚೆತ್ತುಕೊಳ್ಳುವರೆ? ಇನ್‌ಪುಟ್‌‌: ದಿ ವೈರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...