Homeರಾಜಕೀಯಕಳೆದ ಏಳು ವರ್ಷಗಳಿಂದ ಅಂಬೇಂಡ್ಕರ್‌ ಹೆಸರಿನಲ್ಲಿ ನೀಡಲಾಗುವ ಪ್ರಶಸ್ತಿಗಳನ್ನು ನೀಡದ ಮೋದಿ ನೇತೃತ್ವದ ಬಿಜೆಪಿ ಸರ್ಕಾರ!

ಕಳೆದ ಏಳು ವರ್ಷಗಳಿಂದ ಅಂಬೇಂಡ್ಕರ್‌ ಹೆಸರಿನಲ್ಲಿ ನೀಡಲಾಗುವ ಪ್ರಶಸ್ತಿಗಳನ್ನು ನೀಡದ ಮೋದಿ ನೇತೃತ್ವದ ಬಿಜೆಪಿ ಸರ್ಕಾರ!

- Advertisement -
- Advertisement -

ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್‌ ಡಾ.ಬಿ.ಆರ್‌. ಅಂಬೇಡ್ಕರ್‌ ಅವರ ಹೆಸರಿನ ರಾಷ್ಟ್ರೀಯ ಪ್ರಶಸ್ತಿಯನ್ನು ಬಿಜೆಪಿ ನೇತೃತ್ವದ ನರೇಂದ್ರ ಮೋದಿಯವರ ಸರ್ಕಾರ ಕಳೆದ ಏಳು ವರ್ಷಗಳ ಅಧಿಕಾರವಧಿಯಲ್ಲಿ ಒಮ್ಮೆಯೂ ನೀಡಿಲ್ಲ. ಡಾ. ಅಂಬೇಡ್ಕರ್‌ ದಿನಾಚರಣೆ ಅಂಗವಾಗಿ ವಿತರಿಸಲಾಗುತ್ತಿದ್ದ ʼಅಂಬೇಡ್ಕರ್‌ ರಾಷ್ಟ್ರೀಯ ಪ್ರಶಸ್ತಿʼಯನ್ನು ನೀಡದೆ ಕಡೆಗಣಿಸುವ ನೀತಿಯನ್ನು ಮೋದಿ ಸರ್ಕಾರ ಅಳವಡಿಸಿಕೊಂಡಿದೆ.

ತಮಾಷೆಯ ಸಂಗತಿಯೆಂದರೆ ಅಂಬೇಡ್ಕರ್‌ ಹೆಸರಿನ ಯಾವುದೇ ಪ್ರಶಸ್ತಿಯನ್ನು ಕೊಡದಿದ್ದರೂ ಕೂಡ ಪ್ರತಿ ವರ್ಷ ಈ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸುವ ಜಾಹೀರಾತುಗಳು ಮಾತ್ರ ವಾಡಿಕೆಯಂತೆ ಎಲ್ಲೆಡೆ ರಾರಾಜಿಸುತ್ತವೆ. ಇದಕ್ಕಾಗಿ ಪ್ರತಿವರ್ಷ ಸುಮಾರು 50 ಲಕ್ಷ ರೂಪಾಯಿಗಳ ಬೊಕ್ಕಸದ ಹಣವೂ ವೆಚ್ಚವಾಗುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ಮಾಹಿತಿ ಪಡೆಯಲು ಸಂಸ್ಥೆಯ ನಿರ್ದೇಶಕ ವಿಕಾಸ್‌ ತ್ರಿವೇದಿಯವರನ್ನು ‘ದ ವೈರ್‌’ನ ವರದಿಗಾರರು ಸಂಪರ್ಕಿಸಿದಾಗ, ಈ ವರ್ಷ ಕೂಡ ಪ್ರಶಸ್ತಿಗಳನ್ನು ಕೊಡಲಾಗುತ್ತಿಲ್ಲ ಎಂಬುದನ್ನು ಖಚಿತಪಡಿಸಿದ್ದಾರೆ. ಅದಕ್ಕೆ ‘ಆಡಳಿತಾತ್ಮಕ’ ತೊಡಕುಗಳು ಕಾರಣವಂತೆ! ಕಳೆದ ಏಳು ವರ್ಷಗಳಿಂದಲೂ ಇದೇ ‘ಆಡಳಿತಾತ್ಮಕ’ ತೊಡಕುಗಳ ಕಾರಣ ಒಡ್ಡಿ ಪ್ರಶಸ್ತಿಯನ್ನು ಮೂಲೆಗುಂಪು ಮಾಡಲಾಗಿದೆ. ಈ ಫೌಂಡೇಷನ್‌ನ ಆಂತರಿಕ ಮಾಹಿತಿಯ ಪ್ರಕಾರ ಈ ಪ್ರಶಸ್ತಿಗಳನ್ನೇ ಮರುಪರಿಶೀಲಿಸಲಾಗುತ್ತಿದೆ!

ಇದನ್ನೂ ಓದಿ: ಅಗತ್ಯವಿದ್ದರಷ್ಟೆ ಈಶ್ವರಪ್ಪರನ್ನು ಪೊಲೀಸರು ಬಂಧಿಸಲಿದ್ದಾರೆ: ಸಿಎಂ ಬೊಮ್ಮಾಯಿ

ವಿಪರ್ಯಾಸವೆಂದರೆ, ಅರ್ಜಿ ಆಹ್ವಾನಿಸಿ ಜಾಹೀರಾತು ಕೊಟ್ಟಿರುವ ಫೌಂಡೇಷನ್‌ನಿಂದ ಪ್ರಶಸ್ತಿ ಕೊಡದಿರುವ ಬಗ್ಗೆ ಯಾವುದೇ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ ಅಥವಾ ಅವರ ಜಾಲತಾಣದಲ್ಲಿ ಜಾಲಾಡಿದರೂ ಈ ಬಗ್ಗೆ ಯಾವುದೇ ಮಾಹಿತಿಯಿಲ್ಲ. ‘ದ ವೈರ್‌’ನಲ್ಲಿ ವರದಿಯಾಗಿರುವಂತೆ, ಜಾಹೀರಾತು ಪ್ರಕಟಿಸಿದ ನಂತರ ಪ್ರಧಾನ ಮಂತ್ರಿಯ ಕಚೇರಿಯು ಪ್ರಶಸ್ತಿಗಳಿಗೆ ಸಂಬಂಧಿಸಿ ಹೆಚ್ಚುವರಿ ಮಾಹಿತಿ ಕೋರಿದೆ.

1992ರಲ್ಲಿ ‘ಡಾ.ಅಂಬೇಡ್ಕರ್‌ ರಾಷ್ಟ್ರೀಯ ಪ್ರಶಸ್ತಿ’ಯನ್ನು ಹಾಗೂ 1995ರಲ್ಲಿ ‘ಡಾ.ಅಂಬೇಡ್ಕರ್‌ ಅಂತಾರಾಷ್ಟ್ರೀಯ ಪ್ರಶಸ್ತಿ’ಯನ್ನು ಸ್ಥಾಪಿಸಲಾಗಿತ್ತು. ಅಂಬೇಡ್ಕರ್‌ ಅವರ ಆಶಯಗಳ ಈಡೇರಿಕೆಗಾಗಿ ಕೆಲಸ ಮಾಡುವ ವ್ಯಕ್ತಿಗಳು ಅಥವಾ ಸಂಘಟನೆಗಳಿಗೆ ಈ ರಾಷ್ಟ್ರೀಯ ಪ್ರಶಸ್ತಿ ಕೊಡಲಾಗುತ್ತದೆ. ಹಾಗೆಯೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಸಮಾನತೆ ಮತ್ತು ಅನ್ಯಾಯಗಳ ವಿರುದ್ಧ ಗಮನಾರ್ಹ ಕೆಲಸ ಮಾಡಿದವರಿಗೆ ಈ ಅಂತಾರಾಷ್ಟ್ರೀಯ ಪ್ರಶಸ್ತಿ ಕೊಡಲಾಗುತ್ತದೆ. ರಾಷ್ಟ್ರೀಯ ಪ್ರಶಸ್ತಿಯು ₹10 ಲಕ್ಷ ಹಾಗೂ ಅಂತಾರಾಷ್ಟ್ರೀಯ ಪ್ರಶಸ್ತಿಯು ₹15 ಲಕ್ಷ ನಗದು ಬಹುಮಾನ ಒಳಗೊಂಡಿವೆ.

ಕಳೆದ ಏಳು ವರ್ಷಗಳಿಂದ ಅಂಬೇಂಡ್ಕರ್‌ ಹೆಸರಿನಲ್ಲಿ ನೀಡಲಾಗುವ ಪ್ರಶಸ್ತಿಗಳನ್ನು ನೀಡದ ಮೋದಿ ನೇತೃತ್ವದ ಬಿಜೆಪಿ ಸರ್ಕಾರ!
ಡಾ. ಅಂಬೇಡ್ಕರ್ ರಾಷ್ಟ್ರೀಯ ಪ್ರಶಸ್ತಿ, 2015 ರ ಪೋಸ್ಟರ್.

ಒಕ್ಕೂಟ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯಡಿ ಒಂದು ಸ್ವಾಯತ್ತ ಸಂಸ್ಥೆಯಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ.ಅಂಬೇಡ್ಕರ್‌ ಫೌಂಡೇಷನ್‌ ಈ ಪ್ರಶಸ್ತಿ ಪ್ರಧಾನ ಪ್ರಕ್ರಿಯೆಯ ಉಸ್ತುವಾರಿ ಹೊತ್ತಿದೆ. ಇಲಾಖೆಯ ಸಚಿವರು ಈ ಸಂಸ್ಥೆಯ ಚೇರ್ಮನ್‌ ಆಗಿದ್ದು, ಕೆಲವು ಉನ್ನತ ಅಧಿಕಾರಿಗಳು ಹಾಗೂ ಕೆಲವು ನಾಮಾಂಕಿತ ಸದಸ್ಯರು ಕೂಡ ಈ ಸಂಸ್ಥೆಯ ಸದಸ್ಯರಾಗಿರುತ್ತಾರೆ.

ಇದನ್ನೂ ಓದಿ: ಅಂಬೇಡ್ಕರ್‌ ಈಗ ಇದ್ದಿದ್ದರೆ ಬಿಜೆಪಿಗರು ಅವರನ್ನು ಪಾಕ್ ಪರ ಎನ್ನುತ್ತಿದ್ದರು: ಮೆಹಬೂಬಾ ಮುಫ್ತಿ

ರಾಜಕೀಯ ಲಾಭಕ್ಕಾಗಿ ಅಂಬೇಡ್ಕರ್‌ ಅವರ ಹೆಸರನ್ನು ಬಳಸಿಕೊಳ್ಳುವಲ್ಲಿ ನರೇಂದ್ರ ಮೋದಿಯವರು ಹಿಂದೆ ಬಿದ್ದಿಲ್ಲ. ಸಂದರ್ಭ ಒದಗಿದಾಗೆಲ್ಲಾ ಅಂಬೇಡ್ಕರ್‌ ಪ್ರತಿಮೆಗೆ ಹಾರ ಹಾಕಿ ಫೋಟೋ ತೆಗೆಸಿಕೊಳ್ಳುವುದು, ಬಣ್ಣದ ಮಾತುಗಳಲ್ಲಿ ಹೊಗಳುವುದನ್ನು ಒಂದು ಸಂಪ್ರದಾಯದಂತೆ ಪಾಲಿಸುತ್ತಾ ಬಂದಿದ್ದಾರೆ. ಈ ನಡೆಗಳು ಅಂಬೇಡ್ಕರ್‌ರನ್ನು ದೈವೀಕರಿಸಿ, ಕೇವಲ ಮೂರ್ತಿ ಪೂಜೆಗೆ ಸೀಮಿತಗೊಳಿಸುವ ಹುನ್ನಾರದ ಭಾಗ ಎನ್ನಬಹುದು.

ವಾಸ್ತವದಲ್ಲಿ ಅವರು ಪ್ರತಿನಿಧಿಸುವ ಭಾರತೀಯ ಜನತಾ ಪಕ್ಷ ಹಾಗೂ ಅದರ ಹಿಂದಿನ ಆರೆಸ್ಸೆಸ್‌ ಕೂಟ ಅಂಬೇಡ್ಕರ್‌ ಅವರ ವಿಚಾರಗಳಿಗೆ ಕಳಂಕ ಹಚ್ಚಲು, ಅವರ ನೆನಪನ್ನು ಮರೆಮಾಡಲು ನಿರಂತರವಾಗಿ ಪ್ರಯತ್ನಿಸುತ್ತಲೇ ಇದೆ. ಯಾಕೆಂದರೆ ಅಂಬೇಡ್ಕರ್‌ ಅವರು ಪ್ರತಿಪಾದಿಸುವ ಸ್ವಾತಂತ್ರ್ಯ, ಸಮಾನತೆಯ ವಿಚಾರಗಳು ಆರೆಸ್ಸೆಸ್‌ ಪ್ರತಿಪಾದಿಸುವ ಮನುವಾದಿ ವಿಚಾರಗಳಿಗೆ ತದ್ವಿರುದ್ಧವಾಗಿವೆ. ಹೀಗಾಗಿ ಅಂಬೇಡ್ಕರ್‌ ಅವರ ವಿಚಾರವನ್ನು ಬಹಳ ಹಿಂದಿನಿಂದಲೂ ವಿರೋಧಿಸುತ್ತಲೇ ಬಂದಿದ್ದಾರೆ.

ಉದಾಹರಣೆಗೆ ಭಾರತ ತನ್ನ ಸಂವಿಧಾನವನ್ನು ಅಂಗೀಕರಿಸಿದ ಬೆನ್ನಹಿಂದೆಯೇ ಅಂದರೆ 1949ರ ನವಂಬರ್‌ 30ರಂದು ಆರೆಸ್ಸೆಸ್‌ ತನ್ನ ಮುಖವಾಣಿ ‘ಆರ್ಗನೈಸರ್‌’ನಲ್ಲಿ ಹೀಗೆಂದು ಬರೆದಿತ್ತು: “ಭಾರತದ ಸಂವಿಧಾನದ ಹೀನಾಯ ಸಂಗತಿಯೆಂದರೆ ಇದರಲ್ಲಿ ಭಾರತೀಯ ಎಂಬುದು ಏನೂ ಇಲ್ಲ…ಇದರಲ್ಲಿ ಪ್ರಾಚೀನ ಭಾರತೀಯ ಸಾಂವಿಧಾನಿಕ ಕಾನೂನುಗಳು ಎಲ್ಲಿಯೂ ಕಾಣಿಸುವುದಿಲ್ಲ…ಮನುವಿನ ಕಾನೂನುಗಳು ಬಹಳ ಹಿಂದೆಯೇ ರಚಿತವಾಗಿವೆ. ಮನುಸ್ಮೃತಿಯಲ್ಲಿ ಹೇಳಲಾಗಿರುವ ಈ ಕಾನೂನುಗಳು ಇಂದಿಗೂ ಮಾನ್ಯವಾಗಿವೆ…ಆದರೆ ನಮ್ಮ ಸಂವಿಧಾನದ ಪಂಡಿತರು ಈ ಅಂಶಗಳನ್ನು ಲೆಕ್ಕಕ್ಕೇ ತೆಗೆದುಕೊಂಡಿಲ್ಲ”

ಇದನ್ನೂ ಓದಿ: ‘ಬಿಫೆಸ್‌’ನಲ್ಲಿ ಸಾವರ್ಕರ್‌ ಪ್ರತ್ಯಕ್ಷ; ಮಾದರಿ ವ್ಯಕ್ತಿಗಳ ಪೈಕಿ ‘ಅಂಬೇಡ್ಕರ್‌’ ನಾಪತ್ತೆ!

ಈ ಶಕ್ತಿಗಳು ಅಂಬೇಡ್ಕರ್‌ ಹಾಗೂ ಸಂವಿಧಾನದ ಮೇಲೆ ಅಂದಿನಿಂದಲೂ ದಾಳಿ ಮಾಡುತ್ತಿದ್ದವು ಎಂಬುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ? ಬಾಬಾ ಸಾಹೇಬರು ನಮ್ಮ ಸಂವಿಧಾನವನ್ನು ರಚಿಸುವ ಎಷ್ಟೋ ವರ್ಷಗಳ ಮುಂಚೆಯೇ ಮನುಸ್ಮೃತಿಯನ್ನು ಬಹಿರಂಗವಾಗಿಯೇ ಸುಟ್ಟುಹಾಕಿ ಪ್ರತಿಭಟಿಸಿದ್ದರು ಎಂಬುದನ್ನು ಇಲ್ಲಿ ನೆನಪಿಸಿಕೊಳ್ಳಬೇಕು.

ಬಿಜೆಪಿ ಮತ್ತು ಆರೆಸ್ಸೆಸ್‌ ಕೂಟ ಅಂಬೇಡ್ಕರ್‌ ಅವರ ನೆನಪನ್ನು ಮರೆಮಾಡಲು ಅಥವಾ ಅವರನ್ನು ಕಡೆಗಣಿಸಲು ಅನಾದಿಯಿಂದಲೂ ನಾನಾ ತಂತ್ರಗಳನ್ನು ಹೆಣೆಯುತ್ತಾ ಬಂದಿದೆ. ಅಂಬೇಡ್ಕರ್‌ ಅವರು ನಮ್ಮನ್ನಗಲಿದ ಡಿಸೆಂಬರ್‌ 6ನೇ ದಿನವನ್ನು ‘ಮಹಾಪರಿನಿರ್ವಾಣ ದಿನ’ವನ್ನಾಗಿ ದೇಶಾದ್ಯಂತ ಆಚರಿಸಲಾಗುತ್ತಿದೆ. ಅಂದು ಲಕ್ಷಾಂತರ ಅಂಬೇಡ್ಕರ್‌ ಅಭಿಮಾನಿಗಳು ಅವರ ಸಮಾಧಿ ಸ್ಥಳವಿರುವ ಚೈತ್ಯಭೂಮಿಗೆ ಭೇಟಿ ನೀಡುತ್ತಾರೆ. ಅಂಬೇಡ್ಕರ್‌ ಅವರ ಬದುಕು ಮತ್ತು ಹೋರಾಟವನ್ನು ನೆನೆಯುತ್ತಾರೆ. ಅವರ ವಿಚಾರಗಳಿಂದ ಸ್ಫೂರ್ತಿ ಪಡೆಯುತ್ತಾರೆ.

1992ರಲ್ಲಿ ಬಾಬ್ರಿ ಮಸೀದಿಯನ್ನು ಕೆಡವಲು ಆರೆಸ್ಸೆಸ್‌ ಕೂಟ ಆರಿಸಿಕೊಂಡಿದ್ದು ಇದೇ ಡಿಸೆಂಬರ್ ಆರನೇ ದಿನವನ್ನು. ತದನಂತರದಲ್ಲಿ ವಿಶ್ವ ಹಿಂದೂ ಪರಿಷತ್‌, ಭಜರಂಗದಳ ಮುಂತಾದ ಕೇಸರಿ ಕೂಟದ ಸಂಘಟನೆಗಳು ಡಿಸೆಂಬರ್‌ ಆರರಂದು ‘ಶೌರ್ಯ ದಿವಸ್‌’ ಅಥವಾ ‘ವಿಜಯ್‌ ದಿವಸ್‌’ ಆಗಿ ಆಚರಿಸುತ್ತಾ ಬಂದಿದ್ದಾರೆ. ಇದು ಕಾಕತಾಳೀಯವೇನಲ್ಲ; ಒಂದೇ ಕಲ್ಲಿಗೆ ಎರಡು ಹಕ್ಕಿಗಳನ್ನು ಹೊಡೆಯುವ ನಿಪುಣ ತಂತ್ರ.

ಇದನ್ನೂ ಓದಿ: ‘ಅಂಬೇಡ್ಕರ್‌ರಿಗೆ ಅವಮಾನವಾದರೆ ಶೋಷಿತ ಸಮುದಾಯ ಸುಮ್ಮನಿರುವುದಿಲ್ಲ’

ಅಂಬೇಡ್ಕರ್‌ ಅವರ ನೆನಪುಗಳನ್ನು ಮಸುಕುಗೊಳಿಸಿ, ಅವರನ್ನು ನೇಪಥ್ಯಕ್ಕೆ ಸರಿಸುವ ಉದ್ದೇಶ ಒಂದು ಕಾರ್ಯಸೂಚಿಯಾದರೆ, ಅಂಬೇಡ್ಕರ್‌ ಅವರ ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಪ್ರಜಾತಂತ್ರದ ವಿಚಾರಗಳನ್ನು ಬದಿಗೆ ಸರಿಸಿ ಒಡೆದು ಆಳುವ ದ್ವೇಷರಾಜಕಾರಣವನ್ನು ಜನಮಾನಸದಲ್ಲಿ ಬಿತ್ತುವುದು ಮತ್ತೊಂದು ಕಾರ್ಯಸೂಚಿ. ಹಾಗೆಯೇ ನಾವು ಸಂವಿಧಾನ ಅಳವಡಿಸಿಕೊಂಡ ನವಂಬರ್‌ 26 ರ ಸುತ್ತಮುತ್ತ ಹಿಂಸೆಗೆ ಪ್ರಚೋದನೆ ನೀಡುವ, ದ್ವೇಷ ಭಾಷಣಗಳಿಗೆ ಕುಖ್ಯಾತವಾಗಿರುವ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಇವುಗಳನ್ನು ‘ಧರ್ಮ ಸಂಸತ್‌’ ಎಂದು ಕರೆಯಲಾಗುತ್ತದೆ. ಈ ಸಂಸತ್‌ ಎಂಬ ಪದವನ್ನೂ ಕೂಡ ಬಹಳ ತಂತ್ರಗಾರಿಕೆಯಿಂದ ಧರ್ಮದ ಜೊತೆ ಜೋಡಿಸಲಾಗಿದೆ. ದೇಶದ ಪ್ರಜಾತಂತ್ರ ಪ್ರೇಮಿಗಳು ಇನ್ನಾದರೂ ಎಚ್ಚೆತ್ತುಕೊಳ್ಳುವರೆ? ಇನ್‌ಪುಟ್‌‌: ದಿ ವೈರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....